Advertisement

ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾ. ಹು. ಚಾನ್‍ಪಾಷ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾ. ಹು. ಚಾನ್‍ಪಾಷ ಬರೆದ ಕತೆ

ಅವ್ರು ಮಾಡ್ತಿರೋದು ಸರೀನಾ! ಇವ್ನು ಮಾಡ್ತಿರೋದು ಸರೀನಾ!.. ಬೀಜ-ವೃಕ್ಷದ ಪ್ರಶ್ನೆ ಇದ್ದಹಾಗೆ ಇದು ಬಿಡಿಸಲಾಗದ ಪ್ರಶ್ನೆ ಎನಿಸಿತು. ಪ್ರತಿ ತಂದೆ-ತಾಯಿಗಳೂ ಸಹ ಮೊದಲು ಮಕ್ಕಳಾಗಿರುತ್ತಾರೆ ತಾನೆ!… ‘ಬೆಳೆದ ಪರಿಸರ, ಪಡೆದ ಸಂಸ್ಕಾರಗಳೇ ಮುಖ್ಯ ಅದೇ ಎಲ್ಲದಕ್ಕೂ ಮೂಲ’ ಎಂದು ಹೇಳುತ್ತಿದ್ದ ರಿಯಾಜ್‌ನ ಮಾತು ನೂರಕ್ಕೆ ನೂರು ಸತ್ಯ ಎನಿಸಿತು. ಏನು ಹೇಳಬೇಕು ಎಂದು ನನಗೆ ತೋಚಲಿಲ್ಲ. ಅವನೂ ಸಹ ಏನೂ ಆಡಲಿಲ್ಲ.

read more
ದೀಪಾ ಫಡ್ಕೆ ಬರೆದ ಈ ಭಾನುವಾರದ ಕಥೆ

ದೀಪಾ ಫಡ್ಕೆ ಬರೆದ ಈ ಭಾನುವಾರದ ಕಥೆ

ಬೀಡಾಡಿ ದನವೊಂದು ನೆಟ್ಟಿದ್ದ ತರಕಾರಿ ಸಾಲಿಗೇ ಬಾಯಿ ಹಾಕಿ ಕುತ್ತಿಗೆ ಆಡಿಸುತ್ತಾ ಮೇಯುತ್ತಿದ್ದುದನ್ನು ನೋಡಿ ಅಲ್ಲೇ ಬಿದ್ದಿದ್ದ ಕೋಲೊಂದನ್ನು ತೆಗೆದುಕೊಂಡು `ಹೋಯ್ ಹೋಯ್’ ಎಂದು ಬೊಬ್ಬೆ ಹೊಡೆದುಕೊಂಡು ದಣಪೆಯಿಂದ ಹೊರಗಟ್ಟಲು ಪ್ರಯತ್ನಿಸಿದಳು. ನಾಲಗೆಯಿಂದ `ಹಡಬೆ ದನ’ ಎನ್ನುವ ಬೈಗಳೂ ಸುಲಭವಾಗಿ ಬಂದು ಹೋಯ್ತು. ಇಡೀ ಅಂಗಳ ಓಡಾಡಿಸಿಕೊಂಡು ನೆಟ್ಟಿದ್ದ ಪ್ರೀತಿಯ ಅಬ್ಬಲಿಗೆ ಸಾಲನ್ನೂ ಮೆಟ್ಟಿಕೊಂಡು ಗಿಡಗಳನ್ನು ಧರಾಶಾಯಿಯಾಗಿಸುತ್ತಾ ಕೊನೆಗೂ ದಣಪೆಯಿಂದ ಹೊರಗೆ ಹೋದಾಗ ಅದರ ಬೆನ್ನಿಗೆ…

