Advertisement

ಸಾಹಿತ್ಯ

ಪಂಜೆ ಮಂಗೇಶರಾವ್ ಬರೆದ ಕತೆ “ವೈದ್ಯರ ಒಗ್ಗರಣೆ”

ಪಂಜೆ ಮಂಗೇಶರಾವ್ ಬರೆದ ಕತೆ “ವೈದ್ಯರ ಒಗ್ಗರಣೆ”

ಪಟೇಲ ಪದ್ಮರಾಜನಿಗೆ ಮತ್ತೊಬ್ಬ ಅಡಿಗೆಯವನು ಇನ್ನೂ ಸಿಕ್ಕಲಿಲ್ಲ. ಅದು ಕಾರಣದಿಂದ ಹುದ್ದೇದಾರರು ಇದ್ದಷ್ಟು ದಿನ ವೈದ್ಯರು ಒಲೆಯ ಬಳಿ ಹೆಂಗಸಿನಂತೆ ಬೇಯಬೇಕಾಯಿತು. ಮೂರನೆಯ ದಿನ ಮಧ್ಯಾಹ್ನದಲ್ಲಿ ಕೃಷ್ಣ ವೈದ್ಯರು ಯಾವುದನ್ನೋ ನೆನೆಸುತ್ತ ಕುಳಿತಿದ್ದರು. “

read more
ಚಿಣ್ಣಪ್ಪನವರ ಕುರಿತ ಪುಸ್ತಕಕ್ಕೆ ಉಲ್ಲಾಸ ಕಾರಂತ್ ಬರೆದ ಮುನ್ನುಡಿ

ಚಿಣ್ಣಪ್ಪನವರ ಕುರಿತ ಪುಸ್ತಕಕ್ಕೆ ಉಲ್ಲಾಸ ಕಾರಂತ್ ಬರೆದ ಮುನ್ನುಡಿ

ಚಿಣ್ಣಪ್ಪನವರು ಹೆಚ್ಚು ವಿದ್ಯಾಭ್ಯಾಸ ಮಾಡಿದವರಲ್ಲ. ಅದರಿಂದ ಒಂದು ರೀತಿಯಲ್ಲಿ ಒಳ್ಳೆಯದಾಯಿತೆಂದೇ ಹೇಳಬೇಕು. ಚಿಕ್ಕ ಮಕ್ಕಳಲ್ಲಿ ನಿಸರ್ಗ-ಪರಿಸರಗಳ ಬಗ್ಗೆ ಅಪಾರ ಕುತೂಹಲವಿರುತ್ತದೆ. ಆ ಕುತೂಹಲವೆಲ್ಲವನ್ನೂ ನಮ್ಮ ಶಾಲೆಗಳ ವಿದ್ಯಾಭ್ಯಾಸ ಕ್ರಮ ಕೊಂದೇಬಿಡುತ್ತದೆ.

