Advertisement

ಸಾಹಿತ್ಯ

ಡಾ. ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕತೆ

ಡಾ. ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕತೆ

ತುಸು ಹೊತ್ತಿನ ಬಳಿಕ ರಾತ್ರಿಯ ನೀರವವನ್ನು ಭೇದಿಸಿಕೊಂಡು ‘ಧಡ್’ ಎಂದು ಏನೋ ಬಿದ್ದ ಸದ್ದು. ಬೆನ್ನಿಗೇ ಕ್ಷೀಣವಾಗಿ, ಎದೆಯನ್ನೇ ಕೊರೆಯುವಂಥ ಬಿಕ್ಕಳಿಕೆ ಕೇಳಿಸಿದಾಗ ದಡಕ್ಕನೆ ಎದ್ದು ಕುಳಿತೆ. ಏನೂ ಅರ್ಥವಾಗಲಿಲ್ಲ. ಕಾಲುಗಳನ್ನು ನೆಲಕ್ಕಪ್ಪಳಿಸುತ್ತಾ ಹೊರಗಿಳಿದು ನಡೆಯುತ್ತಿರುವ ಅಣ್ಣನನ್ನು ಕಂಡಾಗ ಮನೆಯಲ್ಲಿ ಬೀಡುಬಿಟ್ಟಿದ್ದ ವಿಷಣ್ಣ ಭಾವ ನನ್ನೊಳಗೂ ತುಂಬತೊಡಗಿತು. ಹೊಸ ರವಿಕೆಯನ್ನು ಕಂಡ ಅಣ್ಣ ‘ಯಾರು ತಂದ್ಕೊಟ್ಟದ್ದು?’ ಎಂದು ಕೇಳಿರಬೇಕು. ಡಾ. ಸುಭಾಷ್‌ ಪಟ್ಟಾಜೆ ಬರೆದ ಕತೆ “ಗತಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

read more
ಹೌದು.. ಇಡೀ ಜಗತ್ತೇ ಸ್ಮಾರ್ಟಾಗ್ತಾ ಇದೆ!

ಹೌದು.. ಇಡೀ ಜಗತ್ತೇ ಸ್ಮಾರ್ಟಾಗ್ತಾ ಇದೆ!

ಸೂರ್ಯ ಕೆಂಪಗಾಗುತ್ತಿದ್ದ. ಹಿಂದಿನ ಸುಮಾರು ಎರಡೂವರೆಕೆರೆ ಜಾಗದಲ್ಲಿ ಸಪಾಟಾಗಿಸಿದ ಹುಲ್ಲು. ಋತುಮಾನಕ್ಕನುಗುಣವಾಗಿ ತನ್ನ ಬಣ್ಣವನ್ನು ಕಳೆದುಕೊಳ್ಳುತ್ತಿತ್ತು. ಅದರ ಹಿಂದೆ ನಿಂತ ನೂರೈವತ್ತು ಮೇಪಲ್ ಮರಗಳು. ಎಲ್ಲವೂ ಎಲೆಗಳನ್ನು ಕಳಕೊಳ್ಳುತ್ತಾ ಮುಂಬರುವ ಹಿಮವನ್ನು ಎದುರಿಸಲು ಬತ್ತಲಾಗುತ್ತಿದ್ದವು. ಕೆಳಗೆ ಬಿದ್ದ ಹಣ್ಣೆಲೆಗಳ ಮೇಲಿನ ಸಂಜೆಯ ತೇವ ವಾತಾವರಣಕ್ಕೆ ಕೊಟ್ಟಿದ್ದ ಒಂದು ಸಿಹಿಯಾದ, ಒಗರಾದ ವಾಸನೆ ಸನ್‌ರೂಮಿನ ಕಿಟಕಿಯ ಸೀಲುಗಳ ಮೂಲಕ ಮನೆಯೊಳಗೆ ಹಣಿಕಿಹಾಕಿತ್ತು.
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಲ್ಲೇಶ್‌ ಕುಂಬಾರ್ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಲ್ಲೇಶ್‌ ಕುಂಬಾರ್ ಬರೆದ ಕತೆ

