ಎಸ್.ಎಲ್. ಭೈರಪ್ಪನವರ ಕಾದಂಬರಿಗಳಲ್ಲಿನ ರಾಚನಿಕತೆಯ ಪ್ರಶ್ನೆ: ಎನ್.ಎಸ್.ಶ್ರೀಧರ ಮೂರ್ತಿ ಬರಹ
ಭೈರಪ್ಪನವರ ಎರಡನೆಯ ಸಾಧ್ಯತೆಯ ಕಾದಂಬರಿಗಳಲ್ಲಿ ವೈಚಾರಿಕತೆ ಬಹುಮುಖಿಯಾಗಿದೆ. ಅದರ ಕೇಂದ್ರವನ್ನು ಕೃತಿಯ ಸಂರಚನೆ ಹಿಡಿದಿಡುತ್ತದೆ. ಇಲ್ಲಿನ ಓದು ಕೂಡ ಬಹುಮುಖಿಯಾಗ ಬೇಕಾಗಿದ್ದು. ‘ತಂತುʼ ಕಾದಂಬರಿಯನ್ನು ಇದಕ್ಕೆ ಉದಾಹರಣೆಯಾಗಿ ನೋಡಬಹುದು. ಇದು ತುರ್ತು ಪರಿಸ್ಥಿತಿಯ ರಾಜಕೀಯ ಕಥನ ಎನ್ನುವುದು ನಿಜ. ಅದರ ಜೊತೆಗೆ ಕೌಟಂಬಿಕ ಪ್ರಶ್ನೆಗಳಿವೆ. ತಾಯಿ-ಮಗನ ಸಂಬಂಧದ ಪರಿಶೀಲನೆ ಇದೆ. ದಾಂಪತ್ಯದಾಚೆಗೆ ಸೆಳೆಯುವ ಸಂಬಂಧವಿದೆ. ಸಂಗೀತದ ನೆಲೆ ಕೂಡ ಇದೆ. ಇದನ್ನು ಗಹನತೆಯ ಜೊತೆಗೆ ಅಲ್ಲಲ್ಲಿ ಕಾಣುವ ಜನಪ್ರಿಯ ವಿವರಗಳ ಜೊತೆಗೇ ಗ್ರಹಿಸಿಕೊಳ್ಳಬೇಕು.
ಎಸ್.ಎಲ್. ಭೈರಪ್ಪನವರ ಕಾದಂಬರಿಗಳ ಕುರಿತು ಎನ್.ಎಸ್. ಶ್ರೀಧರಮೂರ್ತಿ ಬರಹ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ
ಕಾಲ ಕೈಕೊಡುತ್ತದೆ ಎಂದು ಸದಾ ಯೋಚಿಸುತ್ತಿದ್ದ ಹರಿಶ್ಚಂದ್ರನಿಗೆ ತನ್ನ ಮಗಳ ಹೆಸರು ‘ಸಮಯ’ವೆಂದು ತಿಳಿದಾಗ ಆಶ್ಚರ್ಯವಾಯಿತು. ಅಮೃತಾ ನೆನಪಾದಳು. ಎಲ್ಲಿದ್ದಾಳೆ? ಸಮಯಳ ಜೊತೆ ಇದ್ದಾಳೆಯೆ? ಸಮಯಳಿಗೆ ಹೇಗೆ ಗೊತ್ತಾಯಿತು ತನ್ನ ವಿಳಾಸ ಫೋನ್ ನಂಬರ್? ಅಮೃತಾ ಹೇಳಿರಬಹುದೆ? ತನ್ನಿಂದ ವಂಚಿತಳಾದವಳು. ಅವಳು ಹೇಳಿರುವುದು ಅಸಾಧ್ಯ ಎಂಬುದು ಖಾತ್ರಿ. ಒಂದುಕ್ಷಣ ಹರಿಶ್ಚಂದ್ರನ ಮುಖ ಕಪ್ಪಿಟ್ಟಿತು. ಮುಸ್ಸಂಜೆಯ ಕೆಂಪು ಬೆಳಕು ಕಿಟಕಿ ಪ್ರವೇಶಿಸಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ “ಟಿಕ್ ಟಿಕ್ ಟಿಕ್ ಟಿಕ್ ಕೈಕೊಟ್ಟ ಗಡಿಯಾರ”
