Advertisement

ಸರಣಿ

ಐಬಿಲ್ಲದ ಕೊಲೆ ಯಾವುದೂ ಇಲ್ಲಾ..

ಐಬಿಲ್ಲದ ಕೊಲೆ ಯಾವುದೂ ಇಲ್ಲಾ..

 ರೈಲು ಹಳಿಯ ಮೇಲಿದ್ದ ಗೋಣಿ ಚೀಲದಲ್ಲಿನ ಶವ ಮಮ್ಮಿಫೈಡ್ ಸ್ಥಿತಿಯಲ್ಲಿತ್ತು. ತೆರೆದು ನೋಡುವಾಗ ಶರೀರದಲ್ಲಿ ಯಾವ ವಾಸನೆಯು ಕೂಡ ಇರಲಿಲ್ಲ. ಶರೀರದಲ್ಲಿ ಅಲ್ಲಲ್ಲಿ ಒಣಗಿದ ಮರಳು ಸಿಕ್ಕಿಕೊಂಡಿದ್ದು, ಶರೀರವನ್ನು ಕೆಲವು ದಿನಪತ್ರಿಕೆಗಳಿಂದ ಸುತ್ತಲಾಗಿತ್ತು. ಎಲ್ಲಾ ಬಿಡಿಸಿ ನೋಡುವಾಗ ಶವವು ಸಾಧಾರಣ ನಲವತ್ತರಿಂದ ಐವತ್ತು ವರ್ಷದ ಒಳಗಿನ ಒಬ್ಬ ಗಂಡಸಿನ ಶರೀರವಾಗಿತ್ತು. ಮೈಯ ಮೇಲೆ ಪೈಜಾಮ ಮತ್ತು ಕಮರಿ ಆಂಗ್ರಖಾ ಎನ್ನುವ ಬಟ್ಟೆಗಳು ಇದ್ದವು.

read more
ಟೀನ್ ಏಜ್ ಹುಡುಗ ಕಂಡ ಬೊಂಬಾಯಿ

ಟೀನ್ ಏಜ್ ಹುಡುಗ ಕಂಡ ಬೊಂಬಾಯಿ

ನಮ್ಮ ತಂದೆ ರಾಮಯ್ಯನವರು ತಮ್ಮ 19ನೆಯ ವಯಸ್ಸಿನಲ್ಲಿ ಕಾಶಿಗೆ ಬೊಂಬಾಯಿಯ ಮೂಲಕ ಹೋಗಬೇಕಿತ್ತು; ಅಲ್ಲಿ ಅವರು ಮೊದಲು ಹೋಗಿ ಸಮುದ್ರವನ್ನೇ ನೋಡಿದ್ದು! ಆದ್ದರಿಂದ ಹತ್ತಿರ ಯಾವ ಹೇಳಿಕೊಳ್ಳುವ ನದಿಯೂ ಇಲ್ಲದ ಬೆಂಗಳೂರಿನವರಿಗೆ ಸಮುದ್ರದ ಆಕರ್ಷಣೆ ಸಹಜ! ನಮ್ಮ ವಯಸ್ಸಿನವರಿಗೆ ಬೊಂಬಾಯಿನ ಇನ್ನೊಂದು ಆಕರ್ಷಣೆ ಇದ್ದದ್ದು  ಅಲ್ಲಿನ ಕ್ರಿಕೆಟ್  ಆಟಗಾರರಲ್ಲಿ!
ಪಾಲಹಳ್ಳಿ ವಿಶ್ವನಾಥ್ ಬರೆದ ಹೀಗೊಂದು ಕುಟುಂಬದ ಕಥೆ ಪುಸ್ತಕ ಒಂದು ಅಧ್ಯಾಯ