ಪೂಜೇರಿ ಸಂಗಪ್ಪನ ಸಾವಿನಿಂದಾಗಿ ಕಂಗೆಟ್ಟಿದ್ದ ಕಪಿಲೆ, ಚಪ್ಪರದಿಂದ ಎದ್ದು ಹೋಗಿ ಆತನ ಮನೆಯ ಮುಂದೆ ನಿಂತಿತು. ಆಗ, ಹೊರಗೆ ಮನೆ ಮುಂದೆ ಗದಕಟ್ಟು ಕಟ್ಟಿ ಕೂಡ್ರಿಸಿದ್ದ ಪೂಜೇರಿ ಸಂಗಪ್ಪನ ಹೆಣವನ್ನು ಕಂಡು, ದುಃಖ ತಡೆಯಲಾಗದೆ ನೆರೆದ ಜನರ ನಡುಕ ತೂರಿಕೊಂಡು ಮುಂದೆ ಹೋಗಿ ಆತನನ್ನು ಮೂಸಿ ನೋಡಿ ತನ್ನ ಮರುಕ ವ್ಯಕ್ತಪಡಿಸಿತು. ಆಮೇಲೆ, ಅದು ಹಂಗೇ ಹಿಂದೆ ಸರಿದು ಜನರತ್ತ ಬಂದು ನಿಂತಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಲ್ಲೇಶ್‌ ಕುಂಬಾರ ಬರೆದ ಕತೆ “ಕಪಿಲೆ” ನಿಮ್ಮ ಈ ಭಾನುವಾರದ ಓದಿಗೆ

read more
ಇಲ್ಲಿ ಎಲ್ಲವೂ ಸರಿ ಇದ್ಯಾ…?

ಇಲ್ಲಿ ಎಲ್ಲವೂ ಸರಿ ಇದ್ಯಾ…?

ವಿನಯ ಅಲಿಶಾಳಿಗೆ ಪ್ರಪೋಸ್ ಮಾಡಿದ ಎಂಬ ಸುದ್ದಿ ಕೇಳಿದ ಮೂರು ದಿನಕ್ಕೇ ಅರವಿಂದನಿಗೆ ಲಘು ಹೃದಯಾಘಾತವಾಗಿತ್ತು. ಶಿಕಾಗೋದಿಂದ ಓಡಿಬಂದಿದ್ದರು, ವಿನಯ ಮತ್ತು ಅಲಿಶಾ ಇಬ್ಬರೂ. ಮನಸ್ಸಿನ ವ್ಯಾಪಾರವೇ ವಿಚಿತ್ರ. ವಿನಯ ಅಲಿಶಾಳನ್ನು ಮದುವೆ ಮಾಡಿಕೊಳ್ಳುವುದು ಗ್ಯಾರಂಟಿ ಎಂದು ಗೊತ್ತಿದ್ದರೂ ವಿನಯನ ಪ್ರಪೋಸಲ್ಲಿಗೂ, ಅರವಿಂದನ ಹಾರ್ಟ್ ಅಟ್ಯಾಕಿಗೂ ಕಾರ್ಯಕಾರಣ ಸಂಬಂಧ ಹುಡುಕಲು ವೈದ್ಯಕೀಯ ಪುರಾವೆಗಳ ಸಾಥ್ ಕೇಳಿದ್ದಳು, ಸುಕನ್ಯಾ.
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಎರಡನೆಯ ಕಂತು ನಿಮ್ಮ ಓದಿಗಾಗಿ

read more
ಗುರುಪ್ರಸಾದ್‌ ಕಾಗಿನೆಲೆ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್‌” ಇಂದಿನಿಂದ ಶುರು

ಗುರುಪ್ರಸಾದ್‌ ಕಾಗಿನೆಲೆ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್‌” ಇಂದಿನಿಂದ ಶುರು

‘ಥ್ಯಾಂಕ್ಸ್ ಗಿವಿಂಗ್’ ಈ ನೀಳ್ಗತೆಯನ್ನು ಬರೆದು ಸುಮಾರು ಎಂಟುವರ್ಷಗಳೇ ಆಗಿವೆ. ‘ಹಿಜಾಬ್’ ಕಾದಂಬರಿಯ ಬರವಣಿಗೆ ನನ್ನನ್ನು ಬಸವಳಿಸಿತ್ತು. ಕೆಲವೊಮ್ಮೆ ಏನೂ ಬರೆಯಲಾರೆ ಅನ್ನಿಸಿತ್ತು. ತಿಂಗಳುಗಟ್ಟಲೆ ಬರವಣಿಗೆಯನ್ನು ನಿಲ್ಲಿಸಿದ್ದೆ. ಅದನ್ನು ಮರು ಉದ್ದೀಪನಗೊಳಿಸಿಕೊಳ್ಳಲು ಅದಕ್ಕೆ ವಸ್ತು, ವಿಷಯ ಮತ್ತು ನಿರೂಪಣೆಯಲ್ಲಿ ಸಂಪೂರ್ಣ ಬೇರೆಯಾಗಿರುವುದನ್ನು ಬರೆಯಬೇಕೆನ್ನಿಸಿತು.
ಗುರುಪ್ರಸಾದ್‌ ಕಾಗಿನೆಲೆ ಬರೆದ ಹೊಚ್ಚಹೊಸ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್” ಕೆಂಡಸಂಪಿಗೆಯಲ್ಲಿ ಕೆಲವು ಕಂತುಗಳಲ್ಲಿ ಪ್ರತಿ ಶನಿವಾರ ಪ್ರಕಟವಾಗಲಿದೆ