ಆನಂದ ಈ. ಕುಂಚನೂರ ಬರೆದ ಈ ಭಾನುವಾರದ ಕತೆ
ನಿದ್ರೆಯಿಲ್ಲದೆ ಬಳಲಿಕೆಯಲ್ಲಿ ಅಸಾಧ್ಯ ಆಕಳಿಕೆ ಬರುತ್ತಿದ್ದರೂ ಕಣ್ರೆಪ್ಪೆ ಒಂದನ್ನೊಂದು ತಾಕುತ್ತಿರಲಿಲ್ಲ. ಯಾವಾಗಲೂ ನುಂಗುವ ನಿದ್ದೆ ಗುಳಿಗೆ ಕೂಡ ಈಗೀಗ ಕೆಲಸ ಮಾಡುತ್ತಿಲ್ಲ. ಹೀಗೆ ಎಲ್ಲ ಅಸಂಖ್ಯ ಕಾರ್ಮೋಡಗಳ ಮಧ್ಯೆ ಬೆಳ್ಳಿರೇಖೆಯೊಂದು ಮಿಂಚಿದಂತಾಗಿ ಗೆಲುವಾದರು. ತಮಗೆ ಹೊಳೆದ ವಿಚಾರಕ್ಕೆ ಖುಷಿಯಾಯಿತು.
ಆನಂದ ಈ. ಕುಂಚನೂರ ಹೊಸ ಕಥಾ ಸಂಕಲನ “ನಿರೂಪ”ದ ಒಂದು ಕತೆ “ನಕ್ಷತ್ರ ದಾನ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ
ಅದರೊಳಗೇನಿದೆ ಎನ್ನುವುದು ಒಳಹೋದವರಿಗೆ ಬಿಟ್ಟರೆ ಬೇರೆ ಯಾರಿಗೂ ಗೊತ್ತಿಲ್ಲ. ಒಳಗೆ ಹೋದವರು ಎಬ್ಬಿಸುತ್ತಿದ್ದ ನಗು ಹೊರಗೆ ಕೂತ ಹೊಸಬರಲ್ಲಿ ಮೂಡಿಸುತ್ತಿದ್ದದ್ದು ವಿಸ್ಮಯವನ್ನು, ಕುತೂಹಲವನ್ನು. ನಟರಾಜ ಕೊಟ್ಟಿದ್ದ ಐಡಿಯಾ ಫಲ ಕೊಡುವುದಕ್ಕೆ ಹೆಚ್ಚು ಸಮಯವೇನೂ ಬೇಕಾಗಲಿಲ್ಲ. ಮಹಾನಗರದ ಮರಿಮೊಮ್ಮಗನಂತಿತ್ತು ಭರತಪುರ. ಅಂಥ ಪುಟ್ಟ ಪಟ್ಟಣದ ಜನರನ್ನಷ್ಟೇ ನಗಿಸಿ, ಇದ್ದ ಸಾಲವನ್ನು ಏಳೆಂಟು ತಿಂಗಳುಗಳಲ್ಲಿಯೇ ತೀರಿಸಿ, ಸ್ಮೈಲು ಬೀರಿದ್ದ ಇಸ್ಮಾಯಿಲ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಇಸ್ಮಾಯಿಲನ ಸ್ಮೈಲಿಂಗು ಮಹಲು”
ತಾಂತ್ರಿಕ ಕವಿಯ ಮಾಂತ್ರಿಕ ಕವಿತೆಗಳು….: ದೇವರಾಜ್ ಹುಣಸಿಕಟ್ಟಿ ಬರಹ