read more
ರೆಂಬ್ರಾಂಟ್‌ನ ಕಣ್ಣಿಗೆ ಬಿದ್ದ ಹಾನ್ಸ್‌ಕೆನ್ ಎಂಬಾನೆಯ ಕತೆ-ವ್ಯಥೆ

ರೆಂಬ್ರಾಂಟ್‌ನ ಕಣ್ಣಿಗೆ ಬಿದ್ದ ಹಾನ್ಸ್‌ಕೆನ್ ಎಂಬಾನೆಯ ಕತೆ-ವ್ಯಥೆ

ಬಿಗ್ ಬೇಬಿ ಕೆಡಾಕೆಸ್‌ನಲ್ಲಿ ಬಂದಿಳಿದಾಗ ಅವನನ್ನು ಭಾರೀ ಸಂಭ್ರಮದಿಂದ ಸ್ವಾಗತಿಸಲಾಯಿತು. ಆ ಸಂಭ್ರಮಾಚರಣೆಯ ಅಂಗವಾಗಿ ಪಟ್ಟಣದ ಮೇಯರ್ ಶಾಲಾ ಕಾಲೇಜುಗಳಿಗೆ ಮೂರು ದಿನದ ರಜೆಯನ್ನೂ ಘೋಷಿಸಿದನಂತೆ. ಮುಂದಿನ ಕೆಲ ತಿಂಗಳ ಕಾಲ, ನಮ್ಮ ಬೆಂಗಳೂರಿನ ಬಿಗ್ ಬೇಬಿ, ತನ್ನೆಲ್ಲಾ ಕುಟುಂಬದವರಿಂದ ಬೇರಾಗಿ, ಸ್ಪೇನಿನ ಸಾಲ್ವಡಾರ್ ಡಾಲಿಯ ಖಾಸಗಿ ಉದ್ಯಾನದಲ್ಲಿ ಒಬ್ಬನೇ ಸುತ್ತಾಡಿದನಂತೆ. ಆದರೆ, ಅವನು ಬೆಳೆದಂತೆ, ನೋಡಿಕೊಳ್ಳುವುದು ಕಷ್ಟವಾಗಿ, ಬಾರ್ಸೆಲೋನಾ ನಗರದ ಮೃಗಾಲಯಕ್ಕೆ ಅವನನ್ನು ರವಾನಿಸಲಾಯಿತಂತೆ.

read more
ಸಹಜತೆಯ ದುಕೂಲವುಟ್ಟ ಪರ್ವ ನಾಟಕದ ಸುತ್ತ

ಸಹಜತೆಯ ದುಕೂಲವುಟ್ಟ ಪರ್ವ ನಾಟಕದ ಸುತ್ತ

‘ಪರ್ವ’ ನಾಟಕ ನನಗೆ ಇಷ್ಟವಾದದ್ದು ‘ಯಮ’ನನ್ನು ಸಹಜ ಮನುಷ್ಯನನ್ನಾಗಿ ಬಿಂಬಿಸುವ ಬಗೆಯಲ್ಲೇ ಇಡೀ ಪ್ರಯೋಗವನ್ನು ಸಿದ್ಧಮಾಡಿದ್ದ ಬಗೆಯಿಂದ. ಯಾವ ಪಾತ್ರವನ್ನೂ ಪುರಾಣ ಚಿತ್ರಿಸಿರುವ ಭಯಂಕರ ಯಮನನ್ನಾಗಿಸಲು ಮುಂದಾಗಿಲ್ಲ. ಎಲ್ಲೋ ಒಂದೆರಡು ಕಡೆ ಸಂಜಯನನ್ನು ಇಂದಿನ ವಾಹಿನಿಗಳ ಸುದ್ದಿ ವಾಚಕನ ರೀತಿಯಲ್ಲಿ ಸಂಗೀತ ಸಮೇತ ಬಿಂಬಿಸಿದ್ದು ಕೊಂಚ ಮಸಾಲೆ ಬೆರೆಸಿದಂತೆ ಅನಿಸಿತು.- ಪರ್ವ ನಾಟಕದ ಕುರಿತು ಎನ್. ಸಿ. ಮಹೇಶ್  ಬರೆದಿದ್ದಾರೆ

