ರಾಜಶೇಖರ ಜೋಗಿನ್ಮನೆ ಕಥಾ ಸಂಕಲನದ ಕುರಿತು ನಾರಾಯಣ ಯಾಜಿ ಬರಹ
“ಕಥೆಯ ನಿರೂಪಣೆಯಲ್ಲಿ ನಾವೂ ಕೂಡಾ ಕರುಣಾಕರನ ಜಾಗದಲ್ಲಿ ನಿಂತುಬಿಡುತ್ತೇವೆ. ಒಂದೆಲಗ ನೆನಪಿನ ಶಕ್ತಿಹೆಚ್ಚಿಸುವ ಸಂಕೇತ. ಇದು ನೆಲದಲ್ಲಿ ಬೆಳೆಯುವ ಸಸ್ಯವೂ ಹೌದು. ನೀರು ಮತ್ತು ಭೂಮಿಯ ಕುರಿತು ಅಪರಿಮಿತ ಆಸಕ್ತಿಯಿದ್ದ ಜೋಗಿನ್ಮನೆಯವರ ಇಗ್ಗಪ್ಪ ಮತ್ತು ಕರುಣಾಕರ ಇಬ್ಬರೂ ಇಲ್ಲಿ ಸಾಮ್ಯತೆಯನ್ನು ಪಡೆಯುವದು ಹೀಗೆ. ನಾವು ಕಳೆದುಕೊಂಡುದೆಲ್ಲಿ ಎನ್ನುವದರ ಹುಡುಕಾಟದಲ್ಲಿರುವ ಪುರಾಣಗಳ ‘ಅಭಿಜ್ಞಾ’ನದ “
ಮೋಹಕ ದ್ವೀಪದ ಮೂಗಿನ ತುದಿ: ಅಬ್ದುಲ್ ರಶೀದ್ ಬರೆದ ಕಥೆ
“ಇವರ ಕಥೆಯನ್ನು ಕೇಳಿಸಿಕೊಂಡ ನಾನು ಅವರಿಗೆ ಬೇಕಾಗಿ ನಕ್ಕು ಸುಮ್ಮನಾಗುತ್ತೇನೆ. ಎಲ್ಲಿಂದ ಎಲ್ಲಿಗೋ ಹೊರಟಿದ್ದ ಉಕ್ಕಿನ ನೌಕೆಯೊಂದು ಯಾರದೋ ಹುಚ್ಚು ಮೋಹದಿಂದಾಗಿ ಇಲ್ಲಿ ತುಕ್ಕು ಹಿಡಿದು ಸಾಯಬೇಕಾಗಿ ಬಂದಿರುವುದು ಇವರಿಗೆ ನಗುವಿನ ವಿಷಯ… “
ಎಸ್. ದಿವಾಕರ್ ಕವನ ಸಂಕಲನದ ಕುರಿತು ಎಚ್. ಆರ್. ರಮೇಶ್ ಬರಹ
“ಕ್ಲೀಷೆಯಲ್ಲದ, ಚರ್ವಿತಚರ್ವಣವಲ್ಲದ ಇಲ್ಲಿನ ಕವಿತೆಗಳ ವಿಸ್ತಾರ, ಭಿತ್ತಿ, ಆಧುನಿಕೋತ್ತರ ಕನ್ನಡ ಕಾವ್ಯ ಮೀಮಾಂಸೆಗೆ ಒಂದು ಕೊಡುಗೆ. ಅದರ ದಾರಿಯನ್ನು ಇನ್ನಷ್ಟು ಮುಂದಕ್ಕೆ ಸ್ಪಷ್ಟಮಾಡುವಲ್ಲಿ ಪ್ರೀತಿಯ ಪ್ರಯತ್ನ. ಅದು ಸಫಲವೂ ಕೂಡ ಇಲ್ಲಿ. ಓದುತ್ತ ಹೋದಲ್ಲಿ ಕವಿತೆಗಳ ಸಾಲುಗಳ, ಮನಗಾಣಬಹುದು. ಹೊಸ ಚೈತನ್ಯದಿಂದ ತುಂಬಿ ತುಳುಕುವವು. ಜೊತೆಗೆ ವ್ಯಕ್ತಗೊಂಡಿರುವ ವಸ್ತು ಕಡುವಾಸ್ತವದ ನಿಗಿನಿಗಿ ಕೆಂಡದಂತಿವೆ.”