ಪ್ರೇಮ, ಪ್ರೇಮ ವೈಫಲ್ಯದ ಕುರಿತು ಕವಿತೆಗಳು ನಿಮಗೆ ಈ ಸಂಕಲದಲ್ಲಿ ಢಾಳವಾಗಿಯೇ ಸಿಗುತ್ತವೆ. ಉದಾಹರಣೆಗೆ “ಕಾಳಜಿ”, ಕಟ್ಟಳೆಯೊಳಗೆ “ಗೋರಿ ಅಲ್ಲ ರೆಂಜಿ ಗಿಡ” ಹೀಗೆ ಅನೇಕ ಕವಿತೆಗಳು ನಿಮ್ಮ ವೈಯುಕ್ತಿಕ ಪ್ರೇಮ, ವೈಫಲ್ಯದ ನೋವು ಸುಖ ಎರಡಕ್ಕೂ ಜೊತೆಯಾಗಿ ರಮಿಸುತ್ತವೆ. ಹೀಗೆ ಕವಿಯೊಬ್ಬ ಆಪ್ತವಾಗುತ್ತಲೇ ಹೋಗುತ್ತಾನೆ. ಇಲ್ಲಿ ವೈನು, ವೇಶ್ಯೆ, ಮೆಟ್ಟು, ಪದ, ಕವಿ, ಕವಿತೆ ಹೀಗೆ ಅನೇಕ ವಿಷಯಗಳ ಕವಿತೆಗಳು ನಿಮ್ಮನ್ನ ಮಾಂತ್ರಿಕ ಸ್ಪರ್ಶದಿಂದ ಎದೆ ನೆಲವ ತೇವಗೊಳಿಸದೇ ಇರುವುದಿಲ್ಲ.
ಸದಾಶಿವ ಸೊರಟೂರು ಅವರ “ಗಾಯಗೊಂಡ ಸಾಲುಗಳು” ಕವನ ಸಂಕಲನದ ಕುರಿತು ದೇವರಾಜ್ ಹುಣಸಿಕಟ್ಟಿ ಬರಹ, ನಿಮ್ಮ ಓದಿಗೆ
ಬಾನು ಮುಷ್ತಾಕ್ ಕತೆಗಳ ಅನುವಾದದ ಬಗ್ಗೆ ಕೆಲವು ಟಿಪ್ಪಣಿಗಳು: ಬಿ.ವಿ.ರಾಮಪ್ರಸಾದ್ ಬರಹ
ದೀಪಾ ಅವರ ರೀತಿಯಲ್ಲೇ ಬಾನುರವರು ಕೆಲವು ಉರ್ದು ಪದಗಳನ್ನು ಯಾವುದೇ ವಿವರಣೆ ಇಲ್ಲದೇ ಅನುವಾದ ಮಾಡದೇ ಬಳಸುತ್ತಾರೆ. ಉದಾಹರಣೆಗೆ ಸಂಬಂಧ ಸೂಚಕ ಪದಗಳಾದ ಭಾಬಿ, ಅಮ್ಮಿ, ಆಪ, ಬೇಟಾ, ಅಮ್ಮಿಜಾನ್, ದಾದಿಮಾ. ಆದರೆ ಸಾಕಷ್ಟು ಬಾರಿ ಇವುಗಳ ಬದಲು ಅತ್ತಿಗೆ, ಅಮ್ಮ, ತಂದೆ, ಅನ್ನುವ ಕನ್ನಡ ಪದಗಳನ್ನೇ ಬಳಸಿದ್ದಾರೆ. ಇಸ್ಲಾಮ್ಗೆ ಸಂಬಂಧಿಸಿದ ಆಜಾನ್, ಮುತವಲ್ಲಿ, ಕಫನ್, ಗುಸುರ್, ದಫನ್, ಖಬರ್ಸ್ತಾನ್, ಇವುಗಳೂ ಕೂಡ ವಿವರಣೆಯಿಲ್ಲದೆ ಕೆಲವೊಮ್ಮೆ ಉರ್ದು ಮೂಲ ರೂಪದಲ್ಲಿ, ಕೆಲವೊಮ್ಮೆ ಉರ್ದು ಮೂಲರೂಪದ ಜೊತೆಗೆ ಕನ್ನಡದ ವಿವರಣೆಯೊಂದಿಗೆ ಬರುತ್ತವೆ.