read more
ನಾವು ಬೆಳಕಾಗಿರಬೇಕು ಇಲ್ಲವೆ ಶಾಂತವಾಗಿರಬೇಕು

ನಾವು ಬೆಳಕಾಗಿರಬೇಕು ಇಲ್ಲವೆ ಶಾಂತವಾಗಿರಬೇಕು

ಮಾನವ ಸಹಜವಾಗಿ ಸೆಕ್ಯೂಲರ್ ಆಗಿರುತ್ತಾನೆ. ಆದರೆ ಅವನನ್ನು ಪ್ರಜ್ಞಾಪೂರ್ವಕವಾಗಿ ಕಮ್ಯೂನಲ್ ಮಾಡಿದರೂ ಅದು ಬಹಳದಿನ ಬಾಳಿಕೆ ಬರುವುದಿಲ್ಲ. ಮತ್ತೆ ಮತ್ತೆ ಜನ ಸಹಜತೆಯನ್ನು ಬಯಸುತ್ತಲೇ ಇರುತ್ತಾರೆ. ಹೀಗಾಗಿ ಕೋಮುವಾದಿಗಳು ಮತ್ತು ಮೂಲಭೂತವಾದಿಗಳ ಆಟ ನಿರಂತರವಾಗಿ ನಡೆಯುವುದಿಲ್ಲ. ಜನರು ವಿವಿಧ ಜಾತಿ ಮತ್ತು ಧರ್ಮಗಳ ಚೌಕಟ್ಟಿನಲ್ಲಿ ಸಿಲುಕಿದ್ದರೂ ದೈನಂದಿನ ಬದುಕಲ್ಲಿ ಇವೆಲ್ಲವುಗಳನ್ನು ಮೀರಿದವರೇ ಆಗಿರುತ್ತಾರೆ. ರಂಜಾನ್ ದರ್ಗಾ ‘ನೆನಪಾದಾಗಲೆಲ್ಲ ‘ ಸರಣಿಯ  20ನೇ ಕಂತಿನಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ಅನಾವರಣಗೊಳಿಸಿದ್ದಾರೆ.

read more
ಮಕ್ಕಳನ್ನು ಓದಿಸಿದ ಮಾವಿನಮರಗಳು

ಮಕ್ಕಳನ್ನು ಓದಿಸಿದ ಮಾವಿನಮರಗಳು

ಅಡ್ವಾನ್ಸ್ ಕೊಟ್ಟೋದ ಸಾಬರು ಕೆಲವೊಮ್ಮೆ ರೇಟ್ ಬಿದ್ದೋಗಿದೆ ಎಂದು ಮರದಿಂದ ಹಣ್ಣು ಉದುರಿ ಹೋಗುತ್ತಿದ್ದರೂ ಬರುತ್ತಿರಲಿಲ್ಲ. ಅಪ್ಪ ಇನ್ನೂರೊ ಮುನ್ನೂರೊ ಅಡ್ವಾನ್ಸ್‌ಗೆ ಕಟಿಬಿದ್ದು ಉದುರುವ ಹಣ್ಣುಗಳನ್ನು ನೋಡಿಕೊಂಡು ಇನ್ನೊಬ್ಬರಿಗೂ ಕೊಡದೆ ಲಾಸ್ ಮಾಡಿಕೊಂಡದ್ದೂ ಇದೆ. ಸಾಬರು ಮರಗಳಿಗೆ ಕೊಟ್ಟೋದ ಅಡ್ವಾನ್ಸ್‌ ಹಣದಲ್ಲಿ ಅಪ್ಪ ಪ್ರತಿ ವರ್ಷ ನಮಗೆ ಬರೆಯುವ ನೋಟ್ ಬುಕ್ಕು ಕೊಡಿಸುತ್ತಿತ್ತು, ಪೂರ್ತಿ ಹಣ ಕೊಟ್ಟ ಮೇಲೆ ಅಕ್ಕಂದಿರಿಗೆ ಮತ್ತು ನಮಗೆ ಯೂನಿಫಾರ್ಮ್‌ ಕೊಡಿಸುತ್ತಿತ್ತು.

