Advertisement

ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ದೇವದಾಸ ಕಳಸದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ದೇವದಾಸ ಕಳಸದ ಕತೆ

ಇಲ್ಲಿ ದಡೂತೆಪ್ಪನ ಶೆಡ್ಡಿನ ಸಂಸಾರ ಮೂರ್ನಾಲ್ಕು ವರ್ಷ ನಿರಾಯಾಸವಾಗಿ ಸಾಗಿತು. ಕೂಡು ಸಂಸಾರದಿಂದ ಸಂಪಾದನೆಗೆ ಕುಂದೆಂದು ಭಾವಿಸಿದ್ದ ಚನ್ನಪ್ಪ ಪಕ್ಕದ ಬಡಾವಣೆಯಲ್ಲಿ ಬದುಕು ಕಟ್ಟಿಕೊಂಡಿದ್ದ. ವಾಚಮನ್ಕಿಯೊಂದಿಗೆ ಕಟ್ಟಡದ ಅನ್ಯ ಕೆಲಸಗಳಿಂದಲೂ ಗಳಿಕೆ ಹೆಚ್ಚಿಸಿಕೊಂಡಿದ್ದ. ಅವನಿಗೆ ಅಂಥ ಯಾವ ಚಟ ಇರಲಿಲ್ಲವೆಂದರೂ ರಾತ್ರಿ ಮಾತ್ರ ಅರವತ್ತು ಎಮ್ಮೆಲ್ ಬೇಕೇಬೇಕಿತ್ತು. ಆತನ ಅಕ್ಕ ಹನುಮವ್ವನೂ ಕಟ್ಟಡ ಕೆಲಸದಲ್ಲಿ ದುಡಿಯುತ್ತಿದ್ದಳು. ಡಾ. ದೇವದಾಸ ಕಳಸದ ಬರೆದ ಕತೆ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ದೀಪ್ತಿ ಭದ್ರಾವತಿ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ದೀಪ್ತಿ ಭದ್ರಾವತಿ ಕತೆ

ಅರುಂಧತಿಗೆ ಎದೆಯೊಳಗೆ ಕೊಳ್ಳಿದೆವ್ವ ಓಡಾಡಿದಂತೆ ಭಾಸವಾಯಿತು. ನರ್ಸು ಹಲ್ಲು ಕಚ್ಚಿಕೊಂಡಳಾದರೂ, ಆಯಾ ಮಾತ್ರ ಅದನ್ನು ಸಮರ್ಥಿಸಿಕೊಳ್ಳುವವಳಂತೆ “ಅಯ್ಯಾ ಇರೋದನ್ನ ಏಳುದ್ನಪ್ಪ” ಇವ್ರು ರಾತ್ರಿ ಎಲ್ಲ ಸುಖ ಪಟ್ಕೊಂಡು ಈವಾಗ ನಮ್ ತವ ಕೂಗ್‍ಕೊಂಡ್ರೆ ಏನ್ ಬತ್ತದೆ” ಎಂದಳು. ಅರುಂಧತಿಗೆಒಮ್ಮೆ ಹಾವು ಮೆಟ್ಟಿದಂತಾಗಿ ಸುಮ್ಮನೆ ಅವಳನ್ನೇ ಒಮ್ಮೆ ನೋಡಿದಳು. ಬೋಳು ಹಣೆ, ಬರಿಗೈ, ನಿರ್ವಿಕಾರ ಭಾವ ಅವಳ ಕುರಿತಾಗಿ ಬೇರೆ ಏನನ್ನೋ ಧ್ವನಿಸಿತು. ದೀಪ್ತಿ ಭದ್ರಾವತಿ ಬರೆದ ಕತೆ ‘ಸ್ಫೋಟ’ ನಿಮ್ಮ ಈ ಭಾನುವಾರದ ಓದಿಗೆ

