ಚೈತ್ರ ಬರೆದ ಈ ಭಾನುವಾರದ ಕಥೆ
ಸಮುದ್ರ ತೀರದಲ್ಲಿ ಗಾಳಿ. ಜನರೆಲ್ಲ ವಾಕಿಂಗ್ ಮಾಡಲು ಬಂದಿದ್ದಾರೆ. ಕರ್ಚೀಫುಗಳನ್ನು ಬೀಸುತ್ತಿದ್ದಾರೆ. ನಾಚಿಕೆಯಿಲ್ಲದ ಜನ. ಅವರನ್ನು ನೋಡುವುದು ನನ್ನ ಕೆಲಸ. ನಾಯಿಗಳೂ ಓಡಾಡುತ್ತಿವೆ. ಶಂಖಗಳನ್ನು ಮೂಸುತ್ತಿವೆ. ಸಮುದ್ರದ ಗಾಳಿ ಮೂಗನ್ನು ಹೊಗುತ್ತಿತ್ತು. ಸಮುದ್ರ ಕಳೆ ನೀರಿನಲ್ಲಿ ತೇಲಾಡುತ್ತಿತ್ತು. ತಿಮಿಂಗಲವೊಂದು ಮೇಲೆ ಬಂಬಂದು ತಿರುಗಿ ಮರಳಿ ಹೋಗುತ್ತಿತ್ತು. ಪಕ್ಕದ ಗುಡ್ಡದ ಮೇಲೆ ಗಾಳಿಗೆ ಮರಗಳು ಓಲಾಡುತ್ತಿದ್ದವು. ಸೂರ್ಯ ಮುಳಗುತ್ತಿದ್ದ. ಬೇಡ ಎಂದರೆ ಜನ ಮನೆಯಲ್ಲಿ ಕೂತಾರೆಯೆ? ಯಾರೋ ಬಲೂನು ಮಾರುತ್ತಿದ್ದಾರೆ.
ಚೈತ್ರ ಬರೆದ ಕತೆ “ಭಾಗ್ಯ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಮತಾ ಅರಸೀಕೆರೆ ಕತೆ
ಇದೇ ಗುಣವಿಶೇಷಣಗಳೂ ಹಾಗೂ ಅವನ ಅಯಸ್ಕಾಂತದಂತಹ ನಗುವೆ ಸಿಂಧೂಳನ್ನು ಅವನಿಗೆ ಕಚ್ಚಿಕೊಳ್ಳುವಂತೆ ಮಾಡಿದ್ದು. ಮ್ಯಾಗ್ನೆಟ್ಟಿನ ಎರಡು ಧ್ರುವಗಳು ಪರಸ್ಪರ ಆಕರ್ಷಣೆ, ವಿಕರ್ಷಣೆಗೊಳ್ಳುವಂತೆ ಒಮ್ಮೆ ಅವನಿಂದ ವಿಮುಖಗೊಂಡರೆ ಮತ್ತೊಮ್ಮೆ ಅವನನ್ನರಸಿ ಸೆಳೆತ ತೀವ್ರವಾಗಿ ಬಳಿಗೋಡುತ್ತಿದ್ದಳು. ಅವನಿಗೂ ಸಿಂಧುವಿನ ಅಗತ್ಯವಿಲ್ಲವೇನಂತಿಲ್ಲ. ಭೌತಿಕ ಅಗತ್ಯಗಳ ಜೊತೆಗೆ ಮಾನಸಿಕವಾಗಿಯೂ ಸಾಥಿಯವಳು. ಅವರಿಬ್ಬರಿಗೂ ತಮ್ಮ ಬೌದ್ಧಿಕ ಮಟ್ಟಕ್ಕೆ ಸಾಟಿಯಾಗುವಂತಹ ಗೆಳೆಯರು ಇಂತಹ ಊರಿನಲ್ಲೆಲ್ಲಿ ಸಿಗಬೇಕು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಮತಾ ಅರಸೀಕೆರೆ ಕತೆ
