ಚರಿತ್ರಾರ್ಹ ಲಕ್ಷಣಗಳಿರುವ ಫ್ರಾನ್ಸ್ನ ʻದ ಆರ್ಟಿಸ್ಟ್ʼ
ಮೂಕಿ ಚಿತ್ರವೊಂದು ಈಗ ಸವಾಲುಗಳನ್ನು ಎದುರಿಸಿ ಗೆಲ್ಲುವ ಸಾಧ್ಯತೆ ಇಲ್ಲ ಎನ್ನುವ ತೀವ್ರವಾದ ಅನಿಸಿಕೆಯಿದೆ. ಆದರೆ ಎಲ್ಲರ ಪೂರ್ವಗ್ರಹ, ಅನುಮಾನಗಳನ್ನು ಸಾರಾಸಗಟಾಗಿ ನೆಲಸಮ ಮಾಡಿ, ಅಷ್ಟೆತ್ತರಕ್ಕೆ ಪತಾಕೆ ಹಾರಿಸಿದ ಚಿತ್ರ ʻದ ಆರ್ಟಿಸ್ಟ್ʼ. ಹಳೆಯ ದಾರಿಗಳನ್ನು ಹೊಸದಾರಿಗಳನ್ನು ಅನ್ವೇಷಿಸುವಂತೆ ಸಂದೇಶ ನೀಡುವ ಫ್ರಾನ್ಸ್ ನ ಚಿತ್ರವಿದು. ಈ ಚಿತ್ರದ ಆಶಯವೇನು ಎಂಬ ಬಗ್ಗೆ ಪ್ರಶ್ನೆಗಳು ಮೂಡುವುದು ಸಹಜ. 2011ರಲ್ಲಿ ತೆರೆಕಂಡ ಚಿತ್ರವಿದು. ಹಾಗಾಗಿ ಅದರ ಪ್ರಭಾವ, ಮಹತ್ವಗಳ ಪೂರ್ಣ ಅರಿವು ದೊರೆಯಬೇಕಾದರೆ ಇನ್ನಷ್ಟು ಕಾಲ ಸರಿಯಬೇಕು. ಲೋಕಸಿನಿಮಾ ಟಾಕೀಸ್ ನಲ್ಲಿ ಎ.ಎನ್. ಪ್ರಸನ್ನ ಬರಹ ನಿಮ್ಮ ಓದಿಗಾಗಿ.
ಅಪ್ಪನ ಕೌಟುಂಬಿಕ ಅರ್ಥಶಾಸ್ತ್ರ
ನಮಗೆ ಒಂದು ಗೇಣು ಭೂಮಿಯೂ ಇರಲಿಲ್ಲ. ಆದರೆ ತಂದೆಗೆ ಕೃಷಿಕನಾಗುವ ಹುಚ್ಚು ಬಹಳವಿತ್ತು. ಬೆಳದಿಂಗಳ ರಾತ್ರಿಯಲ್ಲಿ ಕೂಡ ಅವರು ಆ ಭೂಮಿಯಲ್ಲಿ ದುಡಿಯುತ್ತಿದ್ದರು. ಅವರಿಗೆ ದುಡಿತದ ಆನಂದವೇ ಆನಂದ. ದುಡಿದು ದುಡಿದು ಕಲ್ಲುಗಳಿಂದ ತುಂಬಿದ ಆ ಹಾಳು ಭೂಮಿಯನ್ನು ಸಮೃದ್ಧಗೊಳಿಸಿದರು. ಬಾಳೆಯ ಸಸಿ ನೆಟ್ಟರು. ಹಳೆಯ ಡೀಸಲ್ ಎಂಜಿನ್ ಕೊಂಡು ನೀರು ಉಣಿಸುತ್ತ ಚಿಕ್ಕ ಬಾಳೆಯ ಬನವನ್ನೇ ಸೃಷ್ಟಿಸಿದರು.
ರಂಜಾನ್ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ ಹದಿನೈದನೇ ಕಂತು ಇಲ್ಲಿದೆ.
