ವಿಷ ವರ್ತುಲದ ಒಂದು ವಿಚಿತ್ರ ವೃತ್ತಾಂತವು..
ಆಕೆಯ ಹೆಸರು ರೇಖಾ, ವಯಸ್ಸು ಇಪ್ಪತ್ತೈದು. ಗಂಡ ಕಾರ್ಯಪ್ಪನ ಪ್ರಕಾರ ಸಾಧಾರಣವಾಗಿ ಆರೋಗ್ಯವಾಗಿಯೇ ಇದ್ದ ಆಕೆ ಅಂದು ರಾತ್ರಿ ಪಕ್ಕನೆ ಎದೆ ನೋವು, ಸುಸ್ತು ಎನ್ನುತ್ತ ವಾಂತಿ ಮಾಡತೊಡಗಿದ್ದಳು. ತುಂಬಾ ಸುಸ್ತಾಗಿದ್ದ ಆಕೆ ನರಳುತ್ತಾ ತನಗೆ ಉಸಿರಾಡಲು ತೊಂದರೆಯಾಗುತ್ತಿದೆ, ತುಂಬಾ ತಲೆನೋವು, ತಲೆ ತಿರುಗುತ್ತಿದೆ, ಕಿವಿಯಲ್ಲಿ ಏನೋ ಶಬ್ಧ ರಿಂಗಣಿಸುತ್ತಿದೆ ಎನ್ನುತ್ತಿದ್ದಳು. ನಾನು ಚಿಕಿತ್ಸೆ ಮಾಡುತ್ತಿದ್ದಂತೆಯೇ, ಆಕೆಗೆ ಅಪಸ್ಮಾರ ಬಂತು.
ನಮ್ಮ ಪೂರ್ವಿಕರು ಮತ್ತು ಹೆಸರುಗಳ ಸೊಬಗು
ಚಿಕ್ಕಂದಿನಲ್ಲಿ ನಮ್ಮ ಅಮ್ಮ ಹೆಚ್ಚು ತಮಿಳು ಮಾತನಾಡುತ್ತಿದ್ದಿರಬಹುದು. ಅದರೆ ಹಾಸನದಲ್ಲಿ ಹುಟ್ಟಿ ಬೆಳೆದಿದ್ದರಿಂದ ಕನ್ನಡವೂ ಚೆನ್ನಾಗಿ ಬರುತ್ತಿತ್ತು. ಅವರ ಅಣ್ಣ ರಾಮಕೃಷ್ಣರ ಜೊತೆ ಕನ್ನಡದಲ್ಲಿಯೇ ಮಾತನಾಡುತ್ತಿದ್ದರು. ಅವರ ತಂದೆಯ ಕಡೆ ಸಂಬಂಧಿಗಳು ದೊಡ್ಡ ಕೆಲಸಗಳಲ್ಲಿದ್ದರೆಂದು ಕೇಳಿದ್ದೆ. ಆಗಾಗ್ಗೆ ಅವರಿವರು ಮನೆಗೆ ಬರುತ್ತಿದ್ದರು;
ಹಿಂಸೆಯನ್ನು ಹತೋಟಿಯಲ್ಲಿಡಲು ಮಾನವೀಯತೆಯೇ ಬೇಕು
ಹುಲಿಗೆ ಆಕ್ರಮಣದ ನಖಗಳಿವೆ. ಆದರೆ ಹುಲ್ಲೆಗೆ ಸಂರಕ್ಷಣೆಯ ಕೊಂಬು ಮತ್ತು ವೇಗಶಕ್ತಿ ಇವೆ. ಇದೆಲ್ಲ ಇರುವಂಥದ್ದೆ. ಏಕೆಂದರೆ ಪ್ರಕೃತಿಯಲ್ಲಿನ ಹುಲಿ ಹುಲ್ಲೆಗಳು ಜೀವಜಾಲದಲ್ಲಿನ ಆಹಾರ ಸರಪಳಿಯ ನಿಯಮದಂತೆಯೆ ಬದುಕುತ್ತಿವೆ. ಆದರೆ ಆಂತರ್ಯದಲ್ಲಿ ಹುಲಿ, ಹುಲ್ಲೆಗಳಂತಿರುವ ಮಾನವರೂ ಇದ್ದಾರೆ. ಅವರಿಗೆ ಈ ಪ್ರಕೃತಿಯ ನಿಯಮ ಅನ್ವಯಿಸುವುದಿಲ್ಲ. ಆದ್ದರಿಂದ ಅವರು ಬದಲಾಗುಂಥ ವ್ಯವಸ್ಥೆ ರೂಪುಗೊಳ್ಳಬೇಕಿದೆ.
