Advertisement

ಸಾಹಿತ್ಯ

ರಘುನಾಥ್‌ ಕೆ. ಅನುವಾದಿಸಿದ ಭೂಮಿಕಾ ರಾಜನ್‌ ಕಥೆ

ರಘುನಾಥ್‌ ಕೆ. ಅನುವಾದಿಸಿದ ಭೂಮಿಕಾ ರಾಜನ್‌ ಕಥೆ

ಅವಳು ಕಿರುನಿದ್ದೆಯಿಂದ ಎದ್ದಾಗ ಈಗಾಗಲೇ ಅಜ್ಜಯ್ಯನ ಅಂಗಡಿಗೆ ಸಾಮಾನಗಳ ಪಟ್ಟಿ ಕೊಟ್ಟು ನಾಲ್ಕು ಗಂಟೆಗಳಾದ ನೆನಪು ಆಯಿತು. ಮೊದಲು ತಡವಾಗಬಹುದೆಂದು ಅಮ್ಮನಿಗೆ ಬೇಕಾದ ಅಕ್ಕಿಯನ್ನು ತರಲು ಚೀಲ ಒಯ್ಯುವುದು ಎಂದುಕೊಂಡಳು. ಅಂಗಡಿಯವನು ಇನ್ನೊಂದು ಗಂಟೆಯಲ್ಲಿ ಸಾಮಾನು ತಂದುಕೊಡುವುದಾಗಿ ಹೇಳಿದ್ದರಿಂದ ಆ ಯೋಚನೆ ಕೈಬಿಟ್ಟಳು. ಕಿರಿಕಿರಿ ಉಂಟಾಗಿ ಅಂಗಡಿಗೆ ಫೋನ್ ಮಾಡಿದಳು “ತಲುಪಲು ಸಾಧ್ಯವಾಗುತ್ತಿಲ್ಲ” ಎಂಬ ಉತ್ತರ ಬಂದಿತು.
ರಘುನಾಥ್‌ ಕೆ. ಅನುವಾದಿಸಿದ ಭೂಮಿಕಾ ರಾಜನ್‌ ಕಥೆ “ಶಾಹೀನಳ ದುಃಸ್ವಪ್ನ” ನಿಮ್ಮ ಈ ಭಾನುವಾರದ ಓದಿಗೆ

read more
ಪರಕೀಯತೆಯ ಪ್ರಜ್ಞೆ ಬಿಂಬಿಸುವ ತಿರುಮಲೇಶರ ಕತೆಗಳು

ಪರಕೀಯತೆಯ ಪ್ರಜ್ಞೆ ಬಿಂಬಿಸುವ ತಿರುಮಲೇಶರ ಕತೆಗಳು

ಕವಿತೆ ಮತ್ತು ಕಾದಂಬರಿಗಳಲ್ಲಿ ನಡೆಸಿದ ವಾಸ್ತವ ನೆಲೆಯ ಹುಡುಕಾಟವನ್ನು ಅವರು ಇಲ್ಲೂ ನಡೆಸಿದ್ದಾರೆ. ‘ಜಾಗುವಾ ಮತ್ತು ಇತರರು’ ಕತೆಗಳಲ್ಲಿರುವಷ್ಟು ನವ್ಯದ ಪ್ರಖರತೆ ‘ಕೆಲವು ಕಥಾನಕಗಳ’ಲ್ಲಿ ಇಲ್ಲದಿದ್ದರೂ ಮುಖ್ಯ ಕಾಳಜಿಗಳು ಮಾತ್ರ ಮೊದಲಿನವೇ. ಜೀವನದ ಇರುವಿಕೆಯ ರೀತಿ, ರಹಸ್ಯಗಳ ಶೋಧನೆಗಳು ಮತ್ತು ಪರಕೀಯ ಪ್ರಜ್ಞೆಯ ಆಧಾರದಲ್ಲಿ ಮೂಡುವ ದಾರ್ಶನಿಕ ಒಳನೋಟಗಳು ಮುಖ್ಯವಾಗುತ್ತವೆ.
ಕೆ.ವಿ. ತಿರುಮಲೇಶರ ಕತೆಗಳ ಕುರಿತು ಬರೆದಿದ್ದಾರೆ ಡಾ. ಸುಭಾಷ್‌ ಪಟ್ಟಾಜೆ

