Advertisement

ಸರಣಿ

ನಾಟಕದ ಹೊಟ್ಟೆ ನೋವೂ ಮತ್ತು ತಪ್ಪಿದ ಹಾಜರಾತಿ

ನಾಟಕದ ಹೊಟ್ಟೆ ನೋವೂ ಮತ್ತು ತಪ್ಪಿದ ಹಾಜರಾತಿ

ನಮ್ಮ ಅಡುಗೆ ಭಟ್ಟರು, ಹಿರಿಯ ವಿದ್ಯಾರ್ಥಿಗಳು ಆಗಿಂದಾಗ್ಗೆ ಈ ಬಗ್ಗೆ ಆಡುತ್ತಿದ್ದ ಮಾತುಗಳನ್ನು ಕೇಳಿಸಿಕೊಂಡಿದ್ದೆವಾದರೂ ಹುಡುಗು ಬುದ್ಧಿಯ ನಮಗೆ ಇದೇನು ಮುಖ್ಯ ಎನಿಸಿರಲಿಲ್ಲ. ಅದುವರೆಗೆ ನಾವ್ಯಾರು ಅದನ್ನು ನೋಡಿರಲಿಲ್ಲ. ನೋಡಿರದ ನಮ್ಮಗಳ ಕಲ್ಪನೆಯಲ್ಲಿ ಹೊಸ ಹಾಸ್ಟೆಲ್ ‘ಹತ್ತಾರು ರೂಮುಗಳಿವೆಯಂತೆ! ತರಗತಿಗೊಂದೊಂದು ರೂಮು ಕೊಡುತ್ತಾರಂತೆ! ಸ್ನಾನಕ್ಕೆ ಕಕ್ಕಸ್ಸಿಗೆಲ್ಲ ಸಪರೇಟ್ ರೂಮುಗಳಿವೆಯಂತೆ! ಸದಾ ನೀರು ಬರುತ್ತಲೇ ಇರುತ್ತದಂತೆ! ದಿನಾ ಸ್ನಾನ ಮಾಡಬೇಕಂತೆ!”

read more
ಎರಡು ದಿನಗಳ ನಂತರ ಮಕ್ಕಳನ್ನು ನೋಡಿದ ಪಾಲಕರ ಕಣ್ಣು ತುಂಬಿತು

ಎರಡು ದಿನಗಳ ನಂತರ ಮಕ್ಕಳನ್ನು ನೋಡಿದ ಪಾಲಕರ ಕಣ್ಣು ತುಂಬಿತು

ಪರೀಕ್ಷೆ ಮುಗಿಸಿದ ಈಗಾಗಲೆ ಅಣಶಿಯಲ್ಲಿದ್ದ ಮಕ್ಕಳನ್ನು ಅವರವರ ಮನೆಗೆ ಮುಟ್ಟಿಸುವ ಜವಬ್ದಾರಿಯುತ ಕೆಲಸ ಶಿಕ್ಷಕರದ್ದಾಗಿತ್ತು. ಮಾರನೆಯ ದಿನ ಮಕ್ಕಳು ಮನೆಗೆ ತಲುಪಿದರು ಎಂಬ ತೃಪ್ತಿಯ ನಗು ಅವರಲ್ಲಿತ್ತು. ಆದರೆ ಶಿಕ್ಷಕರು ಮಕ್ಕಳನ್ನು ಮನೆಗೆ ಮುಟ್ಟಿಸುವ ಹೊತ್ತಲ್ಲಿ ಕೆಲವು ಮಕ್ಕಳ ಮನೆಗಳಿಗೆ ನೀರು ನುಗ್ಗಿ, ಕಷ್ಟ ಪಟ್ಟು ದುಡಿದ ಆಹಾರ ಧಾನ್ಯಗಳು, ಬಟ್ಟೆ, ಸಾಮಾನುಗಳೆಲ್ಲ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದವು.”

