Advertisement

ಸರಣಿ

ಇಂಗ್ಲಿಷ್ ಪಾಸು ಮಾಡಿಸುವ ‘ದಾತ’

ಇಂಗ್ಲಿಷ್ ಪಾಸು ಮಾಡಿಸುವ ‘ದಾತ’

ಹಾಸ್ಟೆಲ್‌ನಲ್ಲಿ ಓದುವುದಕ್ಕೆ ಬಿಎಸ್ಸಿ ಹುಡುಗರಿಗಿಂತ ಹೆಚ್ಚಿನ ಸಮಯ ವ್ಯಯಿಸುತ್ತಿದ್ದ ನಾವು, ರಾತ್ರಿ ಹಗಲೆನ್ನದೆ ಪುಸ್ತಕ ಹಿಡಿದೇ ಇರುತ್ತಿದ್ದೆವು. ಸದಾ ಕನ್ನಡಕ ಹಾಕುತ್ತ ಎಲ್ಲರಿಂದ ‘ಇಂಟಲಿಜೆಂಟ್’ ಎಂದು ಕರೆಸಿಕೊಳ್ಳುತ್ತಿದ್ದ ರಂಗನಾಥ್ ನಮ್ಮ ಓದನ್ನ ಕಂಡು ‘ನೀವು ಸೈನ್ಸ್‌ ತಗಬೇಕಾಗಿತ್ತು ಕಂಡ್ರಲ’ ಎನ್ನುತ್ತಿದ್ದ. ಓದಿ ಬಸವಳಿಯುತ್ತಿದ್ದ ನಮಗೆ ಮಧ್ಯೆ ಕರೆಂಟ್ ಹೋದರೆ ತಂಪೆನಿಸುತ್ತಿತ್ತು. ಆದರೆ ಅದನ್ನ ತೋರಗೊಡದೆ ಕರೆಂಟಿಗೆ ಶಪಿಸುವರಂತೆ ನಾಟಕವಾಡುತ್ತಿದ್ದೆವು. ಹೀಗೆ ಒಮ್ಮೆ ನಮಗೂ ಪ್ರಭನಿಗೂ ಚಾಲೆಂಜ್ ಬಿತ್ತು.
ಗುರುಪ್ರಸಾದ್ ಕಂಟಲಗೆರೆ ಬರೆಯುವ ಟ್ರಂಕು ತಟ್ಟೆ ಸರಣಿಯ ಬರಹ ಇಲ್ಲಿದೆ.

read more
ಹಿಮ್ಮೇಳದಲ್ಲಿ ಮದ್ದಳೆ, ಖಂಜೀರ, ಪುಂಗಿ ಇತ್ಯಾದಿ

ಹಿಮ್ಮೇಳದಲ್ಲಿ ಮದ್ದಳೆ, ಖಂಜೀರ, ಪುಂಗಿ ಇತ್ಯಾದಿ

ಖಂಜೀರ ಪೂರ್ಣಪ್ರಮಾಣದಲ್ಲಿ  ಯಕ್ಷಗಾನ ಹಿಮ್ಮೇಳದ ಭಾಗವಾಗಿತ್ತು. ಭಾಗವತರ ಹಿಂದೆ ಒತ್ತು ಮದ್ದಳೆಗಾರರು ಅಥವಾ ಅಲ್ಪ ಸ್ವಲ್ಪ ತಾಳ ಜ್ಞಾನ ಇದ್ದವರು, ಖಂಜೀರವನ್ನು ನಿಂತು ನುಡಿಸುತ್ತಿದ್ದರು. ಹಿರಿಯ ಬಲಿಪ ನಾರಾಯಣ ಭಾಗವತರು ಮೇಳ ತಿರುಗಾಟದಲ್ಲಿ ಖಂಜೀರದ ನುಡಿಸುವಿಕೆಯೊಂದಿಗೆ ಭಾಗವತಿಕೆಯನ್ನು ಮಾಡಿದ್ದರು. ಖಂಜೀರದ ಬಳಕೆ ಕಾಲಕ್ರಮೇಣ ನಿಂತಿತು. ಹೊಸ ವಾದ್ಯಗಳು ಹಿಮ್ಮೇಳವನ್ನು ಸೇರಿಕೊಂಡ ಬಗ್ಗೆ ‘ಬಲಿಪ ಮಾರ್ಗ’ ಸರಣಿಯಲ್ಲಿ ಕೃಷ್ಣ ಪ್ರಕಾಶ್ ಉಳಿತ್ತಾಯ ಬರೆದಿದ್ದಾರೆ.