read more
ಕೆ.ವಿ. ತಿರುಮಲೇಶರು ಇನ್ನಿಲ್ಲ…

ಕೆ.ವಿ. ತಿರುಮಲೇಶರು ಇನ್ನಿಲ್ಲ…

ಮನುಷ್ಯ ಸಮಾಜಕ್ಕೆ ಐಡೆಂಟಿಟಿಯನ್ನು ನೀಡುವುದು ಭಾಷೆಯೊಂದೇ ಅಲ್ಲ, ಸಾಮೂಹಿಕವಾದ ಧರ್ಮ, ಜಾತಿ, ಆಚಾರ ವಿಚಾರಗಳು, ಸಂಸ್ಕಾರಗಳು, ಕಲೆಗಳು, ನಿಷೇಧಗಳು, ನಂಬಿಕೆಗಳು, ದೇವಳಗಳು, ಮಠಗಳು, ನಿತ್ಯಕರ್ಮಗಳು, ಸ್ತ್ರೀಯರ ಸ್ಥಾನ ಮಾನ ಇತ್ಯಾದಿ ಹಲವಾರು ವಿಷಯಗಳು ಸಮಾಜದ ಗುರುತನ್ನು ರೂಪಿಸುತ್ತವೆ. ಕಾಸರಗೋಡಿನಲ್ಲಿ ಗುಡಿಗಳು, ದೇವಸ್ಥಾನಗಳು, ಭೂತಸ್ಥಾನಗಳು, ಮಸೀದಿಗಳು, ಇಗರ್ಜಿಗಳು ನಿಬಿಡವಾಗಿವೆ. ಇವೆಲ್ಲವೂ ಸುಖಶಾಂತಿಯಿಂದ, ಆದರ್ಶಕರವಾಗಿ ಯಾವತ್ತೂ ಸಹಬಾಳ್ವೆ ನಡೆಸುತ್ತಿವೆ ಎನ್ನಲಾರೆ.
ಇಂದು ಮುಂಜಾನೆ ಕನ್ನಡದ ಪ್ರಮುಖ ಬರಹಗಾರರಲ್ಲಿ ಒಬ್ಬರಾದ ಕೆ.ವಿ. ತಿರುಮಲೇಶರು ತೀರಿಹೋದರು. ಕೆಂಡಸಂಪಿಗೆಯೊಡನೆ ಅವರ ನಂಟು ಅನನ್ಯ. ನಮ್ಮ ಓದುಗರಿಗಾಗಿ ಅವರು ಬರೆದ ಕೆಲವು ಬರಹಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ…

