Advertisement

ಸಾಹಿತ್ಯ

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕಥೆ

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕಥೆ

ಕಾಣೆಯಾಗಿದ್ದ ಟಿಬೆಟನ್ ಕ್ಯಾಂಪಿನ ಮೂವರು ಹಸುಳೆಗಳು ಇದೇ ಬಿಡಾರದ ಬಾಗಿಲು ತಟ್ಟಿ ಆಹಾರ ಕೋರಿದ್ದರು. ಕುಡಿದು ಬಿದ್ದಿದ್ದ ಈ ಆಸಾಮಿ ಕಣ್ಣೇ ಬಿಟ್ಟಿರಲಿಲ್ಲ. ಆತ ಕಣ್ಣು ಬಿಟ್ಟಾಗ ಆತನ ಮಡದಿ ಅದಾಗಲೇ ಲಾಮಾ ಮಕ್ಕಳ ಬಟ್ಟೆ ಬದಲಾಯಿಸಿ, ಬಿಸಿ ನೀರಲ್ಲಿ ಸ್ನಾನ ಮಾಡಿಸಿ, ಹೊಟ್ಟೆಗೆ ತಿನ್ನಲು ಕೊಟ್ಟು, ಅವರ ಕಾಷಾಯ ವಸ್ತ್ರಗಳನ್ನು ಒಗೆದು ಬಿಸಿಲಿಗೆ ಒಣಗಲು ಹಾಕಿ, ಅವರಿಗೆ ಕಂಬಳಿ ಹೊದೆಸಿ ಬೆಚ್ಚಗೆ ಮಲಗಿಸಿ ಅವರನ್ನು ಕಾದು ಕುಳಿತಿದ್ದಳು.
ಅಬ್ದುಲ್‌ ರಶೀದ್‌ ಬರೆದ ಕಥೆ “ಅಂತಾರಾಷ್ಟ್ರೀಯ ಕುಂಬಳಕಾಯಿ”

read more
ಶ್ರೀನಿವಾಸ ವೈದ್ಯರು ಇನ್ನಿಲ್ಲ….

ಶ್ರೀನಿವಾಸ ವೈದ್ಯರು ಇನ್ನಿಲ್ಲ….

‘ಹಳ್ಳ ಬಂತು ಹಳ್ಳ’ ಕೃತಿ ಬಂದಾಗ ಅವರ ವಿದ್ವತ್ತು ಓದುಗರಿಗೆ ಪರಿಚಯವಾಯ್ತು. ಶುದ್ಧ ಹಾಸ್ಯ ಸೃಷ್ಟಿಸುವ ಶಕ್ತಿ ಇರುವವರಿಗೆ ಬದುಕನ್ನು ಗಾಢವಾಗಿ ನೋಡುವ ಶಕ್ತಿಯೂ ಇರುತ್ತದೆ ಎಂಬುದು ಈ ಕೃತಿ ನಿರೂಪಿಸಿತ್ತು. ಯಾವುದೇ ಅನುಮಾನವಿಲ್ಲದೆ ಈ ಕಾದಂಬರಿ ಕನ್ನಡ ಸಾಹಿತ್ಯಲೋಕದ ಅಪರೂಪದ ಕೃತಿ. ಅದು ಬಿಡುಗಡೆಯಾದಾಗ ನಾನು ಸಂಭ್ರಮ ಪಟ್ಟು ಅದರ ಕುರಿತು ವಿ.ಕ. ದಲ್ಲಿ ವಿಮರ್ಶೆ ಬರೆದಿದ್ದೆ. ಆ ವಿಮರ್ಶೆಯಲ್ಲಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬರಲಿ ಎಂದು ಆಶಿಸಿದ್ದೆ. ಅಂತೆಯೇ ಅವರಿಗೆ ಆ ಪ್ರಶಸ್ತಿ ಅನಂತರದ ವರ್ಷ ಬಂದಿತು.
ಇಂದು ಬೆಳಗ್ಗಿನ ಜಾವ ತೀರಿಕೊಂಡ ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯರ ಕುರಿತು ಕಥೆಗಾರ ವಸುಧೇಂದ್ರ ಬರಹ