read more
ಗಣ್ಯರ ಒಡನಾಟದಲ್ಲಿ ಕಂಡ ಸರಳತೆಯ ಮುಖಗಳು

ಗಣ್ಯರ ಒಡನಾಟದಲ್ಲಿ ಕಂಡ ಸರಳತೆಯ ಮುಖಗಳು

ಯಾವುದಾದರೂ ಗಣ್ಯ ವ್ಯಕ್ತಿಗಳನ್ನು ಬರುವಿಕೆಯು ಮಧ್ಯಾಹ್ನ ಹನ್ನೊಂದು ಗಂಟೆಗೆ ಎಂದು ಇದ್ದರೂ ನಾವು ಭದ್ರತೆಯ ದೃಷ್ಟಿಯಿಂದ ಬೆಳಿಗ್ಗೆ ಮುಂಜಾನೆಯೇ ಅಲ್ಲಿರಬೇಕಾಗುತ್ತಿತ್ತು. ಅಲ್ಲಿ ಎಲ್ಲ ತಪಾಸಣೆಗಳನ್ನು ಮಾಡಿದ ನಂತರ ಆಸ್ಪತ್ರೆಯವರಾದ ನಾವು ಮೊದಲಿನ ಸುತ್ತಿನಲ್ಲಿ ಇರುತ್ತಿದ್ದೆವು. ಗಣ್ಯವ್ಯಕ್ತಿಗಳಿಗಾಗಿ ತಯಾರು ಮಾಡುತ್ತಿರುವ ಎಲ್ಲಾ ತಿನಿಸುಗಳ ರುಚಿಯನ್ನು ಕೂಡ ನೋಡಬೇಕೆಂಬ ಸೂಚನೆ ನೀಡಲಾಯಿತು. ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ನೆನಪುಗಳ ಮೆರವಣಿಗೆ ಸರಣಿ.

read more
`ಗಂಟಿಚೋರರು’ ಮೂಲತಃ ಸೈನಿಕರಾಗಿದ್ದರೆ?

`ಗಂಟಿಚೋರರು’ ಮೂಲತಃ ಸೈನಿಕರಾಗಿದ್ದರೆ?

ಠಕ್ಕರ ಹಿನ್ನೆಲೆಯಲ್ಲಿ ಗಂಟಿಚೋರರನ್ನು ನೋಡಿದರೆ ಮತ್ತೊಂದು ಆಯಾಮ ತೆರೆದುಕೊಳ್ಳುತ್ತದೆ. ಠಕ್ಕರು ದೊಡ್ಡಮಟ್ಟದ ಲೂಟಿ, ಕೊಲೆ ಸುಲಿಗೆ ಮುಂತಾದವುಗಳ ಮೂಲಕ ಜನರನ್ನು ಭಯಭೀತರನ್ನಾಗಿಸುತ್ತಿದ್ದರು. ಅವರು ಹೆಚ್ಚಾಗಿ ವ್ಯಾಪಾರಿಗಳನ್ನು ಲೂಟಿ ಮಾಡುತ್ತಿದ್ದರು. ಹಾಗಾಗಿ ಇವರು ಒಂದು ರೀತಿಯಲ್ಲಿ ಅಲೆಮಾರಿ ಕಳ್ಳರಾಗಿದ್ದರು. ಆದರೆ ಗಂಟಿಚೋರರ ಹೆಸರಲ್ಲೇ ‘ಗಂಟುಕಳ್ಳರು’ ಎಂದಿರುವುದು ಇವರ ಕಳ್ಳತನದ ಸ್ವರೂಪವನ್ನು ಕಾಣಿಸುತ್ತದೆ. ಹೀಗಾಗಿಯೇ ಇವರನ್ನು ಸಂತೆಕಳ್ಳರು ಎಂದೂ ಕರೆಯುತ್ತಿದ್ದರು. 
ಅರುಣ್ ಜೋಳದ ಕೂಡ್ಲಿಗಿ ಬರೆಯುವ ಗಂಟಿಚೋರರ ಕಥನದ ಮೂರನೇಯ ಕಂತು ಇಲ್ಲಿದೆ.

