ʻಲಿಟಲ್ ಮಿಸ್ ಸನ್ಶೈನ್ʼ: ಕನಸು ವಾಸ್ತವಗಳ ಜುಗಲ್ ಬಂದಿ
ಮನೆಯಲ್ಲಿ ಉಳಿದವರ ಆಲೋಚನೆ ಬೇರೆಯ ರೀತಿ. ಕನಸುಗಳನ್ನೇ ನೇಯುವ ಅವರಿಗೆ ಮನೆಯ ಪುಟಾಣಿಯೂ ಕನಸು ಕಾಣುತ್ತಿರುವುದು ವಿಶೇಷವೆನಿಸುತ್ತದೆ. ಜೊತೆಗೆ ತಮ್ಮ ಕನಸಿನ ಜಂಜಾಟದಿಂದ ಕೊಂಚ ತಪ್ಪಿಸಿಕೊಳ್ಳಲು ಹೊರದಾರಿಯೊಂದು ಸಿಕ್ಕಿತೇನೋ ಎನ್ನುವ ಕಾರಣದಿಂದ ಅವಳ ಕನಸನ್ನು ಬೆಂಬಲಿಸುತ್ತಾರೆ. ಮುಖ್ಯವಾಗಿ ಅವಳ ತಂದೆ ರಿಚರ್ಡ್. ಅಪ್ಪನಿಂದ ಮಿಸ್ ಲಿಟಲ್ ಸನ್ ಶೈನ್ ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕೆ ಒಪ್ಪಿಗೆ ಸಿಕ್ಕಿದ್ದರಿಂದಲೇ ನೆಲದಿಂದ ನೆಗೆದು ಹಾರಾಡುವಂತಾಗುತ್ತದೆ ಆಲಿವ್ಗೆ.
ಹಲವು ಮೇಳಗಳಲ್ಲಿ ಭಾಗವತರಾಗಿ ಬಲಿಪರು
ಕಲ್ಲಾಡಿ ಕೊರಗ ಶೆಟ್ಟರ ಯಜಮಾನಿಕೆಯ ಕುಂಡಾವು ಮೇಳದಲ್ಲಿ ಬಲಿಪ ನಾರಾಯಣ ಭಾಗವತರು ನಾಲ್ಕು ವರುಷಗಳ ತಿರುಗಾಟವನ್ನು ಮಾಡಿದರು. ಮುಂದೆ ತಮ್ಮ ಮೇಳ ತಿರುಗಾಟದ ಕೊನೆಯವರೆಗೂ ಶ್ರೀ ಕಟೀಲು ಮೇಳದಲ್ಲೇ ಇದ್ದರು. ಹಣಕಾಸಿನ ಮುಗ್ಗಟ್ಟು, ಮೇಳ ನಡೆಸಲು ಎದುರಾದ ಕಷ್ಟಗಳನ್ನು ದಾಟುತ್ತ ಬದುಕು ಸಾಗಿದರೂ, ಭಾಗವತಿಕೆಯೆಂಬ ಪ್ರೀತಿ ಅವರಿಂದ ದೂರಾಗಲಿಲ್ಲ. ಕೃಷ್ಣ ಪ್ರಕಾಶ ಉಳಿತ್ತಾಯ ಬರೆಯುವ ‘ಬಲಿಪ ಮಾರ್ಗ’ ಸರಣಿಯಲ್ಲಿ ಹೊಸ ಬರಹ.