ಬಾನು ಮುಷ್ತಾಕ್ ಕತೆಗಳ ಅನುವಾದದ ಕುರಿತು ಬಿ.ವಿ.ರಾಮಪ್ರಸಾದ್ ಬರಹ
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ
ಎಲಿಜಿಯಂ ಕಾಲಮಾನ ಮಧ್ಯರಾತ್ರಿ 12:00. ಕತ್ತಲೆ. ಮಧ್ಯರಾತ್ರಿಯಾಗಿದೆ. ತಗ್ಗದ ಬಿರುಗಾಳಿ, ತೀವ್ರವಾಗಿ ಮಳೆ. ಪವರ್ ಇಲ್ಲ. ಯಾವ ವ್ಯವಸ್ಥೆಗಳೂ ಕೆಲಸ ಮಾಡುತ್ತಿಲ್ಲ. ಎಲ್ಲರೂ ಹೋಗಿದ್ದಾರೆ. ಆದರೆ ನಾನು ಹೋಗಲು ಸಾಧ್ಯವಾಗುತ್ತಿಲ್ಲ. ನನಗೆ ಏನೋ ಆಗಿದೆ. ನನ್ನ ದೇಹವೆಲ್ಲಾ ದುರ್ಬಲವಾಗಿದೆ. ನನ್ನ ಅಂಗಾಂಗಗಳು ಚಲಿಸುತ್ತಿಲ್ಲ. ಆ ಮಳೆ ನೀರಿಗೆ ಆಶ್ಚರ್ಯಕರವಾಗಿ ನನ್ನ ದೇಹವೆಲ್ಲಾ ಗಾಯಗಳಾಗಿವೆ. ಅವು ಹಸಿರು ಬಣ್ಣದಲ್ಲಿವೆ. ಬಹುಶಃ ಇದೇ ನನ್ನ ಕೊನೆಯ ದಿನ. ಇದೇ ಕೊನೆಯ ಸಂದೇಶ… ಏಕೆಂದರೆ ಕೈಗಳು, ಮೆದುಳು ಮಾತ್ರ ಕೆಲಸ ಮಾಡುತ್ತಿವೆ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ “ಸಿಂಬಯಾಸಿಸ್” ನಿಮ್ಮ ಈ ಭಾನುವಾರದ ಓದಿಗೆ
ಆರ್. ಪವನ್ ಕುಮಾರ್ ಬರೆದ ಈ ಭಾನುವಾರದ ಕತೆ
ಈಗ ಮಾತಿಗೆ ಬರಗಾಲ ಬಂದಂತೆ ಪ್ರತಿ ಸಂತೆಯ ವಾತಾವರಣಗಳು ನಿರ್ಮಾಣವಾಗುತ್ತಿದ್ದವು. ಇದೇಕೆಂದು ಅವನಿಗೆ ಈ ಕ್ಷಣಕ್ಕೂ ಅರ್ಥವಾಗಿರಲಿಲ್ಲ. ಜನರೇಕೇ ತನ್ನನ್ನೂ ಆಗುಂತುಕನಂತೆ ಕಂಡು ತನ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವರೆಂದು ಆಗಾಗ ಯೋಚಿಸುತ್ತಿದ್ದನಾದರು ಅದಕ್ಕೆ ಪೂರಕವೆನಿಸುವ ಉತ್ತರಗಳು ಸಿಗುತ್ತಿರಲಿಲ್ಲ. ಸಂತೆ ಮುಗಿಸಿ ಬರುವಾಗ ಕಾಸೀಂ ಇವತ್ತು ವ್ಯಾಪಾರ ಅಂಥದ್ದು ಏನಿಲ್ಲವಾದರು, ತನಗೆ ಅಪಾರ ಮೀನು ತಿನ್ನುವ ಬಯಕೆಯಾಗಿದೆ. ತನ್ನ ಪೈಜಾಮಾದ ಕಳ್ಳ ಜೇಬಿನೊಳಗೆ ಮುದುರಿ ಮಡಿಸಿಟ್ಟಿದ್ದ ನೂರರ ಒಂದು ನೋಟು ತಗೆದು ಸಂಜೆಯಷ್ಟೇ ಹಿಡಿದು ರಸ್ತೆ ಬದಿಯಲ್ಲಿ ನಿಂತು ಮಾರುತ್ತಿದ್ದ ಜಿಲೇಬಿ ಮೀನುಗಳ ಜತೆ ಬಂದಿದ್ದ. ಈ ಮಾತುಕತೆಯಲ್ಲಿ ಇಬ್ಬರಿಗೂ ಅದರ ಕಡೆ ಗಮನವಿರಲಿಲ್ಲ.
ಆರ್. ಪವನ್ ಕುಮಾರ್ ಬರೆದ ಈ ಭಾನುವಾರದ ಕತೆ “ಕಾರ್ಮೋಡ” ನಿಮ್ಮ ಓದಿಗೆ
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆ
ಅದರ ಚಿತ್ರವನ್ನೇ ಮನದಲ್ಲಿ ತುಂಬಿಕೊಂಡು ಮನೆಗೆ ವಾಪಸ್ಸಾದೆ. ಯಾವ ಜೀವ ವಿಜ್ಞಾನಿಗಳ ಕಣ್ಣಿಗೂ ಕಾಣಿಸಿಕೊಳ್ಳದೇ ನಿಗೂಢವಾಗಿದ್ದ ಈ ಪ್ರಾಣಿ, ಕಾಡು ಬಿಟ್ಟು ನನ್ನ ತೋಟಕ್ಕೆ ಬರಲು ಕಾರಣವೇನಿರಬಹುದೆಂದು ಚಿಂತಿಸುತ್ತಾ ಹಾಸಿಗೆಯ ಮೇಲೆ ಮಲಗಿದೆ. ಹಾಗೆಯೇ ಅದರ ಆಹಾರ ಪದ್ಧತಿಗಳನ್ನು ಜ್ಞಾಪಿಸಿಕೊಳ್ಳತೊಡಗಿದೆ. ಮಲಬಾರ್ ಸೀವೆಟ್ ಕೆಲ ಚಿಕ್ಕ ಪ್ರಾಣಿಗಳನ್ನೂ, ಮೊಟ್ಟೆಗಳನ್ನೂ ಇಷ್ಟಪಟ್ಟು ತಿನ್ನುತ್ತದೆಂದು ಎಲ್ಲೋ ಓದಿದ್ದು ನೆನಪಾಯಿತು. ಸಂಜೆ ಹೆಗ್ಗಾಲುವೆಯ ಬಳಿ ಕಟ್ಟ ಹಾಕಲು ಹೋಗಿದ್ದಾಗ ಒಂದೆರಡು ಹುಂಡುಕೋಳಿಗಳು ಸರ್ರೆಂದು ಸದ್ದು ಮಾಡುತ್ತಾ, ನನ್ನನ್ನೇ ಗಾಬರಿಗೊಳಿಸಿ ಓಡಿಹೋಗಿದ್ದವು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆ ‘ಅಡಿಯಪ್ಪ ಮತ್ತು ಸಿವೆಟ್’