read more
ಲೋಕಕೆ ಬಿಡುವಿಲ್ಲ ನಿನ್ನೆ ಚಿಂತಿಸುತಿರಲು: ಶುಭಾ ಎ.ಆರ್. ಬರೆದ ಕತೆ

ಲೋಕಕೆ ಬಿಡುವಿಲ್ಲ ನಿನ್ನೆ ಚಿಂತಿಸುತಿರಲು: ಶುಭಾ ಎ.ಆರ್. ಬರೆದ ಕತೆ

“ಏಳು ಲಾಖಿ… ಈ ಆಸ್ಪತ್ರೆಯಲ್ಲಿ ಎಷ್ಟೆಂದು ಮಲಗುತ್ತೀಯ ನಡೀ” ಎನ್ನುತ್ತಾ ಜೀತೂ ಮೈಮೇಲೆ ಖಬರಿಲ್ಲದವನಂತೆ ಲಾಖಿಯ ಭುಜ ಹಿಡಿದು ಅಲುಗಾಡಿಸುತ್ತಿದುದನ್ನ ನೋಡಿ ಅಲ್ಲೇ ಓಡಾಡುತ್ತಿದ್ದ ಬಿಳಿಸೀರೆಯ ದಾದಿ ಕನಿಕರಗೊಂಡು “ತಮ್ಮಾ ನೀನು ಎಷ್ಟು ಎಬ್ಬಿಸಿದ್ರೂ ಅವಳಿನ್ನ ಏಳಲಾರಳು, ನೋಡಲ್ಲಿ ನಿನ್ನ ಮಕ್ಕಳು ಕಂಗಾಲಾಗಿ ನಿನ್ನನ್ನೇ ನೋಡ್ತಿವೆ” ಎಂದು ಅವನ ಭುಜ ಹಿಡಿದು ಸಂತೈಸಿದಳು. ಜೀತೂ ಮತ್ತೆ ವಾಸ್ತವದಲ್ಲಿ ಬಿದ್ದ. ಲಾಖಿ ಕ್ಯಾರೇ ಎನ್ನದಂತೆ ಮಲಗಿಯೇ ಇದ್ದಳು.”

read more
ಆಕರ್ಷ ರಮೇಶ್ ಕಮಲ ಪುಸ್ತಕಕ್ಕೆ ಕೇಶವ ಮಳಗಿ ಮುನ್ನುಡಿ

ಆಕರ್ಷ ರಮೇಶ್ ಕಮಲ ಪುಸ್ತಕಕ್ಕೆ ಕೇಶವ ಮಳಗಿ ಮುನ್ನುಡಿ

“ನಗರಗಳ ಅನೂಹ್ಯತೆ, ಅವು ಸೃಷ್ಟಿಸುವ ತಲ್ಲಣ ಮತ್ತು ಉಂಟುಮಾಡುವ ಪಲ್ಲಟ, ಅದರೊಳಗೆ ಹೂತಿರುವ ಆದರೆ ಚದುರಿ ಚೆಲ್ಲಾಪಿಲ್ಲಿಯಾಗಿರುವ ಲೋಕ, ನಗರದ ಅಸ್ತವ್ಯಸ್ತತೆಗಳು, ಇವುಗಳ ನಡುವೆಯೇ ಇರಬಹುದಾದ ಅರ್ಥವನ್ನು ಹೊರ ತೆಗೆಯುವ ಸೃಜನಶೀಲ ಹುಡುಕಾಟ ಈ ಕವಿತೆಗಳ ಮೂಲದ್ರವ್ಯವಾಗಿದೆ. ಆ ನಿಟ್ಟಿನಲ್ಲಿ ಆಕರ್ಷ ತನ್ನ ಅವಕಾಶ, ವ್ಯಾಪ್ತಿ ಮತ್ತು ಇಳಿದಾಣಗಳನ್ನು ಈಗಾಗಲೇ ಗುರುತಿಸಿಕೊಂಡಂತೆ ಕಾಣುತ್ತಿದ್ದಾನೆ. ತನ್ನ ಅಭಿವ್ಯಕ್ತಿಗೆ ಬೇಕಾದ ನುಡಿಗಟ್ಟು, ರೂಪಕ, ಪ್ರತಿಮಾಲೋಕಗಳನ್ನು ಅನುಭವ ಮತ್ತು ಭಾಷೆಗಳ ಟಂಕಸಾಲೆಯಲ್ಲಿ ನಿರ್ಮಿಸಿಕೊಳ್ಳುತ್ತಿದ್ದಾನೆ”

read more
ಓಬೀರಾಯನ ಕಾಲದ ಕತೆಗಳ ಸರಣಿಯಲ್ಲಿ ಎಂ. ಎನ್. ಕಾಮತ್ ಬರೆದ ಕತೆ “ಕದ್ದವರು ಯಾರು?”

ಓಬೀರಾಯನ ಕಾಲದ ಕತೆಗಳ ಸರಣಿಯಲ್ಲಿ ಎಂ. ಎನ್. ಕಾಮತ್ ಬರೆದ ಕತೆ “ಕದ್ದವರು ಯಾರು?”

