Advertisement

ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಗುರುರಾಜ್ ಸನಿಲ್ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಗುರುರಾಜ್ ಸನಿಲ್ ಬರೆದ ಕತೆ

ಅಷ್ಟು ಕೇಳಿದ್ದೇ ತಡ, ಇಬ್ಬರ ಮುಖಗಳೂ ಕಳೆಗುಂದಿದುವು. ವಿಶ್ವನನ್ನು ತಿರಸ್ಕಾರದಿಂದ ನೋಡಿ ಕೋಪದಿಂದ ಮುಖ ಗಂಟಿಕ್ಕಿದ ಮುಖ್ಯಸ್ಥ ರಪ್ಪನೇ ತಿರುಗಿ ಯಂತ್ರದತ್ತ ನಡೆದರೆ, ಸ್ಥಳಪುರಾಣ ಓದಿದವನೂ ಕೆಂಪಗಾಗಿ ‘ಓ ಅಲ್ಲಿ ಕಾಣಿಸ್ತಿದೆಯಲ್ಲಾ ಹೊಳೆ… ಅದರಾಚೆಗಿಂದು ರಿಜರ್ವ್ ಫಾರೆಸ್ಟ್ ಇವ್ರೇ! ಈ ಜಾಗವೂ ಅದ್ರೊಳಗೆ ಬರುತ್ತೆ ಹೌದಾದ್ರೂ ಆ ಕಾನೂನು ಬರೋ ಎಷ್ಟೋ ಮೊದ್ಲಿಂದ್ಲೂ ಈ ದೇವಸ್ಥಾನ ಇಲ್ಲಿತ್ತೆಂಬುದು ನಿಮ್ಗೆ ಗೊತ್ತಿತ್ತಾ…?
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಗುರುರಾಜ್ ಸನಿಲ್ ಬರೆದ “ಗುಡಿ ಮತ್ತು ಬಂಡೆ” ಕತೆ

read more
ಸಚೇತನ ಭಟ್‌ ಅನುವಾದಿಸಿದ ಯಿ ಯುನ್ ಲಿ ಕತೆ “ಗಾಯ”

ಸಚೇತನ ಭಟ್‌ ಅನುವಾದಿಸಿದ ಯಿ ಯುನ್ ಲಿ ಕತೆ “ಗಾಯ”

ಅವಳ ತಲೆಯಲ್ಲಿ ಯಾವತ್ತೋ ಓದಿದ್ದ “ವುಮನ್ ಇನ್ ಲವ್” ಪುಸ್ತಕದ ಸಾಲುಗಳು ಅಚ್ಚಳಿಯದಂತೆ ಕೂತಿದ್ದವು. ಪುಸ್ತಕದಲ್ಲಿ ಹುಡುಗಿಯೊಬ್ಬಳು ಯುದ್ಧಕ್ಕೆ ಹೊರಟಿರುವ ತನ್ನ ಪ್ರಿಯಕರನ ಜೊತೆಗೆ ಮಲಗುವದನ್ನು ನಿರಾಕರಿಸುತ್ತಾಳೆ. ಮುಂದೆ ಯುದ್ಧದಲ್ಲಿ ಅವನು ಸಾವನ್ನು ಪ್ರತಿ ದಿನ ಎದುರು ನೋಡುತ್ತಿರವಾಗ ಹಳೆಯ ನೆನಪಿನಿಂದಾಗಿ ದೇಹದ ಹಸಿವೆಯನ್ನು ತೀರಿಸಿಕೊಳ್ಳುವದು ಮಾತ್ರ ಅವನ ಗುರಿಯಾಗಿಬಿಟ್ಟರೆ ಎನ್ನುವ ಭಯ ಅವಳನ್ನು ಕಾಡಿತ್ತು.
ಸಚೇತನ ಭಟ್‌ ಅನುವಾದಿಸಿದ ಚೈನಾ ಮೂಲದ ಕಥೆಗಾರ್ತಿ ಯಿ ಯುನ್ ಲಿ ಕತೆ “ಗಾಯ”

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಟಿ.ಎಸ್.‌ ಗೊರವರ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಟಿ.ಎಸ್.‌ ಗೊರವರ ಬರೆದ ಕತೆ

