Advertisement

ಸಾಹಿತ್ಯ

ಓಬಿರಾಯನಕಾಲದ ಕಥಾಸರಣಿಯಲ್ಲಿ ಕುಡ್ಪಿ ವಾಸುದೇವ ಶೆಣೈ ಬರೆದ ಕತೆ

ಓಬಿರಾಯನಕಾಲದ ಕಥಾಸರಣಿಯಲ್ಲಿ ಕುಡ್ಪಿ ವಾಸುದೇವ ಶೆಣೈ ಬರೆದ ಕತೆ

“ಅಂದಿನ ಆ ನಿಶಿ! ವಿಧಾತನು ತನ್ನ ಕಲಾಜ್ಞಾನವನ್ನೆಲ್ಲ ಪ್ರಯೋಗಿಸಿ ಅದನ್ನು ರಚಿಸಿರುವನೆಂಬಂತೆ ತೋರುತ್ತಿತ್ತು. ಆ ಅಂಧಕಾರದ ಭೀಕರ ಸೌಂದರ್ಯವನ್ನು ನೋಡಿ ದೇವಗಣಗಳೂ, ತಾರಾಮಂಡಲವೂ ಮುಗ್ಧವಾದಂತಿತ್ತು. ಸಂಪತನು ಅದರ ಕಡೆಗೆ ತಿಲಾಂಶವೂ ಗಮನಕೊಡದೆ, ಉನ್ಮಾದನಂತೆ ಮನೆಯಿಂದ ಹೊರಬಿದ್ದನು. ಈ ಕೊಲೆಗಡುಕನನ್ನು ಸ್ಪರ್ಶಿಸಲಾರದೆ ವಾಯುದೇವನು ಕೂಗುತ್ತ ದಿಕ್ಕು ತೋಚದೆ ಓಡಾಡಿದನು.”

read more
ವಸುಧೇಂದ್ರರ ‘ತೇಜೋ=ತುಂಗಭದ್ರಾ’ ಕುರಿತು ಎಚ್.ಆರ್. ರಮೇಶ್ ಲೇಖನ

ವಸುಧೇಂದ್ರರ ‘ತೇಜೋ=ತುಂಗಭದ್ರಾ’ ಕುರಿತು ಎಚ್.ಆರ್. ರಮೇಶ್ ಲೇಖನ

“ಹಂಪಕ್ಕಳನ್ನು ಇವರ ಸುಪರ್ದಿಗೆ ಬಿಟ್ಟು ಹೊರಟಾಗ ಹಂಪಕ್ಕಳಿಗೆ ಇವನ ಮೇಲೆ ಆಸೆ ಹುಟ್ಟುತ್ತದೆ. ಆದರೆ ಅವನು ‘ನಾನೊಂದು ದೇಶದವನು, ನೀನು ಮತ್ತೊಂದು ದೇಶದವಳು. ಒಂದಕ್ಕೊಂದು ಸಂಬಂಧವಿಲ್ಲದ ಸಂಸ್ಕೃತಿಯಲ್ಲಿ ಬೆಳೆದವರು. ಇಬ್ಬರಿಗೂ ಹೊಂದಾಣಿಕೆಯಾಗುವುದಿಲ್ಲ ಹಂಪಮ್ಮ’ ಎನ್ನುತ್ತಾನೆ. ಅದಕ್ಕೆ ಅವಳು ‘ಕಣ್ಣಾ, ಹಲವಾರು ಬಗೆಯ ಕುಲಾವಿಗಳನ್ನು ಹೊಲಿದವಳು ನಾನು… “

