Advertisement

ಸಾಹಿತ್ಯ

ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಆಗಸ್ಟ್ ಹದಿನೈದು”

ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಆಗಸ್ಟ್ ಹದಿನೈದು”

ಎಲ್ಲಿಂದಲೋ ಸಿನೆಮಾ ಹಾಡು ಕೇಳಿ ಬಂತು. ಕಡೆಯ ಆಟ ಮುಗಿಯಿತೇನೋ ‘ತಾರಾ ಗಗನಮೇ…’ ತಲೆಯೆತ್ತಿ ನೋಡಿದ. ಆಕಾಶದಲ್ಲೂ ಸ್ವಾತಂತ್ರ್ಯೋತ್ಸವದ ಸಂಭ್ರಮ. ಲಕ್ಷೋಪಲಕ್ಷ ನಕ್ಷತ್ರಗಳು, ಬೊಂಬಾಯಿನಲ್ಲಿ ವಿದ್ಯುದ್ದೀಪಮಾಲೆಗಳ ನಡುವಿನಲ್ಲಿ ಇವುಗಳನ್ನು ಗಮನವಿಟ್ಟು ನೋಡಿರಲಿಲ್ಲ. ಇಲ್ಲಿ ನಿಸರ್ಗಕ್ಕೆ ಮಾನವನ ಸ್ಪರ್ಧೆಯಿಲ್ಲ. ಬೊಂಬಾಯಿನಲ್ಲಿ ವಿದ್ಯುದ್ದೀಪಗಳ ಗೊಂದಲಕ್ಕೆ ಸಿಕ್ಕಿ ಆಕಾಶ ಕೆಂಪಾಗಿತ್ತು.
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್‌ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಈ ಸಂಕಲನದ “ಆಗಸ್ಟ್ ಹದಿನೈದು” ಕತೆ ನಿಮ್ಮ ಓದಿಗೆ

read more
ಪ್ರವೀಣ್‌ ಕುಮಾರ್‌ ಜಿ. ಬರೆದ ಈ ಭಾನುವಾರದ ಕತೆ

ಪ್ರವೀಣ್‌ ಕುಮಾರ್‌ ಜಿ. ಬರೆದ ಈ ಭಾನುವಾರದ ಕತೆ

ರಾಜಣ್ಣನ ಕೊನೆಯ ಮಾತುಗಳನ್ನು ಕೇಳಿಸಿಕೊಂಡು ಕವಿತಾಳ ಕಣ್ಣುಗಳು ಗಾಬರಿಯಲ್ಲಿ ಅಗಲವಾದವಾ? ಅವನಿಗದು ಗೊತ್ತಾಗಲಿಲ್ಲವಾದರೂ ಉಸಿರು ಎಳೆಯುತ್ತಿದ್ದ ಕವಿತಾ “ನೀನಾದ್ಮ್ಯಾಲೆ ನನ್ನ ಯಾರೂ ಮುಟ್ಟಿಲ್ಲ.” ಎಂದು ಗೊಗ್ಗರು ದನಿಯಲ್ಲಿ ಹೇಳಿದ ಮಾತಿಗೆ ಬೇಕಾದ ಉಸಿರು ಪೂರ್ತಿ ಗಂಟಲಿನಿಂದಲೇ ಹೊರಗೆ ಹೋಗುತ್ತಿತ್ತು. “ನೀನಾದ್ಮ್ಯಾಲೆ ನನ್ನ…” ಎಂಬ ಶಬ್ದವೊಂದೇ ಅವನಿಗೆ ಅರ್ಧಂಬರ್ಧ ಕೇಳಿಸಿದ್ದು, ಅದೂ ಬರೀ ಗೊರಗೊರ. ಅವಳನ್ನೇ ದಿಟ್ಟಿಸುತ್ತಿದ್ದ ರಾಜಣ್ಣ ಕೆಲವೇ ಕ್ಷಣಗಳಲ್ಲಿ ಅವಳ ಉಸಿರು ನಿಂತಿದ್ದನ್ನು ಗೊತ್ತುಮಾಡಿಕೊಂಡು ತನ್ನ ಕುತ್ತಿಗೆಗೂ ಚಾಕು ಹಾಕಿಕೊಂಡ.
ಪ್ರವೀಣ್‌ ಕುಮಾರ್‌ ಜಿ. ಕಥಾ ಸಂಕಲನ “ಬಯಲು” ಕೃತಿಯ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

read more
ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಸ್ವಾತಂತ್ರ್ಯ ದಿನ”

ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಸ್ವಾತಂತ್ರ್ಯ ದಿನ”

ಮತ್ತೆ ದೃಷ್ಟಿ ಜನರಿಂದ ದೂರ ಹೋಯಿತು. ಇಬ್ಬನಿಯ ಅವಕುಂಠನವನ್ನು ಕಳೆದುಕೊಂಡು ಹೂಗಳು ಮುಗ್ಧತೆಯನ್ನು ಕಳೆದುಕೊಂಡು ಕಠಿಣರಾದ ನಿರಸನಿಗಳಂತೆ ರಾವು ಬಡಿಯುವ ಬಣ್ಣಗಳನ್ನು ತೋರುತ್ತಿದ್ದವು. ಬಾವುಟ ಬಿಸಿಲಿನ ತೀಕ್ಷ್ಣತೆಗೆ ಸೋತು ಮಲಗಿತ್ತು. ಆಕಾಶದ ಒಂದು ಭಾಗದಲ್ಲಿ ಬೂದು ಬಣ್ಣದ ಮೋಡಗಳು ಇಕ್ಕಟ್ಟಾಗಿ ಮಲಗಿದ್ದವು. ಸ್ಲಮ್ ಪ್ರದೇಶ, ಇಂದೊಂದೇ ದಿನ ಆಕಾಶದಲ್ಲಿ ಈ ಮೋಡಗಳಿಗೆ ಜಾಗ, ಮತ್ತೆ ನಾಳಿನಿಂದ ಆಕಾಶದ ತುಂಬ ಕಾರ್ಖಾನೆ ಹೊಗೆಯ ಮೋಡಗಳು, ನಾಳಿನಿಂದ ಆಕಾಶ ತಿಪ್ಪೆ…
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್‌ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಈ ಸಂಕಲನದ “ಸ್ವಾತಂತ್ರ್ಯ ದಿನ” ಕತೆ ನಿಮ್ಮ ಓದಿಗೆ

read more
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ “ಲೋಕದ ಭಾರ”

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ “ಲೋಕದ ಭಾರ”

ಅರೆ! ಎಲ್ಲರೂ ಅವರವರ ಕೆಲಸಗಳಲ್ಲಿಯೇ ಕಳೆದುಹೋಗಿದ್ದಾರೆ ಇಲ್ಲಿ. ಯಾರಿಗೂ ಹೊರಗಡೆ ಏನು ನಡೆಯುತ್ತಿದೆ ಅನ್ನುವುದರ ಪರಿವೇ ಇಲ್ಲ. ಅದರ ಅಗತ್ಯವೇ ಇಲ್ಲ ಅನ್ನುವಷ್ಟೂ ಕ್ಷುಲ್ಲಕ ಸಂಗತಿಗಳೆ ಅವೆಲ್ಲಾ? ರಸ್ತೆಯ ತುಂಬಾ ಬದುಕಿನ ನಿತ್ಯ ವ್ಯಾಪಾರ ಅದೆಷ್ಟು ಸಹಜ ಅನ್ನುವ ರೀತಿಯಲ್ಲಿ ನಡೆಯುತ್ತಿದೆ. ಪಕ್ಕದಲ್ಲಿ ಬಾಂಬ್ ಬಿದ್ದರೂ ನಮ್ಮ ಮನಗೆ ಬಿದ್ದಿಲ್ಲ ತಾನೇ ಅನ್ನುವ ಹಾಗೆ ತಮ್ಮತಮ್ಮ ಕೆಲಸಗಳಲ್ಲಿ ತೊಡಗುತ್ತಾರಂದ್ರೆ?
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ “ಲೋಕದ ಭಾರ” ನಿಮ್ಮ ಓದಿಗೆ

