Advertisement

ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ

ಮಕ್ಕಳೆಲ್ಲ ಬಾಕಿಮಾರು ಗದ್ದೆಯತ್ತ ನಡೆದುಕೊಂಡು ಹೋದಾಗ ಅವಿನಾಶನಿಗೆ ಅಯ್ಯಪ್ಪ ಎನಿಸಿತು. ಮಕ್ಕಳು ಅಂಗಳದಲ್ಲಿ ಕ್ರಿಕೆಟ್ ಆಡಲು ಶುರು ಮಾಡಿದರೆ ತಾನು ಅಲ್ಲಿಂದ ಏಳಬೇಕಾಗುತ್ತದೆಂಬ ಆತಂಕದಲ್ಲಿ ಅದುವರೆಗೂ ಅವನಿದ್ದ. ಮಕ್ಕಳು ಆಡಿದರೆ ಆಡಬಾರದೆಂದು ಹೇಳಲು ಚಂದ್ರಕ್ಕನಿಗೂ ಧೈರ್ಯವಿಲ್ಲ. ಅಂಗಳದಲ್ಲಿ ಕ್ರಿಕೆಟ್ ಆಡಿದರೆ ಹಟ್ಟಿ ಕೊಟ್ಟಿಗೆಯ ಹಂಚುಗಳು, ದಂಡೆಯಲ್ಲಿಟ್ಟ ಚೊಂಬು, ಕೊಡಪಾನಗಳು, ಪ್ಲಾಸ್ಟಿಕ್ ಬಾಲ್ದಿಗಳು ಚೆಂಡಿನ ಪೆಟ್ಟು ತಿಂದು ಅಲ್ಲೋಲಕಲ್ಲೋಲ ಆಗುತ್ತದೆ. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಬರೆದ ಕಥೆ

read more
ಡಾ. ಮಲರ್‌ ವಿಳಿ ಅನುವಾದಿಸಿದ ಕತೆ “ಸ್ವಲ್ಪ ಹೊತ್ತು ಮನುಷ್ಯನಾಗಿದ್ದವನು”

ಡಾ. ಮಲರ್‌ ವಿಳಿ ಅನುವಾದಿಸಿದ ಕತೆ “ಸ್ವಲ್ಪ ಹೊತ್ತು ಮನುಷ್ಯನಾಗಿದ್ದವನು”

ತಲೆಯನ್ನು ಸ್ವಲ್ಪ ಮೇಲಕ್ಕೆ ಎತ್ತಿ ಹಿಡಿದು ಸರವನ್ನು ಬಿಚ್ಚಿದನು. ಅರಿಶಿನ ದಾರವನ್ನು ಮಾತ್ರ ಹಾಗೇ ಬಿಟ್ಟುಬಿಟ್ಟು ಬಂಗಾರದ ತಾಳಿ, ಕಾಸನ್ನು ಸೆಳೆದು ತೆಗೆದುಕೊಂಡನು. ಮೂಗುತಿಯನ್ನು ಬಿಚ್ಚಲು ನೋಡಿದ ತಿರುಪು ಎಂಬ ಸೂಕ್ಷ್ಮವನ್ನು ಅಕ್ಕಸಾಲಿಗನು ಒಳಗೆ ಇಟ್ಟಿದ್ದಾನೆ. ಬೆರಳ ತೂರಿಸಿ ಎಷ್ಟು ಪ್ರಯತ್ನಿಸಿದರೂ ಬಿಚ್ಚಲಾಗಲಿಲ್ಲ. ಕಾಡೈಯನ್ ತಾಳ್ಮೆಗೆಟ್ಟನು. ಮೂಗುತಿ ಮುಖ್ಯವೇ ಹೊರತು ಮೂಗು ಯಾತಕ್ಕೆ ಹೆಣಕ್ಕೆ? ಒಂದು ಬಾರಿ ಎಳೆದನು. ಡಾ. ಮಲರ್‌ ವಿಳಿ ಅನುವಾದಿಸಿದ ತಮಿಳಿನ ಕಥೆಗಾರ ಡಾ. ವೈರಮುತ್ತು ಬರೆದ “ಸ್ವಲ್ಪ ಹೊತ್ತು ಮನುಷ್ಯನಾಗಿದ್ದವನು” ಕತೆ, ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಜಾಹ್ನವಿ ಬಿ.ಟಿ. ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಜಾಹ್ನವಿ ಬಿ.ಟಿ. ಬರೆದ ಕತೆ

