ಯಾರು ಹುಚ್ಚ?: ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
“ದುರಾಸೆ ಹಿಮ ಪರ್ವತದ ಸಾಲು
ಈ ಹಣ್ಣು ಹಣ್ಣು ಮುದುಕನದು
ಬಾಡುವ, ಸವೆಯುವ ಯೌವನದ ಬಗ್ಗೆ”- ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Oct 8, 2021 | ದಿನದ ಕವಿತೆ |
“ದುರಾಸೆ ಹಿಮ ಪರ್ವತದ ಸಾಲು
ಈ ಹಣ್ಣು ಹಣ್ಣು ಮುದುಕನದು
ಬಾಡುವ, ಸವೆಯುವ ಯೌವನದ ಬಗ್ಗೆ”- ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
Posted by ಗುರುಪ್ರಸಾದ್ ಕಂಟಲಗೆರೆ | Oct 8, 2021 | ಸರಣಿ |
ಚಿಕ್ಕನಾಯಕನಹಳ್ಳಿಯ ಸಾರ್ವಜನಿಕ ಹಾಸ್ಟೆಲ್ ವಿಚಿತ್ರ ಅನುಭವ ಕೊಡತೊಡಗಿತು. ಇಲ್ಲಿ ಬೆಳಗ್ಗೆ ಆರಕ್ಕೆ ಕಡ್ಡಾಯವಾಗಿ ಏಳಬೇಕಿತ್ತು. ಎದ್ದು ಓದಿಕೊಳ್ಳುವುದು ಒತ್ತಟ್ಟಿಗಿರಲಿ ಪ್ರತಿಯೊಬ್ಬರೂ ಭಟ್ಟರು ನೇಮಿಸಿದ ಕೆಲಸಗಳನ್ನ ಮಾಡಬೇಕಿತ್ತು. ಕುಳ್ಳಗೆ ದಪ್ಪಗೆ ಮೀಸೆಬಿಟ್ಟಿದ್ದ ಹನುಮಂತನೆಂಬ ಭಟ್ಟನಿದ್ದ. ಹೇಳಿದ ಕೆಲಸ ಮಾಡದವರನ್ನ ಆತ ಅಟ್ಟಾಡಿಸಿಕೊಂಡು ಹೊಡೆಯುತ್ತಿದ್ದ. ಬೆಳಗಿನ ಊಟಕ್ಕೆ ಮುಂಚೆ ಯಾರ್ಯಾರು ಏನೇನು ತಪ್ಪು ಮಾಡಿದರೆಂದು ವಿಚಾರಣೆ ನಡೆಸಿ, ಮೂಲೆಯಲ್ಲಿ ಸದಾ ನಿಂತಿರುತ್ತಿದ್ದ ಉದ್ದನೆಯ ಸಿದ್ದರಾಮಣ್ಣನನ್ನು(ಕೋಲನ್ನ) ತೆಗೆದುಕೊಂಡು ದನಕ್ಕೆ ಬಡಿಯುವಂತೆ ಬಡಿಯುತ್ತಿದ್ದ.
‘ಟ್ರಂಕು ತಟ್ಟೆ’ ಸರಣಿಯಲ್ಲಿ ಗುರುಪ್ರಸಾದ್ ಕಂಟಲಗೆರೆ ಅನುಭವ ಕಥನದ ಒಂಭತ್ತನೆಯ ಕಂತು.
Posted by ಡಾ. ಕೆ.ಬಿ. ಸೂರ್ಯಕುಮಾರ್ | Oct 7, 2021 | ಸರಣಿ |
ಕೊಡಗಿನ ಬುಡಕಟ್ಟು ಜನರ ಒಂದು ವಿಶಿಷ್ಟವಾದ ಹಬ್ಬ ‘ಬೋಡ್ ನಮ್ಮೆ’ ಅಥವಾ ‘ಕುಂಡೆ’ ಹಬ್ಬ. ಈ ಹಬ್ಬದಲ್ಲಿ ಇವರು ವಿಚಿತ್ರ ವೇಷ ಭೂಷಣಗಳನ್ನು ಧರಿಸುತ್ತಾರೆ. ಕೆಲವರು ಮೈಯ್ಯನ್ನು ಸೊಪ್ಪಿನಿಂದ ಮುಚ್ಚಿ, ಇನ್ನು ಕೆಲವರು ನವೀನ ಪೋಷಾಕುಗಳ ಜೊತೆಗೆ, ಕಪ್ಪು ಕನ್ನಡಕ, ತಲೆಗೆ ಚಿತ್ರ ವಿಚಿತ್ರವಾದ ಟೋಪಿಗಳನ್ನು ಹಾಕಿಕೊಂಡು ವೇಷ ಕಟ್ಟುತ್ತಾರೆ. ಹಬ್ಬವೆಂದ ಮೇಲೆ ಕುಡಿತ ಕುಣಿತ, ತಿನಿಸುಗಳಿರಬೇಕಲ್ಲವೇ. ಆದರೆ ಈ ಹಬ್ಬಕ್ಕೆ ಸಂಬಂಧಿಸಿದ ಘಟನೆಯೊಂದು ನನ್ನ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದುಕೊಂಡಿದೆ. ಅಷ್ಟೇನೂ ಒಳ್ಳೆಯ ಘಟನೆಯಲ್ಲ ಅದು. ಹಬ್ಬ ತಂದಿಟ್ಟ ದುರಂತವು ಅನಾವರಣಗೊಳಿಸಿದ ಸತ್ಯಗಳನ್ನು ಡಾ. ಕೆ.ಬಿ. ಸೂರ್ಯಕುಮಾರ್ ‘ನೆನಪುಗಳ ಮೆರವಣಿಗೆ’ ಅಂಕಣದಲ್ಲಿ ಪ್ರಸ್ತುತಪಡಿಸಿದ್ದಾರೆ.