ಇಲ್ಲದ ಸಲ್ಲದ ಭ್ರಮೆಗಳು ಮತ್ತು ಸ್ವಯಂ ಚಿಕಿತ್ಸೆ ತಂದೊಡ್ಡುವ ಆಪತ್ತುಗಳು
ಟಿವಿಯಲ್ಲಿ ಕೆಲವು ಖಾಯಿಲೆಯ ಕುರಿತಾಗಿ ಬರುವ ಮಾತುಗಳನ್ನು, ಪೇಪರಿನಲ್ಲಿ ಬರುವ ವಿಷಯಗಳನ್ನು ಓದಿ ಮತ್ತು ಗೂಗಲ್ ಸರ್ಚ್ನಲ್ಲಿ ಬರುವ ವಿವರಗಳನ್ನು ನೋಡಿಕೊಂಡು ತಮಗೆ ಆ ಕಾಯಿಲೆ ಇದೆ ಮತ್ತು ಈ ರೋಗ ಇದೆ ಎಂದು ತಪ್ಪಾಗಿ ನಿಶ್ಚಯಿಸಿಬಿಡುವ ಬೃಹಸ್ಪತಿಗಳು ಕೂಡ ನಮ್ಮಲ್ಲಿ ಇದ್ದಾರೆ. ಅಷ್ಟೇ ಅಲ್ಲ, ಕೆಲವೊಮ್ಮೆ ಕಾಯಿಲೆಗಳಿಗೆ ಸ್ವಯಂ ಔಷಧಿ ಸೇವಿಸುವ ಪರಿಪಾಠ ಇತ್ತೀಚೆಗೆ ಹೆಚ್ಚಾಗಿದೆ. ‘ನೆನಪುಗಳ ಮೆರವಣಿಗೆ’ ಸರಣಿಯಲ್ಲಿ ಡಾ. ಕೆ.ಬಿ. ಸೂರ್ಯಕುಮಾರ್ ಬರಹ
ನನ್ನನ್ನು ಹುಡುಕಿಕೊಳ್ಳುವ ದಾರಿಯಲ್ಲಿ ಸಿಕ್ಕ ಹೊಳಹುಗಳು
ಕನಕ ದಾಸರು “ನಾನು ಹೋದರೆ ಹೋದೇನು” ಎಂದಾಗ, ಅವರೆಂದದ್ದು ಸತ್ತ ನಂತರ ಸ್ವರ್ಗ ಸೇರುವ ಮಾತಲ್ಲ – ಮಕ್ಕಳಿಗಾಗಿ ಆ ಕತೆಯನ್ನು ನಾವು ಹೇಳಿದರೂ. ಅವರೆಂದದ್ದು ಪೂರ್ಣ ಧ್ಯಾನದಲ್ಲಿ ತೊಡಗಿಕೊಂಡಾಗ ಈ “ನಾನು” ಎಂಬ ಭಾವ “ಹೋಗುವ” ವಿಷಯ. ಆಸಕ್ತಿಕರ ವಿಷಯವೆಂದರೆ, ಆಧುನಿಕ ನ್ಯೂರೋಸೈನ್ಸ್ ಸಹ ಅದನ್ನೇ ಹೇಳುತ್ತಿದೆ. ಧ್ಯಾನದಲ್ಲಿ ತೊಡಗಿಕೊಂಡವರ ಮಿದುಳನ್ನು ಪರಿಶೀಲಿಸಿದಾಗ, ಮಿದುಳಿನ “ನಾನು ಕೇಂದ್ರ”ಗಳು ಸ್ಥಬ್ಢವಾಗುವುದನ್ನು ಗಮನಿಸಿದ್ದಾರೆ. ಶೇಷಾದ್ರಿ ಗಂಜೂರು ಬರೆದ ಲೇಖನ..
ಗಂಟಿಚೋರರೇ ನೆನಪಿಟ್ಟುಕೊಂಡ ಕಥನಗಳಲ್ಲಿದೆ ಚರಿತ್ರೆ
ಸೇಟ್ಜೀ ಒಬ್ಬರು ಬೆಂಗಳೂರಿನಿಂದ ಮುಂಬೈಗೆ ಹೆಚ್ಚುವರಿ ಗೋಲ್ಡ್ ಬಿಸ್ಕೆಟ್ ಸಾಗಿಸುವ ಮಾಹಿತಿ ಸಂಗ್ರಹಿಸಿ ಪ್ಲಾನ್ ಮಾಡಿದಂತೆ ಅವರೆಲ್ಲ ಸೇರಿ ‘ರಾಬರಿ’ ಮಾಡಿದರು. ಎಲ್ಲವೂ ಪ್ಲಾನ್ ಪ್ರಕಾರವೇ ನಡೆಯಿತು, ಆದರೆ ತಪ್ಪಿಸಿಕೊಳ್ಳುವಾಗ ಈ ಟೀಮಿನ ಇಬ್ಬರು ಸಿಕ್ಕಿಹಾಕಿಕೊಂಡರು. ಮರುದಿನ ದೊಡ್ಡ ಸುದ್ದಿಯಾಯಿತು. ಸಿಕ್ಕಿಹಾಕಿಕೊಂಡ ಸದಸ್ಯರು ಕಳ್ಳತನದ ಕುರಿತು ಬಾಯಿಬಿಡಲಿಲ್ಲ. ಆಗ ಪೊಲೀಸರೊಂದು ಉಪಾಯ ಮಾಡಿ, ಬಂಧಿತರನ್ನು ಬಿಡುಗಡೆ ಮಾಡಲು ನಿರ್ಧರಿಸಿದರು. ಮುಂದೇನಾಯಿತು ?