ಈ ಮನು ಹಾಗೇನೆ ತಲೆಗೇನಾದ್ರೂ ಬಂತಂದ್ರೇ ಪಟ್ಟು ಹಿಡಿದು ಮಾಡದೆ ಬಿಡೋನಲ್ಲ. ಅಷ್ಟೇ ಜಲ್ದಿನೂ ಯಾವಾಗ್ಲೂ. ಅವನು ಹೋದಲ್ಲೆಲ್ಲಾ ನಗುವಿನ ಬುಗ್ಗೆ. ಅವನಿದ್ದಲ್ಲೆಲ್ಲಾ ಗದ್ದಲ, ಖುಷಿ, ಸಂಭ್ರಮ ಯಾವತ್ತೂ. ಸಾಮಾನ್ಯ ನಾವಿಬ್ರೂ ಬೈಕ್ನಲ್ಲಿ ಹೊರಟರೆ ತನಗಿಷ್ಟವಾದ ಸಿನಿಮಾದ್ದೋ ಇಲ್ಲ ನಾಟಕದ್ದೋ ಡೈಲಾಗ್ಸ್ ಹೇಳ್ತಿರ್ತಾನೆ. ಇಲ್ಲಾಂದ್ರೆ ಆಯಾ ಸಿಚುಯೇಷನ್‌ಗೆ ತಕ್ಕನಾಗಿ ಹಾಡ್ತಾ ಇರ್ತಾನೆ, ಅದೂ ಇಲ್ಲ ಅಂದ್ರೆ ದಾರೀಲಿ ಹೋಗೋ ಬರೋರ್ನೆಲ್ಲಾ ಕಾಡೋಕೆ ಶುರು ಮಾಡ್ತಾನೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಜಾಹ್ನವಿ ಬಿ.ಟಿ. ಬರೆದ ಕಥೆ “ನೆರೆ ಹಾವಳಿ” ನಿಮ್ಮ ಈ ಭಾನುವಾರದ ಓದಿಗೆ

read more
ಮಂಜಯ್ಯ ದೇವರಮನಿ ಬರೆದ ಈ ಭಾನುವಾರದ ಕತೆ

ಮಂಜಯ್ಯ ದೇವರಮನಿ ಬರೆದ ಈ ಭಾನುವಾರದ ಕತೆ

ಶಾರವ್ವನಿಗೆ ಶಿವರುದ್ರಯ್ಯನ ಇಂಥ ನಡವಳಿಕೆ ವಿಚಿತ್ರವೆನಿಸಿತು. ದೇವರ ಹೊಲ ತನ್ನ ಗಂಡನಿಗೆ ಕೊಡಿಸ್ತೀನಿ ಅಂತಾ ಪೂಜಾರಪ್ಪ ಹೇಳಿದ್ದು ತನಗೆ ಗೊತ್ತಿತ್ತು. ಸಿಗಬೇಕು ಎಂಬ ವಿಚಾರದಲ್ಲಿ ಒಂದು ಒಪ್ಪಂದವಾಗಿತ್ತು ಎನ್ನುವುದು ಪೂಜಾರಪ್ಪ ಮತ್ತು ತನಗೆ ಮಾತ್ರ ಗೊತ್ತಿದ್ದ ವಿಷಯವಾಗಿತ್ತು. ಆದರೆ ಶಿವರುದ್ರಯ್ಯ ಗುಡಿ ಪೂಜಾರಿ ಕ್ರಿಷ್ಣಪ್ಪನ ಮುಖಾಂತರ ಹೇಳಿಸಿ ತನ್ನ ಉದ್ದೇಶ ಸಾಧನೆಗೆ ಮುಂದಾಗಿದ್ದ. ಕ್ರಿಷ್ಣಪ್ಪ ಉದ್ದೇಶದ ಮೂಲವನ್ನು ಪೂರ್ತಿಯಾಗಿ ಹೇಳದೆ ಪರವಾಗಿ ಎನ್ನುವಂತೆ ಹೇಳಿ ಶಾರವ್ವನನ್ನು ಒಪ್ಪಿಸಿದ್ದ.
ಮಂಜಯ್ಯ ದೇವರಮನಿ, ಸಂಗಾಪುರ ಬರೆದ ಕತೆ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎನ್. ಜಗದೀಶ್ ಕೊಪ್ಪ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎನ್. ಜಗದೀಶ್ ಕೊಪ್ಪ ಬರೆದ ಕತೆ