“ಮಂತ್ರವಾದಿಯೂ ಗಂಡನೂ ಕೇಳುತ್ತಲೇ ಇದ್ದ ಪ್ರಶ್ನೆಗಳಿಗೆ “ನಾನೊಂದೂ ಅರಿಯೆ”, ಎಂದೇ ಉತ್ತರ ಕೊಡುತ್ತಿದ್ದಂತೆ, – ಕುಂಡದ ಬಳಿ ಅವಳು ಕೂತಿರಬೇಕೆಂದಾಯಿತು. ಮಿಂದುಟ್ಟ ಒದ್ದೆ ಸೀರೆಯು ಮೈಮೇಲೆಯೇ ಒಣಗಹತ್ತಿತು. ಕೂದಲು ಕಟ್ಟಿಕೊಂಡಿರಲಿಲ್ಲ, ಒಣಗಲೆಂದು; ಅದೆಲ್ಲ ಬೆಂಕಿಯ ಧಗೆಗೆ ಒಣಗುತ್ತ ಗಾಳಿಗೆ ತೂಗುತ್ತ, ಬೆಂಕಿಯ ನಾಲಿಗೆಗಳನ್ನು ಸೋಕುತ್ತ, ಅಷ್ಟಷ್ಟೇ ತುದಿಗಳು ಸುಡುತ್ತ ಕರಿಯಾದುವು.”

read more
ತಿದ್ದಿಕೊಂಡ ಕನ್ನಡದ  ಮನಸ್ಸೊಂದು ಭಿನ್ನಸಂಸ್ಕೃತಿಗಳ ಕಥೆಯಾಗಿಸುವ ಪರಿ

ತಿದ್ದಿಕೊಂಡ ಕನ್ನಡದ ಮನಸ್ಸೊಂದು ಭಿನ್ನಸಂಸ್ಕೃತಿಗಳ ಕಥೆಯಾಗಿಸುವ ಪರಿ

“ಕನ್ನಡದ ಕಥೆ-ಕಾದಂಬರಿಗಳಲ್ಲಿ ವಿಜ್ಞಾನದ ವಸ್ತುಗಳನ್ನು ಬಳಸಿಕೊಳ್ಳುವುದು ಅಪರೂಪವೇನಲ್ಲ, ಆದರೂ ಈ ಬಗೆಯ ಕಥೆಗಳಲ್ಲಿ ಪ್ರಯೋಗಶೀಲತೆಗೆ ಅಪಾರ ಅವಕಾಶವಿದೆ. ಎರಡು ಸಾವಿರದ ಒಂದುನೂರನೆಯ ಇಸವಿಯಲ್ಲಿ ನಡೆಯುವ ಈ ಕಥೆ, ಆದರ್ಶ ಲೋಕವನ್ನಲ್ಲ, ಅವನತಿ ಮುಖದ ನಾಗರಿಕತೆಯ ಚಿತ್ರಣವನ್ನು ಮಾಡುತ್ತದೆ. .”