read more
ಮಂಟೇದರನೊಕ್ಕಲು ಲೋಕರೂಢಿಗೊಳಗಾದುದು: ಮಂಜುನಾಥ್ ಲತಾ ಬರೆದ ಕತೆ

ಮಂಟೇದರನೊಕ್ಕಲು ಲೋಕರೂಢಿಗೊಳಗಾದುದು: ಮಂಜುನಾಥ್ ಲತಾ ಬರೆದ ಕತೆ

“‘ಸ್ವಾಮಿ ಮಾದೇಸ್ವಾಮಿಯವರೇ, ನಿಮ್ಮ ಹಾಡುಗಾರಿಕೆಯನ್ನು ಮೆಚ್ಚಿ ಘನ ಸರ್ಕಾರವು ತಮಗೆ ಸೈಟು, ಪ್ರಶಸ್ತಿಗಳನ್ನೆಲ್ಲ ದಯಪಾಲಿಸಿರುವುದು ಸರಿಯಷ್ಟೆ. ಆದರೆ ಅದು ನಿಮ್ಮ ಹಳೆಯ ಮೂಲ ಹಾಡುಗಾರಿಕೆಗೆ ಸಂದ ಬೆಲೆಯಲ್ಲದೆ ಈಗ ನೀವು ಹಾಡಲು ಹೊರಡುತ್ತಿರುವ ಕ್ಯಾಸೆಟ್ ಹಾಡುಗಳಿಗೆ ಸಿಕ್ಕಿದ್ದಲ್ಲ… ನೀವು ನಿಮ್ಮ ಮೂಲವನ್ನು ಮರೆತಂತೆ ಮಾತಾಡುತ್ತಿರುವುದು ಸರಿಯಲ್ಲ… ಇಂಥ ನಿಮ್ಮ ಧೋರಣೆಗೆ ನನ್ನ ಧಿಕ್ಕಾರವಿದೆ…”

read more
ಅಕ್ಷತಾ ಕೃಷ್ಣಮೂರ್ತಿ ಪುಸ್ತಕಕ್ಕೆ ಪ್ರೊ.ಕಾಳೇಗೌಡ ನಾಗವಾರ ಬರೆದ ಮುನ್ನುಡಿ

ಅಕ್ಷತಾ ಕೃಷ್ಣಮೂರ್ತಿ ಪುಸ್ತಕಕ್ಕೆ ಪ್ರೊ.ಕಾಳೇಗೌಡ ನಾಗವಾರ ಬರೆದ ಮುನ್ನುಡಿ

“ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ ನಾಡಿನ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆದಿರುವ ಸಮ್ಮೇಳನ, ವಿಚಾರಗೋಷ್ಠಿಗಳಲ್ಲಿ ಆಗಾಗ್ಗೆ ಸುಕ್ರಜ್ಜಿಯ ಒಡನಾಟವು ನೀಡುವ ಆನಂದದ ಸವಿಯನ್ನು ನಾವೆಲ್ಲಾ ಅನುಭವಿಸಿದ್ದೇವೆ. ಕಾಡುಗೊಲ್ಲರ ಸಿರಿಯಜ್ಜಿ, ಸಾಲುಮರದ ತಿಮ್ಮಕ್ಕ, ಹಾಲಕ್ಕಿ ಒಕ್ಕಲು ಬುಡಕಟ್ಟಿನ ವಿಶಿಷ್ಟ ಪ್ರತಿಭೆ ಸುಕ್ರಿ ಬೊಮ್ಮಗೌಡ- ಮುಂತಾದ ಈ ಪ್ರಕೃತಿಯ ಕಂದಮ್ಮಗಳು ನೀಡುವ ಅನುಭವಲೋಕ ಹಾಗೂ …”

read more
ಓಬಿರಾಯನ ಕಾಲದ ಕಥಾಸರಣಿಯಲ್ಲಿ ಕೆ.ಕೆ. ಶೆಟ್ಟಿ ಬರೆದ ಕತೆ

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಕೆ.ಕೆ. ಶೆಟ್ಟಿ ಬರೆದ ಕತೆ

“ಸ್ತ್ರೀಯರೆಂದರೆ ಆಚಾರ್ಯರಿಗೆ ವಿಶೇಷ ಪಕ್ಷಪಾತ. ಕೀರ್ತನೆ ಮುಗಿದ ಕೂಡಲೆ ಸ್ವರಾಜ್ಯಫಂಡಿಗೆ ಹಣ ಆಭರಣ ಕೂಡಿಸಲು ಆಚಾರ್ಯರೇ ತೊಡಗುತ್ತಿದ್ದರು. ಸ್ತ್ರೀಯರು ತಮ್ಮ ಆಭರಣಗಳನ್ನು ಕೊಡಬೇಕೆಂದು ಪ್ರತ್ಯೇಕವಾಗಿ ಉತ್ತೇಜಿಸುತ್ತಿದ್ದರು. ಆಚಾರ್ಯರ ಉತ್ತೇಜಕ ವಾಕ್ಸರಣಿಯ ಬಲೆಯಲ್ಲಿ ಸಿಕ್ಕಿದ ಎಂತಹ ಲೋಭಿಯ ಮನಸ್ಸೂ ಒಮ್ಮೆಗೆ ತಲ್ಲಣವಾಗುತ್ತಿತ್ತು. ಹಣ ಮಾತ್ರವಲ್ಲದೆ ಉಂಗುರ, ಬಳೆ, ಸರ, ಒಂಟಿ ಮೊದಲಾದ ಆಭರಣಗಳೂ…”