ವಿಶ್ವನಾಥ ಎನ್. ನೇರಳಕಟ್ಟೆ ಬರೆದ ಈ ಭಾನುವಾರದ ಕತೆ
ಸಿನಿಮಾ ಕ್ಷೇತ್ರದಲ್ಲಿ ಹೆಚ್ಚು ಸಮಯ ಮುಂದುವರಿಯಲಾಗಲಿಲ್ಲ ಅಕರಿಗೆ. ಭಾವನೆಯ ನಿರಂತರತೆಗೆ ಒಗ್ಗಿಹೋಗಿದ್ದ ಅವಳಿಗೆ ಭಾವನೆಗಳನ್ನು ತುಂಡುತುಂಡಾಗಿಸಿ ಜೋಡಿಸಿಕೊಳ್ಳುವ ಬಗೆ ಅರ್ಥವಾಗುತ್ತಲೇ ಇರಲಿಲ್ಲ. ಪಾತ್ರವೇ ತಾನಾಗಿ, ಪರಕಾಯಪ್ರವೇಶ ಮಾಡಿ, ಅಭಿನಯಿಸುತ್ತಿದ್ದ ಅವಳಿಗೆ ಬಿಡಿ ಬಿಡಿ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳುವುದು ಇಷ್ಟವಾಗುತ್ತಿರಲಿಲ್ಲ. ಸಿನಿಮಾ ಶೂಟಿಂಗ್ ಅಸಹನೀಯ ಎನಿಸತೊಡಗಿತ್ತು. ಸಂಪಾದನೆಯೇನೋ ಆಗುತ್ತಿತ್ತು. ಆದರೆ ಕೆಲಸದಿಂದ ದೊರೆಯುವ ಆನಂದ ಕಳೆದುಹೋಗಿತ್ತು.
ವಿಶ್ವನಾಥ ಎನ್. ನೇರಳಕಟ್ಟೆ ಬರೆದ ಕತೆ “ಕರುಳಬಳ್ಳಿ ಬಾಡಿಗೆಗಿದೆ!”
ಮಂಜುನಾಯಕ ಚಳ್ಳೂರು ಬರೆದ ಕತೆ “ಫೂ….”
ಆ ಹೊತ್ತು ಅವಳು ಹುಚ್ಚಿಯಂತೆ ಕಾಣುತ್ತಿದ್ದಳು ನನಗೆ. ಮುಖದ ತುಂಬ ಕೈಯಾಡಿಸಿದಳು. ತಲೆ ಸವರಿದಳು. ಯಾಕೋ ಎಷ್ಟೊತ್ತಾದರೂ ನನ್ನ ಬಿಡಲೇ ಇಲ್ಲ. ಅವ್ವ ಅಲ್ಲಿಂದಲೇ, `ಸಾಕ್ ಹೋಗು ಚಂದ್ರಪ್ಪಾ. ಬುಟ್ರ ಲಂಗದಾಗ್ ಸುರುಗ್ಸ್ಯಂತಾಳ್ ಈ ಅಡಾವುಡಿ ನಿನ್ನಾ…’ ಎಂದಳು. ಅತ್ತೆ, `ಯೇ ಮಂಗಾ.. ಬಾಯೈತಂತ ಏನೇನರ ಬೊಗಳ್ಬ್ಯಾಡ. ನನ ಹೊಟ್ಯಾಗ್ ಹುಟ್ಬೇಕಾದದ್ ಇದು. ತಪ್ಪಿ ನಿನ್ ಹೊಟ್ಯಾಗ್ ಹುಟ್ಟೇತಿ.’ ಎಂದುತ್ತರಿಸಿದಳು. ಆಗವಳ ಕೈಗಳು ನಡುಗುತ್ತಿದ್ದವು. ಕೆಂಡದಂತೆ ಬೆಚ್ಚಗಾಗಿದ್ದವು.