ಬಿಡುಗಡೆ: ಉಮೇಶ ದೇಸಾಯಿ ಬರೆದ ವಾರದ ಕಥೆ
“ರಾತ್ರಿ ಮಗಳು ಫೋನ್ ಮಾಡಿದ್ದಳು. ಬಿಕ್ಕುತ್ತಲೇ ಮಾತನಾಡಿದಳು. ಮೇಲಿಂದ ಮೇಲೆ ಸಾರಿ ಕೇಳುತ್ತಿದ್ದಳು. ಅವಳಿಗೆ ವಿಶ್ವಾಸ ತುಂಬಿ ನಾಕು ಸಮಾಧಾನದ ಮಾತು ಹೇಳಿದಾಗ ರಾಧಾಳಲ್ಲೂ ನಿರಾಳತೆಯ ಭಾವ. ಆದರೆ ಬೆಳಿಗ್ಗೆ ಬಂದ ಫೋನು ಅವಳನ್ನು ವ್ಯಗ್ರಳನ್ನಾಗಿಸಿತು. ಅನಿಲ ಕಪೂರ ಫೋನ್ ಮಾಡಿದ್ದ. ಎಲ್ಲದಕ್ಕೂ ರಾಧಾಳೇ ಹೊಣೆ, ಅವಳ ಮಹತ್ವಾಕಾಂಕ್ಷೆಗೆ ಮಗಳು ಬೋರ್ಡಿಂಗ್ ಸೇರುವಂತಾಯಿತು.”
ಶ್ರೀಕೃಷ್ಣ ಎನ್. ಬುಗಟ್ಯಾಗೋಳ ಪುಸ್ತಕದ ಕುರಿತು ಶ್ರೀದೇವಿ ಕೆರೆಮನೆ ಬರಹ
“ಬಹಳಷ್ಟು ಕೈಲಾಸ ಯಾತ್ರೆಯ ಪುಸ್ತಕಗಳನ್ನು ಇಲ್ಲಿಯವರೆಗೆ ಓದಿದ್ದೇನೆ. ನಿರ್ಜೀವ ವರ್ಣನೆ ಹಾಗೂ ಭಕ್ತಿಯ ಪರಾಕಾಷ್ಟೆಯನ್ನಷ್ಟೇ ನಾವಿಲ್ಲಿ ಕಾಣುತ್ತಿರುವುದು. ಆದರೆ ‘ನಾ ಕಂಡ ಕೈಲಾಸ’ ಪುಸ್ತಕದಲ್ಲಿ ಭಕ್ತಿಯ ಉತ್ತುಂಗದಲ್ಲಿ ಉಳಿದ್ದನ್ನೆಲ್ಲ ಮರೆಮಾಚುವ ಮೂಢತನವಿಲ್ಲ. ಇದ್ದುದನ್ನು ಇದ್ದಹಾಗೇ ದಾಖಲಿಸುವ, ಕೆಲವೊಮ್ಮೆ ಇದನ್ನು ಸ್ವಲ್ಪ ಮರೆಮಾಚಬಹುದಿತ್ತೇನೋ ಎಂದು ಓದುಗರೇ ಅಂದುಕೊಳ್ಳುವಷ್ಟರ ಮಟ್ಟಿಗೆ ಎಲ್ಲವೂ ಖುಲ್ಲಾಂಖುಲ್ಲ.”
ಸುನೈಫ್ ವಿಟ್ಲ ಅನುವಾದಿಸಿ ವೈಕಂ ಮುಹಮ್ಮದ್ ಬಷೀರ್ ಕತೆ “ಅಮ್ಮ”
“ನನಗೆ ಎರಡು ಆಸೆಗಳಿದ್ದವು. ಎರಡೆನೆಯದ್ದು ಒಂದು ಶಾಲು. ದ್ರಾಕ್ಷೆ ಬಳ್ಳಿಗಳ ಅಂಚು ಇರುವ ಖಾದಿ ಶಾಲನ್ನು ಮಿಸ್ಟರ್ ಅಚ್ಚುತನ್ ನನಗೆ ಕೊಡಿಸಿದರು. ಮೊದಲನೇ ಆಸೆ 270ನ್ನು ಕೊಲ್ಲಬೇಕು! ಅದಕೆ ನನ್ನ ಕೈಯಲ್ಲಿ ಆಯುಧಗಳೊಂದೂ ಇಲ್ಲ. ಒಂದು ರಿವಾಲ್ವರ್ ಸಿಕ್ಕಿದ್ದರೆ ಸಾಕಿತ್ತು! ಎಂದು ಮನಸು ಹೇಳುತ್ತಿತ್ತು. ಆತ ಪಾಳಯಂ ಅಲ್ಲಿ ಟ್ರಾಫಿಕ್ ಡ್ಯೂಟಿಯಲ್ಲಿದ್ದದ್ದನ್ನು ನಾನು ನೋಡಿದೆ…”
ಸೋಮುರೆಡ್ಡಿ ಕಾದಂಬರಿ ಕುರಿತು ಅಮರೇಶ ನುಗಡೋಣಿ ಲೇಖನ