read more
ಡಾ. ಜ್ಯೋತಿ ಬರೆದ ಈ ಭಾನುವಾರದ ಕತೆ

ಡಾ. ಜ್ಯೋತಿ ಬರೆದ ಈ ಭಾನುವಾರದ ಕತೆ

ನಾನು, ಮಕ್ಕಳೊಂದಿಗೆ ಕಾಡು ಮೇಡು ಸುತ್ತುತ್ತಾ ಕಷ್ಟನಷ್ಟ ಅನುಭವಿಸುವಾಗ ಜೊತೆಗಿದ್ದು, ಅಂತೂ ಈಗ ಗದ್ದುಗೆ ಸಿಕ್ಕ ಮೇಲೆ ವೈರಾಗ್ಯ ಮೂಡಿ, ಅಕ್ಕ ಭಾವನ ಹಿಂದೆ ಹೆಜ್ಜೆಯಿಡುವ ನಿರ್ಧಾರ ಮಾಡಿ, ಕಾಡಿನತ್ತ ಮುಖ ಮಾಡಿದೆ. ನನ್ನ ಮಕ್ಕಳಿಗೆ ತಕ್ಷಣ ನಂಬಲಾಗಲಿಲ್ಲ. ಮೊದಲು ನಾನೂ ಹಾಗೆಯೇ ಅಂದುಕೊಂಡಿದ್ದೆ. ಆದರೆ ಕುರುಕ್ಷೇತ್ರ ಯುದ್ಧರಂಗ ನೋಡಿದ ಮೇಲೆ ನನಗೆ ವೈರಾಗ್ಯ ಮೂಡಿತು. ಈ ವೈಭೋಗ, ಒಣ ಪ್ರತಿಷ್ಠೆ ಯಾವುದೂ ನನಗೆ ಬೇಕಿಲ್ಲವೆನಿಸಿತು. -ಡಾ.ಜ್ಯೋತಿ ಬರೆದ ಕತೆ ‘ಕುಂತಿಯ ಮುಸ್ಸಂಜೆ ಮಾತು’ ಇಂದಿನ ಓದಿಗಾಗಿ. 

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಟಿ.ಕೆ. ದಯಾನಂದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಟಿ.ಕೆ. ದಯಾನಂದ ಕತೆ

ಕಷ್ಟಪಟ್ಟು ಎದ್ದು ಗೋಡೆಗೆ ಒರಗಿಕೊಂಡ ಆಕೆ ಕೈ ಸನ್ನೆ ಮಾಡಿ ನೀರು ಕೇಳಿದಳು. ಹತ್ತಿರದಲ್ಲೇ ನಿಂತಿದ್ದ ಹುಡುಗಿಯೊಬ್ಬಳು ನೀರು ತಂದುಕೊಟ್ಟಳು. ನೀರು ಕುಡಿದು ಸುಧಾರಿಸಿಕೊಂಡ ಮೇಲೆ ಆಕೆ ದೊಡ್ಡ ಉಸಿರು ಬಿಟ್ಟು, ‘ಮಗ ಸತ್ತರೆ ತಾಯಿ ಏನು ಹೇಳ್ತಾಳಪ್ಪ. ಮಗ ಸತ್ತ, ಸಾಯಿಸಿದ್ರು’ ಎಂದು ಅಳಲು ಶುರುಮಾಡಿದಳು. ಕಣ್ಣೀರು ಒರೆಸಿಕೊಳ್ಳುತ್ತಾ, ‘ಇನ್ನೊಬ್ಬ ಮಗ ಇದ್ದಿದ್ರೆ ಆ ಪಾಪಿಗಳನ್ನ ಹೊಡೆದುಕೊಂದು ಈ ಸಾವಿಗೆ ಸೇಡು ತೀರಿಸ್ಕೊ ಅಂತ ಹೇಳಬೋದಿತ್ತು. ಆದ್ರೆ ಇದ್ದವ್ನು ಒಬ್ಬನೇ ಮಗ. ಅವನು ವಾಪಸ್ ಬರ್ತಾನಾ’ ಎಂದು ಬರಿಗಣ್ಣುಗಳಿಂದ ಅವನನ್ನು ನೋಡಿದಳು.