ಮಂಜುನಾಯಕ ಚಳ್ಳೂರು ಅವರ “ಫೂ..” ಕಥಾಸಂಕಲನದ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಓದಿಗೆ
ಮಂಜುನಾಯಕ ಚಳ್ಳೂರ ಕಥಾಲೋಕ…
“ಧಾರವಾಡದಲ್ಲಿ ಪಿಯುಸಿಯಲ್ಲಿದ್ದಾಗ ‘ಗಾಳಿಪಟ’ ಎಂಬ ಕತೆ ಬರೆದಿದ್ದೆ. ಅದಕ್ಕೂ ಮುನ್ನ ‘ಗೋಧಾವರಿ’ ಎಂಬ ಕತೆಯನ್ನು ಬರೆದು ಸ್ನೇಹಿತರ ಮುಂದೆ ಇಟ್ಟಾಗ, ಹಾಸ್ಟೇಲಿನ ದೋಸ್ತರೆಲ್ಲ ಅದನ್ನು ಓದಿ “ಚೊಲೋ ಬರ್ದಿ” ಎಂದು ಬೆನ್ನುತಟ್ಟಿದ್ದರು. ತುಷಾರ ಕಥಾ ಸ್ಪರ್ಧೆಗೆಂದು ಬರೆದಿದ್ದ ಕತೆ ಅದು. ಕೈಬರಹದಲ್ಲಿದ್ದ ಆ ಕತೆಯ ಪ್ರತಿಯನ್ನು, ಮತ್ತೊಮ್ಮೆ ಓದಿ ಕೊಡುವುದಾಗಿ ನನ್ನಿಂದು ಇಸಿದುಕೊಂಡು ಹೋದ ದೋಸ್ತ ಇನ್ನೂ ವಾಪಸ್ ಕೊಟ್ಟಿಲ್ಲ. ಮಂಜುನಾಯಕ ಚಳ್ಳೂರರ “ಫೂ” ಕಥಾಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಸಿಕ್ಕಿದ್ದು ಇದೇ ಸಂದರ್ಭದಲ್ಲಿ ಅವರ ಕಥಾಲೋಕದ ಕುರಿತು ರೂಪಶ್ರೀ ಕಲ್ಲಿಗನೂರ್ ಬರಹ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಾಲತಿ ಪಟ್ಟಣಶೆಟ್ಟಿ ಬರೆದ ಕಥೆ
ಇವಾ ಹಿಂಗ್ಯಾಕ ಇದ್ದಾನ? ನನ್ನ ನೋಡಿದ್ರ ನಗೋದಿಲ್ಲಾ ಮಾತಾಡೊದಿಲ್ಲಾ? ಅವ್ವನೂ ಯಾವಾಗ್ಲೂ ಹಿಂಗs ಇರತಾಳ…. ಬ್ಯಾಂಕಿನಿಂದ ಬಂದಾಕಿನs ಮಲಗಿ ಬಿಡತಾಳ…. ನಾ ಯಾರ ಕೂಡ ಮಾತಾಡಬೇಕು?…. ಮುಂಜಾನಿಂದ ಊಟಿಲ್ಲಾ…. ಹಂಗs ಕೂತಾಳ; ಅಪ್ಪಾ ತಾ ಮಾತ್ರ ಹೊರಗ ಊಟಾ ಮಾಡಿ ಬರತಾನ, ಆಕೀಗೆ ಊಟಾ ಮಾಡು ಅಂತ ಸುದ್ದಾ ಹೇಳೋದಿಲ್ಲಾ…. ಛೇ ಎಂಥಾ ಅಪ್ಪಾ ಇವಾ….?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಾಲತಿ ಪಟ್ಟಣಶೆಟ್ಟಿ ಬರೆದ ಕಥೆ “ನಾ ಯಾಕ ಹುಟ್ಟಿದೆನೋ…… ?” ನಿಮ್ಮ ಓದಿಗೆ
ರಾಮು ಮತ್ತು ‘ತಾಯಿ’: ಸವಿತಾ ನಾಗಭೂಷಣ ಬರಹ
ಇದಾದ ಆರು ತಿಂಗಳ ನಂತರ ರಾಮು ಅವರ ಮನೆಗೆ ಹೋದಾಗ ಅವರು ಮೂಲೆ ಅಂಗಡಿಯಿಂದ ಕೊಬ್ಬರಿ ಮಿಠಾಯಿ ಖರೀದಿಸಿ ತಂದು ಕೊಟ್ಟರು. “ಅಲ್ರೀ.. ಮೂವರೂ ಶುಗರ್ ಪೇಷಂಟು…” ಅಂತ ನಾಗಭೂಷಣ ರಾಗ ಎಳೆಯಲು… “ತಿನ್ನಿ ಕಮ್ಮಿ ಆಗುತ್ತದೆ” ಎಂದು ರಾಮು ನಕ್ಕರು. ನಾನು, “ನನಗೆ ಅವಕಾಶ ಸಿಕ್ಕಾಗಲೆಲ್ಲಾ ಕವಿಗೋಷ್ಟಿ / ಕಾವ್ಯ ಕಮ್ಮಟಗಳಲ್ಲಿ ನಿಮ್ಮ ‘ತಾಯಿ’ ಕವನ ಓದುತ್ತಿರುವೆ” ಎಂದು ರಾಮುವಿಗೆ ಹೇಳಿದೆ. ನಾಗಭೂಷಣ ‘ಹೌದೌದು ನಿಮ್ಮ”ತಾಯಿ”ಯನ್ನು ಅಮರ ಮಾಡಬೇಕೆಂದು ಸಂಕಲ್ಪ ಮಾಡಿದ್ದಾಳೆ! ಎಂದರು.