read more
ಚಂದ್ರಪ್ರಭ ಕಠಾರಿ ಬರೆದ ಈ ಭಾನುವಾರದ ಕಥೆ

ಚಂದ್ರಪ್ರಭ ಕಠಾರಿ ಬರೆದ ಈ ಭಾನುವಾರದ ಕಥೆ

ಬೆಣ್ಣೆಯಲ್ಲಿ ಕೂದಲು ತೆಗೆದಂತೆ, ವಿನಯವೇ ಮೂರ್ತಿವೆತ್ತಂತೆ ಗಿಳಿ ಮಾತಾಡುವ ಜಿನೇಶನಲ್ಲಿ ಇಂಥ ರಾಕ್ಷಸನಿರುವ ಸಾಧ್ಯತೆ, ಈ ಆರದ ಗಾಯದ ಸಾಕ್ಷಿ ಇರದಿದ್ದರೆ ನಂಬಲು ಸಾಧ್ಯವಾಗುತ್ತಿರಲಿಲ್ಲ. ಅವಳ ಬಾಳು ಕನಸಲ್ಲಿ ನಡೆದಂತೆ ಸುಸೂತ್ರವಾಗಿ ಸೌಖ್ಯದಿಂದಿದೆ ಎಂದು ಭಾವಿಸಿದ್ದರೆ ಅದೆಷ್ಟು ನೋವುಗಳನ್ನು ಒಡಲಲ್ಲಿಟ್ಟು ಬೇಯುತ್ತಿದ್ದಾಳೆ ಎನಿಸಿ ಸುಮಾಳ ಹೊಟ್ಟೆಗೆ ಬೆಂಕಿ ಬಿದ್ದು, ಕಣ್ಣಲ್ಲಿ ನೀರು ತುಂಬಿತು.
ಚಂದ್ರಪ್ರಭ ಕಠಾರಿ ಬರೆದ ಈ ಭಾನುವಾರದ ಕಥೆ “ಹಾಡು ಗುಬ್ಬಿ ಪಾಡು!”

read more
ಸುಜಯ್‌ ಪಿ ಬರೆದ ಈ ಭಾನುವಾರದ ಕತೆ

ಸುಜಯ್‌ ಪಿ ಬರೆದ ಈ ಭಾನುವಾರದ ಕತೆ

ಭಾಗೀರಥನ ಕಾಲನ್ನು ಬಿಡಿಸಲು ಬೇಕಾಗಿ ಸಂಕದ ಎರಡು ಹಲಗೆಗಳನ್ನು ಕಡಿದು ತೆಗೆದು ಬೇರೆ ಹಲಗೆ ಹಾಕುವಷ್ಟರಲ್ಲಿ ಡೀಮಣ್ಣ ಕಡಿಮೆಂದರೂ ಹತ್ತರ ಮೇಲೆ ಬೀಡಿ ಸೇದಿದ್ದರು. ಬೀಡಿ ಸೇದಿದ ಮೇಲೆ ಉಳಿಯುವ ಬೀಡಿಯ ತುದಿಯನ್ನು ಕೂಡಾ ಜಗಿದು ತಿನ್ನುವ ಅಭ್ಯಾಸವಿದ್ದ ಡೀಮಣ್ಣ ಆವತ್ತು ಪ್ರತೀ ಬೀಡಿ ಮುಗಿಯುತ್ತಲೂ ಬಂಗಾಳದ ಭಾಗೀರಥನಿಗೆ ಬಯ್ಯದೆ ಅವನನ್ನು ಈ ಊರಿಗೆ ಕರೆದುಕೊಂಡು ಬಂದ ಮಣಿಕಂಠನಿಗೆ ಬಾಯಿ ಬಂದಂತೆ ಬಯ್ಯುತ್ತಲೇ ಇದ್ದರು.

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿ.ಆರ್.ಕಾರ್ಪೆಂಟರ್ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿ.ಆರ್.ಕಾರ್ಪೆಂಟರ್ ಬರೆದ ಕತೆ

ಅಲ್ಲೇ ನಿಂತು ಇವರ ಗೋಳಾಟಗಳನ್ನು ನೋಡುತ್ತ ಲೊಚಗುಟ್ಟುತ್ತಿದ್ದ ಮಾಸಲು ಬಣ್ಣದ ಖಾಕಿ ನಿಕ್ಕರಿನ ವ್ಯಕ್ತಿಯು ‘ಗೌಡರು ಸೇಟ್‌ಕೇಕ್ ಆಟ ಆಡಕ್ಕೆ ಮೈದಾನುಕ್ಕೆ ಹೋಗೌರೆ’ ಎಂದ. ಇಷ್ಟೊತ್ತೂ ಮನೆಯ ಒಳಗಿದ್ದು, ಕನ್ನಡಕದ ಮೂಲಕ ಜಗವ ನೋಡುತ್ತಿದ್ದ ಪದವಿಧರ ವ್ಯಕ್ತಿಯು, ಅವನ ಇಂಗ್ಲಿಷಿಗೆ ಜೋರಾಗಿ ನಗುತ್ತಾ ಹೊರಬಂದು, ‘ಸೇಟ್‌ಕೇಕ್ ಆಟ ಅಲ್ಲವೋ, ಅದು ಶೆಟಲ್‌ಕಾಕ್’ ಎನ್ನಲು ಖಾರದಪುಡಿ ಮೆತ್ತಿಸಿಕೊಂಡಿದ್ದ ಸಣ್‌ರಾಮ ‘ಕುಯ್, ಕುಯ್’ ಎನ್ನುವುದಕ್ಕೂ…