read more
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ

ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ

ದೊಡ್ಡ ಮನೆ, ಐದೆಕರೆ ಫಲವತ್ತಾದ ಕೃಷಿಭೂಮಿ, ಅಡಕೆ ತೋಟ ಮೇಲಾಗಿ ಅತ್ತೆ ನಾದಿನಿಯರ ಕಾಟವಿಲ್ಲದ ಎಲ್ಲರೂ ಬಯಸುವ ಕನಸಿನ ಸಂಸಾರ! ಏನು ಕೊರತೆ ಇತ್ತು ಸುಖಕ್ಕೆ? ಆದರೆ ಯಾಕೋ ಅಲ್ಲಿ ಸ್ವರ್ಗಕ್ಕೆ ಕಿಚ್ಚು ಹಚ್ಚುವ ಯಾವುದೇ ಸಂಭ್ರಮ ಕಾಣದೇ ನಿಧಾನವಾಗಿ ಸಂಸಾರದೊಳಗೇ ಅಸಮಾಧಾನದ ಕಿಚ್ಚು ಹೊತ್ತಿಕೊಂಡದ್ದು ಅಷ್ಟು ಬೇಗನೇ ಯಾರ ಅರಿವಿಗೂ ಬರಲಿಲ್ಲ. ಆದರೆ ಎಲ್ಲರ ಅರಿವಿಗೆ ಬರುವ ಹೊತ್ತಿಗೆ ಬಹಳ ತಡವಾಗಿ ಹೋಗಿತ್ತು.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಕತೆ “ಶಿಕ್ಷೆ” ನಿಮ್ಮ ಈ ಭಾನುವಾರದ ಓದಿಗೆ

read more
ಮುದಿರಾಜ್‌ ಬಾಣದ್ ಬರೆದ ಈ ಭಾನುವಾರದ ಕತೆ

ಮುದಿರಾಜ್‌ ಬಾಣದ್ ಬರೆದ ಈ ಭಾನುವಾರದ ಕತೆ

ಬಿದ್ದಿದ್ದ ಜಡೆಗುಂಡು ರಿಬ್ಬನ್‌ ತಗಂಡು ನೀಲೇಶ್‌ ಜೇಬಲ್ಲಿ ಇಟ್ಟಿಕೊಳ್ಳುವದಕ್ಕೂ ಅವನ ತಾಯಿ ಅಲ್ಲಿಗೆ ಬರುವುದಕ್ಕೂ ಸರಿ ಹೋಯಿತು. “ಏನ್‌ ನಿಮ್ಮ ಜಗಳ ಹಾವು ಮುಂಗಸಿ ಆಡಿದಂಗಾ, ಏನಾಯ್ತು? ಹೇ ಮುದುಕ ಅದೇನ್‌ ಚಡ್ಡಿ ಬಕಣದಾಗ ಇಟ್ಟಿಕಂಡಿದ್ದು?” ಅಂತ ಕೇಳಿದಳು. ಅಕ್ಕ ತಮ್ಮ ಇಬ್ಬರೂ ಒಮ್ಮೆ ಮುಖ ಮುಖ ನೋಡಿಕೊಂಡರು. “ಅಮ್ಮ ಅದು ಅದು…” ಅಂತ ರಾಗ ಎಳೆಯುವಷ್ಟರಲ್ಲಿ, “ಲೇ ತಾರ ಅವ ಸಿಕ್ಕನಾ ಬಾರೇ ಜಲ್ದಿ” ಅಂತ ನೀಲೇಶನ ತಂದೆ ಜೋರು ಜೋರಾಗಿ ಕೂಗಿದ.
ಮುದಿರಾಜ್‌ ಬಾಣದ್‌ ಬರೆದ ಈ ಭಾನುವಾರದ ಕಥೆ “ಗಂಡುಮಲಿ” ನಿಮ್ಮ ಓದಿಗೆ