read more
ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಲೈಟ್ಸ್…ಕ್ಯಾಮರಾ…ಆ್ಯಕ್ಷನ್ ಎಂದು ನಿರ್ದೇಶಕರು ಹೇಳಿದಾಗ ನಿರ್ಮಲಾಳ ಎದೆ ಧಸಕ್ಕೆಂದಿತು. ಮೆಲ್ಲಮೆಲ್ಲನೆ ಹೆಜ್ಜೆಯಿಡುತ್ತಾ ಬಂದ ಕೃಷ್ಣ ಕೈಯ್ಯನ್ನು ಚಾಚಿ ಬೆಣ್ಣೆ ಗಡಿಗೆ ತೆಗೆದುಕೊಂಡವನು ಪುಟುಪುಟು ಓಡಿದ. ಹೆಜ್ಜೆಯಿಡುತ್ತಾ ಬಂದದ್ದು… ಕೈಚಾಚಿದ್ದು… ಓಡಿದ್ದು… ಇದು ನಿರ್ಮಲಾಳ ಮನಸ್ಸಿನಲ್ಲಿ ಗಿರಕಿ ಹೊಡೆಯತೊಡಗಿತ್ತು. ಅವಳು ಈಗ ಬಾಗಿಲ ಮರೆಯಿಂದ ಬೆಣ್ಣೆ ಗಡಿಗೆಯಿದ್ದ ಕಂಬದಾಚೆಗೆ ಹೋಗಬೇಕಿತ್ತು. ಆದರೆ ಅವಳು ಚಲನೆಯಿಲ್ಲದೆ ನಿಂತಿದ್ದಳು.
ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಲೈಟ್ಸ್… ಕ್ಯಾಮರಾ… ಆ್ಯಕ್ಷನ್” ನಿಮ್ಮ ಓದಿಗೆ

read more
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವಾಸುದೇವ ನಾಡಿಗ್ ಕತೆ

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವಾಸುದೇವ ನಾಡಿಗ್ ಕತೆ

ಸುನಂದಕ್ಕಗೆ ಮದುವೆಯಾಗಿ ಒಂದು ವಾರವೂ ಆಗಿರಲಿಕ್ಕಿಲ್ಲ. ದಿವಾಕರ ಭಾವ ಅವಳಿಗೆ ಉದ್ದದ ಹೆರಳನ್ನು ಕತ್ತರಿಸಲು ಆಜ್ಞೆಮಾಡಿದ್ದು! ನಗುವನ್ನೆ ಕಳೆದುಕೊಂಡಂತಿದ್ದ ಸುನಂದಕ್ಕ ತನ್ನ ಹೆರಳನ್ನು ಮೋಟು ಜಡೆ ಮಾಡಿಸಿಕೊಂಡು ‘ಅನೂ ಪುಟ್ಟಾ’ ಎಂದು ಯಾವತ್ತೂ ಕರೆವಂತೆ ‘ಅಮ್ಮಗೆ ಹೇಳು ಇನ್ನು ಮುಂದೆ ನನಗೆ ಜಡೆಹಾಕುವಾಗ ಯಾವತ್ತೂ ಕೈ ಸೋಲು ಬರುವುದಿಲ್ಲ’ ಅಂದಿದ್ದಳು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವಾಸುದೇವ ನಾಡಿಗ್ ಕತೆ “ಅರ್ಥವಾಗುತ್ತಿದೆ ಎಲ್ಲ ಮೆಲ್ಲ ಮೆಲ್ಲನೆ”

read more
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಒಮ್ಮೆ ಹೀಗೆ ಬಿಡುವಿದ್ದಾಗ, ಐತಾಳರು ನನ್ನ ಹಿನ್ನೆಲೆ ಬಗ್ಗೆ ವಿಚಾರಿಸಿದಾಗ ಸುಳ್ಳು ಹೇಳಲು ಮನಸ್ಸಾಗದೆ ಎಲ್ಲ ಹೇಳಿಬಿಟ್ಟೆ. ಮನಸ್ಸು ಹಗುರಾಯಿತು. ಈವರೆಗೂ ಸಂಪೂರ್ಣ ಸತ್ಯ ಯಾರಿಗೂ ಹೇಳಿರಲಿಲ್ಲ. ಐತಾಳರು ಸ್ವಲ್ಪ ಹೊತ್ತು ನನ್ನ ಮುಖವನ್ನೇ ನೋಡಿದರು. ಕೆಲಸದ ವಿಷಯದಲ್ಲಿ ಅವರು ತುಂಬಾ ಸ್ಟ್ರಿಕ್ಟ್; ಆದರೆ ಹೆಂಗರಳು. ಕೆಲಸಗಾರರನ್ನು ಮಕ್ಕಳ ಹಾಗೆ ನೋಡಿಕೊಳ್ಳುವ ಸ್ವಭಾವ. “ಆದ್ರೂ ನೀ ಊರು ಬಿಟ್ಟು ಬರಬಾರದಿತ್ತು ಮಾರಾಯ, ನೀ ಎಣಿಸಿದ ಹಾಗೆ ಅಲ್ಲೇನು ಆಗಿರಲಿಕ್ಕಿಲ್ಲ. ಈ ಕಾಲದ ಜನ ಕಥೆ ಸಿನಿಮಾ ಧಾರಾವಾಹಿ ನೋಡಿ ಎಂತೆಲ್ಲಾ ಗ್ರಹಿಸಿ ಹೀಗೆ ಮಾಡಿಬಿಡೋದು ಹೌದಲ್ಲವನ!”
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಅನಿಕೇತನ” ನಿಮ್ಮ ಓದಿಗೆ