read more
ಶಿವಕುಮಾರ ಚನ್ನಪ್ಪನವರ ಬರೆದ ಈ ಭಾನುವಾರದ ಕಥೆ

ಶಿವಕುಮಾರ ಚನ್ನಪ್ಪನವರ ಬರೆದ ಈ ಭಾನುವಾರದ ಕಥೆ

ಪೀರ್ಯಾಗ ಮತ್ತ ಹುರುಪೆದ್ದು ಯೋಳ್ನೆ ಪತ್ರ ಬರದಾಕಿದ್ದ. ಮ್ಯಾಲ ಒಂದ್ಲೈನು ಸರ್ಕಾರಿ ಕೇಲ್ಸ ದೇವ್ರ ಕೇಲ್ಸ ಅಂತಾ ಬರ್ದು ಕೆಳ್ಗ ತಮ್ಮ ಕಂಪ್ನಿ ಮಂಚಪ್ಪ ಮತ್ತ ಸರ್ಕಾರಿ ಲಂಚಪ್ಪನ ಇತಿಹಾಸನ ಬರ್ದಿದ್ದ. ಜೊತಿಗಿ ಅದ್ಕ ಸಂಭಂದಪಟ್ಟಂಗ ಎಕ್ಸೇಲ್ ಸಿಟ್ ಅಟ್ಯಾಚ್ ಮಾಡಿದ್ದ. ನಿನ್ನೆ ಅದು ಕಮೀಷನರ್ರ ಕೈಗಿ ಸಿಕ್ಕು ಲಂಚ್ಮಂಚ್ಚಪ್ಪರ್ನ ಸಿಕ್ಕ ಸಿಕ್ಕಾಂಗ ಉಗದಿದ್ರನ್ನಾದು ಸಹ ಗೊಣೇಶ ತುಂಬು ಹೃದಯದಿಂದ್ಲೇ ವಿವರ್ಸಿ, ಕುಷಿ ಪಟ್ಟಿದ್ದ. ಅಂವ್ಗ ಲೆರ್ಟ ಬರಿತಾರಂತ ಗೊತ್ತು ಆದ್ರ ಇವ್ನ ಬರಿತಾನಂತ ಮಾತ್ರ ಗೊತ್ತಿರ್ಲಿಲ್ಲ. ಪೀರ್ಯಾನೂ ಹೇಳಿದ್ದಿಲ್ಲ.
ಶಿವಕುಮಾರ ಚನ್ನಪ್ಪನವರ ಬರೆದ ಕಥೆ “ಲಂಚಪ್ಗೀರಿ ಲಂಚ್ಮಂಚ್ಚಪ್ಪೋರ ಕತಿ..”

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಕತೆ

ಮುಕಾಂಬಿಕಮ್ಮ ಇದ್ದುದರಲ್ಲೇ ಅಚ್ಚುಕಟ್ಟಾಗಿ ಸಂಸಾರ ನಡೆಸಿಕೊಂಡು ಬಂದ ನಿತ್ಯಸಂತೋಷಿ ಜೀವ. ಬೆಳಗ್ಗೆ ಐದುಗಂಟೆಗೆ ಅವರ ಮನೆಗೆಲಸದಚಕ್ರ ಸುತ್ತಲಾರಂಭಿಸಿದರೆ ನಿಂತು ಅಡ್ಡವಾಗುವುದು ಮಧ್ಯಾಹ್ನ ಎರಡುಗಂಟೆಗೆ. ಮತ್ತೆ ಐದುಗಂಟೆಗೆ ಎದ್ದು ಸುತ್ತತೊಡಗಿದರೆ ನಿಲ್ಲುವುದು ರಾತ್ರಿ ಒಂಭತ್ತು ಗಂಟೆಗೆ. ‘ಮುಕಾಂಬಮ್ಮನಂತೆ ಮನೆಯನ್ನು ಒಪ್ಪ ಓರಣವಾಗಿ ಇಟ್ಕೊಳ್ಳುವವರು ಹೊಸನಗರದಲ್ಲೇಕೆ?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಕತೆ “ಮೇಷ್ಟ್ರಮನೆ”