“ವಾಡೆಯ ಮಂದಿಗೆ ವಿಧಿ ಕಾಡಾಟವೆಂದು ತಿಳಿದು ಅದನ್ನು ಹೋಗಲಾಡಿಸಲು ಕೈಗೊಳ್ಳುವ ಮಾಟ ಮಂತ್ರಗಳು ರಂಗಪ್ಪನ ಕೊರಳಿಗೆ ಉರುಲಾಗುತ್ತದೆ. ವಾಡೆಯ ಕಾಡಾಟಗಳನ್ನು ಓಡಿಸಲು ಬರುವ ‘ಹೂಲಗೇರಿಯ ಅಜ್ಜ’ನ ಮೇಲೆ ರಂಗಪ್ಪನಿಗೆ ನಂಬಿಕೆ ಇರಲಿಲ್ಲ. ಆದರೂ ಹೂಲಗೇರಿ ಅಜ್ಜನನ್ನು ಕರೆಯಿಸಿ ಪೂಜೆ ಮಾಡಿಸಿಯೇ ಬಿಡುತ್ತಾರೆ. ಅದರ ಅಂಗವಾಗಿ ರಂಗಪ್ಪನಿಗೆ ಒಂದು ಬಿಳಿ ಎಕ್ಕಿಗಿಡದ ಗೂಟವನ್ನು… “
ಸತೀಶ್ ಚಪ್ಪರಿಕೆ ಕಥಾಸಂಕಲನಕ್ಕೆ ಅವರೇ ಬರೆದ ಮುನ್ನುಡಿಯ ಮಾತುಗಳು
” ‘ಗರ್ಭ’ ಹುಟ್ಟಿದ್ದು ಮತ್ತು ನಾನು ಆ ಇಡೀ ಕಥೆಯನ್ನು ಬರೆದಿದ್ದು ಆಸ್ಪತ್ರೆಯೊಂದರ ಮುಂದೆ. ಕಾರಿನಲ್ಲಿ ಕೂತು, ನಡುರಾತ್ರಿಯಲ್ಲಿ ನಾನೊಬ್ಬನೇ ಬಲವಂತವಾಗಿ ನಿದ್ರೆ ಮಾಡುವ ಯತ್ನ ಮಾಡುತ್ತಿದ್ದಾಗ. ಮೇಲೆ ಐಸಿಯುವಿನಲ್ಲಿದ್ದ ಜೀವಕ್ಕಾಗಿ ಚಡಪಡಿಸುತ್ತಲೇ, ಸೋತು ಹೋಗಿದ್ದ ನನ್ನ ಜೀವವನ್ನು ಕೊಡವಿ ಮೇಲೇಳಿಸಿದ ಕಥೆ ‘ಗರ್ಭ.’ ಆ ಕಥೆ ಮೊಳಕೆಯೊಡೆದ ಮರುಕ್ಷಣ, ಬ್ಯಾಗಿನಲ್ಲಿದ್ದ ಲ್ಯಾಪ್ ಟಾಪ್ ತೆಗೆದು ಒಂದೇ ಉಸಿರಿನಲ್ಲಿ ಬರೆಯಲಾರಂಭಿಸಿದಾಗ…”
ಓಬಿರಾಯನ ಕಾಲದ ಕಥಾಸರಣಿಯಲ್ಲಿ ಪಡುಕೋಣೆ ರಮಾನಂದರಾವ್ ಬರೆದ ಕತೆ
“ಹೊರಗಿನಿಂದ ಆ ಬಡ ಜನರ ಗಲಾಟೆ ಇನ್ನೂ ಅವನಿಗೆ ಕೇಳಿಸುತ್ತಿತ್ತು. ಆದರೆ ಅವರ ಮೇಲಿದ್ದ ಅವನ ಕೋಪವೂ ತಾತ್ಸಾರವೂ ಈಗ ಬಹಳ ಮಟ್ಟಿಗೆ ಕಡಿಮೆಯಾದುವು. ಅವರಲ್ಲೊಬ್ಬರಿಗೆ ಒಂದೊಂದು ಅರ್ಧಪಾವು ಅಕ್ಕಿ ಹಾಕಿ ಅವರನ್ನೆಲ್ಲ ಕಳುಹಿಸಿಬಿಡಲೇ ಎಂದು ಆಲೋಚಿಸಿದನು. ಆದರೆ ಅವರ ಗೋಳು ಭಿಕ್ಷೆಯನ್ನೆತ್ತುವುದಕ್ಕಲ್ಲ, ಅಕ್ಕಿಯ ಧಾರಣೆಯನ್ನು ಕಡಿಮೆ ಮಾಡುವುದಕ್ಕೆ ಎಂದು ಅವನು ಚೆನ್ನಾಗಿ ತಿಳಿದಿದ್ದನು. ಅದು ಅವನ ನೆನಪಿಗೆ ಬರುತ್ತಲೆ ಮೆಲ್ಲಮೆಲ್ಲನೆ ದ್ರವಿಸುತ್ತಿರುವ ಅವನ ಹೃದಯ.. “