ರಾಮು ಅವರ ಕುರಿತು ಸವಿತಾ ನಾಗಭೂಷಣ ಬರಹ
ಹಿರಿಯ ಪತ್ರಕರ್ತ ಹಾಗೂ ಕವಿ ರಾಮು ಇನ್ನಿಲ್ಲ
ಹಿರಿಯ ಪತ್ರಕರ್ತ ಹಾಗೂ ಕವಿ ರಾಮು(69) ಮಂಗಳವಾರ ಮುಂಜಾನೆ ತೀರಿಕೊಂಡರು. ವಿಭಿನ್ನ ನೆಲೆಗಟ್ಟಿನ ಅವರ ಕವಿತೆಗಳ ಕಾರಣಕ್ಕೆ ಮತ್ತು ಅವರ ಆಪ್ತತೆಯ ಕಾರಣಕ್ಕೆ ಮೈಸೂರಿನ ಹಾಗೂ ಮೈಸೂರಿಗೆ ಆಗಮಿಸುತ್ತಿದ್ದ ಸಾಹಿತ್ಯದ ಬಂಧುಗಳೆಲ್ಲ ಅವರನ್ನು ಆಗಾಗ ಭೇಟಿಯಾಗುತ್ತಲೆ ಇರುತ್ತಿದ್ದರು.
ಅಗ್ನಿಸೂಕ್ತ, ರಾಮು ಕವಿತೆಗಳು, ವಿಷ್ಣುಕ್ರಾಂತಿ ಮತ್ತು ಇತರೆ ಕವಿತೆಗಳು ಇವರ ಪ್ರಕಟಿತ ಕವನ ಸಂಕಲನಗಳು.
ರಾಮು ಅವರನ್ನು, ಅವರ ವ್ಯಕ್ತಿತ್ವದ ಕುರಿತು ಕವಯತ್ರಿ ರೂಪಾ ಹಾಸನ ಬರೆದ ಕವಿತೆಯೊಂದು ನಿಮ್ಮ ಓದಿಗೆ
ರವಿಶಂಕರ್ ಎಸ್.ಎಲ್. ಬರೆದ ಈ ಭಾನುವಾರದ ಕಥೆ
ಮನೆಯಕಡೆಯಿಂದ ಜಾನಕಿ ನರಳುವ ಸಣ್ಣಸದ್ದು ಕೇಳತೊಡಗಿತು. ಜಾನಕಿಗೆ ಒಂಭತ್ತು ತಿಂಗಳುಗಳು ತುಂಬಿದ್ದರಿಂದ ಹೆರಿಗೆನೋವು ಶುರುವಾಗಿತ್ತು. ಶಿವಮ್ಮ ಸಾಕಷ್ಟು ಹೆರಿಗೆಗಳನ್ನು ಮಾಡಿಸಿದ್ದರಿಂದ, ಯಾರ ಸಹಾಯವೂ ಬಯಸದೆ, ಒಬ್ಬಂಟಿಯಾಗೇ ಹೆರಿಗೆಮಾಡಿಸುವ ಅನುಭವ ಪಡೆದಿದ್ದಳು. ಹೆರಿಗೆನೋವಿನ ನರಳುವಿಕೆಯ ಕೂಗು ಹೆಚ್ಚಾಗುತ್ತಿದ್ದಂತೆಯೇ, ಸಂಗಣ್ಣ ತಾನು ಇಳಿದು ಹೋಗಲೆ. ಬೇಡವೇ? ಎಂಬ ಯೋಚನೆಗೆಬಿದ್ದ.
ರವಿಶಂಕರ್ ಎಸ್.ಎಲ್. ಬರೆದ ಈ ಭಾನುವಾರದ ಕಥೆ “ಹಬ್ಬ” ನಿಮ್ಮ ಓದಿಗೆ