ಪದ್ಮಾಳ ಅತ್ತೆ, ಮಾವನಿಗೂ ಚಿಂತೆ ಮನೆ ಮಾಡಿತು. ತಮ್ಮ ವಂಶ ಬೆಳೆಸುವ ಕುಡಿ ಪಡೆಯಲು ಅದೇನು ಮಾಡಬೇಕೋ ತಿಳಿಯದಾಯಿತು. ದೇವರಾಜನಿಗೆ ಮತ್ತೊಂದು ಮದುವೆ ಮಾಡಿದರೆ ಹ್ಯಾಗೆ ಎನ್ನುವ ಆಲೋಚನೆ ಅವರಲ್ಲಿ ಮೊಳೆಯಿತು. ಕೆಲ ಸಂಬಂಧಿಕರು ಮದುವೆ ಮಾಡುವುದೇ ಸರಿಯೆಂದು ಸಲಹೆ ನೀಡಿದರು. ಇದು ಪದ್ಮಾಳ ಕಿವಿ ತಲುಪಿ ವಿಚಿತ್ರ ಸಂಕಟದಲ್ಲಿ ಮುಳುಗಿದಳು. ದಿನಪೂರ್ತಿ ಮಾತಿಲ್ಲದೆ ಚಿಂತೆಯಲ್ಲೇ ಮುಳುಗಿದಳು. ಲೋಕದ ಪರಿವೆಯನ್ನೇ ಮರೆಯತೊಡಗಿದಳು. ಟಿ.ಎಸ್. ಗೊರವರ ಬರೆದ ಕತೆ “ಕತ್ತಲಿನಾಚೆ”

read more
ವಿಜಯಾ ಮೋಹನ್‌ ಬರೆದ ಈ ಭಾನುವಾರದ ಕತೆ

ವಿಜಯಾ ಮೋಹನ್‌ ಬರೆದ ಈ ಭಾನುವಾರದ ಕತೆ

ಸ್ವಂತ ಅವಳ ಮನೆದೇವ್ರು ಮಲ್ಲಮ್ಮನ ಪೂಜೆಯೊಳಗೆ, ಕಾರ್ತಿಕ್‌ಮಾಸದಲ್ಲಿ ನಡೀತಿದ್ದ ತಿಂಗಳ ಪೂಜೇಲಿ ಸಂಜೆಯೊಳಗೆ ಹಾಡೇಳಲು ಕುಂತುಕೊಳ್ಳುತ್ತಿದ್ದ ಸಂಕಮ್ಮ ಪೂಜೆ ಮುಗಿಯುವ ತನಕವು ಅವಳ ಗೆಳತಿಯರ ಜೊತೆ, ಶೃತಿ ಸೇರಸ್‌ಕೊಂಡು ಹೇಳ್‌ತಿದ್ದವಳನ್ನ, ಅಮ್ಮ ಸಾಕು ನಡೀರ್ರೆ ನಿದ್ದೆ ಬರ್‍ತೈತೆ ಅಂದ್ರು ನಿಲ್ಲಸ್ದಂಗೆ ಹೇಳಿ ಹೇಳಿ ದಣಿದು ಬಂದು ಮಲಗುತ್ತಿದ್ದವಳ ಹಾಡುಗಳನ್ನ ಈಗೀಗ ಅಷ್ಟಾಗಿ ಯಾರೂ ಕೇಳಿಸಿಕೊಳ್ಳದಾದರು…
ವಿಜಯಾ ಮೋಹನ್‌ ಬರೆದ ಹೊಸ ಕತೆ “ಹಾಡು” ಈ ಭಾನುವಾರದ ಓದಿಗೆ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಗಿರಿಜಾ ಶಾಸ್ತ್ರಿ ಕತೆ: ನಕ್ಕ ನಗು

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಗಿರಿಜಾ ಶಾಸ್ತ್ರಿ ಕತೆ: ನಕ್ಕ ನಗು

ಅವಳು ಹೀಗೆ ನಗಲು ಪ್ರಾರಂಬಿಸಿದಳೆಂದರೆ ಉಳಿದವರಿಗೆ ಗಾಬರಿಯಾಗುತ್ತಿತ್ತು. ನಕ್ಕು ಸುಸ್ತಾಗಿ ಕಣ್ಣ ತುದಿಯಿಂದ ಹರಿವ ನೀರನ್ನು ಸೆರಗಿನಿಂದ ಒರೆಸಿಕೊಳ್ಳುತ್ತಾ, ಮುಖ ಕೆಂಪಗೆ ಮಾಡಿಕೊಂಡು, ನೂರರ ವೇಗದಲ್ಲಿ ಓಡುತ್ತಿರುವ ಗಾಡಿ ಸಡನ್ ಬ್ರೇಕ್ ಹಾಕಿದಂತೆ ಸುಮ್ಮನಾಗುತ್ತಿದ್ದಳು. ನಲವತ್ತೈದು ವರುಷದ ಅವಳ ದಾಂಪತ್ಯಕ್ಕೆ ವ್ಯಾಖ್ಯೆ ಬರೆದಂತೆ ಬಂಡೆಕಲ್ಲಿನಂತೆ ಕುಳಿತು ಬಿಡುತ್ತಿದ್ದಳು. ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಗಿರಿಜಾ ಶಾಸ್ತ್ರಿ ಬರೆದ ಕತೆ ‘ನಕ್ಕ ನಗು!

read more
ಎ.ಬಿ. ಪಚ್ಚು ಬರೆದ ಈ ಭಾನುವಾರದ ಕತೆ

ಎ.ಬಿ. ಪಚ್ಚು ಬರೆದ ಈ ಭಾನುವಾರದ ಕತೆ

ನಾನು ಯಾವತ್ತೂ ಅವಳು ಈ ರೀತಿಯಾಗಿ ಕನಸಿನಲ್ಲಿ ಮಾತಾಡಿದ್ದು ನೋಡಿದ್ದೇ ಇಲ್ಲ. ಹೆಚ್ಚು ಕಡಿಮೆ ನನಗೆ ಎಪ್ಪತ್ತರ ವಯಸ್ಸು. ಮದುವೆಯಾಗಿ ಐವತ್ತು ಸಂವತ್ಸರಗಳೇ ನಮ್ಮ ನಡುವೆ ಹಾಗೇ ಕಳೆದು ಹೋಗಿತ್ತು. ಅಷ್ಟೂ ವರ್ಷಗಳಲ್ಲಿ ಜಾನಕಿ ಕನಸಿನಲ್ಲಿ ಮಾತಾಡಿದ್ದು, ಉಹೂಂ.. ನಾನಂತು ಒಮ್ಮೆಯೂ ಕೇಳಿಯೂ ಇಲ್ಲ, ನೋಡಿಯೂ ಇಲ್ಲ. ಆದರೂ ಆ ರಾತ್ರಿ ಮೊದಲ ಬಾರಿಗೆ ಜಾನಕಿ ಕನಸಲ್ಲಿ ಮಾತಾಡಿದ್ದಳು!!
ಎ.ಬಿ. ಪಚ್ಚು ಬರೆದ ಕಥೆ “ಪೌರ್ಣಮಿ” ನಿಮ್ಮ ಈ ಭಾನುವಾರದ ಓದಿಗೆ

read more
ನಾನು ಮೆಚ್ಚಿದ ನನ್ನ ಕಥಾ ಸರಣಿ: ಸಂತೆಬೆನ್ನೂರು ಫೈಜ್ನಟ್ರಾಜ್ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿ: ಸಂತೆಬೆನ್ನೂರು ಫೈಜ್ನಟ್ರಾಜ್ ಕತೆ

ಜಮೀಲಾಗೆ ಯಾಕೋ ಮಸೀದಿ ದಾರಿಯೇ ನೋಡುವಂತಾಗಿತ್ತು. ಮಗ ಮುನೀರ ರೋಜಾ ಬಿಡಲು ಮಸೀದಿಗೆ ಹೋಗಿದ್ದ. ಇಡೀ ದಿನ ಉಪವಾಸವಿದ್ದು ನಾಲ್ಕನೆಯ ತರಗತಿ ಓದ್ತಿದ್ದ ಮುನೀರನಿಗೆ ಅಪ್ಪ ಹಸೇನ್ ಎಂದರೆ ಪಂಚಪ್ರಾಣ. ಮದುವೆಯಾದ ವರುಷಕ್ಕೇ ಝಿಕ್ರಿಯಾಸಾಬ್ ತೋಟ ಬಿಟ್ಟು ಐಸ್ ಮಾರ್ತಾ ಹೊಸ ಜೀವನ ಶುರು ಮಾಡಿದ್ದ ಹಸೇನ್.
ಸಂತೆಬೆನ್ನೂರು ಫೈಜ್ನಟ್ರಾಜ್ ಬರೆದ ಕತೆ ‘ಅಲ್ಲಾ ದೇವರು, ಅನ್ನ ದೇವರು!’