read more
ʻಲವ್ಲಿ ಮ್ಯಾನ್ʼ: ವಿಷಾದವೆಂಬ ನೆರಳಿನಡಿ ಸಂಸಾರದ ಚಿತ್ರ

ʻಲವ್ಲಿ ಮ್ಯಾನ್ʼ: ವಿಷಾದವೆಂಬ ನೆರಳಿನಡಿ ಸಂಸಾರದ ಚಿತ್ರ

ʻಲವ್ಲೀ ಮ್ಯಾನ್‌ʼ ಕೇವಲ ಎಪ್ಪತ್ತಾರು ನಿಮಿಷಗಳ ಚಿತ್ರ. ಬೇರೆ ಚಿತ್ರಗಳಿಗೆ ಹೋಲಿಸಿದರೆ ಕಡಿಮೆ ಅವಧಿಯದು. ಚಿತ್ರದಲ್ಲಿ ತನ್ನ ಆಶಯವನ್ನು ಪೂರ್ಣಗೊಳಿಸಲು ಕೇವಲ ಒಂದು ದಿನದ ಅವಧಿಯಲ್ಲಿ ನಡೆಯುವ ಕಥಾ ಹಂದರವಿರುವ ಕಥನವನ್ನು ಪ್ರಸ್ತುತಪಡಿಸುತ್ತಾನೆ. ಚಿತ್ರದಲ್ಲಿ ತೀವ್ರತರ ಭಾವನೆಗಳನ್ನು ಉಂಟುಮಾಡುವ ಸನ್ನಿವೇಶಗಳನ್ನು ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಿರೂಪಿಸುತ್ತಾನೆ. 
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಇಂಡೊನೇಷಿಯದ ʻಲವ್ಲಿ ಮ್ಯಾನ್‌ʼಸಿನಿಮಾದ ವಿಶ್ಲೇಷಣೆ

read more
ಹೃದಯ ತುಂಬುವಂತೆ ಮಾಡುವ ಮಾನವೀಯ ಸಂಬಂಧಗಳು

ಹೃದಯ ತುಂಬುವಂತೆ ಮಾಡುವ ಮಾನವೀಯ ಸಂಬಂಧಗಳು

ಧಾರ್ಮಿಕ ಸಮಾಜಗಳಲ್ಲಿ ಮೂಲಭೂತವಾದಿಗಳು, ಕೋಮುವಾದಿಗಳು ಮತ್ತು ಏನೂ ಗೊತ್ತಿಲ್ಲದ ಕರ್ಮಠರದೇ ಕಾರುಬಾರು ಜಾಸ್ತಿ ಇರುತ್ತದೆ. ಜನರನ್ನು ಹಿಂದೂ ಮುಸ್ಲಿಂ ಮಾಡುವುದರಲ್ಲೇ ಅವರು ತಲ್ಲೀನರಾಗಿರುತ್ತಾರೆ.  ರಂಜಾನ್ ಮತ್ತು ಬಕ್ರೀದಗಳಲ್ಲಿ ನನ್ನ ತಂದೆ ದೊಡ್ಡ ಹಂಡೆಯಲ್ಲಿ ಶುರಕುಂಬಾ ತಯಾರಿಸಲು ಎಲ್ಲ ವ್ಯವಸ್ಥೆ ಮಾಡುತ್ತಿದ್ದರು. ನಾವಿಗಲ್ಲಿಯ ಜನರೆಲ್ಲ ಶುರಕುಂಬಾ ಕುಡಿಯಬೇಕೆಂಬುದು ಅವರ ಆಶಯವಾಗಿತ್ತು.”

read more
ಮನೆ ತಲುಪುವ ಕನಸುಗಳ ಕಿತ್ತುಕೊಂಡ ಬಿರುಗಾಳಿ

ಮನೆ ತಲುಪುವ ಕನಸುಗಳ ಕಿತ್ತುಕೊಂಡ ಬಿರುಗಾಳಿ

ಡರ್ಬನ್ ನಿಂದ ಹೊರಟ ಆ ಹಡಗು, ನೋಡ ನೋಡುತ್ತಿದ್ದಂತೆ ಲಟ್ಟಣಿಗೆ ಮುರಿದು ಹಾಕುವಂತೆ ಅಷ್ಟು ದೊಡ್ಡ ಹಡಗು ಇಬ್ಭಾಗವಾಯಿತು. ಬೃಹತ್ ಗಾತ್ರದ ಅಲೆಯೊಂದು ಎದ್ದು ನೀರಿಗೆ ಧುಮುಕಿದ ಹಲವರನ್ನೂ ಎತ್ತಿ ದೂರ ದೂರಕ್ಕೆ ಎಸೆಯಿತು. ಬಹುಶಃ ದೂರವೆಂದರೆ ಮುಳುಗುತ್ತಿರುವ ಹಡಗಿನ ದೀಪ ಮಂಜಾಗಿ ಕಾಣಿಸುವಷ್ಟು. ದೂರದಲ್ಲಿ ಹಡಗಿನ ದೀಪ ಗಿರ ಗಿರನೆ ಸುತ್ತುವುದು ನೋಡಿದಾಗ ಇದಿನಬ್ಬನಿಗೆ ಪರಿಸ್ಥಿತಿಯ ಅರಿವಾಯಿತು. ಹಿಂದಿರುಗಿ ನೋಡಿದರೆ ಅಷ್ಟು ದೊಡ್ಡ ಹಡಗನ್ನು ಹೊಟ್ಟೆ ಬಾಕ ಸಮುದ್ರ ತಿಂದು ಮುಗಿಸಿದೆ. ಕನಸುಗಳು ನುಚ್ಚು ನೂರಾಗಿವೆ. -ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರುಕಾದಂಬರಿಯ ಹನ್ನೊಂದನೇ ಕಂತು