ಹಿಂದೆ ಬಂದರೆ ಒದೆಯದ, ಮುಂದೆ ಬಂದರೆ ಹಾಯದ ಹಸುವಿನಂತಹ ಗುಣದ ಪುಗಸಟ್ಟೆ ಪುಟ್ಟರಾಜನ ಬಗ್ಗೆ ಊರಿನ ಜನರಿಗೆಲ್ಲಾ ಅಪಾರ ಪ್ರೀತಿ. ಏನೇ ಕೆಲಸ ಹೇಳಿದರೂ ಸಹ ಇಲ್ಲವೆನ್ನದೆ ಮಾಡುತ್ತಿದ್ದ ಪುಟ್ಟರಾಜ, ನೆರೆ ಹೊರೆಯ ಹಳ್ಳಿಗಳಿಗೆ ಹೋಗಿ ತೆಂಗಿನ ಮರ ಹತ್ತಿ ಕಾಯಿ ಕೀಳುವುದು, ಸುಲಿಯುವುದು, ಕಳೆ ಕೀಳುವುದು ಹೀಗೆ ನೂರೆಂಟು ಕೆಲಸಗಳನ್ನು ಪ್ರೀತಿಯಿಂದ ಮಾಡಿ ಬರುತ್ತಿದ್ದ. ಅವರು ಉಣ್ಣಲು ಅಥವಾ ಕುಡಿಯಲು ಏನಾದರೂ ಕೊಟ್ಟರೆ ಅದೇ ಅವನ ಪಾಲಿಗೆ ಪ್ರಸಾದವಾಗಿತ್ತು. ಡಾ. ಎನ್. ಜಗದೀಶ್ ಕೊಪ್ಪ ಬರೆದ ಕಥೆ

read more
ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ

ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ

“ಆ ಮುದ್ಕ ಸಂಕ್ರಪ್ಪ ದೇವಮ್ಮಕ್ಕನ ಗಂಡನೇ ಅಲ್ವಂತೆ. ಅವನೂರಾಗೆ ಬ್ಯಾರೆ ಸಂಸಾರ ಅದೆ. ಈವಮ್ಮಂಗೂ ಮಕ್ಕಳು ಮರಿ ಅವೆ. ಈ ವಯಸ್ನಾಗೆ ಈವಪ್ಪನ ಹಿಂದೆ ಓಡ್‌ಬಂದದೆ. ಸಂಕ್ರಪ್ಪಂಗೆ ರಿಟೈರ್ ಆಯ್ತಂತೆ. ಅದಕ್ಕೇ ಈಗ ಆವಯ್ಯನ್ನ ಬಿಟ್ಟು ಇನ್ನೆತ್ಲಾಗೋ ಹೋಗದೆ; ಘಾಟಿ ಹೆಂಗ್ಸು’ ಓನರ್ ಆಂಟಿಯಂತೂ ತಿಂಗಳೊಪ್ಪತ್ತು ಹೊಸರಾಗ, ಹಳೆರಾಗ ಎಲ್ಲವನ್ನೂ ಬೆರೆಸಿ ಹಾಡಿದರು. ಅಷ್ಟೆಲ್ಲ ಅಕ್ಕರೆಯ ಒರತೆಯಾಗಿರುವ ದೇವಮ್ಮಕ್ಕನ ನಿಜ ಬಣ್ಣ ಹೀಗಿರಬಹುದಾ ಎಂಬ ಅಚ್ಚರಿ ಮಲ್ಲಿಕಾಳಿಗೆ. ವಿಜಯಶ್ರೀ ಹಾಲಾಡಿ ಬರೆದ ಕತೆ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಹನಮಂತ ಹಾಲಿಗೇರಿ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಹನಮಂತ ಹಾಲಿಗೇರಿ ಬರೆದ ಕತೆ

ಅವತ್ತೆ ಹುಚ್ಚರಾಮ ನಿಶ್ಚಯಿಸಿಬಿಟ್ಟ. ಅವ್ವಗೆ ಹೇಳಿ ತಾನು ಹ್ಯಾಂಗಾದರೂ ಮಾಡಿ ಯಾವ ಹೆಂಗ್ಸನ್ನಾದರೂ ಲಗ್ನ ಆಗಿ ಬಿಡಬೇಕು. ನಾಳೆಯೇ ಅವ್ವಳನ್ನು ಕೇಳಿಬಿಡಬೇಕು. ಅವ್ವ ಯಾರನ್ನಾದರೂ ತಂದು ನನಗೆ ಗಂಟು ಹಾಕಿಯೇ ಹಾಕುತ್ತಾಳೆ ಎಂಬ ಭರವಸೆಯೊಂದಿಗೆ ಆತ ಅವತ್ತು ಮಲಗಲು ಪ್ರಯತ್ನಿಸಿದ. ಆದರೆ ಮಲಗಲು ಪ್ರಯತ್ನಿಸಿದ್ದೆ ಬಂತು. ನಿದ್ದೆ ಹತ್ತಿರ ಸುಳಿಯಲಿಲ್ಲ. 
 ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಹನಮಂತ ಹಾಲಿಗೇರಿ ಬರೆದ “ಸಕಲರೋಳು ಲಿಂಗಾತ್ಮಾ ಕಾಣಾ” ಕಥೆ ನಿಮ್ಮ ಈ ಭಾನುವಾರದ ಓದಿಗೆ