read more
ಈ ಮಾಣಿ ಎಂತಕ್ಕೂ ಪ್ರಯೋಜನವಿಲ್ಲ…

ಈ ಮಾಣಿ ಎಂತಕ್ಕೂ ಪ್ರಯೋಜನವಿಲ್ಲ…

ಅಜ್ಜ ಬಲಿಪರು ಪದ್ಯ ಹೇಳಿಕೊಡುತ್ತಿದ್ದ ಶೈಲಿ ಅನನ್ಯವಾದದ್ದು, ಇನ್ನೊಬ್ಬರು ಅನುಸರಣೆ ಮಾಡಲಾಗದ್ದು. ಪದ್ಯವನ್ನು ಬಾಯಿಯಲ್ಲಿ ಹೇಳುತ್ತಾ ಎರಡೂ ಕೈಯ್ಯಲ್ಲಿ ಪದ್ಯದ ಛಂದೋಗತಿಯನ್ನು ತೋರಿಸುತ್ತಾ ಇರುವಂತೆಯೋ ಎನ್ನುವಂತೆ ಅಥವಾ ಪದ್ಯ ನಿಬದ್ಧವಾದ ತಾಳದ ಘಾತಗಳನ್ನು ಹಸ್ತದ ಬೀಸುವಿಕೆಯಿಂದ ತೋರಿಸುತ್ತಾ ಹೇಳಿಕೊಡುತ್ತಿದ್ದರು.
ಇದರಿಂದ ಸಹಜವಾಗಿ ಅವರ ಶರೀರದ ಭಾಷೆಯೂ ಶಾರೀರದ ಭಾಷೆಯೂ ಕಲಿಯುತ್ತಿರುವ ಮೊಮ್ಮಗ ಕಿರಿಯ ಬಲಿಪರಲ್ಲಿ ಹಾಡಿನ ಅಂತರ್ಯವಾದ

read more
ಹೀಗೊಂದು ಕುಟುಂಬದ ಕೆಲವೊಂದು ಪುಟಗಳು

ಹೀಗೊಂದು ಕುಟುಂಬದ ಕೆಲವೊಂದು ಪುಟಗಳು

ಒಂದು ಕಾಲದಲ್ಲಿ ಬಹಳ ಜನಪ್ರಿಯವಾಗಿದ್ದ ತಾಯಿನಾಡು ಪತ್ರಿಕೆಯನ್ನು ಆರಂಭಿಸಿ ಮುನ್ನಡೆಸಿದ ಪಾಲಹಳ್ಳಿ ರಾಮಯ್ಯ ಅವರ ಮಗ ಪಾಲಹಳ್ಳಿ ವಿಶ್ವನಾಥ್ ಅವರು ಭೌತವಿಜ್ಞಾನದ ಪ್ರಾಧ್ಯಾಪಕರಾಗಿ ದೇಶವಿದೇಶಗಳಲ್ಲಿ ವಿಜ್ಞಾನವನ್ನು ಬೋಧಿಸಿದವರು. ತಮ್ಮ  ತಂದೆಯವರು ಆ ಕಾಲಕ್ಕೇ ಪ್ರಭುತ್ವವನ್ನು ಎದುರು ಹಾಕಿಕೊಂಡು ಪತ್ರಿಕೋದ್ಯಮವನ್ನು ನಿಭಾಯಿಸಿದ ಬಗೆ ಹಾಗೂ…”

read more
ಉನ್ಮಾದಕತೆಯನ್ನು ಬದಿಗಿರಿಸಿದ ಮೆಕ್ಸಿಕೋ ಸಿನಿಮಾ ʻರೋಮಾʼ

ಉನ್ಮಾದಕತೆಯನ್ನು ಬದಿಗಿರಿಸಿದ ಮೆಕ್ಸಿಕೋ ಸಿನಿಮಾ ʻರೋಮಾʼ

ಕ್ಲಿಯೋಳ ಪ್ರಿಯಕರ ಮಾರ್ಷಿಯಲ್ ಆರ್ಟ್ಸ್‌ ಪ್ರವೀಣ. ಕ್ಲಿಯೋಳ ಎದುರು, ಬಹುಶಃ ಅನಗತ್ಯವಾಗಿ, ನಗ್ನನಾಗಿ ಅದರ ವೈಖರಿಯನ್ನು ಪ್ರದರ್ಶಿಸುತ್ತಾನೆ. ಕ್ಲಿಯೋ ತನ್ನ ಪ್ರಿಯಕರನ ಜೊತೆ ಇದ್ದಾಗಲೂ ಹೆಚ್ಚು ಉನ್ಮಾದಕರ ಭಾವ ಪ್ರಕಟಿಸುವುದಿಲ್ಲ. ನಸುನಗೆಯಲ್ಲಿಯೇ ವರ್ತಿಸುತ್ತಾಳೆ. ಅವಳದು ಚೌಕು ಎನ್ನಬಹುದಾದ ಮುಖದ ಆಕಾರ. ಕಂದು ಬಣ್ಣದ ಅವಳ ಮುಖದಲ್ಲಿ ಎದ್ದು ಕಾಣುವುದು ಕಣ್ಣು ಮಾತ್ರ. ಅದರ ಸೂಕ್ಷ್ಮವಾದ ಚಲನೆಯೇ ಭಾವ ಪ್ರಕಟಣೆಗೆ ಬೆಂಬಲ.

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