read more
ಕೆ. ಪ್ರಭಾಕರನ್‌ ಅನುವಾದಿಸಿದ ಎಂ ಮುಕುಂದನ್‌ ಕಥೆ

ಕೆ. ಪ್ರಭಾಕರನ್‌ ಅನುವಾದಿಸಿದ ಎಂ ಮುಕುಂದನ್‌ ಕಥೆ

ಕಾನ್‍ಫೆರೆನ್ಸ್ ರೂಮಿನ ಪಳ ಪಳಾ ಹೊಳೆಯುತ್ತಿದ್ದ ಮೇಜಿನಮೇಲೆ ಫ್ಲವರ್ ಪಾಟೂ ಮಿನರಲ್ ವಾಟರ್ ಬಾಟಲುಗಳೂ ಬಂದು ನಿಂತವು. ಗಾಜಿನ ಬಾಗಿಲುಗಳ ಮೂಲಕ ನೋಡಿದರೆ, ಮಂಜು ಮುಸುಕಿದ ಪರ್ವತ ಶ್ರೇಣಿಗಳಲ್ಲಿ ಎಳೆಬಿಸಿಲು ಸ್ಪಷ್ಟಗೊಳ್ಳುತ್ತಿರುವುದು, ಮಸುಕಾಗುತ್ತಿರುವುದು ಕಾಣಬಹುದು. ಆಕಾಶದಲ್ಲಿ ಮಳೆಯ ಸೂಚನೆಗಳು ಗೋಚರಿಸುತ್ತಿದ್ದವು. ಅವರು ಕಂಪನಿಯ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಾ ವಾದವಿವಾದಗಳನ್ನು ಮುಂದಿಡುತ್ತಿದ್ದರು.

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ದಾಕ್ಷಾಯಣಿ ಯಡಹಳ್ಳಿ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ದಾಕ್ಷಾಯಣಿ ಯಡಹಳ್ಳಿ ಕತೆ

ಗಂಡಗ ಹ್ಯಾಂಗ್ ಹೇಳ್ಳಿ ಅನ್ನ ಚಿಂತ್ಯಾತು. ಕೂಸು ಅತ್ತತ್ತ್ ತೊಡಿ ಮ್ಯಾಲೆ ಮಕ್ಕೊಂತು. ಅಕಿನೂ ಅತ್ತತ್ತ್ ಹೈರಾಣಾಗಿದ್ಲು. ಗಲ್ಲದ್ ಮ್ಯಾಲೆ ಕೈ ಇಟ್ಗೊಂಡು ಚಿಂತೀ ಮಾಡ್ಕೊಂತ ಕುಂತ್ಲು. ಹಂಗ ಕಣ್ಣ್ ಮುಚ್ಚಿದ್ವು. ಬಾಗ್ಲಾ ತಗದು ಪರಪ್ಪ ಒಳ್ಗ ಬಂದಾ. `ಯಾಕ್ ಮಕ್ಕೊಂಡಿಯಲೇ ಏನಾಗೇತಿ, ಗಲ್ಲಕ್ಕ್ ಕೈ ಹಚ್ಚೀದಿ ಗುಡ್ಡ್ ಬಂದು ತೆಲಿ ಮ್ಯಾಲೆ ಬಿದ್ದೈತೇನಂದ”. ಸುಮ್ನ ಇದ್ಲು. ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ದಾಕ್ಷಾಯಣಿ ಯಡಹಳ್ಳಿ ಬರೆದ ಕತೆ ‘ವರ್ತುಲ’ ನಿಮ್ಮ ಈ ಭಾನುವಾರದ ಓದಿಗೆ

read more
ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕಥೆ

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕಥೆ

ಮೂಲೆಯ ಮುರುಕು ಬೆಂಚಿನಲ್ಲಿ ಕುಳಿತು ಆ ವ್ಯಕ್ತಿಯ ಮಾತು- ವರ್ತನೆಗಳೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದ ವೆಂಕಪ್ಪ- ಅಣ್ಣುವಿಗೆ ಇನ್ನಷ್ಟು ಕುತೂಹಲವಾಯಿತು. “ಇವನೊಬ್ಬ ಬೋನಸ್ ಆಯುಷ್ಯದಲ್ಲಿ ಬದುಕುತ್ತಿದ್ದಾನೆ. ಇವನ ದುರ್ಬುದ್ಧಿಯನ್ನು ದೇವರು ಸರಿಯಾಗಿ ಲೆಕ್ಕಕ್ಕೆ ತೆಗೆದುಕೊಂಡಿದ್ದಿದ್ದರೆ ಇಷ್ಟರಲ್ಲಾಗಲೇ ಇವನು ಕೊಟ್ಟಾಯಿ ಆಗಿ, ಇವನ ಮೂರನೇ ವರ್ಷದ ಶ್ರಾದ್ಧ ಮುಗಿದಿರಬೇಕಿತ್ತು” ಎಂದು ರಾಮಣನ ಹಿಂದಿನಿಂದ ಮಾತನಾಡಿಕೊಳ್ಳುತ್ತಿದ್ದವರು ಈ ಇಬ್ಬರು, ವೆಂಕಪ್ಪ ಮತ್ತು ಅಣ್ಣು. ಇನ್ನಷ್ಟು ದಿನ ಬದುಕಿರಬೇಕಿತ್ತು…