read more
ವಿ.ಆರ್. ಕಾರ್ಪೆಂಟರ್ ಕಥಾ ಸಂಕಲನ ಕುರಿತು ಶ್ರೀದೇವಿ ಕೆರೆಮನೆ ಬರಹ

ವಿ.ಆರ್. ಕಾರ್ಪೆಂಟರ್ ಕಥಾ ಸಂಕಲನ ಕುರಿತು ಶ್ರೀದೇವಿ ಕೆರೆಮನೆ ಬರಹ

“ಬ್ರಾಹ್ಮಿನ್ ಕೆಫೆ ಎನ್ನುವ ಪಿಡಿಎಫ್ ಒಂದು ಝಗ್ಗನೆ ಮೊಬೈಲ್ ಗೆ ಬಂದು ಕುಳಿತಾಗ ಆ ಹೆಸರು ಆಶ್ಚರ್ಯ ಹುಟ್ಟಿಸಿರಲಿಲ್ಲ. ಯಾಕೆಂದರೆ ಎಷ್ಟೋ ದಿನಗಳಿಂದ ಗೆಳೆಯ ವಿ ಆರ್ ಕಾರ್ಪೆಂಟರ್ ಈ ಹೆಸರನ್ನು ಹೇಳುತ್ತಲೇ ಇದ್ದ. ಕೆಲವೊಮ್ಮೆ ಅಲ್ಲಿನ ಕತೆಗಳ ಒಂದಿಷ್ಟು ಎಳೆಗಳನ್ನೂ ಕೂಡ. ಆದರೆ ಕತೆಗಳು ಪೂರ್ಣಗೊಂಡ ನಂತರ ಅದು ಪಡೆದುಕೊಂಡ ತಿರುವುಗಳನ್ನು ಕಂಡಾಗ ಮೈ ಜುಂ ಎನಿಸುವಂತಾಗುತ್ತದೆ.”

read more
ಬೆಂಗಳೂರಲ್ಲಿ ಕಳೆದುಹೋದ ಸಿಂಹ: ಶಂಕರಪ್ಪ ಕೆ.ಪಿ. ಬರೆದ ಕತೆ

ಬೆಂಗಳೂರಲ್ಲಿ ಕಳೆದುಹೋದ ಸಿಂಹ: ಶಂಕರಪ್ಪ ಕೆ.ಪಿ. ಬರೆದ ಕತೆ

“ದೂರದಲ್ಲಿ ನಾಯಿಗಳು ಬೊಗಳುತ್ತಿದ್ದವು. ಕಾಡು ಸೇರಿಕೊಂಡ ಮೇಲೆ ಬೇಟೆ ಸಿಗದೆ ಹಸಿದಿದ್ದ ಗಡ್ದುಲಿಯು ಕೆಂಪಾಲಗನ ಆಡು ಕುರಿಗಳ ಜಾಡಿಡಿದು ಜೋಪಡಿಯ ಕೊಟ್ಟಿಗೆಯ ಬಳಿ ಬಂದು ನಿಂತಿತ್ತು. ಆ ಕಳ್ಳ ಹೆಜ್ಜೆಗಳನಿಕ್ಕುತ್ತಾ ಒಂದು ಕೊಟ್ಟಿಗೆಯ ಮುಂದೆ ಕಟ್ಟಿದ್ದ ಕರುವಿನ ಮೇಲೆ ಬಿದ್ದು ಗ್ವಾಕೆಗೆ ಬಾಯಾಕಿ ಅಲುಮಾಕಿಬಿಡ್ತು. ಆಡು ಕುರಿಗಳು ಒಂದೇ ಸಮನೆ ಬ್ಯಾಗುಡುತ್ತಿದ್ದವು.”