read more
ಡಾ.ಕೆ. ಷರೀಫಾ ಬರೆದ ಈ ಭಾನುವಾರದ ಕಥೆ “ಹೀಗೊಂದು ಖುಲಾಹ್”

ಡಾ.ಕೆ. ಷರೀಫಾ ಬರೆದ ಈ ಭಾನುವಾರದ ಕಥೆ “ಹೀಗೊಂದು ಖುಲಾಹ್”

ಇತ್ತೀಚೆಗೆ ಅವನು ಯಾಕೆ ಮಾತು ಮಾತಿಗೆ ತಲ್ಲಾಖ್ ಕೊಡುತ್ತೇನೆಂದು ಹೆದರಿಸುತ್ತಲೇ ಇರುತ್ತಿದ್ದ. ನಾನೂ ಸುಮ್ಮನೇ ಮನೆಯಲ್ಲಿ ಸುಮ್ಮನೆ ಕೂಡುತ್ತಿರಲಿಲ್ಲ. ಟೇಲರಿಂಗ್ ಸೆಂಟರ್‌ನಲ್ಲಿ ಕೆಲಸ ಮಾಡಿ ಸಂಪಾದಿಸುತ್ತಿದ್ದೆ. ಅತ್ತೆಯವರು ಮಕ್ಕಳನ್ನು ನೋಡಿಕೊಳ್ಳತ್ತಿದ್ದರು. ಗಂಡ ಮಗಳು ಸಲ್ಮಾಗೆ ಒಳ್ಳೆಯ ಶಾಲೆಗೆ ಸೇರಿಸಿದ್ದನು. ಶೋಯೇಬ್‌ಗೆ ಇನ್ನೂ ಶಾಲೆಗೆ ಹಾಕಿರಲಿಲ್ಲ. ಮಾತು ಮಾತಿಗೆ ಹೊಡಿಬಡಿ ಮಾಡುವುದು, ಕೂಗಾಡುತ್ತಿದ್ದುದೇ ಅವಳಿಗೊಂದು ಸಮಸ್ಯೆಯಾಗಿತ್ತು.

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಸು ಬೇವಿನಗಿಡದ ಬರೆದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಸು ಬೇವಿನಗಿಡದ ಬರೆದ ಕತೆ

ಅಳುತ್ತಿದ್ದ ಅವಳನ್ನು ಡಾಕ್ಟರ್ ಒಂದೆರಡು ಗುಳಿಗೆ ನುಂಗಿಸಿ ನೀರು ಕುಡಿಸಿ ಸಮಾಧಾನಪಡಿಸಿದರು. ಕೂಡಲೆ ಆಕೆ ನಿದ್ದೆಹೋದಳು. ಆಕೆಯ ಮನಸ್ಸು ಕೃಷ್ಣನ ಕಥೆಯಿಂದ ಘಾಸಿಗೊಂಡಿದೆಯೆಂದು ಅವರಿಗೆ ತಿಳಿಯಿತು. ‘ನಾಟಕದ ಕೃಷ್ಣ ಬಂದು ನಮ್ಮಣ್ಣನ ಸಾಯಹೊಡದು ನನ್ನ ಕರ್ಕೊಂಡು ಹೋಗ್ತಾನಂತ.’ ಎಚ್ಚರಾದಾಗ ವಿಮಲವ್ವ ಹೇಳಿದ ಮಾತಿಗೆ ಡಾಕ್ಟರ್ ನಕ್ಕರು. ‘ನಿಮ್ಮಣ್ಣ ದೊಡ್ಡ ಹುಲಿ ಅದಾನು. ಇಂವ ಅಡರ್ ಅಂದ್ರ ಕೃಷ್ಣನ ಕಿರೀಟ ಅಲ್ಲೇ ಬೀಳ್ತದ ತಗೋ. ನೀಯೇನೂ ಹೆದರಬ್ಯಾಡ’.