ನವೋದಯದಿಂದ ನವ್ಯಕ್ಕೆ ಪೇಜಾವರ ಸದಾಶಿವ ರಾವ್
ಕನ್ನಡದ ಆಧುನಿಕ ಕವಿಗಳನ್ನೆಲ್ಲ ಓದಿ, ಬರೆದುಕೊಂಡು, ತಾವು ಸ್ವತಃ ಕವನಗಳನ್ನು ಬರೆದು ತಮ್ಮನ್ನು ಸ್ವತಃ ತಿದ್ದಿಕೊಂಡು, ಗೋಕಾಕರಂಥ ವಿಮರ್ಶಕರ ಅಭಿಪ್ರಾಯವನ್ನು ಕೇಳಿ ಮುಕ್ತ ಮನಸ್ಸಿನಿಂದ ಸ್ವೀಕರಿಸಿ, ಅವರ ಸಾಹಿತ್ಯ ರಚನೆಯ ಬಗ್ಗೆ ತಮ್ಮ ಮುಕ್ತ ಅಭಿಪ್ರಾಯಗಳನ್ನು ಹೇಳಿ ತಾನೂ ಬೆಳೆದ ಪೇಜಾವರ ಸದಾಶಿವರಾಯರು ತಮ್ಮೊಂದಿಗೆ ಇತರರನ್ನೂ ಬೆಳೆಸಿದ ಸಾಹಿತಿ. ಚಿತ್ರಕಲೆ ಟೆನಿಸ್ ಆಟ, ಸಿತಾರ್ ನುಡಿಸುವುದು, ಫೋಟೋಗ್ರಫಿ, ಅಂಚೆಚೀಟಿ ಸಂಗ್ರಹ, ಚಾರಣ, ಮೌಂಟೆನಿಯರಿಂಗ್ ಮುಂತಾದ ಆಸಕ್ತಿಗಳನ್ನು ಹೊಂದಿದ್ದ ಜೀವನ್ಮುಖಿ ಅವರಾಗಿದ್ದರು.
ಹೊಟ್ಟೆ ಮತ್ತು ಮನಸ್ಸು ತುಂಬಿದ ಭಾರೀ ಭೋಜನ…
“ಅವರಿಗೆ ಸುಲಭವೆನಿಸಿದ ಲೆಕ್ಕವನ್ನು, ‘ಒಂದಲ್ಲ ನಾಲ್ಕು ಸಲ ಕೇಳಿ ಹೇಳಿ ಕೊಡ್ತಿನಿ’ ಎನ್ನುತ್ತಿದ್ದರು. ಅದೇ ಸಲುಗೆಯ ಮೇಲೆ ಹುಡುಗರೇನಾದರೂ ‘ಇದು ಅರ್ಥ ಆಗ್ಲಿಲ್ಲ ಯಂಗೆ ಸರ್’ ಎಂದು ಕೇಳಿದರೆ ಉಪಾಯವಾಗಿ ತಾವಿರುವಲ್ಲಿಯ ಬೋರ್ಡ್ ಹತ್ತಿರಕ್ಕೆ ಕರೆಸಿಕೊಂಡು. ‘ಇಂಥ ಸುಲಭದ್ದು ಅರ್ಥ ಆಗ್ಲಿಲ್ವ, ಹೇಳಿ ಕೊಡ್ಬೇಕಾದ್ರೆ ಯತ್ತಗೆ ನೋಡ್ತಿರ್ತಿರ, ಎಲ್ಲಾರ ದನ ಕಾಯದ ಬಿಟ್ಟು, ಸ್ಕೂಲಿಗೆ ಯಾಕೆ ಬತ್ತಿರ’ ಎಂದು ಒಂದೇ ಉಸಿರಿಗೆ ಬೈಯುತ್ತ ಕನಿಷ್ಠ ಎರೆಡು ಕೋಲು ಮುರಿಯುವವರೆಗೂ ಹೊಡೆಯುತ್ತಿದ್ದರು.”
‘ಕೈ ಮದ್ದು’ ಹಾಕುವವರ ಮಧ್ಯೆ..