read more
ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ತಂದೆ ಏಕೆ ಹೀಗಾದರೂ ಅಂತ ಈವತ್ತಿಗೂ ನನಗೆ ಗೊತ್ತಾಗುತ್ತಿಲ್ಲ. ಸ್ನಾನ, ಸಂಧ್ಯಾವಂದನೆ, ಪೂಜೆ, ಅಚರಣೆ, ಯಾವುದನ್ನೂ ತಂದೆ ತಪ್ಪಿಸಿದವರಲ್ಲ. ಅವರ ತಂದೆಯ ಭಯದಲ್ಲೇ ಬೆಳೆದಿದ್ದರು. ತಂದೆ ಸತ್ತು ಹೋದ ಮೇಲೆ ಹೀಗೆಲ್ಲ ಆದದ್ದು. ನಿನ್ನ ಹತ್ತಿರ ಏನು ಮುಚ್ಚು ಮರೆ. ನಮ್ಮ ತಾತನದು ಕೂಡ ಇದೇ ರೀತಿಯ ರಂಪವಂತೆ. ಆತ ಇಟ್ಟುಕೊಂಡಿದ್ದವಳೊಬ್ಬಳನ್ನು ಮನೆಗೇ ಕರೆದುಕೊಂಡು ಬಂದು ಮಂಚದ ಮೇಲೆ ಮಲಗಿಸಿಕೊಳ್ಳುತ್ತಿದ್ದರಂತೆ. ನಮ್ಮಜ್ಜಿ ಅವಳ ಎಂಜಲು ತಟ್ಟೆ ತೊಳೆಯುವುದರಿಂದ ಹಿಡಿದು ಪ್ರತಿಯೊಂದು ಸೇವೆಯನ್ನೂ ಮಾಡಬೇಕಾಗುತ್ತಿತ್ತಂತೆ.
ಕೆ. ಸತ್ಯನಾರಾಯಣ ಬರೆದ ಕಥೆ “ಪ್ರೀತಿ ಬೇಡುವ ರೀತಿ” ‌

read more
‘ಮಗಳ ಮದುವೆ’: ಪೂರ್ಣ ಮತ್ತು ಅಪೂರ್ಣ ಬದುಕಿನ ಮಾದರಿಗಳು

‘ಮಗಳ ಮದುವೆ’: ಪೂರ್ಣ ಮತ್ತು ಅಪೂರ್ಣ ಬದುಕಿನ ಮಾದರಿಗಳು

ರತ್ನಾಕರನ ಗೆಳೆಯನೂ ಸರಳ ಸಜ್ಜನನೂ ಆಗಿರುವ ರಂಗಣ್ಣನ ತಮ್ಮ ವೆಂಕಣ್ಣನಲ್ಲಿ ಸ್ವಲ್ಪ ಒಳ್ಳೆಯ ಗುಣಗಳು ಇದ್ದರೂ ಚಳುವಳಿಗಾರರಾಗಿರುವ ಅವನ ಸಂಗಡಿಗರು ಪೋಲೀಸರೊಂದಿಗೆ ಕೈಜೋಡಿಸಿ ರತ್ನಾಕರನನ್ನು ಸೆರೆಮನೆಗೆ ತಳ್ಳುವಂತೆ ಮಾಡಲು ಹೇಸದಷ್ಟು ಧೂರ್ತರಾಗಿದ್ದಾರೆ. ಕುಮುದಳನ್ನು ಮದುವೆಯಾಗಲು ಯೋಗ್ಯನಾಗಿದ್ದ ರತ್ನಾಕರನು ತನ್ನ ಗೆಳೆಯರ ಕುಮ್ಮಕ್ಕಿನಿಂದಾಗಿ ಸೆರೆಮನೆಗೆ ತೆರಳಬೇಕಾಗುವ ಸಂದರ್ಭವು ಇದಕ್ಕೊಂದು ನಿದರ್ಶನ.
ಆನಂದಕಂದರ ‘ಮಗಳ ಮದುವೆ’ ಕಾದಂಬರಿಯ ಕುರಿತು ಡಾ. ಸುಭಾಷ್‌ ಪಟ್ಟಾಜೆ ಬರಹ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾದಂಬಿನಿ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾದಂಬಿನಿ ಬರೆದ ಕತೆ

