ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕತೆ
ಸಾತಪ್ಪಗ ಇಕಾಡಿದಿಕಾಡಿ ಕುಡಿಯೂ ಚಟಾ ಬಿದ್ದಂಗಿತ್ತು. ಮೊದ ಮೊದಲ ಅಪರೂಪಕ್ಕೊಮ್ಮ ಹೊಲದೊಳಗ ರಾಶಿ ಇದ್ದಾಗ… ಯಾರದರೇ ಕಣಕ್ಕ ಹೋದರ, ಇಲ್ಲಾಂದ್ರ ಭಜನಾಕ ಹೋದರ ಅಷ್ಟೇ ಕುಡೀತಿದ್ದ. ಈಗೀಗ ಎರಡು ದಿನಕ್ಕೊಮ್ಮ ಕುಡಿಯಾಕ ಸುರು ಮಾಡಿದ್ದ. ರೊಕ್ಕ ಈಡಾಗಲಿಲ್ಲಂದ್ರ ಅಲ್ಲಿ ಇಲ್ಲಿ ಸಾಲಾ ತಗೊಂತಿದ್ದ. ವಿಜಯಪುರದೊಳಗ ಒಂದಿಬ್ಬರು ಅಡತ ಅಂಗಡಿಯವರಿದ್ದರು. ಸಾತಪ್ಪನ ಅಪ್ಪ ಬೋಜಪ್ಪ ಇದ್ದಾಗಿನಿಂದಲೂ ಅಲ್ಲೇ ವ್ಯವಹಾರ ಮಾಡಕೊಂಡು ಬಂದವರು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕಥೆ “ಕೇಡುಗಾಲದ ಕುದುರೆ”
ಲಿಂಗರಾಜ ಸೊಟ್ಟಪ್ಪನವರ್ ಬರೆದ ಈ ಭಾನುವಾರದ ಕತೆ
ಮಜೀದ್ ಕ್ಯಾಷಲ್ನ ಭಾರಕ್ಕಿಂತಲೂ ಭಾರವಾದ ಹೃದವನ್ನಿಟ್ಟುಕೊಂಡು ನಾನು ಬಾಳುತ್ತಿರುವುದನ್ನು ಅವರಿಗೆ ಹೇಳಲು ಆಗುತ್ತಿಲ್ಲ. ಮುಂದೆ ಹೇಳದಲೆ ಹೋಗಬಹುದು. ಅವರು ಅದನ್ನು ನಂಬುತ್ತಾರೋ ಇಲ್ಲವೋ. ನಾನು ಯಾರು ಎಂಬುದನ್ನು ಅಷ್ಟಾಗಿ ವಿಚಾರಿಸಲೂ ಹೋಗಲೇ ಇಲ್ಲ. ಅವರೊಂದಿಗೆ ನಾನು ಇರಲು ಅಷ್ಟು ಸಹಜವಾಗಿ ಒಪ್ಪಿಕೊಂಡುಬಿಟ್ಟರು. ನಾನು ಪ್ರಾಗ್ನಿಂದ ಬರುವ ಮುನ್ನ ಅವರೊಂದಿಗೆ ಬಾಂಬೆಯ ನಜ್ಮಾ ಎಂಬ ಚಾಕರಿಯವಳು ಮತ್ತು ಅವಳ ಸಂಸಾರ ಇತ್ತು.
ಲಿಂಗರಾಜ ಸೊಟ್ಟಪ್ಪನವರ್ ಬರೆದ ಕತೆ “ಪಾತ್ರ” ನಿಮ್ಮ ಭಾನುವಾರದ ಓದಿಗೆ
ಎಸ್. ಗಂಗಾಧರಯ್ಯ ಅನುವಾದಿಸಿದ ಹೆಮಿಂಗ್ವೆ ಕಥೆ “ಕನೇರಿ”
ಕನೇರಿ ತನ್ನ ಪುಕ್ಕಗಳನ್ನೊಮ್ಮೆ ಕೊಡವಿತು. ನಂತರ ಅವುಗಳನ್ನು ಕುಕ್ಕತೊಡಗಿತು. `ನಂಗೆ ಯಾವಾಗಲೂ ಹಕ್ಕಿಗಳೆಂದರೆ ಪಂಚ ಪ್ರಾಣ. ನಾನು ಈ ಕನೇರಿ ಹಕ್ಕೀನಾ ನನ್ನ ಪುಟ್ಟ ಮಗಳಿಗಾಗಿ ತಗಂಡು ಹೋಗ್ತಿದೀನಿ. ಹಾ, ಅಲ್ಲಿ ನೋಡಿ. ಅವನು ಈಗ ಹಾಡ್ತಾ ಇದಾನೆ,’ ಅಂದಳು ಅಮೇರಿಕನ್ ಹೆಂಗಸು. ಕನೇರಿ ಚಿಲಿಪಿಲಿಗುಟ್ಟತೊಡಗಿತು. ಅದರ ಗಂಟಲ ಮೇಲಿನ ಪುಕ್ಕಗಳು ನಿಮಿರಿ ನಿಂತವು. ನಂತರ ಅದು ತನ್ನ ಕೊಕ್ಕನ್ನು ಕೆಳಕ್ಕಾಕಿಕೊಂಡು ಪುಕ್ಕಗಳನ್ನು ಹೆಕ್ಕತೊಡಗಿತು.
ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ನೆಸ್ಟ್ ಹೆಮಿಂಗ್ವೆಯ ಒಂದಷ್ಟು ಕಥೆಗಳನ್ನು ಎಸ್. ಗಂಗಾಧರಯ್ಯ ಕನ್ನಡಕ್ಕೆ ತಂದಿದ್ದು, ಈ ಸಂಕಲನದ ಒಂದು ಕಥೆ “ಕನೇರಿ” ನಿಮ್ಮ ಓದಿಗೆ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಜಯಶ್ರೀ ಕಾಸರವಳ್ಳಿ ಬರೆದ ಕತೆ
ಹಾಗೆ ನೋಡಿದರೆ, ಅವನು ಇರುವೆ ತಿಂದಿದ್ದು ಇಂದೇ ಮೊದಲಿರಲಿಕ್ಕಿಲ್ಲ. ಈ ಮೊದಲೇ ಅವನಿಗೆ ಅರಿವಿಲ್ಲದಂತೆ ಅದೆಷ್ಟು ಇರುವೆ ಅವನ ಹೊಟ್ಟೆಯೊಳಗೆ ಹೊಕ್ಕು ಹೊರ ಹೋಗಿದ್ದವೋ ಯಾರಿಗೆ ಗೊತ್ತು? ಅವನೂರಿನ ಆಲೆಮನೆ ಸಂದರ್ಭದಲ್ಲಂತೂ ಇರುವೆ ಜೊತೆ ದೊಡ್ಡ ದೊಡ್ಡ ಗೊದ್ದಗಳೆಲ್ಲಾ ಮನೆ ತುಂಬಾ ಹರಿದಾಡುತ್ತಿದ್ದವು. ಉಪ್ಪರಿಗೆಯಲ್ಲಿ ಜೋಡಿಸಿಟ್ಟ ಬೆಲ್ಲದ ತಗಡಿನ ಡಬ್ಬಗಳಿಗೆ ರಾಶಿ ಇರುವೆಗಳು ಮುತ್ತಿಕೊಳ್ಳುತ್ತಿದ್ದರಿಂದ, ಅವನಪ್ಪ ಇರುವೆಗಳನ್ನು ಓಡಿಸಲು ಡಬ್ಬದ ಸುತ್ತಲೂ ಡಿ.ಡಿ.ಟಿ. ಪುಡಿಯನ್ನು ದುಂಡಗೆ ಚೆಲ್ಲಿರುತ್ತಿದ್ದರು.
ಶ್ರೀ ಡಿ. ಎನ್. ಬರೆದ ಈ ಭಾನುವಾರದ ಕತೆ
ಅವಳಮ್ಮ ಅಂದುಕೊಂಡಂತೆ ಅವ ಅವಳಿಗೆ ಬರೀ ಕ್ಲಾಸ್ ಮೇಟ್ ಮಾತ್ರವಾಗಿರಲಿಲ್ಲ. ಅವನೆಂದರೆ ಮಿಠಾಯಿ. ಅವನೆಂದರೆ ಬಲೂನು. ಅವಳು ಮೋಞಿಯವರ ಅಂಗಡಿಗೆ ಮನೆಸಾಮಾನಿಗಂತ ಹೋಗಲಾರಂಭಿಸಿದ್ದು ಎಂಟನೇ ಕ್ಲಾಸಿರಬೇಕಾದರೆ. ಅಬೂಬಕರ್ ಅಂಗಡಿ ಕೌಂಟರಲ್ಲಿದ್ದರೆ ಅವಳಿಗೊಂಥರಾ ಖುಷಿ. ಅವನು ಇರುವ ಹೊತ್ತು ನೋಡಿಯೇ ಅವಳು ಅಂಗಡಿಗೆ ಹೋಗುತ್ತಿದ್ದುದೂ ಇದೆ. ಹಾಗೆ ಹೋದಾಗ ಮನೆ ಸಾಮಾನು ಜತೆ ಅವಳಿಗಿಷ್ಟದ ಮಿಠಾಯಿ ನಾಕು ಬೇಕಂತ ಕೇಳಿದರೆ ಅವನು ಆರು ಹಾಕಿರುತ್ತಿದ್ದ. ಅವಳಿಗೆ ಬುಗ್ಗೆಯೆಂದರೆ ಇಷ್ಟ ಅಂತ ಅವನಿಗೆ ಅದು ಹೇಗೆ ಗೊತ್ತಾಯ್ತೋ, ಒಂದೊಂದು ಸಲ ಬಲೂನು ಕೂಡ ಹಾಕಿರುತ್ತಿದ್ದ.
