Advertisement

ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅಲಕಾ ಕಟ್ಟೆಮನೆ ಬರೆದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅಲಕಾ ಕಟ್ಟೆಮನೆ ಬರೆದ ಕಥೆ

“ಇದೇ ವಿಷಯವಾಗಿ ಆವತ್ತು ಅಜ್ಜಿ ಮತ್ತು ಶಣ್ಕೂಸಿನ ನಡುವೆ ಘನಘೋರ ಚರ್ಚೆ ನಡೆಯುತ್ತಿತ್ತು. ಹಾಗೆ ನೋಡಿದರೆ ಅಜ್ಜಿಯಷ್ಟು ಬಿಡುವು ಶಣ್ಕೂಸಿಗೆ ಇರುವುದಿಲ್ಲ. ಅವಳ ದೊಡ್ಡ ಮಗ, ಅಲ್ಲೇ ಸನಿಹದಲ್ಲಿ ಮಡದಿ-ಮಕ್ಕಳೊಂದಿಗೆ ಬೇರೆ ಸಂಸಾರ ಹೂಡಿದ್ದ. ಮಗಳನ್ನು ಘಟ್ಟದ ಕೆಳಗಿನ ಅಣ್ಣನ ಮಗನಿಗೆ ಮದುವೆ ಮಾಡಿಕೊಟ್ಟಿದ್ದಳು. ಈಗ ಅವಳೊಂದಿಗಿರುವ ಕಡೆಯ ಮಗ ಸಂಕನಿಗೆ ತಲೆಗೂದಲು..”

read more
‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮೂರನೆಯ ಭಾಗದ ಎರಡನೆಯ ಅಧ್ಯಾಯ

‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮೂರನೆಯ ಭಾಗದ ಎರಡನೆಯ ಅಧ್ಯಾಯ

“ರಝುಮಿಖಿನ್ ಸರಿಯಾಗಿ ಒಂಬತ್ತು ಗಂಟೆಗೆ ಬಕಲೇವ್ ವಸತಿಗೃಹಕ್ಕೆ ಬಂದ. ಇಬ್ಬರು ಹೆಂಗಸರೂ ಬಹಳ ಹೊತ್ತಿನಿಂದ ಅವನು ಬರುವುದನ್ನೇ ಕಾಯುತ್ತಾ ತಾಳ್ಮೆ ತಪ್ಪಿ ಹಿಸ್ಟೀರಿಯ ಬಂದವರ ಥರ ಆಗಿದ್ದರು. ಏಳು ಗಂಟೆಗೋ, ಅದಕ್ಕೂ ಮೊದಲೋ ಎದ್ದಿದ್ದರು. ಗುಡುಗು ಹೊತ್ತ ಮೋಡ ಕವಿದಂಥ ಮುಖ ಹೊತ್ತು ಬಂದಿದ್ದವನು ಅಡ್ಡಾದಿಡ್ಡಿಯಾಗಿ ತಲೆ ಬಾಗಿಸಿ ವಂದನೆ ಸಲ್ಲಿಸಿದ.”

read more
ರೋಹಿತ್ ರಾಮಚಂದ್ರಯ್ಯ ಅನುವಾದಿಸಿದ ಪ್ರಣವ್ ಸಖದೇವ್ ಬರೆದ ಮರಾಠಿ ಕತೆ

ರೋಹಿತ್ ರಾಮಚಂದ್ರಯ್ಯ ಅನುವಾದಿಸಿದ ಪ್ರಣವ್ ಸಖದೇವ್ ಬರೆದ ಮರಾಠಿ ಕತೆ

“ಆಮೇಲೆ ನನಗೆ ಏನಾಯಿತೋ ಯಾರಿಗೆ ಗೊತ್ತು; ನಾನು ಪಟಕ್ಕನೆ ಟೇಬಲ್ ಮೇಲೆ ಇಟ್ಟಿದ್ದ ನನ್ನ ಮೊಬೈಲ್ ಫೋನ್ ತೆಗೆದುಕೊಂಡು ಅವನ ಐದಾರು ಫೋಟೋ ತೆಗೆದೆ. ರಿಯಾನನು ನನ್ನ ಕಡೆ ನೋಡಿದ. ಅವನ ಉದ್ದನ್ನ ಮುಖ ಶಾಂತವಾಗಿತ್ತು. ನೇರ ಮೂಗಿನ ತುದಿ ನೆನೆದು ಕೆಂಪಾಗಿ ಹೋಗಿತ್ತು. ಆತನ ಕಪ್ಪು ಕಣ್ಣುಗಳಲ್ಲಿ ಅಂಜಿಕೆಯಿರಲಿಲ್ಲ.”