ಅಲಾ.. ಒಂದ್ ಜಾಕೀಟ್ ಬಟ್ಟೆ ಅರ‍್ಸಕ್ಕೆ ವರ್ಸ ಪೂರ‍್ತಿ ದುಡ್ ವಟ್ಮಾಡಿ ಬಟ್ಟೆ ಅಂಗ್ಡಿಗ್ ವೋಗಿದೀನಿ. ಕದಿಯದಾಗಿದ್ರೆ ಇಷ್ಟು ಕಸ್ಟ ತಗೀಬೇಕಾ? ಆ ದೇವ್ರೂ ಈ ಅನ್ಯಾಯ ನೋಡ್ಕ್ಯಂತ ಸುಮ್ಕಿದಾನಾ ಅಂಗಾರೆ? ಅಲಾ ಈ ಸೀರೆ ವಯರ್ ಬುಟ್ಟಿಲಿ ಯಾವಾಗ್ ಬಂದ್ ಸರ‍್ಕಂತು ಅಂತ? ಬವುಶ್ಯ ನನ್ ಇಂದ್ಗಡೀಕೇ ನಿಂತ್ಕಂದಿದ್ನಲ್ಲ ಇವ್ನು.. ಇವ್ನೇ ಎಲ್ಲಾರೂ.. ಇವ್ನೇ ಇವ್ನೇ! ಇನ್ಯಾರ್ ಇಂತಾ ಕ್ಯಲ್ಸ ಮಾಡ್ತರೆ? ಅಲಾ.. ಅದ್ಯಾ ಮಾಯ್ಕದಲ್ಲಿ ವಯರ್ ಬುಟ್ಟಿಗೆ ಸೀರೆ ತಗ್ದು ಆಕಿಬುಟ್ಟಿದ್ನೋ ಅಂತ!
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾದಂಬಿನಿ ಬರೆದ ಕಥೆ “ತಲೆ ಮ್ಯಾಕೆ ವೂದ ನೀರು” ನಿಮ್ಮ ಈ ಭಾನುವಾರದ ಓದಿಗೆ

read more
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಆನಂದನಿಗೆ ತಾನು ಅಭ್ಯಸಿಸುತ್ತಿದ್ದ ಕೆಲವು ಪುಸ್ತಕಗಳಲ್ಲಿ ‘ವೀರ್ಯನಾಶವೇ ಮೃತ್ಯು, ಬ್ರಹ್ಮಚರ್ಯವೇ ಜೀವನ’ ಎಂಬ ಉಕ್ತಿಗಳು ಪ್ರಭಾವ ಬೀರಿದವು. ಆದರೆ ‘ಎಲ್ಲ ಹೆಣ್ಣುಮಕ್ಕಳನ್ನು ಸೋದರಿಯರಂತೆ ಕಾಣುವುದು ದುಸ್ಸಾಧ್ಯ’ ಎಂಬ ಅನುಭವೂ ಕಾಡುತ್ತಿತ್ತು. ಅನೇಕ ಟೀಚರ್‌ಗಳಿಗೆ ಅಚ್ಚರಿಯಾಗುವಂತೆ ಪಿ.ಯು.ಸಿಯಲ್ಲಿ ಕಾಮರ್ಸ್ ತೆಗೆದುಕೊಂಡ. ಬಿ.ಕಾಂ. ಮಾಡಲು ಖರ್ಚು ಕಡಿಮೆ. ಬೇಗ ಕೆಲಸ ಸಿಗುವುದು. ತಮ್ಮನಾದ ಶೃಂಗ ಬೇಕಾದರೆ ಬಿ.ಇ. ಮಾಡಲಿ. ಅಪ್ಪನಿಗೆ ವಿ.ಆರ್.ಎಸ್. ಸಾಧ್ಯತೆ ಹೆಚ್ಚಿರುವುದರಿಂದ ತಾನು ಬೇಗನೆ ದುಡಿದು ಮನೆ ನೋಡಿಕೊಳ್ಳಬೇಕು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