ಶ್ರೀ ಡಿ. ಎನ್. ಬರೆದ ಈ ಭಾನುವಾರದ ಕತೆ “ಬಲೂನು”
ನವೀನ ಗಣಪತಿ ಬರೆದ ಈ ಭಾನುವಾರದ ಕತೆ
ಮಧ್ಯಾಹ್ನ ಒಂದು ಘಂಟೆಗೇ ತಾನು ಮನೆಯಲ್ಲಿ ಮಾಡಬಹುದಾದ ಎಲ್ಲ ಕೆಲಸಗಳೂ ಮುಗಿದು ಮತ್ತೆಲ್ಲ ಮನಸ್ಸಿಗೆ ಕಿರಿಕಿರಿಯಾಗ ಹತ್ತಿತ್ತು. ನಾಲ್ಕು ದಿನ ದಾವಣಗೆರೆಗೆ ಹೋಗಿ ಮಗಳೊಟ್ಟಿಗೆ ಇದ್ದು ಬರೋಣವೆನಿಸುತ್ತಿತ್ತು. ಆದರೆ ಶಂಭಣ್ಣನನ್ನು ಬಿಟ್ಟು ಎಲ್ಲಿಯೂ ಹೋಗುವಂತಿರಲಿಲ್ಲ. ಮಗಳೂ ವಾರ ವಾರ ಬರುವವಳಲ್ಲ. ಅವಳಿಗೆ ಭಾನುವಾರ ರಜಾದಿನಗಳು ಇದ್ದಾಗಲೇ ಜೋರು ವ್ಯಾಪಾರ. ಇನ್ನು ಆಚೀಚೆ ಎರಡು ಹೆಂಗಸರೊಟ್ಟಿಗೆ ಹರಟೆ – ಮಾತು – ಒಡನಾಟ ಮಾಡೋಣವೆಂದರೆ, ಒಬ್ಬರ ವ್ಯವಹಾರವಾದರೂ ಚೊಕ್ಕಟವಾಗಿದೆಯೇ?
ನವೀನ ಗಣಪತಿ ಬರೆದ ಈ ಭಾನುವಾರದ ಕತೆ “ಧನಲಕ್ಷ್ಮಿ”
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಬರೆದ ಕತೆ
ಮಕ್ಕಳೆಲ್ಲ ಬಾಕಿಮಾರು ಗದ್ದೆಯತ್ತ ನಡೆದುಕೊಂಡು ಹೋದಾಗ ಅವಿನಾಶನಿಗೆ ಅಯ್ಯಪ್ಪ ಎನಿಸಿತು. ಮಕ್ಕಳು ಅಂಗಳದಲ್ಲಿ ಕ್ರಿಕೆಟ್ ಆಡಲು ಶುರು ಮಾಡಿದರೆ ತಾನು ಅಲ್ಲಿಂದ ಏಳಬೇಕಾಗುತ್ತದೆಂಬ ಆತಂಕದಲ್ಲಿ ಅದುವರೆಗೂ ಅವನಿದ್ದ. ಮಕ್ಕಳು ಆಡಿದರೆ ಆಡಬಾರದೆಂದು ಹೇಳಲು ಚಂದ್ರಕ್ಕನಿಗೂ ಧೈರ್ಯವಿಲ್ಲ. ಅಂಗಳದಲ್ಲಿ ಕ್ರಿಕೆಟ್ ಆಡಿದರೆ ಹಟ್ಟಿ ಕೊಟ್ಟಿಗೆಯ ಹಂಚುಗಳು, ದಂಡೆಯಲ್ಲಿಟ್ಟ ಚೊಂಬು, ಕೊಡಪಾನಗಳು, ಪ್ಲಾಸ್ಟಿಕ್ ಬಾಲ್ದಿಗಳು ಚೆಂಡಿನ ಪೆಟ್ಟು ತಿಂದು ಅಲ್ಲೋಲಕಲ್ಲೋಲ ಆಗುತ್ತದೆ. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಬರೆದ ಕಥೆ
ಡಾ. ಮಲರ್ ವಿಳಿ ಅನುವಾದಿಸಿದ ಕತೆ “ಸ್ವಲ್ಪ ಹೊತ್ತು ಮನುಷ್ಯನಾಗಿದ್ದವನು”
