Advertisement

Month: May 2024

ಲೇಡೀಸ್ ಹಾಸ್ಟೆಲ್ ದಯ್ಯ ಬಿಡಿಸಿದ ಭಟ್ಕಳದ ಬಾಲೆ

ನನ್ನಲ್ಲಿ ಲೇಡೀಸ್ ಹಾಸ್ಟೆಲ್ ಬಗೆಗೊಂದು ಅಸೀಮ ಕುತೂಹಲ ಬೆಳೆದಿತ್ತು. ಹಾಸ್ಟೆಲ್ ನಲ್ಲಿ ಹುಡುಗಿಯರ ಸಾಮ್ರಾಜ್ಯ ಹೇಗಿದ್ದೀತು? ಹರಟೆಯ ಹೊತ್ತಲ್ಲಿ ಏನೆಲ್ಲ ವಾಗ್ವಾದ ನಡೀಬಹುದು? ಅಡುಗೆ ಸರೀಗಿಲ್ಲ ಅಂದ್ರೆ ಅಡುಗೆಯವ್ರಿಗೆ ಕ್ಲಾಸ್ ತಗೋತಾರಾ? ಪೊಲಿಟಿಕ್ಸ್ ಬಗ್ಗೆ ಮಾತಾಡ್ತಾರಾ? ಹೊಡೆದಾಟಗಳು ನಡೆದ್ರೆ ಹೇಗೆ ನಡೀತದೆ? ಸಂಚುಗಳು ಹೆಂಗೆ ಎಕ್ಸಿಕ್ಯೂಟ್ ಆಗ್ತವೆ? ರೂಮು ಗಲೀಜು ಇಟ್ಕೊಂಡಿರ್ತಾರಾ ಅಥವಾ ಸಿಕ್ಕಾಪಟ್ಟೆ ನೀಟಾಗಿರ್ತದಾ?… ಹೀಗೆ ತರಹೇವಾರಿ ತರ್ಕಗಳು -ಸಹ್ಯಾದ್ರಿ ನಾಗರಾಜ್ ಬರೆಯುವ ‘ಸೊಗದೆ’ ಅಂಕಣ ನಿಮ್ಮ ಓದಿಗೆ.

Read More

ಬದುಕಿನ ಹಡಗು ಮತ್ತೊಂದು ತೀರದೆಡೆಗೆ..

ಇನ್ನೇನು ಸುರಂಗ ಕೊರೆಯುವ ಕೆಲಸ ಮುಕ್ತಾಯವಾಗುತ್ತ ಬಂದಿತ್ತು. ಕೆಲವೇ ಅಡಿಗಳಷ್ಟೇ ಕೊರೆಯುವ ಕೆಲಸ ಬಾಕಿ ಉಳಿದಿತ್ತು. ಸುರಂಗ ಮುಂದೆ ಸಾಗಿದಂತೆ ಮರದ ದೊಡ್ಡ ದಿಮ್ಮಿಗಳನ್ನಿಟ್ಟು ಆಧಾರದಂತೆ ಕೊಡುವುದು ಇದಿನಬ್ಬನಿಗೆ ಮರೆತು ಹೋಗಿತ್ತು. ಆ ವಿಷಯ ನೆನಪಾಗುತ್ತಲೇ, ಓಡಿ ಓಡಿ ಎಂದು ಕಿರುಚಿದ. ಎಲ್ಲರೂ ದಿಕ್ಕಾಪಾಲಾಗಿ ಓಡಿದರು. ಇದಿನಬ್ಬನಿಗೆ ಓಡಲಾಗಲಿಲ್ಲ‌. ಇದ್ದಕ್ಕಿದ್ದಂತೆ ಭಾರೀ ಸದ್ದಿನೊಂದಿಗೆ ಗುಡ್ಡದ ಒಂದು ಭಾಗ ಜರ್ರನೆ ಕುಳಿತೇ ಬಿಟ್ಟಿತು. ಇದಿನಬ್ಬನೂ ಸೇರಿ ನಾಲ್ಕೈದು ಜ‌ನರು ಆ ಮಣ್ಣಿನೊಳಗೆ ಸಿಕ್ಕಿಹಾಕಿಕೊಂಡರು.
ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರುಕಾದಂಬರಿಯ ಎಂಟನೆಯ  ಕಂತು.

