Advertisement

Month: May 2024

ಕಂಡೂ ಕಾಣದಂತೆ ಸರಿದು ಹೋಗುವ ಅನಿವಾರ್ಯತೆಗಳು

ರಂಗಭೂಮಿ ಮೇಲ್ನೋಟಕ್ಕೆ ಕಾಣುವ ಹಾಗೆ ಕೇವಲ ಬಣ್ಣದ ಲೋಕದ ಹೊರಮೈ ಅಲ್ಲ. ಇದು ತಿಳಿಯುವುದು ಆ ರಂಗ ಒಳಹೊಕ್ಕಾಗ ಮಾತ್ರ. ಕಲೆ ಮತ್ತು ಕಲಾವಿದರನ್ನು ತುಂಬು ಆದರ ಭಾವದಿಂದ ಕಾಣುವವರಿಗೆ ಆ ಎಲ್ಲವನ್ನು ಒಟ್ಟು ಮಾಡಿ ಚಿತ್ರ ಕಟ್ಟಿಕೊಡುವವನಿಗೆ ಅಸಲಿ ಚಿತ್ರ ತಿಳಿದಿರುತ್ತದೆ. ಅವನು ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಕುಹಕವನ್ನೂ ಸೈರಿಸಿಕೊಳ್ಳಬೇಕಿರುತ್ತದೆ. ಮತ್ತೆ ಎಲ್ಲವನ್ನೂ ಕೇವಲ ಶೋಕಿಗೆ ಮಾಡುತ್ತ ಮಾರ್ಕೆಟಿಂಗ್ ಸರಕಾಗಲು ಹವಣಿಸುವವರನ್ನೂ ಅನಿವಾರ್ಯವಾಗಿ ಸೈರಿಸಿಕೊಂಡು ಮುಂದೆ ಸಾಗಬೇಕಿರುತ್ತದೆ.
‘ರಂಗ ವಠಾರ’ ಅಂಕಣದಲ್ಲಿ ಕೋವಿಡ್‌ ಸಮಯದಲ್ಲಿ ರಂಗ…

Read More

ಮಲ್ಲಪ್ಪ ಫ ಕರೇಣ್ಣನವರ ಪುಸ್ತಕದ ಕುರಿತು ಪ.ನಾ.ಹಳ್ಳಿ. ಹರೀಶ್ ಕುಮಾರ್ ಬರಹ

ಸದಾಕಾಲ ಹೆತ್ತಮ್ಮನ ಸೆರಗಿಡಿದು ಓಡಾಡುತ್ತಿದ್ದ ಲೇಖಕನಿಗೆ ತನ್ನ ಆತ್ಮವಿಶ್ವಾಸ ಹೆಚ್ಚಿಸಿ ಧೈರ್ಯ ತುಂಬಿದ ಮೊದಲ ಕಿರುಪ್ರವಾಸದ ನೆನಪಿನಿಂದ ಪ್ರಾರಂಭವಾಗಿ, ಕ್ರಿಕೆಟ್ ಹುಚ್ಚನ್ನು ಹತ್ತಿಸಿಕೊಂಡು ಸುಲಭಕ್ಕೆ ಸಿಗುವ ತೆಂಗಿನ ಮಟ್ಟಿಯನ್ನೇ ಸಚಿನ್ನನ ಎಂ ಆರ್ ಎಫ್ ಬ್ಯಾಟಾಗಿಸಿಕೊಂಡದ್ದು, ಕ್ರೀಡಾಕೂಟವನ್ನು ಆಯೋಜಿಸಿ ಸಂಗ್ರಹಿಸಿದ್ದ ಬಹುಮಾನದ ಹಣದೊಂದಿಗೆ ಗೆಳೆಯರು ಪರಾರಿಯಾದಾಗ ಬಹುಮಾನಿತ ತಂಡಕ್ಕೆ ಕೂಡಿಟ್ಟಿದ್ದ ಸಗಣಿಯನ್ನೇ ಹರಾಜು ಹಾಕಿ ಹಣ ಹೊಂದಿಸಿ ಊರಿನ ಮರ್ಯಾದೆ ಕಾಪಾಡಿಕೊಂಡಿದ್ದು… ಸೈಕಲ್ ತುಳಿಯುವ ಆಸೆಯಿಂದ ತುಳಿಯಲು ಸೈಕಲ್ ಕೊಡಲು ನಿರಾಕರಿಸಿದ ಸ್ನೇಹಿತನ ಸೈಕಲ್ಲನ್ನು ಕಿಡ್ನಾಪ್ ಮಾಡಿದ ಪ್ರಸಂಗಗಳು ಓದುಗರಲ್ಲಿ ಮಂದಹಾಸವನ್ನು ಮೂಡಿಸುತ್ತವೆ.
ಮಲ್ಲಪ್ಪ ಫ ಕರೇಣ್ಣನವರ “ನಮ್ಮೂರ ಅಗಸ್ಯಾಗ” ಕೃತಿಯ ಕುರಿತು ಪ.ನಾ.ಹಳ್ಳಿ. ಹರೀಶ್ ಕುಮಾರ್ ಬರಹ