ತಲೆಯನ್ನು ಸ್ವಲ್ಪ ಮೇಲಕ್ಕೆ ಎತ್ತಿ ಹಿಡಿದು ಸರವನ್ನು ಬಿಚ್ಚಿದನು. ಅರಿಶಿನ ದಾರವನ್ನು ಮಾತ್ರ ಹಾಗೇ ಬಿಟ್ಟುಬಿಟ್ಟು ಬಂಗಾರದ ತಾಳಿ, ಕಾಸನ್ನು ಸೆಳೆದು ತೆಗೆದುಕೊಂಡನು. ಮೂಗುತಿಯನ್ನು ಬಿಚ್ಚಲು ನೋಡಿದ ತಿರುಪು ಎಂಬ ಸೂಕ್ಷ್ಮವನ್ನು ಅಕ್ಕಸಾಲಿಗನು ಒಳಗೆ ಇಟ್ಟಿದ್ದಾನೆ. ಬೆರಳ ತೂರಿಸಿ ಎಷ್ಟು ಪ್ರಯತ್ನಿಸಿದರೂ ಬಿಚ್ಚಲಾಗಲಿಲ್ಲ. ಕಾಡೈಯನ್ ತಾಳ್ಮೆಗೆಟ್ಟನು. ಮೂಗುತಿ ಮುಖ್ಯವೇ ಹೊರತು ಮೂಗು ಯಾತಕ್ಕೆ ಹೆಣಕ್ಕೆ? ಒಂದು ಬಾರಿ ಎಳೆದನು. ಡಾ. ಮಲರ್ ವಿಳಿ ಅನುವಾದಿಸಿದ ತಮಿಳಿನ ಕಥೆಗಾರ ಡಾ. ವೈರಮುತ್ತು ಬರೆದ “ಸ್ವಲ್ಪ ಹೊತ್ತು ಮನುಷ್ಯನಾಗಿದ್ದವನು” ಕತೆ, ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಜಾಹ್ನವಿ ಬಿ.ಟಿ. ಬರೆದ ಕತೆ
ಈ ಮನು ಹಾಗೇನೆ ತಲೆಗೇನಾದ್ರೂ ಬಂತಂದ್ರೇ ಪಟ್ಟು ಹಿಡಿದು ಮಾಡದೆ ಬಿಡೋನಲ್ಲ. ಅಷ್ಟೇ ಜಲ್ದಿನೂ ಯಾವಾಗ್ಲೂ. ಅವನು ಹೋದಲ್ಲೆಲ್ಲಾ ನಗುವಿನ ಬುಗ್ಗೆ. ಅವನಿದ್ದಲ್ಲೆಲ್ಲಾ ಗದ್ದಲ, ಖುಷಿ, ಸಂಭ್ರಮ ಯಾವತ್ತೂ. ಸಾಮಾನ್ಯ ನಾವಿಬ್ರೂ ಬೈಕ್ನಲ್ಲಿ ಹೊರಟರೆ ತನಗಿಷ್ಟವಾದ ಸಿನಿಮಾದ್ದೋ ಇಲ್ಲ ನಾಟಕದ್ದೋ ಡೈಲಾಗ್ಸ್ ಹೇಳ್ತಿರ್ತಾನೆ. ಇಲ್ಲಾಂದ್ರೆ ಆಯಾ ಸಿಚುಯೇಷನ್ಗೆ ತಕ್ಕನಾಗಿ ಹಾಡ್ತಾ ಇರ್ತಾನೆ, ಅದೂ ಇಲ್ಲ ಅಂದ್ರೆ ದಾರೀಲಿ ಹೋಗೋ ಬರೋರ್ನೆಲ್ಲಾ ಕಾಡೋಕೆ ಶುರು ಮಾಡ್ತಾನೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಜಾಹ್ನವಿ ಬಿ.ಟಿ. ಬರೆದ ಕಥೆ “ನೆರೆ ಹಾವಳಿ” ನಿಮ್ಮ ಈ ಭಾನುವಾರದ ಓದಿಗೆ