read more
ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕಥೆ

ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕಥೆ

ಇಲ್ಲ! ಅಪ್ಪ ಪೇಟೆಗೆ ಹೋದ ಸಮಯ ನೋಡಿ ಇಲ್ಲಿಗೆ ಓಡಿ ಬಂದು ಪುಟ್ಟ ಮಗುವಾಗಿದ್ದ ನನ್ನನ್ನು ಎತ್ತಿ ಮುದ್ದಾಡಿದ ವ್ಯಕ್ತಿ ಇವನಲ್ಲ. ಬಿಡುವಿಲ್ಲದ ಮನೆಗೆಲಸದ ವೇಳೆಯಲ್ಲೂ ‘ಎತ್ತಿಕೋ’ ಎಂದು ಅಮ್ಮನನ್ನು ಪೀಡಿಸುತ್ತಿದ್ದಾಗ “ಇತ್ತ ಕೊಡಿ. ನಾನು ನೋಡಿಕೊಳ್ತೇನೆ” ಎಂದು ನನ್ನನ್ನು ಎತ್ತಿಕೊಂಡು, ತೋಟದಲ್ಲೆಲ್ಲ ತಿರುಗಾಡಿ ಬಾಳೆಹೂವಿನ ಜೇನು ನೆಕ್ಕಿಸಿದವನೂ ಇವನಲ್ಲ ಎಂದುಕೊಳ್ಳುತ್ತಿದ್ದಂತೆ ಕತ್ತಲಲ್ಲಿ ಭೂಮಿಯನ್ನು ಥರಗುಟ್ಟಿಸುವ ಸದ್ದು ನಮ್ಮೆಲ್ಲರನ್ನೂ ಇಡಿಯಾಗಿ ಅಲುಗಾಡಿಸಿತು.
ಸುಭಾಷ್ ಪಟ್ಟಾಜೆ ಬರೆದ ಈ ಕಥೆ “ಗೋಡೆ”

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೃಷ್ಣ ದೇವಾಂಗಮಠ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೃಷ್ಣ ದೇವಾಂಗಮಠ ಬರೆದ ಕತೆ

ಹೋಗುತ್ತಾ ನನಗೆನೋ ಕೊಟ್ಟು ಒಂದಷ್ಟು ಕಸಿದುಕೊಂಡು ಟಾಟಾ ಬೈಬೈ ಹೇಳುತ್ತಾ ಕಣ್ಮರೆಯಾಯಿತು. ಮತ್ತೆ ಮನಸ್ಸಿಗೆ ಹೊಸ ತಳಮಳ. ಯಾವ್ಯಾವುದೋ ಮನುಷ್ಯ ಸಹಜ ಆಸೆಗಳು ಮೈತಳೆಯುತ್ತಿದ್ದವು. ಆದರೆ ಎಲ್ಲವೂ ಅಸ್ಪಷ್ಟ ಆಕೃತಿಗಳು. ಬಸಿರಿನಲ್ಲಿ ಕೈ ಕಾಲು ಮೂಡದ ಭ್ರೂಣಾವಸ್ತೆಯ ಹಂತದವು. ಕನಸಿನ ಮಂಜು ಮಂಜಾದ ಚಿತ್ರಪಟಗಳಂತಹವು. ಮನಸ್ಸು ಮತ್ತಷ್ಟು ಗೊಂದಲದ ಗೂಡಾಯಿತು. ಅಲ್ಲಿ ನನ್ನ ಜನರ ಮಧ್ಯದಿಂದ ಸುಂಯ್ಯ ಎಂದು ಹಾರಿದ ವಿಮಾನ ಇಲ್ಲಿ ನನ್ನವರಲ್ಲದ ಮತ್ತು ನನ್ನವರಾಗಲಿರುವವರ ಮಧ್ಯೆ ಸದ್ದಿಲ್ಲದೆ ಇಳಿಸಿತು.
ಕೃಷ್ಣ ದೇವಾಂಗಮಠ ಬರೆದ ಕತೆ “ಪೇಯಿಂಟಿಂಗ್ “