read more
ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ವಿಚಾರ, ನಿಲುವುಗಳು, ಆಡಳಿತದ ಅನುಭವ ಇದೆಲ್ಲ ಏನೇ ಇದ್ದರೂ ಶಿವಗಾಮಿ ಹಣದ ವಿಚಾರದಲ್ಲಿ ಶುದ್ಧಹಸ್ತಳಾಗಿಯೇ ಉಳಿದಿದ್ದು, ಹೈ ಕಮಾಂಡ್‌ ತಂತ್ರಗಾರಿಕೆ, ರಾಜಕೀಯ ಪಕ್ಷಗಳು ಕೆಲಸ ಮಾಡುವ ರೀತಿ ನೀತಿಗಳಿಗೆ ಹೊಸಬರಾಗಿದ್ದರು. ಇವಳು ಸೇರಿದ್ದ ಪಕ್ಷದ ರಾಷ್ಟ್ರೀಯ ನಾಯಕಿಗೆ ಶಿವಗಾಮಿಯಷ್ಟು ವಿದ್ಯಾವಂತೆ, ಪ್ರತಿಭಾವಂತೆ ಚುನಾವಣಾ ರಾಜಕೀಯದಲ್ಲೂ ಗೆದ್ದುಬಿಟ್ಟರೆ ಒಂದಲ್ಲ ಒಂದು ದಿನ ತನಗೆ ಪ್ರತಿಸ್ಪರ್ಧಿಯಾಗಬಹುದೆಂಬ ಆತಂಕದಿಂದ ಬೇಕು ಬೇಕೆಂದೇ ಎರಡು ಕ್ಷೇತ್ರಗಳಿಂದ ಚುನಾವಣೆಗೆ ನಿಲ್ಲಿಸಿದಳು.
ಕೆ. ಸತ್ಯನಾರಾಯಣ ಅವರ “ಮನುಷ್ಯರು ಬದಲಾಗುವರೆ” ಕಥಾ ಸಂಕಲನದ “ಶಿವಗಾಮಿ ಬದಲಾದಳೆ?” ಕಥೆ

read more
ಮೋಹನ್‌ ಮಂಜಪ್ಪ ಬರೆದ ಈ ಭಾನುವಾರದ ಕಥೆ

ಮೋಹನ್‌ ಮಂಜಪ್ಪ ಬರೆದ ಈ ಭಾನುವಾರದ ಕಥೆ

ದೂರದ ಕಲ್ಲುಬೆಂಚಿನ ಮೇಲೆ ಕೂತಿದ್ದ ಅಪ್ಪನ ದೃಷ್ಠಿ ಶೂನ್ಯದಿಂದ ಮರಳಿರಲಿಲ್ಲ. ಮನಸ್ಸು ಗತಕಾಲದ ಕಡೆಗೆ ಹೊರಳಿತು. ಇವಳನ್ನು ತುಂಬಾ ಇಷ್ಟಪಟ್ಟು ಕಟ್ಟಿಕೊಂಡಿದ್ದೆ. ಹೊಸದರಲ್ಲೆಲ್ಲಾ ಚೆನ್ನಾಗಿಯೇ ಇತ್ತು, ಅಥವಾ ಬಿಸಿಯಲ್ಲಿ ಗೊತ್ತಾಗಲಿಲ್ಲವೆನೋ!? ಮದುವೆ ಆದ ಆರು ತಿಂಗಳಿಗೆ, ಮಲ್ಲಿಗೆ ಹೂವು ತರಲು ಮರೆತೆನೆಂದು ಮಾಡಿದ ಹಗರಣ ಮನಸ್ಸನ್ನು ತುಂಬಾ ಕದಡಿಬಿಟ್ಟಿತು. ಅಂದಿನಿಂದ ಅವಳೇ ಬೇಡ ಸಾಕು ಎನ್ನುವ ವರೆಗೆ ಫ್ರಿಡ್ಜ್‌ನಲ್ಲಿ ತರಕಾರಿ ಇಲ್ಲದಿದ್ದರೂ, ಮಲ್ಲಿಗೆ ಹೂವು ಮಿಸ್‌ ಆಗದಂತೆ ನೋಡಿಕೊಂಡಿದ್ದು ನನಗಿನ್ನೂ ನೆನಪಿದೆ.
ಮೋಹನ್‌ ಮಂಜಪ್ಪ ಬರೆದ ಕಥೆ “ಹಣೆಬರಹ”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