‘ಗಂಟಿಚೋರರ ಕಥನಗಳು’ ಸರಣಿಯಲ್ಲಿ ಡಾ.ಅರುಣ್ ಜೋಳದ ಕೂಡ್ಲಿಗಿ ಬರಹ.
‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಯೋಗೀಂದ್ರ ಮರವಂತೆ ಸರಣಿ ಶುರು
ಇಂದಿನ ಲಂಡನ್ನಿನ ವೈಶಿಷ್ಟ್ಯವನ್ನು ವಲಸಿಗರ ಕಣ್ಣಲ್ಲಿ ಸರಳವಾಗಿ ವ್ಯಾಖ್ಯಾನಿಸುವುದಾದರೆ, ಬ್ರಿಟಿಷರಲ್ಲದ ಬಿಳಿಯರಲ್ಲದ ಜನರು ಅತ್ಯಂತ ವೇಗವಾಗಿ, ಹೆಚ್ಚೇನೂ ಅಡೆತಡೆ ಇಲ್ಲದೆ ಸಾಂಸ್ಕೃತಿಕವಾಗಿ ಸಾಮಾಜಿಕವಾಗಿ ಸ್ವೀಕೃತರಾಗುವ ತಾಣ ಎನ್ನಬಹುದು. ಹೀಗೆ ಲಂಡನ್ ನಗರದ ಆದಿಪುರಾಣದೊಂದಿಗೆ ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಎಂಬ ಹೊಸ ಸರಣಿಯನ್ನು ಆರಂಭಿಸಿದ್ದಾರೆ ಲೇಖಕ ಯೋಗೀಂದ್ರ ಮರವಂತೆ.
ನೆರಳ ಅಲೆಗಳಲ್ಲಿ ಇರುಳ ಕಳೆದೆ
ಒಂದು ಕಾಲಕ್ಕೆ ಅಜ್ಜಿ ಮನೆಗೆ ಹೋಗುವುದೆಂದರೆ ಸ್ವರ್ಗ ಸಿಕ್ಕಂತಾಗುತ್ತಿತ್ತು. ಅಪ್ಪನ ಪರಾಕ್ರಮ ಒಂದೆರಡಲ್ಲ! ಆಗ ಕಾಲು ನಡಿಗೆಯ ದಾರಿ. ಅದೇ ಸುಖ. ತೋಟ ತುಡಿಕೆಯ ಹಣ್ಣು ಹಂಪಲು ತಿಂದು ಹೊಳೆ ದಂಡೆಯಲ್ಲಿ ಸಾಗುವಾಗ ದಣಿವೇ ಇರಲಿಲ್ಲ. ಆ ಹೆಗಲಿನ ರೇಡಿಯೊ ಏನೇನೊ ಹಾಡಿ ಮಾತಾಡುತಿತ್ತು. ಅದರತ್ತ ನನಗೆ ಗಮನವಿರಲಿಲ್ಲ. ಅಪ್ಪನಿಗೆ ಅದೊಂದು ದೊಡ್ಡಸ್ತಿಕೆಯ ತೋರಿಕೆ. ಅಲ್ಲಲ್ಲಿ ಸಿಗುತ್ತಿದ್ದ ಊರುಗಳಲ್ಲಿ ಜನ ನಮ್ಮನ್ನು ಬೆರಗಾಗಿ ನೋಡುತ್ತಿದ್ದರು. ಆ ಕಾಲಕ್ಕೆ ರೇಡಿಯೊ ಶ್ರೀಮಂತಿಕೆಯ ಸಂಕೇತವಾಗಿತ್ತು.
ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ ನಾಲ್ಕನೆಯ ಕಂತು
ಯಕ್ಷಗಾನದ ವಿಮರ್ಶೆಯಲ್ಲಿ ‘ಔಚಿತ್ಯ’ದ ಪ್ರಯೋಗಗಳು…
ಯಕ್ಷಗಾನದಲ್ಲಿ ಈ ಪೂರ್ಣತೆಯ ಅರ್ಥವನ್ನೇ ಔಚಿತ್ಯ ಪಡೆದುಕೊಳ್ಳುವುದಾದರೂ, ಇಲ್ಲಿ ನಿತ್ಯದ ಸಮಾಜದೊಂದಿಗೆ ವ್ಯವಹರಿಸುವ ಯಕ್ಷಗಾನವು ಬದಲಾಗುತ್ತಿರುವ ತನ್ನ ಸುತ್ತಮುತ್ತಲಿನ ಸಮಾಜದ ಕ್ರಮಗಳ ಜೊತೆಗೆ ಚೌಕಾಶಿ ಮಾಡುತ್ತಾ ವ್ಯವಹರಿಸಬೇಕಾಗುತ್ತದೆ. ಅಂದರೆ ಹಿಂದಿನ ಜೀವನ ಕ್ರಮದ ನಡಾವಳಿಗೂ ಮತ್ತು ಈಗಿನ ಸಮಾಜದ ಕ್ರಮಗಳಿಗೂ ಕಲಾಪ್ರಕಾರಗಳು ಒಂದು ಸೇತುವೆಯನ್ನು ಕಟ್ಟಿಕೊಳ್ಳುತ್ತಾ ಹೋಗಬೇಕಾಗುತ್ತದೆ. ಯಕ್ಷಗಾನದ ‘ಮೂಲ ಉದ್ದೇಶ’ ಪುರಾಣದ ಪ್ರಸರಣವಾಗಿರಲಿ, ಅಥವಾ ಪ್ರಸಂಗ ಪಠ್ಯವನ್ನು ಗಾನ, ನೃತ್ಯ ಮಾತಿನಲ್ಲಿ ಪ್ರೇಕ್ಷಕರಿಗೆ ತೋರಿಸುವುದಷ್ಟೇ ಆಗಿರಲಿ, ಅದು ಈಗಿನ ಕಾಲಕ್ಕೆ ಸಂವಹನವಾಗಬಹುದಾದ….
ಕಣ್ರೆಪ್ಪೆ ಬಡಿದೇ ಹೇಳಿದ ಕತೆಯಿದು, ಅಲ್ಲಲ್ಲ.. ಜೀವನಚರಿತ್ರೆಯ ದೃಶ್ಯಗಳಿವು
ತಮ್ಮ ಆಸ್ಪತ್ರೆಯಲ್ಲಿರುವ ರೋಗಿಯೊಬ್ಬ ಪುಸ್ತಕವನ್ನು ಬರೆಯಬೇಕೆಂದ ಅಪೇಕ್ಷೆಯನ್ನು ಕೇಳಿ ಉಳಿದವರಿಗೆ ಆಶ್ಚರ್ಯವಾಗುತ್ತದೆ. ಡೊಮಿನಿಕ್ ಗೆ ಇದು ಅಸಾಧ್ಯವೆನಿಸುವುದಿಲ್ಲ. ಸ್ಪೀಚ್ ಥೆರಪಿಸ್ಟ್ ಹೇಳಿಕೊಟ್ಟ ಪ್ರಕಾರ ಸೂಚನೆಗಳನ್ನು ಅನುಸರಿಸಿ ಅಕ್ಷರಗಳನ್ನು ಹೆಣೆದು ಪದಗಳನ್ನು ಹೊಂದಿಸಿ ಬರೆಯುವವರು ಬೇಕೆಂದು ಬಯಸುತ್ತಾನೆ.
ಎ.ಎನ್. ಪ್ರಸನ್ನ ಬರೆಯುವ ʻಲೋಕ ಸಿನಿಮಾ ಟಾಕೀಸ್ʼನಲ್ಲಿ ಜೀನ್ ಡೊಮಿನಿಕ್ ಬಾಬಿ ಜೀವನಚರಿತ್ರೆಯನ್ನಾಧರಿಸಿದ ಫ್ರಾನ್ಸ್ನ ʻದ ಡೈವಿಂಗ್ ಬೆಲ್ ಅಂಡ್ ದ ಬಟರ್ಫ್ಲೈ ʼ ಸಿನಿಮಾ ಕುರಿತ ವಿಶ್ಲೇಷಣೆ