read more
ಉಪೇಂದ್ರನ ಹಾವಳಿ ಮತ್ತು ರಾಮಾಂಜಿ ಲವ್

ಉಪೇಂದ್ರನ ಹಾವಳಿ ಮತ್ತು ರಾಮಾಂಜಿ ಲವ್

ಸರ್ಕಾರದಿಂದ ನಡೆಯುವ ಯಾವುದೇ ಪರೀಕ್ಷೆಗಳನ್ನು ನಡೆಸಲು ನಮ್ಮ ಜೂನಿಯರ್ ಕಾಲೇಜಿನ ಕೊಠಡಿಗಳನ್ನ ಕಡ್ಡಾಯವಾಗಿ ತೆಗೆದುಕೊಳ್ಳುತ್ತಿದ್ದುದರಿಂದ ಆಗೆಲ್ಲ ನಮಗೆ ದೀರ್ಘ ರಜೆ ಸಿಗುತ್ತಿತ್ತು. ಚೆನ್ನಾಗಿ ಓದಬೇಕೆಂಬ ಕನಸು ಹೊತ್ತು ಬಂದಿದ್ದ ನಮಗೆ ಇಲ್ಲಿನ ವಿಪರೀತ ರಜೆಗಳಿಂದಾಗಿ ನಿರಾಸೆ ಉಂಟಾಗಿತ್ತು. ನಮಗೆ ಇತ್ತ ಕೆಲ ತಿಂಗಳು ಕಳೆದರೂ ಕಾಲೇಜು ಪ್ರಾರಂಭ ಆಗದೆ ಊರಲ್ಲೆ ಉಳಿದಾಗ, ಪಕ್ಕದ ಮನೆ ಕೇಸುದೊಡಪ್ಪ ‘ಎಲ್ಲೊ ಪೇಲಾಗವೆ ಅದ್ಕೆ ಹೋಗಿಲ್ಲ’ ಎಂದು ಅನುಮಾನ ಪಟ್ಟುಕೊಳ್ಳುತ್ತಿತ್ತು. ಗುರುಪ್ರಸಾದ್‌ ಕಂಟಲಗೆರೆ ಬರಹ.

read more
ಠಕ್ಕರ ಸಲಹುವ `ಕಾಳಿ’ ಮತ್ತು ಠಕ್ಕದೀಕ್ಷೆ

ಠಕ್ಕರ ಸಲಹುವ `ಕಾಳಿ’ ಮತ್ತು ಠಕ್ಕದೀಕ್ಷೆ

ಸರ್ವಶಕ್ತನ ಹೆಂಡತಿಯನ್ನು ದೇವಿ, ಭವಾನಿ, ಕಾಳಿ- ಹೀಗೆ ಹಲವಾರು ಹೆಸರುಗಳಿಂದ ಕರೆಯುತ್ತಾರೆ. ಅವಳು ಒಂದು ಬೊಂಬೆಯನ್ನು ಮಾಡಿದಳು. ಅದಕ್ಕೆ ಜೀವಶಕ್ತಿ ತುಂಬಿದಳು. ಅದು ಜೀವ ತುಂಬಿಕೊಂಡ ಕೂಡಲೇ, ತನ್ನ ಬಹಳ ಮಂದಿ ಭಕ್ತರನ್ನು ಕೂಡಿಸಿದಳು. ಅವಳು ಅವರಿಗೆ ಠಕ್ಕರು ಎಂದು ಹೆಸರಿಟ್ಟಳು. ಅವರಿಗೆಲ್ಲಾ ಠಕ್ಕ ವೃತ್ತಿಯನ್ನು ಅದರ ಚಮತ್ಕಾರಗಳನ್ನು ಕಲಿಸಿದಳು. ಅದರ ಗುಟ್ಟುಗಳನ್ನು ಅವರೆಲ್ಲಾ ಸರಿಯಾಗಿ ಅರಿತುಕೊಳ್ಳುವಂತೆ ಮಾಡಲು, ತಾನು ರೂಪಿಸಿ ಜೀವ ನೀಡಿದ್ದ ಬೊಂಬೆಯನ್ನು ತನ್ನ ಕೈಯಾರೆ ನಾಶ ಮಾಡಿದಳು. ಅವಳು ಠಕ್ಕರಿಗೆ…

read more
ಏಕಸೂತ್ರದಲ್ಲಿ ಬಂಧಿಯಾದ ಭಿನ್ನ ನೆಲೆಗಳು

ಏಕಸೂತ್ರದಲ್ಲಿ ಬಂಧಿಯಾದ ಭಿನ್ನ ನೆಲೆಗಳು

ವಿಶ್ವನಾಥರ ಅದೃಷ್ಟವೆಂದರೆ, ಪಲ್ಲಟಗಳು, ಪರಿವರ್ತನೆ ಜರುಗುತ್ತಿದ್ದ ಕಾಲದಲ್ಲಿ ಎಲ್ಲವನ್ನೂ ಬಿಡುಗಣ್ಣಿನಿಂದ ನೋಡುವಂತ ವಯಸ್ಸಿನಲ್ಲಿ ಅವರಿದ್ದುದು. ಮುಂಬೈನಲ್ಲಿ ಸಂಶೋಧಕನ ವೃತ್ತಿ, ನಂತರ ಅಮೆರಿಕಾದಲ್ಲಿ ವೃತ್ತಿ, ಸಂಶೋಧನೆಗಳಿಂದಾಗಿ ಮೂಡಿದ ವಿಶಾಲ ಜೀವನ ದೃಷ್ಟಿ, ಇವುಗಳ ಹಿನ್ನೆಲೆಯಲ್ಲಿ ಸುಮಾರು ೫೦-೬೦ ವರ್ಷಗಳ ನಂತರ ಒಂದು ರೀತಿಯ ‘ಮಾನಸಿಕ ದೂರ’ದಿಂದ ಈ ಕತೆ ಬರೆದಿದ್ದು, ತಂದೆ-ತಾಯಿ-ಪತ್ರಿಕೆಗಳ ಬಗ್ಗೆ ಮಾತ್ರವಲ್ಲ, ಸೋದರ ಬ್ರಹ್ಮಾನಂದ, ಕುಟುಂಬಕ್ಕೆ ಆಪ್ತರಾಗಿದ್ದವರ…

