Advertisement

Month: May 2024

ಹೂ ಪದರ: ಎಚ್. ಆರ್. ರಮೇಶ ಬರೆದ ಈ ದಿನದ ಕವಿತೆ

“ಬೆಳಕಿನ ವೇಗ
ಕಾಲದ ಚಲನೆ
ತೀವ್ರದಲಿ
ಇರದು ಮೇರೆ ಅನುಭವಕೆ
ತಟಸ್ಥ ಭಾಷೆಗೆ ಭಾಷೆಯೇ
ಇಳಿಯುತ್ತಿದೆಯೋ ಎಳೆಯುತ್ತಿದೆಯೋ”- ಎಚ್. ಆರ್. ರಮೇಶ ಬರೆದ ಈ ದಿನದ ಕವಿತೆ

Read More

‘ಭಕ್ತರಿಗೆ ಭಾಗ್ಯ ಕೊಡು. ಮಕ್ಕಳಿಗೆ ಬಡತನ ಕೊಡು’

ಒಬ್ಬ ವ್ಯಕ್ತಿ ಹೀಗೆ ದೇವನಾಗಲು ಹೇಗೆ ಸಾಧ್ಯ ಎಂದು ವಿಚಾರವಾದಿಗಳಿಗೆ ಅನಿಸದೆ ಇರದು. ಜನಸಮುದಾಯಗಳ ಬಗ್ಗೆ ಅತೀವ ಕಾಳಜಿಯುಳ್ಳ ಸಾಮಾಜಿಕ ಮನುಷ್ಯ ಜನಪದರ ಕಣ್ಣಲ್ಲಿ ದೇವರಾಗಿ ಕಾಣುತ್ತಾನೆ. ತಮ್ಮ ಮೇಲೆ ನಿಷ್ಕಾಮ ಪ್ರೀತಿಯ ಮಳೆಗೆರೆಯುವವನನ್ನು ಜನಸಾಮಾನ್ಯರು ಹೀಗೆ ದೇವರಾಗಿಸುತ್ತಾರೆ. ಅಮೋಘಸಿದ್ಧನಂಥ ಅಖಂಡ ಪ್ರೀತಿಯೇ ದೈವೀ ಗುಣ. ಅಂಥ ಗುಣವುಳ್ಳವರೇ ದೇವರು. ಅದ್ದರಿಂದ ಇಂಥ ಸಿದ್ಧರ ಕುರಿತ ಡೊಳ್ಳಿನ ಪದಗಳೆಲ್ಲ “ನಮ್ಮಯ ದೇವರು ಬಂದಾರ ಬನ್ನಿರೇ” ಎಂದೇ ಪ್ರಾರಂಭವಾಗುತ್ತವೆ.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಗೋಡೆಯಿಂದ ಹಾರಿದ ಹಾವುಗಳು ಮತ್ತು ಗೋಡೆಗಂಟಿದ ಮನುಷ್ಯರು

ಊರಿನ ಪ್ರತಿ ಬೀದಿಯನ್ನೂ ಅಲಂಕರಿಸಿದ್ದ ಹೊಗೆಸೊಪ್ಪಿನ ಬ್ಯಾರಲ್‌ಗಳ ಪೈಕಿ ವರ್ಷಕ್ಕೆ ಒಂದಾದರೂ ಬೆಂಕಿಯೊಳಗೆ ಕುಣಿಯುವುದು ಕಾಯಂ ಆದಮೇಲೆ, ಅವುಗಳನ್ನು ಊರಿಂದ ಆಚೆ ಹಾಕುವ ಮಹಾ ಸಂಚಿಕೆಗಳು ಶುರುವಾದವು. ಫಯರ್ ಆಫೀಸಿನವರ ಎಚ್ಚರಿಕೆಗಳು, ಪೊಲೀಸಿನವರ ಖಾರದ ಮಾತು, ಬ್ಯಾರಲ್ ಸುತ್ತಮುತ್ತಲ ಮನೆಗಳ ಮಂದಿಯ ತಕರಾರುಗಳ ಫಲವಾಗಿ ಬಹುತೇಕ ಬ್ಯಾರಲ್‌ಗಳು ಸದ್ದಿಲ್ಲದಂತೆ ಊರಿಂದ ಆಚೆ ನಡೆದವು. ಹಾಗಂತ ಸಮಸ್ಯೆಗಳೂ ಊರಾಚೆ ನಡೆದು ಹೋದವು ಎನ್ನುವ ಹಾಗಿಲ್ಲ. ‘ಸೊಗದೆ’ ಅಂಕಣದಲ್ಲಿ ಸಹ್ಯಾದ್ರಿ ನಾಗರಾಜ್  ಹೊಗೆಸೊಪ್ಪು ಬ್ಯಾರಲ್ ಗಳ ಕುರಿತು ಬರೆದಿದ್ದಾರೆ. 