read more
ಪವನ್‌ ಕುಮಾರ್‌ ಆರ್. ಬರೆದ ಈ ಭಾನುವಾರದ ಕತೆ

ಪವನ್‌ ಕುಮಾರ್‌ ಆರ್. ಬರೆದ ಈ ಭಾನುವಾರದ ಕತೆ

ಅಂಥ ಮಾತುಗಾರನಲ್ಲದೆ ಹೋದರು ವಸೀಬ ಶುದ್ಧ ವ್ಯವಹಾರಸ್ಥನಾಗಿದ್ದ. ಅವನ ಬಳಿ ಬರುವ ಗಿರಾಕಿಗಳೊಂದಿಗೆ ಹೇಗೆ ವರ್ತಿಸಿ ವಿಶ್ವಾಸಗಳಿಸಿಕೊಳ್ಳಬೇಕೆಂಬುದ ಸಾಕಷ್ಟು ಪ್ರಯತ್ನ ಪೂರ್ವಕವಾಗಿ ರೂಢಿಸಿಕೊಂಡಿದ್ದ. ಬೆಳಿಗ್ಗೆ 5ರ ಜಾವಕ್ಕೆ ಇವನ ಪೆಟ್ಟಿ ಅಂಗಡಿ ತನ್ನ ಜೋಡಿರೆಕ್ಕೆಯಂತ ಬಾಗಿಲುಗಳ ಬಿಡಿಸಿಕೊಳ್ಳುತ್ತಿತ್ತು. ಅಲ್ಲಿಗೆ ಅಂದಿನ ದಿನಪತ್ರಿಕೆಗಳೆಲ್ಲ ಬಂಡಲ್‌ನಲ್ಲಿ ಬಂದು ಬೀಳುತ್ತಿದ್ದವು. ಆರ್. ಪವನ್‌ ಕುಮಾರ್‌ ಬರೆದ ಈ ಭಾನುವಾರ್ದ ಕತೆ “ವಸೀಬ”

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ದೇವದಾಸ ಕಳಸದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ದೇವದಾಸ ಕಳಸದ ಕತೆ

ಇಲ್ಲಿ ದಡೂತೆಪ್ಪನ ಶೆಡ್ಡಿನ ಸಂಸಾರ ಮೂರ್ನಾಲ್ಕು ವರ್ಷ ನಿರಾಯಾಸವಾಗಿ ಸಾಗಿತು. ಕೂಡು ಸಂಸಾರದಿಂದ ಸಂಪಾದನೆಗೆ ಕುಂದೆಂದು ಭಾವಿಸಿದ್ದ ಚನ್ನಪ್ಪ ಪಕ್ಕದ ಬಡಾವಣೆಯಲ್ಲಿ ಬದುಕು ಕಟ್ಟಿಕೊಂಡಿದ್ದ. ವಾಚಮನ್ಕಿಯೊಂದಿಗೆ ಕಟ್ಟಡದ ಅನ್ಯ ಕೆಲಸಗಳಿಂದಲೂ ಗಳಿಕೆ ಹೆಚ್ಚಿಸಿಕೊಂಡಿದ್ದ. ಅವನಿಗೆ ಅಂಥ ಯಾವ ಚಟ ಇರಲಿಲ್ಲವೆಂದರೂ ರಾತ್ರಿ ಮಾತ್ರ ಅರವತ್ತು ಎಮ್ಮೆಲ್ ಬೇಕೇಬೇಕಿತ್ತು. ಆತನ ಅಕ್ಕ ಹನುಮವ್ವನೂ ಕಟ್ಟಡ ಕೆಲಸದಲ್ಲಿ ದುಡಿಯುತ್ತಿದ್ದಳು. ಡಾ. ದೇವದಾಸ ಕಳಸದ ಬರೆದ ಕತೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