read more
ಶರಣಗೌಡ ಬಿ ಪಾಟೀಲ ಬರೆದ ಈ ಭಾನುವಾರದ ಕಥೆ

ಶರಣಗೌಡ ಬಿ ಪಾಟೀಲ ಬರೆದ ಈ ಭಾನುವಾರದ ಕಥೆ

ನಿಮ್ಮಪ್ಪ ಹ್ಯಾಂಗೇ ಇರಲಿ ಅವನು ನಮ್ಮ ಕಣ್ಮುಂದೆ ಇರಬೇಕು. ಅಂವ ನನ್ನ ಪಾಲಿನ ದೇವರು. ನನ್ನ ಹಣೆಬರಹದಾಗ ಏನಿದೆಯೋ ಅದು ಆಗಿ ಹೋಗಿದೆ. ಹಿರಿಯರ ಮಾತಿಗೆ ಬೆಲೆ ಕೊಟ್ಟು ಆತನ ಜೊತೆ ಮದುವೆಯಾದೆ. ಅಂತಹ ಗಂಡನ ಜೊತೆ ಹ್ಯಾಂಗ ಸಂಸಾರ ಮಾಡ್ತಿಯೋ ಏನೋ ಅಂತ ಆಡಿಕೊಳ್ಳತಿದ್ದರು. ಅವರ ಮಾತಿಗೆ ನಾನೆಂದೂ ತಲೆ ಕೆಡಿಸಿಕೊಳ್ಳಲಿಲ್ಲ. ಹೀಗಿದ್ದರೂ ಆತ ಹೇಳದೇ ಕೇಳದೇ ಹೋಗಿದ್ದಾನೆ.
ಶರಣಗೌಡ ಬಿ ಪಾಟೀಲ, ತಿಳಗೂಳ ಬರೆದ ಸಣ್ಣ ಕತೆ “ಎಲ್ಲರಂತವನಲ್ಲ!” ನಿಮ್ಮ ಈ ಭಾನುವಾರದ ಓದಿಗೆ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಧುಸೂದನ ವೈ. ಎನ್. ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಧುಸೂದನ ವೈ. ಎನ್. ಕತೆ

ಅವಳು ಚಡಪಡಿಸಿದಳು. ಮುಷ್ಠಿ ಬಿಗಿ ಹಿಡಿದಳು. ಉಗಿದು ಅವನನ್ನು ಓಡಿಸುವುದೋ, ಅಥವಾ ಕಿರುಚಿಕೊಳ್ಳುವುದೋ ಗೊತ್ತಾಗಲಿಲ್ಲ. ಸುಮ್ಮನೆ ನಿರ್ಲಕ್ಷಿಸಿ ನಿಂತರೆ ಹೇಗೆ, ಯೋಚಿಸಿದಳು. ಅವನು ಇದಾವುದರ ಪರಿವೆಯೆ ಇಲ್ಲದಂತೆ ಬಜ್ಜಿ ತಿನ್ನುತ್ತಲೆ ಇದ್ದ. ಅವಕಾಶ ಸಿಕ್ಕಂತೆಲ್ಲ ಅವನು ಹತ್ತಿರ ಸರಿಯುತ್ತಿರುವುದು ಅವಳಿಗೆ ಸ್ಪಷ್ಟವಾಗಿ ಗೊತ್ತಾಗುತ್ತಿತ್ತು.
“ನಾನು ಮೆಚ್ಚಿದ ನನ್ನ ಕತೆ”ಯ ಸರಣಿಯಲ್ಲಿ ಮಧುಸೂದನ ವೈ. ಎನ್. ಬರೆದ ಕತೆ “ಬೋಣಿ”

read more
ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಈ ಭಾನುವಾರದ ಕಥೆ

ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಈ ಭಾನುವಾರದ ಕಥೆ

ಮಾರನ ಕನಸು ನನಸಾಗಲಿಲ್ಲ. ಮಣ್ಣು ಸೇರಿತ್ತು. ಮಾರನ ತತ್ಕಾಲದ ಜನಪ್ರಿಯತೆಯನ್ನು ಮಾತ್ರವೇ ನಂಬಿಕೊಂಡಿದ್ದ ಆ ಸಿನಿಮಾ ಚೆನ್ನಾಗಿ ಓಡಲಿಲ್ಲ. “ಸಿನಿಮಾ ಚೆನ್ನಾಗಿ ಕಲೆಕ್ಷನ್ ಮಾಡಿಯೇ ಮಾಡುತ್ತದೆ. ಸಿನಿಮಾ ಹಿಟ್ ಆದಮೇಲೆ ನಿನಗೆ ಎಂಟು ಲಕ್ಷ ಕೊಡುತ್ತೇವೆ” ಎಂದು ನಂಬಿಸಿದ್ದ ನಿರ್ದೇಶಕ- ನಿರ್ಮಾಪಕರು ಆಮೇಲೆ ಕೈ ಕೊಟ್ಟಿದ್ದರು. ಸಿನಿಮಾ ಆರಂಭದ ಸಂದರ್ಭದಲ್ಲಿ ಕೊಟ್ಟಿದ್ದ ಹನ್ನೆರಡು ಸಾವಿರ ಮಾತ್ರ ಮಾರನ ಪಾಲಿಗೆ ದಕ್ಕಿದ್ದು.
ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಕಥೆ “ಮಾರ”