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಬೇಲೂರು ರಘುನಂದನ್‌ ಬರೆದ ಕಥೆ

ಶರಾಬು ಪಾಕೀಟು ಸಿಗೋದು ಶೆಟ್ರು ತೋಟದಿಂದ ಬರೋಬ್ಬರಿ ಐದು ಮೈಲಿ ದೂರ. ಮಳೆ ಬೇರೆ. ನಡ್ಕಂಡು ಹೋಗಿ ಇವಳು ಶರಾಬು ಕುಡ್ದು ಏಡಿ ಹಿಡಿದು ತರೋ ಹೊತ್ಗೆ ಕತ್ತಲು ಕವಿದಿರುತ್ತೆ. ಹಂಗಾದ್ರೆ ರಾತ್ರಿ ಮಿಣಕ ಮಿಣಕ ಅನ್ನೊ ದೀಪದ ಬೆಳಕಲ್ಲಿ ಒಲೆ ಮುಂದೆ ಹೋಗೋದು ಸಾಧ್ಯವಿಲ್ಲ ಅಂತ ಎಣಿಸಿ ಶೆಟ್ರ ಹೆಂಡ್ತಿ ಬರ ಬರ ಒಳಗೋದ್ಲು. ಅಟ್ಟದ ಮೇಲಿಟ್ಟಿದ್ದ ಶೆಟ್ರ ಬಾಟ್ಲಿಲಿ ಅರ್ಧ ಇನ್ನೊಂದು ಬಾಟ್ಲಿಗೆ ಸುರ್ಕಂಡು ಅಮ್ಮಯ್ಯಂಗೆ ತಂದುಕೊಟ್ಳು.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಬೇಲೂರು ರಘುನಂದನ್‌ ಬರೆದ ಕತೆ ‘ಏಡಿ ಅಮ್ಮಯ್ಯ’

Read More

ಸಮಬೆಸಗಳ ಸರಿಗಮ ತಪ್ಪಿದ್ದಲ್ಲ

ಈ ಬಾರಿ ಸಿಡ್ನಿ ಮಹಾನಗರ ವಲಯದಲ್ಲಿ ಜಾರಿಗೆ ಬಂದ ಲಾಕ್ ಡೌನ್ ಸ್ವಲ್ಪ ಗಲಾಟೆ ಎಬ್ಬಿಸಿದೆ. ನಗರದ ಪಶ್ಚಿಮ ಬಡಾವಣೆಗಳಲ್ಲಿ ಹೆಚ್ಚು ಡೆಲ್ಟಾ ವೈರಸ್ ಸೋಂಕು ಕಾಣಿಸಿದ್ದು ವರದಿಯಾಗಿತ್ತು. ಆ ಪ್ರದೇಶದಲ್ಲಿ ವಾಸಿಸುತ್ತಿರುವ, ಅನೇಕತೆಗಳಿರುವ- ಅಂದರೆ ಆಂಗ್ಲೋ-ಆಸ್ಟ್ರೇಲಿಯನ್ ಅಲ್ಲದ ಬೇರೆ ಸಂಸ್ಕೃತಿಗಳ ಜನರು ಲಾಕ್ ಡೌನ್ ನಿಯಮಗಳನ್ನು ಸರಿಯಾಗಿ ಪಾಲಿಸಲಿಲ್ಲವೆಂದು ಸುದ್ದಿಯಾಗಿತ್ತು. ರಾಜ್ಯಸರ್ಕಾರ ಆ ಬಡಾವಣೆಗಳಲ್ಲಿ ಬಂದೋಬಸ್ತು ಮಾಡಲು, ಪೊಲೀಸರನ್ನು ಕಳಿಸಿತು. ಇದು ಅಲ್ಲಿನ ವಿವಿಧ ಸಂಸ್ಕೃತಿಗಳ ಜನಸಮುದಾಯಗಳನ್ನು ಆತಂಕಕ್ಕೀಡು ಮಾಡಿದೆ ಎಂಬ ಸುದ್ದಿ ಚರ್ಚೆಗೆ ಬಂದಿದೆ. ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಅಪರಾಧ ಮತ್ತು ಶಿಕ್ಷೆ: ಇದು ಯಾವ ಪಾಪಕ್ಕೆ…?

ಸಿಡಿಲು ಬಡಿದವಳ ಹಾಗೆ ಕ್ಯಾತರೀನ ಸುಮ್ಮನೆ ನಿಂತಳು. ಪೀಟರ್ ಪೆಟ್ರೊವಿಚ್ ಅದು ಹೇಗೆ ಉಪ್ಪಿನ ಋಣ ಮರೆಯಬಲ್ಲ ಅನ್ನುವುದು ಅರ್ಥವೇ ಆಗಲಿಲ್ಲ ಅವಳಿಗೆ. ನಮ್ಮಪ್ಪನ ಉಪ್ಪಿನ ಋಣ ಅವನಮೇಲಿದೆ ಎಂದು ಒಮ್ಮೆ ಕಲ್ಪನೆ ಮಾಡಿಕೊಂಡ ನಂತರ ಆ ಕಲ್ಪನೆಯನ್ನೇ ಅವಳು ನಿಷ್ಠೆಯಿಂದ ನಂಬಿಕೊಂಡಿದ್ದಳು. ಪೀಟರ್ ಪೆಟ್ರೊವಿಚ್‌ನ ಮಾತಿನ ದನಿಯೂ ಆಘಾತ ತಂದಿತ್ತು. ತೀರ ವ್ಯಾವಹಾರಿಕವಾದ, ನಿರ್ಭಾವವಾದ, ಭಯಹುಟ್ಟಿಸುವಂಥ ತಿರಸ್ಕಾರ ಅವನ ದನಿಯಲ್ಲಿತ್ತು.
. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