read more
ಕಾರ್ತಿಕ್ ಆರ್. ಬರೆದ ಈ ಭಾನುವಾರದ ಕತೆ

ಕಾರ್ತಿಕ್ ಆರ್. ಬರೆದ ಈ ಭಾನುವಾರದ ಕತೆ

ಇಷ್ಟೆಲ್ಲ ನಡೆಯತ್ತಿದ್ದಾಗ, ಅವನೆಲ್ಲಿದ್ದ? ಎಂದೇನಾದರೂ ಕೇಳಿದರೆ ತಾರಾಗೆ ಸರಿಯಾಗಿ ಉತ್ತರಿಸಲು ಸಾಧ್ಯವಾಗುವುದಿಲ್ಲ. ಅಷ್ಟಕ್ಕೂ ತಮ್ಮಿಬ್ಬರ ನಡುವೆ ಏನಿತ್ತು? ಇದ್ದದ್ದು ಎಷ್ಟು ಗಾಢವಾಗಿತ್ತು? ಸಾಧ್ಯವಾಗಿದ್ದರೆ ಅವನ ಜೊತೆ ಓಡಿ ಹೋಗುತ್ತಿದ್ದೇನೇ ತಾನು? ಕೇಳಿಕೊಳ್ಳುತ್ತಾಳೆ ಕೆಲವೊಮ್ಮೆ! ಕೆಲಕಾಲ ಬಿಟ್ಟಿರಲಾರದಂತೆ ಬೆಸೆದುಕೊಂಡಿದ್ದ ತಾವಿಬ್ಬರೂ, ಅದೆಷ್ಟು ಬೇಗ ಒಂದೇ ಊರಿನಲ್ಲಿದ್ದೂ ದಶಕಗಟ್ಟಲೇ ಅಜ್ಞಾತರಾಗಿ ಬದುಕಿ ಬಿಡುವಷ್ಟು ಬದಲಾಗಿ ಹೋದೆವು? ಮಾತಿನಲ್ಲಿ ನೂರಾರು ಚಂದದ ಕನಸುಗಳನ್ನು ಹೆಣೆದುಕೊಡುತ್ತಿದ್ದ ಅವನು…”

read more
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಬಿದರಹಳ್ಳಿ ನರಸಿಂಹಮೂರ್ತಿ ಬರೆದ ಕಥೆ

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಬಿದರಹಳ್ಳಿ ನರಸಿಂಹಮೂರ್ತಿ ಬರೆದ ಕಥೆ

ಪರಿಸ್ಥಿತಿ ಬಿಗಡಾಯಿಸುತ್ತಿತ್ತು. ಕಾನ್ಸ್‌ಟೇಬಲ್ಗೆ ರೈಫಲ್ಹಿಡಿದು ನಿಲ್ಲಲು ಸೂಚಿಸಿದೆ. ಮೊಬೈಲ್ ಫೋನಿನಲ್ಲಿ ತಹಶೀಲ್ದಾರರನ್ನು ಸಂಪಕಿಸಲು ನೋಡಿದೆ. ಶಿರಸ್ತೆದಾರ್ ಸಿಂಪಿಗೇರ್ ಸಿಕ್ಕ. ಎಲೆಕ್ಷನ್ ಡ್ಯೂಟಿಯಿಂದ ವಿನಾಯ್ತಿ ಕೇಳಿದ್ದಕ್ಕೆ ಬೇಕೆಂತಲೆ ನನ್ನನ್ನ ಈ ತರ್ಲೆಊರಿಗೆ ಪ್ರಿಸೈಡಿಂಗ್ ಆಫೀಸರ್ ಮಾಡಿಹಾಕಿಸಿದ್ದ ಮಹಾಶಯ ಅವ. ಪರಿಸ್ಥಿತಿ ವಿವರಿಸಿ ಹೆಚ್ಚೂಕಡಿಮೆ ಆದರೆ ಎಲೆಕ್ಷನ್ ರದ್ದುಮಾಡಬೇಕಾಗುತ್ತದೆ ಎಂದು ತಿಳಿಸಿದೆ. ಅರ್ಧಗಂಟೆಯಲ್ಲಿ ಪೋಲೀಸ್ ಜೀಪು ಬಂದಿತು. ಅದರಲ್ಲೆ ನ್ಯಾಮತಿಗೆ ಹೋಗಿ ಐವತ್ತು ರೊಟ್ಟಿ ಕಟ್ಟಿಸಿಕೊಂಡು…”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