read more
ನಿಗೂಢತೆಯೆಡೆಗೆ ಚಲಿಸುವ ಇರಾನ್‌ನ ʻಸರ್ಟಿಫೈಡ್‌ ಕಾಪಿʼ

ನಿಗೂಢತೆಯೆಡೆಗೆ ಚಲಿಸುವ ಇರಾನ್‌ನ ʻಸರ್ಟಿಫೈಡ್‌ ಕಾಪಿʼ

ಅಬ್ಬಾಸ್ ಕಿಯರೋಸ್ತಮಿ ತನ್ನ ನೆಚ್ಚಿನ ಮನೋಭೂಮಿಕೆಗೆ ಹತ್ತಿರವಾದ ಮನುಷ್ಯನ ಅಂತರಂಗದಲ್ಲಿ ಹುದುಗಿರುವ ಭಾವನೆಗಳ ಏರಿಳಿತವನ್ನು ತೀರಾ ಸರಳವಾದ ನಿರೂಪಣಾ ವಿಧಾನದಿಂದ ಪ್ರಸ್ತುತಪಡಿಸುತ್ತಾನೆ. ಅವನ ಚಿತ್ರಗಳ ಪಾತ್ರಗಳ ಸೃಷ್ಟಿಕ್ರಿಯೆ ಹಲವು ಪದರುಗಳಲ್ಲಿ ಜರುಗುವುದು ಸಾಮಾನ್ಯ. ಇವುಗಳು ಅಷ್ಟಕ್ಕೆ ನಿಲ್ಲದೆ ತೀರ ಗಹನ ವಿಷಯಗಳನ್ನು ಅತ್ಯಂತ ಕಡಿಮೆ ಘಟನೆಗಳನ್ನು ಉಪಯೋಗಿಸಿ ಪ್ರಸ್ತುತಪಡಿಸುವುದು ಅವನ ಶೈಲಿಯಾಗಿದೆ. …

read more
ಹಾಸ್ಟೆಲ್ ರೂಂನಲ್ಲಿ ಓದುವ ‘ಸೆಟಪ್’ ನಿರ್ಮಾಣ

ಹಾಸ್ಟೆಲ್ ರೂಂನಲ್ಲಿ ಓದುವ ‘ಸೆಟಪ್’ ನಿರ್ಮಾಣ

ರಂಗಸ್ವಾಮಣ್ಣ ಮಾವನ ಬಗೆಗೆ ಕೊಟ್ಟಿದ್ದ ಬಿಲ್ಡಪ್‌ನಿಂದ ರೂಮಿನವರಾದ ನಾವಷ್ಟೆ ಅಲ್ಲದೆ ಅಕ್ಕಪಕ್ಕದವರೂ ಸೈಲೆಂಟಾಗಿದ್ದರು. ಗಂಟೆ ಗಟ್ಟಲೆ ಇದ್ದ ತಿಮ್ಮರಾಯಪ್ಪನವರು ಬಹಳ ಹೊತ್ತು ಭಾಮೈದುನನನ್ನು ಮಾತ್ರವಲ್ಲದೆ ನಮ್ಮನ್ನೂ ವಿಚಾರಿಸಿಕೊಂಡರು. ಕುಂದೂರು ತಿಮ್ಮಯ್ಯನವರ ಮಗ ಮತ್ತು ಭಾಮೈದ ಎಂದು ತಿಳಿದ ನಂತರ ನಮ್ಮನ್ನೂ ಕಾಳಜಿಯಿಂದ ಮಾತಾಡಿಸಿದರು. ಭಾಮೈದನ ವಿದ್ಯಾಭ್ಯಾಸದ ಸ್ಥಿತಿಗತಿಯನ್ನ ಒಂದಷ್ಟು ಒಳಹೊಕ್ಕೆ ಕೆದಕಿದ ನಂತರವೂ ಜೋಬಿಗೆ ಕೈ ಹಾಕಿ ಏನನ್ನೂ ತೆಗೆದಿದ್ದು ಕಾಣಲಿಲ್ಲ. ಹೊರಡಲು ಸಿದ್ಧರಾದ ತಿಮ್ಮರಾಯಪ್ಪನವರನ್ನ…

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