read more
ಫಕೀರ ಕಾವ್ಯ ಸಂಕಲನಕ್ಕೆ ಡಾ. ಮಲರ್ ವಿಳಿ  ಬರೆದ ಮುನ್ನುಡಿ

ಫಕೀರ ಕಾವ್ಯ ಸಂಕಲನಕ್ಕೆ ಡಾ. ಮಲರ್ ವಿಳಿ ಬರೆದ ಮುನ್ನುಡಿ

“‘ಸಾವೆಂಬುದು ನಿರಾಳ ಮೌನ’ ಕವಿತೆಯಲ್ಲಿ ಒಬ್ಬ ವ್ಯಕ್ತಿಯ ಸಾವಿನ ನಂತರದ ನೆನಪುಗಳು ಹೇಗೆಲ್ಲ ನಮ್ಮನ್ನು ಕಾಡುತ್ತವೆ, ಇಲ್ಲಿಯ ತದ್ರೂಪ ಚಿತ್ರಣಗಳು ನಮ್ಮ ಮನಸ್ಸನ್ನು ತಟ್ಟುತ್ತವೆ, ಎಚ್ಚರಿಸುತ್ತವೆ. ತಾತ್ತ್ವಿಕತೆಯನ್ನು ಬೋಧಿಸುತ್ತವೆ, ನಶ್ವರತೆಯ ಸಂದೇಶವನ್ನು ಸಾರುತ್ತಾ ನೆನಪೊಂದೇ ಉಳಿಯುವುದು ಎಂಬ ಚಿತ್ರಣವನ್ನು ಕಣ್ಣಿಗೆ ಕಟ್ಟಿದಂತೆ ಶ್ರೀಧರರು ರಚಿಸಿದ್ದಾರೆ. `ನಗುವಿನ ಬೀಜಗಳು ಮಾರಾಟಕ್ಕಿವೆ’-ಇತ್ತೀಚೆಗೆ ನಗು…”

read more
ಪದಕುಸಿಯೆ …: ಶ್ರೀಹರ್ಷ ಸಾಲೀಮಠ ಬರೆದ ಈ ವಾರದ ಕತೆ

ಪದಕುಸಿಯೆ …: ಶ್ರೀಹರ್ಷ ಸಾಲೀಮಠ ಬರೆದ ಈ ವಾರದ ಕತೆ

“ಹೀಗೆ ಕಾಯುತ್ತಿದ್ದ ಮೂರನೆ ದಿನ ನಮ್ಮ ದೋಣಿ ತಳ ಮುರಿದು ಮುಳುಗತೊಡಗಿತು. ನಾವು ಅಷ್ಟರೊಳಗೆ ಅಪಾಯದ ಗಂಟೆ ಮೊಳಗಿಸಿ ಸಮುದ್ರಕ್ಕೆ ಹಾರಿಕೊಂಡೆವು. ನಮ್ಮ ಕರೆಯನ್ನು ಕೇಳಿದ ಮಿಲಿಟರಿ ದೋಣಿಯೊಂದು ಬಂದು ನಮ್ಮಲ್ಲಿ ಸಾಧ್ಯವಾದವರನ್ನೆಲ್ಲ ರಕ್ಷಿಸಿತು. ಹೊರಬಂದು ಎಣಿಸಿಕೊಂಡು ನೋಡಿದಾಗ ಹನ್ನೆರಡು ಜನ ಮುಳುಗಿಹೋಗಿದ್ದಾರೆ ಅಂತ ತಿಳಿಯಿತು. ನಮ್ಮ ಹಾಗೆ ಸಾವಿರ ಸಾವಿರ ಸಂಖ್ಯೆಯಲ್ಲಿ ಬರುವ ಜನರಲ್ಲಿ ಒಂದು ಪಾಲನ್ನು ತನ್ನ ಬಲಿಯಾಗಿ ಪಡೆದುಕೊಳ್ಳುವ ಕ್ರಿಶ್ಚಿಯನ್…”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