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅಬ್ದುಲ್‌ ರಶೀದ್ ಬರೆದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅಬ್ದುಲ್‌ ರಶೀದ್ ಬರೆದ ಕಥೆ

“ಈ ರೋಸಿ ಸಿಸ್ಟರ್ ಮತ್ತು ಸುಶೀಲಾ ಟೀಚರ್ ಬಾಡಿಗೆಗಿದ್ದ ಕೋಣೆಗಳ ನಡುವಲ್ಲಿ ಈರಪ್ಪ ಟೈಲರ ಅಂಗಡಿಯಿತ್ತು. ಈರಪ್ಪ ಟೈಲರು ತಮ್ಮ ಸಂಸಾರ ಸಮೇತವಾಗಿ ಒಳಕೋಣೆಯಲ್ಲಿ ವಾಸಿಸುತ್ತಿದ್ದು ಹೊರಗಿನ ಕೋಣೆಯನ್ನು ಟೈಲರ್ ಅಂಗಡಿಯನ್ನಾಗಿ ಮಾಡಿಕೊಂಡಿದ್ದರು. ಈ ಈರಪ್ಪ ಟೈಲರ್ ಮಾತು ತುಂಬ ಕಡಿಮೆ ಆಡುತ್ತಿದ್ದರು….”

read more
ಡಾ. ಜ್ಯೋತಿ ಬರೆದ ಈ ಭಾನುವಾರದ ಕಥೆ

ಡಾ. ಜ್ಯೋತಿ ಬರೆದ ಈ ಭಾನುವಾರದ ಕಥೆ

“ಯಾರೋ ಹೇಳಿದರು, ಕಾಶಿಯ ರಾಜನಲ್ಲಿ ಬಿಳಿ ಕುದುರೆಗಳಿವೆಯೆಂದು. ಹಾಗಾಗಿ, ಗಾಲವ ನನ್ನ ಕಾಶಿಗೆ ಕರೆತಂದ. ಅಲ್ಲಿನ ರಾಜ ದಿವೋದಾಸನಲ್ಲಿ ೨೦೦ ಬಿಳಿ ಕುದುರೆಗಳಿದ್ದವು. ಅವನಿಗೂ ಗಂಡು ಮಗು ಬೇಕಿತ್ತು. ಗಾಲವ ಪುನಃ ಒಪ್ಪಂದ ಮಾಡಿಕೊಂಡ. ನನಗೆ ಈ ಬಾರಿ ಏನು ಅನ್ನಿಸಲಿಲ್ಲ. ಮನಸ್ಸು ಮತ್ತು ಹೃದಯಗಳೆರಡೂ ಹೆಪ್ಪುಗಟ್ಟಿದ್ದವು. ವರ್ಷ ಕಳೆಯೋದರಲ್ಲಿ ಮಗ ಪ್ರತಾರ್ಧನ ಹುಟ್ಟಿದ. ಆದರೆ, ಈ ಬಾರಿ ಮಗುವಿನೊಂದಿಗೆ ಯಾವುದೇ ವ್ಯಾಮೋಹ…”

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅಕ್ಷತಾ ಹುಂಚದಕಟ್ಟೆ ಬರೆದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅಕ್ಷತಾ ಹುಂಚದಕಟ್ಟೆ ಬರೆದ ಕಥೆ

“ನಾನು ಧಡಕ್ಕನೇ ಎದ್ದು ಕೂತೆ. ಆ ಹುಡುಗ ಅಮ್ಮ ಅವಳು ಎದ್ದಳ್ ಎದ್ದಳ್ ಎಂದು ಕೂಗಿಕೊಳ್ತಾ ಓಡಿದ. ಮೈತುಂಬಾ ಬೆವರು ಹರಿಯುತ್ತಿತ್ತು. ಆ ಹುಡುಗಿ, ಎದ್ದೇಳಾ? ಆ ಕಡೆ ಗುಡ್ಡದಲ್ಲಿ ರಾಶಿ ಮುಳ್ಳು ಹಣ್ಣು ಬಿಟ್ಟಿತ್ತು. ನಿನ್ನ ಕರ್ಕಂಡು ಹೋಗಣಾ ಅಂತ್ಹೇಳಿ ಕಾಯ್ತಾ ಕೂತ್ಕಂಡಿದ್ದ್ ಅಂತ್ಹೇಳಿ ನನ್ನ ಕೈ ಹಿಡಿದು ಎಳೆಯತೊಡಗಿದಳು. ಅಷ್ಟರಲ್ಲಿ ಅಮ್ಮಮ್ಮ ಬಂದ್ಬಿಟ್ಟು ಮೈ ಕೈಯಲ್ಲ ಮುಟ್ಟಿ ಜ್ವರ ಬಿಟ್ಟಿದೆ.
‘ನಾನು ಮೆಚ್ಚಿದ ನನ್ನ ಕಥೆʼಯ..”

read more
ಎಸ್. ನಾಗಶ್ರೀ ಬರೆದ ಕಥೆ ‘ಬೆಳಕ ಹಾದಿ’

ಎಸ್. ನಾಗಶ್ರೀ ಬರೆದ ಕಥೆ ‘ಬೆಳಕ ಹಾದಿ’