read more
ಚಿತ್ರಾನ್ನದಲ್ಲಿ ಕಡ್ಳೆ ಬೀಜಕ್ಕಾಗಿ ಹೋರಾಟ

ಚಿತ್ರಾನ್ನದಲ್ಲಿ ಕಡ್ಳೆ ಬೀಜಕ್ಕಾಗಿ ಹೋರಾಟ

ಹಿಂದಿನ ಬೆಂಚಿನಲ್ಲಿ ಸತೀಶ ಎಂಬ ತೀಟಲೆ ಹುಡುಗನಿದ್ದ. ಅವನು ಗುಂಪು ಕಟ್ಟಿಕೊಂಡು ‘ಮರಿ’ ಜಾಗದಲ್ಲಿ ‘ಮುದಿ’ ಸೇರಿಸಿ ರಾಗವಾಗಿ ಹೇಳುತ್ತಿದ್ದನು. ಈ ಅಪಬ್ರಂಶವನ್ನು ಕೇಳಿದ್ದೆ ತಡ, ಧ್ವನಿ ಬಂದ ಕಡೆಗೆ ನುಗ್ಗಿ ಕೈಗೆ ಸಿಕ್ಕಿದವರನ್ನು ರಪರಪನೆ ಚೆಚ್ಚಿ ಬಿಡುತ್ತಿದ್ದರು. ಎಷ್ಟು ಸರ್ತಿ ಹೇಳಿಕೊಟ್ಟರೂ ಕೆಲ ಹುಡುಗರು ಮತ್ತೆ ಮತ್ತೆ ಹಾಗೆ ಹೇಳುತ್ತಿದ್ದರು. ಇದರಿಂದ ಉರಿದು ಬೀಳುತ್ತಿದ್ದ ಮಾಸ್ಟರ್ ಸಿಟ್ಟಿನಿಂದಲೇ ಹಾರ್ಮೋನಿಯಂ ಎತ್ತಿಕೊಂಡು ಹೊರ ಹೋಗಿಬಿಡುತ್ತಿದ್ದರು.
ಗುರುಪ್ರಸಾದ್ ಕಂಟಲಗೆರೆ ಬರೆಯುವ ‘ಟ್ರಂಕು-ತಟ್ಟೆ’ ಸರಣಿಯ ಐದನೆಯ ಕಂತು

read more
ನೀಲ ಕುರುಂಜಿಯ ನಾಡಿನಲ್ಲಿ ರಕ್ತಸಿಕ್ತ ಅಧ್ಯಾಯ

ನೀಲ ಕುರುಂಜಿಯ ನಾಡಿನಲ್ಲಿ ರಕ್ತಸಿಕ್ತ ಅಧ್ಯಾಯ

ಯಾವುದೇ ಮನೆ, ಕಾಂಕ್ರೀಟ್ ಕಾಡಿನ ಕಟ್ಟಡಗಳಿಲ್ಲದ, ಒಂದು ಪ್ರಶಾಂತವಾದ ಜಾಗ. ಆದರೆ ಅಲ್ಲಿಗೆ ಹೋಗಿ ತಲುಪುವುದು ಸ್ವಲ್ಪ ಕಷ್ಟದ ಕೆಲಸ. ಹತ್ತು ಕಿಲೋಮೀಟರು ದೂರದವರೆಗೆ ನಿಮ್ಮ ವಾಹನಗಳಲ್ಲಿ ಹೋಗಿ, ಅಲ್ಲಿಂದ ಮುಂದೆ ಅದಕ್ಕೆಂದೇ ಬಾಡಿಗೆ ಇರುವ ಕೆಲವು ಫೋರ್ ವ್ಹೀಲ್ ಜೀಪ್‌ಗಳಲ್ಲಿ ಮಾತ್ರ ಹೋಗಬಹುದು. ಓರೆ ಕೋರೆ, ನೀರು ಹರಿದು, ಅರ್ಧ ಹಾಳಾದ ರಸ್ತೆಯಲ್ಲಿ ಹೋಗುವುದೇ ಒಂದು ಸಾಹಸ ಕ್ರೀಡೆ ಅರ್ಥಾತ್ ಅಡ್ವೆಂಚರ್. ಸಮುದ್ರ ಮಟ್ಟದಿಂದ ನಾಲ್ಕು ಸಾವಿರ ಅಡಿ ಮೇಲೆ ಇರುವ ಸ್ಥಳ.
ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ‘ನೆನಪುಗಳ ಮೆರವಣಿಗೆ’