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೇಶವ ಮಳಗಿ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೇಶವ ಮಳಗಿ ಬರೆದ ಕತೆ

ಭಾಳ ಸಿಹಿಸುದ್ದಿಯೇನೂ ಅಲ್ಲ. ಆದರೂ, ಕಹಿಯಂತೂ ಅಲ್ಲಲ. ತೇರಿಗೆ ಹೂವುಹಣ್ಣು ಹಾಕವರಿದ್ರ ಇವತ್ತೇ ತಗೊಂಡು ತಯಾರಾಗ್ರಿ. ನಾಳೆ ಶಿಗತಾವೋ ಇಲ್ಲೋ. ಭಯಂಕರ ತುಟ್ಟಿನು ಇರತಾವು. ಬಿಸಿಲು ಏರಾಕ ಹೊಂಟೈತಿ. ಜರಾ ಚಹಾ ಕುಡೀತಿರೇನು ನೋಡ್ರಿ, ಹೇಳುತ್ತ ತಾನೂ ಹಗುರಾದಂತೆ ಬೋಲ್ಡಿ ಬಾಬಾ ಕೊಳವೆಗೆ ತಂಬಾಕು ತುಂಬಿ ಕಿಡಿ ಹಚ್ಚಿದ. ರುಕುಮವ್ವ, ಚಂದ್ರವ್ವಳನ್ನು ಕೈಯಿಂದ ಎಳೆದುಕೊಳ್ಳುತ್ತ ಬೆನ್ನು ಸವರಿ, ಸಮಾಧಾನ ಆತಿಲ್ಲವಾ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೇಶವ ಮಳಗಿ ಬರೆದ ಕಥೆ

read more
ಜೆಸ್ಸಿ ಪಿ.ವಿ. ಪುತ್ತೂರು ಬರೆದ ಈ ಭಾನುವಾರದ ಕಥೆ

ಜೆಸ್ಸಿ ಪಿ.ವಿ. ಪುತ್ತೂರು ಬರೆದ ಈ ಭಾನುವಾರದ ಕಥೆ

ಏನಾಗುತ್ತಿದೆಯೆಂದು ಅವರಿಗೆ ಅರ್ಥವಾಗುವ ಮೊದಲೇ ಬೆಂಕಿ ಅರ್ಧದಷ್ಟು ತೋಟಕ್ಕೆ ವ್ಯಾಪಿಸಿತ್ತು. ಅನಿರೀಕ್ಷಿತವಾಗಿ ಘಟಿಸಿದ ಅನಾಹುತ ಕಂಡು ಮಾತುಹೊರಡದೇ ನಿಂತಿದ್ದ ಅಂಬಿಕಾ ಈಗ ಜೋರಾಗಿ ಕಿರುಚಲಾರಂಭಿಸಿದರು. “ಅಯ್ಯೋ, ಯಾರಾದರೂ ಓಡಿ ಬನ್ನಿ.. ನಮ್ಮನ್ನು ಕಾಪಾಡಿ… ಯಾರಾದರೂ ಬನ್ನಿ, ಬೆಂಕಿ ನಂದಿಸಿ….” ನೆರೆಮನೆಯಿಂದ ಕೇಳಿದ ಆರ್ತನಾದ, ಎತ್ತರದಲ್ಲಿ ಕಾಣುತ್ತಿರುವ ಬೆಂಕಿಯ ಕೆನ್ನಾಲಿಗೆ, ಆಗಿರಬಹುದಾದ ಅನಾಹುತದ ಚಿತ್ರಣವನ್ನು ಶಂಕರಣ್ಣನಿಗೆ ಕಟ್ಟಿಕೊಟ್ಟಿತು.
ಜೆಸ್ಸಿ ಪಿ.ವಿ. ಪುತ್ತೂರು ಬರೆದ ಈ ಭಾನುವಾರದ ಕಥೆ “ಹೊರಗಿನ ಬೆಂಕಿ ಮತ್ತು ಒಳಗಿನ ಕಳೆ” ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