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಚಿಂತಾಮಣಿ ಕೊಡ್ಲೆಕೆರೆ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಚಿಂತಾಮಣಿ ಕೊಡ್ಲೆಕೆರೆ ಕತೆ

ನನ್ನೊಳಗೆ ಉಷಾ ಜೀವಂತವಾಗಿಯೇ ಇದ್ದಳು. ಕೆಲವೊಮ್ಮೆ ಕನಸುಗಳಲ್ಲಿ ಬಂದು ತನ್ನ ದುಃಖದ ಕಥೆಗಳನ್ನು ಹೇಳಿಕೊಂಡಳು. ಇನ್ನು ಕೆಲವೊಮ್ಮೆ ಅವಳೊಬ್ಬ ಸದ್ಗೃಹಿಣಿಯಾಗಿ ತಲೆಗೆ ಮಿಂದು, ಕೂದಲು ಕಟ್ಟಿಕೊಂಡು, ಬಟ್ಟೆ ತುರುಬು ಹಾಕಿ, ಮಂಗಲ ಕುಂಕುಮವನ್ನಿಟ್ಟುಕೊಂಡು ನಂದಿನಿ ಹಾಲಿನ ಪ್ಯಾಕೆಟ್ ಮನೆಯೊಳಗೆ ತರುತ್ತಿರುವಂತೆ ಕನಸಾಗುತ್ತಿತ್ತು. ‘ಸದಾಶಿವಯ್ಯನವರ ಮಾತನ್ನು ಎಂದಿಗೂ ನಂಬಬೇಡ’ ಎಂದು ಒಂದು ಸಲ ಹೇಳಿ ಹೋದಳು. ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಚಿಂತಾಮಣಿ ಕೊಡ್ಲೆಕೆರೆ

read more
ಸದಾಶಿವ ಸೊರಟೂರು ಬರೆದ ಈ ಭಾನುವಾರದ ಕಥೆ

ಸದಾಶಿವ ಸೊರಟೂರು ಬರೆದ ಈ ಭಾನುವಾರದ ಕಥೆ

ಬೆಳಕಿರುವ ಜಗದಲ್ಲಿ ತನ್ನವರು ಎಲ್ಲೋ ಕಳೆದು ಹೋಗಿರುವಾಗ ಹುಡುಕಿ ಸೇರಿಕೊಳ್ಳಲು ಹಂಬಲಿಸಿ ಸೋತು ಹೋದಳು. ಸುಮ್ಮನೆ ಅಲೆಯಬೇಕು. ಒಂದೂರಲಿ ಒಂದೆರಡು ದಿನ. ಭಿಕ್ಷೆಯ ಕೂಳು ಹೊಟ್ಟೆಗಿತ್ತು. ಹರಿದ ಎರಡು ದುಪ್ಪಟಿಗಳು ರಾತ್ರಿ ಚಳಿಗಿದ್ದವು. ರಾತ್ರಿ ಮಾತ್ರ ಸ್ನಾನದ ಹಂಗಿನಲ್ಲಿ ಅವಳ ಬೆತ್ತಲೆ ದೇಹವನ್ನು ನೋಡಿತ್ತು. ಆಚೆ ನೆಲದಲ್ಲಿ ಕೂಡಿಸಿಟ್ಟ ಮೂರು ಕಲ್ಲುಗಳು ಅವಳ ಅಡುಗೆ ಮನೆ. ಇಂತಿಪ್ಪ ಆಕೆಯ ಬದುಕು ಬೆಳಕು, ಕತ್ತಲುಗಳ ಮಧ್ಯೆ ನುಗ್ಗುತ್ತಿತ್ತು.
ಸದಾಶಿವ ಸೊರಟೂರು ಬರೆದ ಕಥೆ “ಬಯಲು” ನಿಮ್ಮ ಈ ಭಾನುವಾರದ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