read more
ಚಪ್ಪಲಿ ಸಾಹೇಬರ ಚೌರ್ಯಸಂಬಂಧೀ ನೆನಪು

ಚಪ್ಪಲಿ ಸಾಹೇಬರ ಚೌರ್ಯಸಂಬಂಧೀ ನೆನಪು

ಸುಮಾರು ದೂರ ಓಡಿ ಅವರನ್ನು ಹಿಡಿದು ಭುಜ ತಟ್ಟಿ ಮಾತಾಡಿಸಿ ಅದೇನೋ ಕೇಳಿದ. ಕೂಡಲೇ ನಕ್ಕು ಪ್ರತಿಕ್ರಿಯಿಸಿದ ಆ ವಯೋವೃದ್ಧರು ತಮ್ಮ ಕೈಲಿದ್ದ ಪ್ಲಾಸ್ಟಿಕ್ ಸಂಚಿಯನ್ನು ಇವನ ಕೈಗೆ ವರ್ಗಾಯಿಸಿದರು. ಇವನು ಅವರ ಕೈ ಕುಲುಕಿದ. ನಾವು ಎಲ್ಲವೂ ಅಯೋಮಯವಾದಂತೆ ನೋಡುತ್ತ ಪಿಳಿಪಿಳಿ ಕಣ್ಣು ಬಿಡುತ್ತಾ ನಿಂತೇ ಇದ್ದೆವು. ಇಬ್ಬರ ಮುಖದಲ್ಲೂ ಹುಸಿನಗೆಯೊಂದು ಕಾಣುತ್ತಲೇ ಇತ್ತಾಗಿ ಧೈರ್ಯ. ಮತ್ತಾವುದೇ ಕಿರಿಕ್ ನಡೆಯದೆಂಬ ಸಮಾಧಾನ. ಮಧುರಾಣಿ ಬರೆಯುವ ‘ಮಠದ ಕೇರಿ’ ಕಥಾನಕ

read more
ಛಡಿಯಾಮಿ ಛಂ ಛಂ, ವಿದ್ಯಾಯಾಮಿ ಘಂ ಘಂ

ಛಡಿಯಾಮಿ ಛಂ ಛಂ, ವಿದ್ಯಾಯಾಮಿ ಘಂ ಘಂ

ಪ್ರತಿಯೊಬ್ಬ ವಿದ್ಯಾರ್ಥಿ ವೈವಿಧ್ಯಮಯವಾಗಿ ಬನಿಯನ್ ಬಾಕ್ಸ್‌ಗಳಲ್ಲಿ ಸರಸ್ವತಿಯ ಚಿತ್ರವಿಟ್ಟು ತನ್ನಿಚ್ಛೆಯಂತೆ ಸಿಂಗರಿಸಿ ಖುಷಿ ಪಡುತ್ತಿದ್ದ. ತುಂಬ ಶ್ರಮವಹಿಸಿ ತಯಾರಿಸಿದ ಈ ಸುಂದರ ‘ಸರಸ್ವತೀಮಂದಿರ’ಗಳನ್ನು ಬೇರೆ ವಿದ್ಯಾರ್ಥಿಗಳು ನೋಡುವುದು ಕಡಿಮೆ. ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಸಿಂಗರಿಸಿದ ಸರಸ್ವತಿಯನ್ನು ತಾನೇ ನೋಡುತ್ತ, ನೋಡುತ್ತ ಆನಂದತುಂದಿಲನಾಗಿ ತನ್ನ ಮತ್ತು ಸರಸ್ವತಿಯ ಮಧ್ಯೆ ಯಾರೂ ಇಲ್ಲದ ಹಾಗೆ ತದೇಕಚಿತ್ತನಾಗಿರುತ್ತಿದ್ದ. ಆ ಕ್ಷಣದ ಆನಂದವೇ ಆನಂದ. ಇದು ಒಂದುರೀತಿಯ ಲಿಂಗಾಂಗಸಾಮರಸ್ಯದಂತೆ!
ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಹನ್ನೆರಡನೆಯ ಕಂತು

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