read more
ಒಂದು ಕೊನೇ ರೌಂಡು…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಒಂದು ಕೊನೇ ರೌಂಡು…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸ್ವಾಮಿಗೆ ದುಃಖ ತಡೆದುಕೊಳ್ಳಲು ಆಗಲಿಲ್ಲ. ಮಣಿ, “ಕಾರ್ ಚೆನ್ನಾಗಿದೆ. ತಿಂಡಿ ತಿಂದ ಮೇಲೆ ನನ್ನನ್ನು ಒಂದು ರೌಂಡ್ ಹಾಕಪ್ಪ ಸ್ವಾಮಿ” ಎಂದಿದ್ದು ಸ್ವಾಮಿ, “ಅದೇನು ದೊಡ್ಡ ವಿಷಯ. ಒಂದಲ್ಲ ಎರಡು ರೌಂಡ್ ಹಾಕೋಣ ಬಿಡು” ಎಂಬ ಮಾತುಗಳು ಜ್ಞಾಪಕಕ್ಕೆ ಬಂದವು. ಸ್ವಾಮಿ ಕೈಕೈ ಹಿಸುಕಿಕೊಂಡು ನನ್ನಿಂದ ಅಪಾರಾಧ ನಡೆದು ಹೋಯಿತಲ್ಲ ಎಂದುಕೊಳ್ಳುತ್ತ.. ಸ್ವಾಮಿ, “ದೇವರೆ ಈ ದಿನ ಬೆಳಿಗ್ಗೆ ನನ್ನನ್ನು ಯಾಕಪ್ಪ ಇಲ್ಲಿಗೆ ಕರೆದುಕೊಂಡು ಬಂದೆ?” ಎಂದು ಅಳತೊಡಗಿದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಕೊನೆಯ ಕಂತು

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಉದ್ಯಾವರ ಮಾಧವ ಆಚಾರ್ಯ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಉದ್ಯಾವರ ಮಾಧವ ಆಚಾರ್ಯ ಕತೆ

ಹಳ್ಳಿಕೊಂಪೆಯ ಮೂಲಮನೆಯ ಕಾಲ ಗರ್ಭದ ಹಿಂದಿನ ದಿನಗಳಲ್ಲಿ ಯಾರ‍್ಯಾರೋ ಹಿರಿಯರು ಕಾಲವಾದಾಗ ಹೇಳಿಸುತ್ತಿದ್ದ ಗರುಡಪುರಾಣದ ವಿವರಗಳೆಲ್ಲ ಇಲ್ಲಿ ಈಗ ಜೀವನದಲ್ಲಿ ಮೊದಲ ಅನುಭವವಾಗಿ ಬಾಲ್ಕನಿಯಲ್ಲಿ ನಿಂತು ಹೊಸ ಬದುಕಿನ ಹುಡುಕಾಟವನ್ನು ನಡೆಸುತ್ತಿದ್ದ ಗಂಗಮತ್ತೆಯ ನೆನಪಿಗೆ ಬಂದು ನಿಜವೆನಿಸತೊಡಗುತ್ತಿದ್ದಂತೆ ಒಂದು ದಿನ ಪಕ್ಕದ ಫ್ಲಾಟಿನ ವಿರಸ ದಾಂಪತ್ಯದ ಸಾಫ್ಟ್ವೇರ್ ಉದ್ಯೋಗದ ಎಳೆಯ ತರುಣಿ ತನ್ನ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿ ಅಂತ್ಯವನ್ನು ಕಂಡಾಗ….
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಉದ್ಯಾವರ ಮಾಧವ ಆಚಾರ್ಯ ಕತೆ “ಮಹಾಪ್ರಸ್ಥಾನ”

read more

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