read more
ಬಿಡುಗಡೆ: ಮೀರಾ ಸಂಪಿಗೆ ಬರೆದ ಈ ವಾರದ ಕತೆ

ಬಿಡುಗಡೆ: ಮೀರಾ ಸಂಪಿಗೆ ಬರೆದ ಈ ವಾರದ ಕತೆ

“ಮುಂದೆ, ಆ ಮನೆಯಲ್ಲಿರಲಿಕ್ಕಾಗದೆ ಆಕೆ ಮನೆ ಖಾಲಿ ಮಾಡಿ ಹೋದಳು. ಅಡಿಗೆ ಮಾಡುವ ಕೆಲಸ ಸಿಕ್ಕಿದೆಯೆಂದು, ಸಂಬಳ ಚೆನ್ನಾಗಿದ್ದು, ಊಟ ಬಟ್ಟೆ ಖರ್ಚು ಕಳೆಯುತ್ತದೆಂದೂ, ಗಂಡನ ಖಾಯಿಲೆಗಾಗಿ ಮಾಡಿದ ಸಾಲ ತೀರಿಸುವುದಕ್ಕೆ ಸಹಾಯವಾಗುತ್ತದೆಂದು ಹೇಳಿದಳು. ಸಾಲ ಮುಗಿಯಲು ಅನೇಕ ವರ್ಷಗಳೇ ಬೇಕಾಗಬಹುದೆಂದೂ ತಿಳಿಸಿದಳು. ಅವಳ ಸಮಾಧಾನ, ಸ್ಥೈರ್ಯಗಳನ್ನು ಮೆಚ್ಚಿ ನಾನೂ ಕೆಲವು ಧೈರ್ಯದ ಮಾತನ್ನಾಡಿ ಅವಳಿಗೆ ವಿದಾಯ ಹೇಳಿದೆ. ಅಂತೂ ಹಲವು ವರುಷಗಳ ಹೊಡೆತ, ಬಡಿತದ ನರಕದಿಂದ ಆ ಜೀವಿಗೆ ಶಾಶ್ವತ ಬಿಡುಗಡೆ ದೊರೆಯಿತಲ್ಲಾ ಎಂದು ನೆಮ್ಮದಿಯ ಉಸಿರೆಳೆದೆ.”

read more
ಸಂಸ್ಕೃತಿ ಕಥನವೇ ಆಗಿಬಿಡುವ ಬಾಲ್ಯದ ನೆನಪುಗಳ ಹೊತ್ತಿಗೆ

ಸಂಸ್ಕೃತಿ ಕಥನವೇ ಆಗಿಬಿಡುವ ಬಾಲ್ಯದ ನೆನಪುಗಳ ಹೊತ್ತಿಗೆ

”ಬಾಲ್ಯದ ಅನುಭವಗಳನ್ನು ಬಿಡಿಬಿಡಿ ಅನುಭವ ಕಥನಗಳ ಮೂಲಕ ಸಾದರಪಡಿಸುವ ಜೋಯಪ್ಪ, ಈ ಅನುಭವಗಳನ್ನು ಒಂದು ಸಂಸ್ಕೃತಿ ಕಥನದ ಮಟ್ಟಕ್ಕೆ ಏರಿಸಿಬಿಡುತ್ತಾರೆ. ಸಂದ ಕಾಲದಲ್ಲಿ ನೆಲೆ ಊರಿದ್ದ ಒಂದು ಭೌಗೋಳಿಕ ಚೌಕಟ್ಟಿನ ಬದುಕನ್ನು; ಇದು ಎಲ್ಲಾ ಕುಟುಂಬಗಳ ಕಥೆ ಎಂಬಂತೆ ಹರಳು ಕಟ್ಟಿದ ಕಥನಗಳ ಮೂಲಕ ಜೋಯಪ್ಪ ಕಟ್ಟುತ್ತಾರೆ”

read more
ಮೇದಿನಿ ಕವನ ಸಂಕಲನಕ್ಕೆ ಎಸ್.ಆರ್.ವಿಜಯಶಂಕರ್ ಮುನ್ನುಡಿ

ಮೇದಿನಿ ಕವನ ಸಂಕಲನಕ್ಕೆ ಎಸ್.ಆರ್.ವಿಜಯಶಂಕರ್ ಮುನ್ನುಡಿ

“ಭಾವವು ಪ್ರೇಮವಾಗುವುದು ಸಹಜ ಬೆಳವಣಿಗೆ. ಪ್ರೇಮದ ಮುಂದಿನ ಹಂತ ಜೊತೆಯಾದ ಬದುಕು. ಅದು ವಾಸ್ತವ. ಆದರೆ ವಾಸ್ತವದಲ್ಲಿ ಭಾವದ ಬೀಜ ಭಿನ್ನ ರೂಪದಲ್ಲಿ ಇರುತ್ತದೆ. ಮೊಳಕೆ ಬೀಜದಿಂದ ಹುಟ್ಟಿದ್ದೇ ಆದರೂ ಅದು ಬೀಜವಲ್ಲ. ಲೋಕದ ಸತ್ಯದ ಇಂತಹ ಹಲವು ನೆಲೆಗಳ ಅರಿವು ಕವಯಿತ್ರಿಗಿದೆ.”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