“ನಾನೇ ಮೇಲೆ ಬಿದ್ದು ಹೋದರೂ ಸರಿಯಾದ ಸ್ಪಂದನೆಯಿಲ್ಲದೆ, ತಿಂಗಳುಗಟ್ಟಲೆ ಮಾತು ಬಿಟ್ಟು, ಬೇರೆ ಬೇರೆ ಮಲಗುವ ರೂಢಿ ಚಾಲ್ತಿಗೆ ಬಂತು. ಒಂದೇ ಮನೆಯಲ್ಲಿದ್ದೂ ನಮ್ಮ ಮಧ್ಯೆ ಮೈಲಿಗಟ್ಟಲೆ ಅಂತರ ಬೆಳೆಯುತ್ತಾ ಹೋಯಿತು. ಆಗ ಅಮ್ಮನ ಮನೆಗೆ ಹೋಗುವ ಬಯಕೆ ತೀವ್ರವಾಗುತ್ತಿತ್ತು. ಹೇಗಿದ್ದರೂ ಅಲ್ಲಿ ಯಾರದ್ದಾದರೂ ಮದುವೆ-ಮುಂಜಿ, ನಾಮಕರಣ ಅಂದರೆ ಎಲ್ಲರಿಗಿಂತ ಮೊದಲು ನನಗೇ ಬುಲಾವ್ ಬರ್ತಿತ್ತು….”

read more
‘ನಾನು ಮೆಚ್ಚಿದ ನನ್ನ ಕಥೆ’: ಅಜಯ್‌ ವರ್ಮಾ ಅಲ್ಲುರಿ ಬರೆದ ಕಥೆ

‘ನಾನು ಮೆಚ್ಚಿದ ನನ್ನ ಕಥೆ’: ಅಜಯ್‌ ವರ್ಮಾ ಅಲ್ಲುರಿ ಬರೆದ ಕಥೆ

“ಪೌಲ್ ಆ ಕಿಟಕಿಯನ್ನೇ ನೋಡುತ್ತಾ ಹೊರಬಂದ. ಅಡುಗೆ ಮನೆಯ ಗೋಡೆಗೆ ಅಂಟಿಕೊಂಡೇ ದೇವರಕೋಣೆಯಿತ್ತು. ಅವನೇ ಬಾಗಿಲು ತಗೆದು ಒಳಗೆ ನಡೆದ ಅದು ಅಡುಗೆ ಮನೆಗಿಂತಲೂ ಚಿಕ್ಕದಾದ ಕೋಣೆ ತುಂಬಾ ಧೂಳು ಹಿಡಿದಿತ್ತು. ಕೋಣೆಯ ನಟ್ಟನಡುವೆ ಏಸುವಿನ ಶಿಲುಬೆಯಿತ್ತು. ಸುತ್ತಲೂ ಗೋಡೆಯ ಮೇಲೆ ಹಿಂದೂ ದೇವರುಗಳ ಪಟಗಳಿದ್ದವು. ಶಿಲುಬೆಯ ಒಂದು ಕೈಗೆ ಜೇಡರ ಬಲೆ ನೇಯ್ದುಕೊಂಡಿತ್ತು.”

read more
ಬಣ್ಣಗಳಿಗೆ ನಿಲುಕದ ಸೌಂದರ್ಯ!: ಕುಮಾರ ಬೇಂದ್ರೆ ಬರೆದ ಕಥೆ

ಬಣ್ಣಗಳಿಗೆ ನಿಲುಕದ ಸೌಂದರ್ಯ!: ಕುಮಾರ ಬೇಂದ್ರೆ ಬರೆದ ಕಥೆ

“ತಲೆಯಿಂದ ಕಾಲವರೆಗೆ ಗಮನಿಸಿದ. ಅದೇ ರಶ್ಮಿ! ಗಾಢ ಹಳದಿ ವರ್ಣದ ಸೆಲ್ವಾರ್ ಕಮಿಜ್ ಧರಿಸಿದ್ದಾಳೆ. ತಲೆಯಿಂದ ನೀಳವಾಗಿ ಚಾಚಿ ಹೆಗಲು ಆವರಿಸಿರುವ ರೇಷ್ಮೆಯಂತಹ ಕೇಶ. ಅದೇ ಆಗ ತೀಡಿರುವ ಹುಬ್ಬು, ತುಟಿಯ ಕೆಂಪು ವರ್ಣ ಬೆಳಗಿನ ತಂಪಿಗೆ ನಳನಳಿಸುತ್ತಿದ್ದವು. ಗುಲಾಬಿ ಪಕಳೆಯಷ್ಟೇ ನಾಜೂಕಾದ ಅವಳ ಕೆನ್ನೆಯ ತ್ವಚೆಯಲ್ಲಿ ಮಂಜಿನ ಹನಿಗಳು ನಿಂತು ಮುತ್ತಿನಂತೆ ಮಿಂಚುತ್ತಿವೆ. ವಿಶಾಲವಾದ ಕಣ್ಣುಗಳಲ್ಲಿ ಆಪ್ತಭಾವ, ಅಂತಃಕರಣ ತುಂಬಿದೆ…”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