read more
ವೆಂಕಟೇಶ ಬಿ.ಎಂ. ಬರೆದ ಈ ಭಾನುವಾರದ ಕತೆ

ವೆಂಕಟೇಶ ಬಿ.ಎಂ. ಬರೆದ ಈ ಭಾನುವಾರದ ಕತೆ

ಈಗ ಗೋಡೆಯ ಮೇಲಿನ ಚಿತ್ರಗಳು ಬದಲಾಗಿ ವಿಶಾಲವಾದ ಸಮುದ್ರ ಗೋಚರಿಸತೊಡಗಿದೆ. ಸಮುದ್ರದ ನಟ್ಟನಡುವೆ ಹಡಗಿನಲ್ಲಿ ರಮೇಶ, ಶೇಖರ ಹಾಗೂ ಹೆಂಗಸೊಬ್ಬಳು ನಿಂತಿದ್ದಾರೆ! ಹೆಂಗಸಿನ ಅಣತಿಯನ್ನು ಶಿರಸಾವಹಿಸಿ ಪಾಲಿಸುವಂತೆ ರಮೇಶ, ಶೇಖರನನ್ನು ಹಡಗಿನಿಂದ ಸಮುದ್ರಕ್ಕೆ ದೂಡಿದ! ಉರವಣಿಸಿ ಬಂದ ಅಲೆಗಳು ಶೇಖರನನ್ನು ತಮ್ಮೊಳಗೆ ಕರಗಿಸಿಕೊಂಡವು. ಶೇಖರ ಇನ್ನಿಲ್ಲವಾದ! ‘ಇಲ್ಲಾ, ಇಲ್ಲಾ! ನಾನು ಮದುವೇನೇ ಆಗಲ್ಲ!’ ಎಂದು ಚೀರಿ ಕನಸಿನ ಭ್ರಮಾಲೋಕದಿಂದ ವಾಸ್ತವ ಪ್ರಪಂಚಕ್ಕೆ ಮರಳಿದ ರಮೇಶ!
ವೆಂಕಟೇಶ ಬಿ.ಎಂ. ಬರೆದ ಈ ಭಾನುವಾರದ ಕತೆ “ಸಹೋದರರ ಕನಸು” ಹೊಸ ವರ್ಷದ ಮೊದಲ ಓದಿಗೆ

read more
ಫಾತಿಮಾ ರಲಿಯಾ ಬರೆದ ಈ ಭಾನುವಾರದ ಕತೆ

ಫಾತಿಮಾ ರಲಿಯಾ ಬರೆದ ಈ ಭಾನುವಾರದ ಕತೆ

ರೂಡಿ ಯಾರು, ಏನು, ಎತ್ತ ಎಂಬುವುದು ಗೊತ್ತೇ ಇರದಿದ್ದರೂ ಯಾವುದೋ ಅಸಹಾಯಕತೆಯೊಂದು ಅವನನ್ನು ಇನ್ನಿಲ್ಲದಂತೆ ಕಾಡುತ್ತಿದೆ ಎಂದು ಅವಳಿಗೆ ಆಗಾಗ ಅನ್ನಿಸುತ್ತಿತ್ತು. ಪ್ರತಿ ಬೆಳಗೂ ‘ಈವತ್ತು ಹೇಗಾದರೂ ಸರಿ, ಅವನನ್ನು ಕೇಳಲೇಬೇಕು’ ಎಂಬ ಪ್ರತಿಜ್ಞೆಯೊಂದಿಗೆ ಹಾಸಿಗೆಯಿಂದ ಏಳುತ್ತಿದ್ದಳು. ಆದರೆ ಹಾಗೆ ಕೇಳಬೇಕೆಂದು ಹೊರಟಾಗೆಲ್ಲಾ ಗಂಟಲಲ್ಲಿ ಒಂದು ಮುಳ್ಳು ಸಿಕ್ಕಿಹಾಕಿಕೊಂಡಂತಾಗಿ ಕೇಳಲಾಗದೆ ಇದ್ದುಬಿಡುತ್ತಿದ್ದಳು. ಹೋಗಲಿ, ತಾನು‌ ನಲವತ್ತರ ಹೊಸ್ತಿಲು ದಾಟಿದವಳು…
ಫಾತಿಮಾ ರಲಿಯಾ ಬರೆದ ಕತೆ “ರೂಡಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