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಸು ಬೇವಿನಗಿಡದ ಬರೆದ ಕತೆ

ಅಳುತ್ತಿದ್ದ ಅವಳನ್ನು ಡಾಕ್ಟರ್ ಒಂದೆರಡು ಗುಳಿಗೆ ನುಂಗಿಸಿ ನೀರು ಕುಡಿಸಿ ಸಮಾಧಾನಪಡಿಸಿದರು. ಕೂಡಲೆ ಆಕೆ ನಿದ್ದೆಹೋದಳು. ಆಕೆಯ ಮನಸ್ಸು ಕೃಷ್ಣನ ಕಥೆಯಿಂದ ಘಾಸಿಗೊಂಡಿದೆಯೆಂದು ಅವರಿಗೆ ತಿಳಿಯಿತು. ‘ನಾಟಕದ ಕೃಷ್ಣ ಬಂದು ನಮ್ಮಣ್ಣನ ಸಾಯಹೊಡದು ನನ್ನ ಕರ್ಕೊಂಡು ಹೋಗ್ತಾನಂತ.’ ಎಚ್ಚರಾದಾಗ ವಿಮಲವ್ವ ಹೇಳಿದ ಮಾತಿಗೆ ಡಾಕ್ಟರ್ ನಕ್ಕರು. ‘ನಿಮ್ಮಣ್ಣ ದೊಡ್ಡ ಹುಲಿ ಅದಾನು. ಇಂವ ಅಡರ್ ಅಂದ್ರ ಕೃಷ್ಣನ ಕಿರೀಟ ಅಲ್ಲೇ ಬೀಳ್ತದ ತಗೋ. ನೀಯೇನೂ ಹೆದರಬ್ಯಾಡ’.

Read More

ಅಪರಾಧ ಮತ್ತು ಶಿಕ್ಷೆ: ನಾನೆಲ್ಲಿರುವೆ….!

ರಾಸ್ಕೋಲ್ನಿಕೋವ್ ಬಲ ಮೊಳಕೈಯನ್ನು ಟೇಬಲ್ಲಿನ ಮೇಲೆ ಆರಾಮವಾಗಿರಿಸಿ, ಎಡ ಮೊಳಕೈಯನ್ನು ಊರಿ ಅಂಗೈಯಲ್ಲಿ ಮುಖ ಇರಿಸಿ ಸ್ವಿದ್ರಿಗೈಲೋವ್‍ನನ್ನು ದಿಟ್ಟಿಸಿದ. ಒಂದು ನಿಮಿಷದಷ್ಟು ಹೊತ್ತು ಅವನ ಮುಖ ನೋಡುತ್ತಲೇ ಇದ್ದ. ಯಾಕೋ ಅದು ವಿಚಿತ್ರವಾದ ಮುಖ, ಮುಖವಾಡದಂಥ ಮುಖ, ಕೆಂಪು ತುಟಿ, ಬಿಳಿಯ ಮುಖ, ನಸುಗೆಂಪು ಕೆನ್ನೆ, ದಟ್ಟವಾದ ಹೊಂಬಣ್ಣದ ಕೂದಲು, ಗಂಭೀರವಾದ ನೀಲಿ ಕಣ್ಣು, ಭಾರ ಅನಿಸುವ ನಿಶ್ಚಲ ದೃಷ್ಟಿ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