Advertisement

Month: May 2024

ಸಂಪತ್ ಕುಮಾರ್ ದುರ್ಗೋಜಿ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಸಂಪತ್ ಕುಮಾರ್ ದುರ್ಗೋಜಿ. ಸಂಪತ್ ಕುಮಾರ್ ಹರಿಹರದವರು, ಹುಬ್ಬಳ್ಳಿಯಲ್ಲಿ ಈಗ ಕನ್ಸಲ್ಟಂಟ್. ಫೋಟೋಗ್ರಫಿ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಒಂದು ಬೊಗಸೆ ನೀರಿಗೆ ಹರಸಾಹಸ

ಮುಗಿಲೆತ್ತರಕ್ಕೆ ಬೆಳೆದು ನಿಂತಿದ್ದ ತೆಂಗಿನಮರಗಳು ರಾತ್ರಿ ಉಚ್ಚೆ ಉಯ್ಯಲು ಹೊರ ಬಂದು ನೋಡಿದಾಗ ದೆವ್ವದಂತೆ ಕಾಣುತ್ತಿದ್ದವು. ಹಾಸ್ಟೆಲ್ ಹುಡುಗರು ಸಂಜೆ ಸ್ಕೂಲಿಂದ ಬಂದರೆಂದರೆ ಗುರಿ ಇಟ್ಟು ಕಲ್ಲು ಬೀಸಿ ತೆಂಗಿನ ಕಾಯಿ ಉದುರಿಸುತ್ತಿದ್ದರು. ಪ್ರತಿನಿತ್ಯ ಒಂದೆರಡು ತೆಂಗಿನ ಕಾಯಿ ಕಿತ್ತು ಚೂಪಾದ ಕಲ್ಲಿನಿಂದ ಮತ್ತು ಹಲ್ಲಿನಿಂದ ಸಿಪ್ಪೆ ಸಿಗಿದು ಕಾಯಿ ಕೆಚ್ಚಿ ಪಚಿಡಿ ಮಾಡಿ ತಿನ್ನುತ್ತಿದ್ದೆವು. ತೋಟದ ಮಾಲೀಕರಿಗೆ ಗೊತ್ತಾದರೆ ದೊಣ್ಣೆಯೊಂದಿಗೆ ಓಡಿಸಿಕೊಂಡು ಬರುತ್ತಿದ್ದರು. ಅವರ ಹತ್ತಿರ ಬಂದೂಕು ಇದೆ, ಅವರು ನಿರ್ದಯಿಗಳು, ಕಳ್ಳತನ ಮಾಡಿದರೆ ಗುಂಡು ಹಾರಿಸಿ ಸುಟ್ಟು ಬಿಡುತ್ತಾರೆಂದು…”

Read More

ಗಿಣಿಬಿಸ್ಕತ್ತು ಕಾದಂಬರಿಯ ಒಂದೆಸಳು

ನಾವು ಮಕ್ಕಳು ಒಂದು ಕಡೆ ಆಡುತ್ತಿದ್ದೆವು. ಮೋಡ ಕಪ್ಪಾಯಿತು. ಮೀನು ಸಾರಿನ ಸಂಭ್ರಮದ ಮಧ್ಯ ಮಳೆ ಬರುವುದು ಚಿಂತೆಗೀಡು ಮಾಡಿತ್ತು. ಸಂದಿಗೊಂದಿಗಳಲ್ಲಿ, ಮೂಲೆಮುಡುಕುಗಳಲ್ಲಿ ಇದ್ದ ಪುಳ್ಳೆ ಸೌದೆಗಳನ್ನು ಅಜ್ಜಿ ಅದೇನೇನೋ ಗೊಣಗುತ್ತಾ ಎತ್ತಿ ತಂದು ಒಳಗೆ ಹಾಕುತ್ತಿದ್ದಳು. ಅಜ್ಜ ರಾತ್ರಿ ಕತ್ತಲಾದಾಗ ಬೆಳಕು ಮಾಡಲು ಸೀಮೆ ಎಣ್ಣೆ ದೀಪದ ಬತ್ತಿಗಳನ್ನು ಹಿಚುಕಿ ಸರಿಪಡಿಸುತ್ತಿದ್ದ. ಚಿಕ್ಕಪ್ಪ, ಅಪ್ಪ ಎಲ್ಲಿ ಮನೆ ಸೋರುತ್ತದೆಯೋ ಅಲ್ಲಿಗೆ ಕಾತಾಳೆ ಪಟ್ಟೆ, ಅಡಿಕೆ ಪಟ್ಟೆಗಳನ್ನು ತೂರಿಸುತ್ತ ಸೂರನ್ನು ಸರಿಪಡಿಸುತ್ತಿದ್ದರು. ಅಜ್ಜ ಮಾತ್ರ ‘ಈ ಹಾಳಾದ್ದು ಎಲ್ಲೋಯ್ತೋ ಕಾಣೆ… ಹೊತ್ನಂತೆ ಮನೆಗೆ ಬರಬ್ಯಾಡ್ವ’ ಅಂತ ಕೆಂಪಿಯನ್ನು ನೆನಪು ಮಾಡಿಕೊಳ್ಳುತ್ತಿದ್ದನು.
ಆಲೂರು ದೊಡ್ಡನಿಂಗಪ್ಪ ಬರೆದ ‘ಗಿಣಿ ಬಿಸ್ಕತ್ತು’ ಹೊಸ ಕಾದಂಬರಿಯ ಕೆಲ ಪುಟಗಳು ನಿಮ್ಮ ಓದಿಗೆ

Read More

ಗೋಪಿಗೆ ಎಪ್ಪತ್ತೈದು, ಗಾಂಡಲೀನಳಿಗೆ ಐವತ್ತಾಯ್ತು

ಕವಿ ಬಿ.ಆರ್. ಲಕ್ಷ್ಮಣರಾವ್ ಅವರ ‘ಗೋಪಿ ಮತ್ತು ಗಾಂಡಲೀನ’ ಕವನ ಸಂಕಲನಕ್ಕೆ ಇದೀಗ 50 ವರ್ಷ. ಮೋಹವೂ, ನೀತಿಯೂ ಹದವಾಗಿ ಮೇಳೈಸಿರುವ ‘ಗೋಪಿ ಮತ್ತು ಗಾಂಡಲೀನ’ ಕೇವಲ ಕವಿತೆಯೆಂಬ ಚೌಕಟ್ಟಿಗಷ್ಟೇ ಸೀಮಿತವಾಗಿ ಉಳಿದಿಲ್ಲ. ಪಾಶ್ಚಾತ್ಯ ಸಂಸ್ಕೃತಿಯೊಂದಕ್ಕೆ ಅದು ಪ್ರತಿಕ್ರಿಯೆ ಎಂದು ಕೆಲವರಿಗೆ ಅನಿಸಿದರೆ, ಹರೆಯದ ಭಾವಗಳನ್ನು ಬಂಧಿಸಿದ ಸಾಲುಗಳೆಂದು..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