Read MorePosted by ಕೆಂಡಸಂಪಿಗೆ | Oct 7, 2021 | ದಿನದ ಪುಸ್ತಕ |
ಸ್ಮಿತಾರ ಬರಹಗಳು ಕೆಲವೊಮ್ಮೆ ಅಸಹಾಯಕ ಚಿಟ್ಟೆಯೊಂದರ ಫಡಫಡಿಕೆಯಂತೆ, ಕೆಲವೊಮೆ ನದಿಯ ಜುಳುಹುಳು ನಾದದಂತೆ, ಅಂಗಳದಲ್ಲಿ ಬೇರುಬಿಟ್ಟ ಗಿಡವೊಂದು ಸುಗಂಧ ರೂಪದಲ್ಲಾದರೂ ತನ್ನ ಅಂತಃ ಸತ್ವ ಗಾಳಿಯಲ್ಲಿ ತೇಲಿ ಹೋಗಬೇಕೆಂದು ಹಂಬಲಿಸುವಂತೆ, ಸುಡುಕೆಂಡದಲ್ಲಿ ಅಂತರ್ಗತವಾದ ಕಿಚ್ಚಿನಂತೆ, ಕಿರು ತೊರೆಯೊಂದು ನದಿ ರೂಪದಲ್ಲಿ ಹರಿದು ಸಾಗರ ಸೇರುವೆನೆಂದು ಅಚಲ ವಿಶ್ವಾಸದಲ್ಲಿ ಹರಿಯುವಂತೆ ಒಟ್ಟಂದದಲ್ಲಿ ಹೆಣ್ಣಿನ ಧೀ ಶಕ್ತಿಯ ಸಾಮ್ಯ ರೂಪದಲ್ಲಿ ಇವೆ.
ಸ್ಮಿತಾ ಅಮೃತರಾಜ್ ಸಂಪಾಜೆ ಬರೆದ ಲಲಿತ ಪ್ರಬಂಧಗಳ ಸಂಕಲನ ‘ನೆಲದಾಯ ಪರಿಮಳ’ಕ್ಕೆ ಜಯಶ್ರೀ ಬಿ ಕದ್ರಿ ಬರೆದ ಮುನ್ನುಡಿ
Posted by ಕೋಡಿಬೆಟ್ಟು ರಾಜಲಕ್ಷ್ಮಿ | Oct 7, 2021 | ಸಂಪಿಗೆ ಸ್ಪೆಷಲ್ |
ಕತೆಗಳು ಎಲ್ಲ ಕಡೆಯೂ ಹರಡಿಕೊಂಡಿರಬಹುದು. ಆದರೆ ನದಿಯ ಕತೆಗಳೆಂದರೆ ಅಂತರಂಗವನ್ನು ತೇವವಾಗಿಸುತ್ತವೆ. ನಮ್ಮ ಪುರಾಣ ಕತೆಗಳೂ ನದಿಯ ಸುತ್ತಲೇ ವಿಸ್ತರಿಸಿಕೊಂಡಿವೆ. ಎಲ್ಲದಕ್ಕೂ ಕಾರಣಗಳನ್ನು ಹುಡುಕುವ ಮನುಷ್ಯರು, ನದಿಯನ್ನೂ ತರ್ಕಗಳು ಮತ್ತು ಕಾರಣಗಳ ಆಧಾರದ ಮೂಲಕವೇ ಗ್ರಹಿಸಲು ಪ್ರಯತ್ನಿಸುತ್ತಾರೆ. ನದಿಯೋ ಪ್ರೇಮಿಯ ಆಹ್ಲಾದಕರ ಮನೋಕಾಮನೆಯಂತೆ, ತರ್ಕದ ಹಂಗಿಲ್ಲದೆ ತನ್ನಪಾಡಿಗೆ ತಾನು ಸಾಗುತ್ತಿರುತ್ತದೆ.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…
Read More