ಅಂದಿನ ಬೆಂಗಳೂರು ಮತ್ತು ಬಸವನಗುಡಿಯ ಚಿತ್ರಣ
ಬಸವನಗುಡಿಯ ಎರಡು ಹೆಗ್ಗುರುತಗಳು ಬಸವನ ದೇವಸ್ಥಾನ ಮತ್ತು ಪೊಲೀಸ್ ಸ್ಟೇಷನ್. ಬಸವನಗುಡಿ ಯನ್ನು ಬೆಳೆಸಿದವರು ಹಲವಾರು ಜನರಿದ್ದಿರಬೇಕು. ಅವರಲ್ಲಿ ಬೆಳ್ಳಾವೆ ವೆಂಕಟನಾರಾಯಣಪ್ಪನವರು ಮುಖ್ಯರು. ಅನೇಕ ಆಸಕ್ತಿಗಳಿದ್ದ ವೆಂಕಟನಾರಾಯಣಪ್ಪನವರು ಭೌತ ವಿಜ್ಞಾನದ ಪ್ರಾಧ್ಯಾಪಕರಾಗಿದ್ದರು. ವಿಜ್ಞಾನ ಸಂವಹನೆಯ ಕಾರ್ಯದಲ್ಲೂ ಪ್ರಾತಃಸ್ಮರಣೀಯರು; ಕನ್ನಡದಲ್ಲಿ ಎರಡು ವರ್ಷ ಕಾಲ ವೈಜ್ಞಾನಿಕ ಮಾಸಿಕ ಪತ್ರಿಕೆಯನ್ನು ನಡೆಸಿಕೊಂಡು ಬ೦ದರು.
ದೊರೆ ಆರನೇ ಜಾರ್ಜ್ ಜೀವನದ ಒಂದು ಕತೆ ʻದ ಕಿಂಗ್ಸ್ ಸ್ಪೀಚ್ʼ
ದೊರೆಯ ಉಗ್ಗು ನಿವಾರಣೆ ಕುರಿತ ಪ್ರಯತ್ನಗಳು ಮುಂದುವರಿದ ಹಾಗೆ ಚಿತ್ರದಲ್ಲಿ ದೃಶ್ಯಗಳ ಒಟ್ಟಾರೆ ಭಾವದಲ್ಲಿ ತೀವ್ರತೆ ಹೆಚ್ಚಾಗುತ್ತದೆ. ಅವುಗಳಲ್ಲಿ ದೊರೆಯ ತಲ್ಲಣ, ತಳಮಳಗಳಿರುತ್ತವೆ, ತನ್ನ ಸಾಮರ್ಥ್ಯದ ಬಗ್ಗೆಯೇ ಅನುಮಾನ ಮತ್ತು ಹಿಂಜರಿಕೆಗಳಿರುತ್ತವೆ. ಅಷ್ಟೇ ಅನುಮಾನ ಹಾಗೂ ರೋಷ ಉಗ್ಗಿನ ದೋಷ ನಿವಾರಣೆಗೆ ಪ್ರಯತ್ನಿಸುವ ಡಾಕ್ಟರ್ ಜೆಫ್ರಿ ರಶ್ಲಿ ಬಗ್ಗೆ ಇರುತ್ತದೆ. ಈ ಜೆಫ್ರಿಯಾದರೋ ಸಾಂಪ್ರದಾಯಿಕ ವಿದ್ಯೆ ಹೊಂದಿದ ಡಾಕ್ಟರಲ್ಲ. ಅವನ ಹಿನ್ನೆಲೆಯೇ ಬೇರೆ.
ದೌರ್ಬಲ್ಯಗಳಿಲ್ಲದ ಸ್ವಾಭಿಮಾನಿ ನನ್ನಪ್ಪನೇ ನನಗೆ ಮಾದರಿ
ಅಂದು ನನ್ನ ತಂದೆ ಸಂಭ್ರಮಿಸಿದ್ದು ಒಂದು ರೂಪಕವಾಗಿ ಮನದಲ್ಲಿ ಉಳಿದಿದೆ. ಅವರೆಲ್ಲ ಚೂಡಾ ತಿಂದ ಮೇಲೆ ಲಿಂಗಾಯತರಾದ ಶಿವಪ್ಪನವರಿಗೆ ಸಮೀಪದ ಲಿಂಗಾಯತರ ಮನೆಯಿಂದ ನೀರು ತಂದು ಕೊಟ್ಟ ನಂತರ ಅವರು ನೀರು ಕುಡಿದರು! ಆದರೆ ತಾಯಿ ಮಾಡಿಕೊಟ್ಟ ಚಹಾವನ್ನು ಎಲ್ಲರ ಜೊತೆ ಶಿವಪ್ಪ ಅವರೂ ಕುಡಿದರು. ಇದೆಲ್ಲ ನನಗೆ ವಿಚಿತ್ರ ಎನಿಸಿತು. ಅದೇ ನಳದ ನೀರು. ಲಿಂಗಾಯತರ ಮನೆಗೆ ಹೊಕ್ಕಾಗ ಅದು ಹೇಗೆ ಶುದ್ಧವಾಗುವುದು? ಆ ‘ಶುದ್ಧ’ ನೀರನ್ನು ನನ್ನ ತಂದೆ ತರುವಾಗ ಅಶುದ್ಧವಾಗುವುದಿಲ್ಲವೆ?
ಬೆನ್ನುಬಿದ್ದ ಭೂತ ಇವನು!
ಈ ಕೊನೆಯ ಅಂಶದ ಕಾರಣದಿಂದ ಮಾರ್ಫಾ ಮನಸ್ಸಿಗೆ ಬಹಳ ಸಮಾಧಾನ ಆದಹಾಗಿತ್ತು. ಅವಳು ಜಾಣೆ. ನಾನು ಬರಿಯ ಹೆಣ್ಣು ಹುಚ್ಚಿನವನು, ಲಂಗದ ಅಂಚು ಕಂಡರೆ ಆಸೆ ಪಡುವವನು, ಗಂಭೀರವಾದ ಪ್ರೀತಿ ನನ್ನ ಮಟ್ಟಿಗೆ ಸಾಧ್ಯವೇ ಇಲ್ಲ ಅಂದುಕೊಂಡಿದ್ದಳು. ಜಾಣೆ ಹೆಂಗಸು, ಹೊಟ್ಟೆಯ ಕಿಚ್ಚಿನ ಹೆಂಗಸು ಇಬ್ಬರೂ ಬೇರೆ ಬೇರೆ. ಅದೇ ದೊಡ್ಡ ತಾಪತ್ರಯ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.
‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಮೊಗಳ್ಳಿ ಆತ್ಮ ಕಥಾನಕದ ಮೊದಲ ಕಂತು
ನನ್ನ ಅಪ್ಪ ಕ್ರೂರವಾಗಿದ್ದರು. ಬರ್ಬರತೆಯ ಪ್ರಚಂಡ ವ್ಯಕ್ತಿಯಾಗಿದ್ದರು. ಅವರ ಹಂಗಿನಲ್ಲಿದ್ದರು ಕೇರಿಯ ಜನರೆಲ್ಲ. ಬಹಳವೇ ಪಾಳೇಗಾರಿಕೆ ಮಾಡುತ್ತಿದ್ದರಿಂದ, ಅವರನ್ನು ನೋಡಿದಾಗ ಒಂದು ರೀತಿಯ ಭಯವೂ ಆವರಿಸಿದಂತೆ ಅನಿಸುತ್ತಿತ್ತು. ಅವರ ಕುರಿತು ಬರೆಯುವ ನೆಪದಲ್ಲಿ ನಾನು ನನ್ನ ಪೂರ್ವಿಕರನ್ನೆಲ್ಲ ತುಂಬಿಕೊಂಡು ಹೀಗೊಂದು ಆತ್ಮಕತೆಯನ್ನು ಬರೆಯಲು ಹೊರಟಿದ್ದೇನೆ.
ಎದೆಯಲ್ಲಿ ಅವಲಕ್ಕಿ ಕುಟ್ಟಿದ ಎಸ್ಎಸ್ಎಲ್ಸಿ ಫಲಿತಾಂಶ…
ವಾರವೆಲ್ಲ ಕೆಲಸವಿಲ್ಲದೆ ಬಿಟ್ಟಿ ಊಟ ತಿಂದುಕೊಂಡು ವಾಹನ ದಟ್ಟಣೆಯ ತುಮಕೂರಿನಲ್ಲಿ ಓಡಾಡಿದ್ದು ಮನಸ್ಸಿಗೆ ಹಿಡಿಸದಾಗಿ ಮಂಕು ಕವಿಯತೊಡಗಿತು. ಆ ಮಂಕಿನೊಳಗೆ ಊರಿನ ನೆನಪುಗಳು ಬಾದಿಸತೊಡಗಿದವು. ಪರಿಣಾಮವಾಗಿ ದುಡಿಯದಿದ್ದರೂ ಸರಿಯೆ ಊರು ಹೋಗೆನ್ನುವಂತೆಯೂ ಕಾಡು ಬಾ ಎನ್ನುವಂತೆಯೂ ಕರೆದಂತಾಯಿತು. ಇದಕ್ಕೆ ಒತ್ತುಕೊಡುವಂತೆ ಎಸ್ಎಸ್ಎಲ್ಸಿ ಫಲಿತಾಂಶದ…