ಈ ಮದ್ದು ತೆಗೆಯುವುದು ಎಂದರೆ ಸಂತೆಯಲ್ಲಿ, ಜಾತ್ರೆಯಲ್ಲಿ, ಕಿವಿ, ಕಣ್ಣಿನಿಂದ ಕಲ್ಲು ತೆಗೆದಂತೆ. ತಮ್ಮ ಕೈಚಳಕದಿಂದ ತಾವೇ ಹಾಕಿದ್ದನ್ನು ರಾಶಿಗಟ್ಟಲೆ ತೆಗೆದು ತೋರುವವರಂತೆ ಇದು ಒಂದು ವೃತ್ತಿ. ಆದರೆ ಕೆಲವೊಮ್ಮೆ ಈ ರೀತಿಯ ಪ್ರಕ್ರಿಯೆಯ ನಂತರ ರೋಗ ಗುಣ ಆಗುವುದೂ ಉಂಟು. ಶರೀರಕ್ಕೆ ಬರುವ ಅನೇಕ ರೋಗಗಳು ಮನಸ್ಸಿಗೆ ಸಂಬಂಧಿಸಿದ್ದು. ಅದರಿಂದ ಅನೇಕ ಬಗೆಯ ಚಿಹ್ನೆಗಳು ಕಂಡು ಬರಬಹುದು. ಹೀಗಿರುವಾಗ ತನ್ನಲ್ಲಿದ್ದ “ಮದ್ದು” ಹೊರಬಿತ್ತು ಎಂಬ ನಂಬಿಕೆಯೂ ಅವರನ್ನು ಗುಣಪಡಿಸಲು ಸಾಕು.”
ಸಲಕರಣೆಗಳನ್ನು ಅನ್ವೇಷಿಸುವ ಮನುಷ್ಯರ ಮನೋಲೋಕದ ಕತೆಯಿದು
ನ್ಯೂಯಾರ್ಕ್ ಸರ್ಕಾರ ಎ.ಸಿ. ವಿದ್ಯುತ್ ನ ಅಪಾಯದ ಕುರಿತು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಿ, ಎಂಜಿನಿಯರುಗಳು ಮತ್ತು ತಜ್ಞರಿಂದ ಮಾಹಿತಿ ಕಲೆ ಹಾಕಿತು. ವೆಸ್ಟಿಂಗ್ಹೌಸ್ನ ಪರವಿದ್ದ ಎಂಜಿನಿಯರುಗಳು ಅಪಾಯವನ್ನು ಅಲ್ಲಗೆಳೆದರೆ, ಎಡಿಸನ್ ಪರವಿದ್ದ ತಜ್ಞರು ಎ.ಸಿ. ವಿದ್ಯುತ್ ವ್ಯವಸ್ಥೆಯನ್ನು ಮಾನವರನ್ನು ಅರೆಗಳಿಗೆಯಲ್ಲೇ ಕೊಲ್ಲಬಲ್ಲ ರಕ್ಕಸ ಶಕ್ತಿಯೆಂಬಂತೆ ಬಿಂಬಿಸಿದರು. ವೆಸ್ಟಿಂಗ್ಹೌಸ್ ಮತ್ತು ಎಡಿಸನ್ ನಡುವಿನ ಈ ವ್ಯಾವಹಾರಿಕ ಕದನದಲ್ಲಿ, ತಾನು ನಿರ್ಲಿಪ್ತನೆಂದು ಘೋಷಿಸಿಕೊಂಡ ಹೆರಾಲ್ಡ್ ಬ್ರೌನ್, ಎ.ಸಿ. ವಿದ್ಯುತ್ತಿನ ವಿರುದ್ಧ..”
ಬಾಲ್ಯದ ಆಟ..ಆ ಹುಡುಗಾಟ ಇನ್ನೂ ಮರೆತಿಲ್ಲಾ..
“ಆಮೇಲೆ ನಾನು ಆ ಕೋಣೆಯ ಕಿಟಕಿಯ ಮುಂದೆ ಕುಳಿತು ಪಾಠ ಕೇಳುತ್ತಿದ್ದೆ. ಒಂದು ಸಲ ಕಪ್ಪು ಹಲಗೆಯ ಮೇಲೆ ಗಣಿತ ಸಮಸ್ಯೆಯೊಂದನ್ನು ಬರೆದು ಉತ್ತರ ಬರೆಯಲು ತಿಳಿಸಿದರು. ನಾನು ಮನದಲ್ಲೇ ಕೂಡಿಸಿ ಕಳೆದು ಭಾಗಿಸಿ ಥಟ್ಟನೆ ಉತ್ತರ ಹೇಳಿದೆ. ಹೀಗೆ ಹೇಳಲು ಕಾರಣವೂ ಇತ್ತು. ನನ್ನ ಬಳಿ ಕಚ್ಚಾ ನೋಟಬುಕ್ ಕೂಡ ಇರಲಿಲ್ಲ. ಹೀಗಾಗಿ ಮನದಲ್ಲೇ ಲೆಕ್ಕಾಚಾರ ಮಾಡುವುದು ಅನಿವಾರ್ಯವಾಗಿತ್ತು. ನನ್ನ ಉತ್ತರದಿಂದ ಮಾಸ್ತರರಿಗೆ ಖುಷಿಯಾಯಿತು. ನನಗೆ ಒಳಗೆ ಕರೆದರು.”
ರಂಜಾನ್ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ ಹದಿನಾಲ್ಕನೇ ಕಂತು ಇಲ್ಲಿದೆ.
ನೇತ್ರಾವತಿಯಲ್ಲಿ ಹರಿದು ಹೋದ ನೀರೆಷ್ಟೋ…
ಏನೇನೋ ಚಿಂತಿಸುತ್ತ ಇದಿನಬ್ಬ ಕುಳಿತಿದ್ದಾನೆ; ಅಷ್ಟರಲ್ಲೇ ದೂರದಲ್ಲಿ ಒಂದು ಸಣ್ಣ ತಂಡ ನಡೆದು ಬರುತ್ತಿದೆ. ಇದಿನಬ್ಬನಿಗೆ ಮತ್ತೆ ಬದುಕುವ ಆಸೆ ಚಿಗುರಿತು, ಅಪರಿಚಿತರಾದರೇನು? ಮನುಷ್ಯರನ್ನು ಕಂಡೆನಲ್ಲಾ ಅನ್ನುವ ಖುಷಿ. ಹತ್ತಿರವಾದಂತೆ ಮುಖ ಚಹರೆ ಸ್ಪಷ್ಟವಾಗತೊಡಗಿತು. ಹೌದು, ಯೂಸುಫ್ ಮತ್ತು ಇತರ ಸಹ ಯಾತ್ರಿಕರು. ದೂರದಲ್ಲಿ ಬಂದವರಿಗೂ ಪರಿಚಯ ಸಿಕ್ಕಿರಬೇಕು. ಎಲ್ಲರೂ ಇದಿನಬ್ಬರ ಕಡೆಗೆ ಓಡಿ ಬಂದರು. ಉಳಿದವರು ಎಲ್ಲಿ ಹೋದರೋ ಗೊತ್ತಾಗಲಿಲ್ಲ.”
ಬಿಟ್ಟೇನೆಂದರೂ ಬಿಡದೀ…..
ಅಪರಾಧ ಮಾಡಿದ್ದು ನಿಜವಾದರೆ ಖಂಡಿತ ಬರತಾನೆ. ಬೇರೆಯವರಾಗಿದ್ದರೆ ಬರತಿರಲಿಲ್ಲ, ಇವನು ಮಾತ್ರ, ತಪ್ಪು ಮಾಡಿದ್ದರೆ, ಬಂದೇ ಬರತಾನೆ, ಅಂದುಕೊಂಡೆ. ರಝುಮಿಖಿನ್ ಗುಟ್ಟು ರಟ್ಟು ಮಾಡುವುದರಲ್ಲಿದ್ದ, ಜ್ಞಾಪಕ ಇದೆಯಾ? ನಿನ್ನ ಕೆರಳಿಸಬೇಕು ಅಂತ ಸುದ್ದಿ ಹರಡಿದ್ದು ನಾವೇನೇ. ಆ ಸುದ್ದಿ ಕೇಳಿ ರಝುಮಿಖಿನ್ ನಿನಗೆ ಬಂದು ಹೇಳತಾನೆ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.