Read More

ರಾಜರಥದಲ್ಲಿ ವಿರಾಜಮಾನರಾದ ಭುವನಮ್ಮನ ಕತೆ

‘ನಮ್ಮನೆಯವನಿಗೆ ಊಟಾನು ನಾನೇ ತಿನಿಸಬೇಕು. ತಿಂಡಿನೂ ನಾನೆ ತಿನಿಸಬೇಕು. ಅವ್ನ ಪ್ರತಿ ಕೆಲ್ಸನೂ ನಾನೇ ಮಾಡಿಕೊಡಬೇಕು. ಸದಾ ನನ್ ಹಿಂದೇನೆ ಸುತ್ತುತ್ತಾ ಇರುತ್ತೆ ಅಸಾಮಿ. ಪ್ರೀತಿ ವಿಷಯಕ್ಕೆ ಬಂದಾಗ ಒಂದು ಎಳ್ಳಷ್ಟೂ ಕೂಡ ಕಡಿಮೆ ಮಾಡಿಲ್ಲ. ನನ್ನನ್ನು ಜೀವಕ್ಕೆ ಜೀವಕ್ಕಿಂತ ಪ್ರೀತಿಸ್ತಾರೆ. ಆ ವಿಷ್ಯದಲ್ಲಿ ನಾನು ತುಂಬಾ ತುಂಬಾ ಪುಣ್ಯವಂತೆ.’ಎಂದು ಮಿಂಚುಗಣ್ಣಾಗಿ ಆಕೆ ಹೇಳಿದ್ದು ಇಂದಿಗೂ ನೆನಪಿದೆ.  ‘ಆದ್ರೆ ದುಡ್ಡಿನ ಜವಾಬ್ದಾರಿ ಅಂದ್ರೆ ಉಹೂ ಎಂದುಬಿಡುತ್ತಾರೆ’  ಎಂದು ಆಕೆ ಸೇರಿಸಿದರು.
ದಾದಾಪೀರ್ ಜೈಮನ್ ಬರೆಯುವ ‘ಜಂಕ್ಷನ್ ಪಾಯಿಂಟ್’ ಅಂಕಣ ಬರಹ 

Read More

ಕಳ್ಳಿಗಾಡಿನ ಇತಿಹಾಸ: ಕರಾಳ ವಾಸ್ತವದ ಜೀವಂತ ಚಿತ್ರಣ

‘ಕಳ್ಳಿಗಾಡಿನ ಇತಿಹಾಸ’ ಎಂಬ ಶೀರ್ಷಿಕೆಯಿದ್ದರೂ, ಇದು ಪ್ರಪಂಚದ ಯಾವುದೇ ಅಭಿವೃದ್ಧಿ ಹೊಂದದ ಅಥವಾ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ನಡೆಯುವ ಶೋಷಿತ ಸಮುದಾಯದ ಇತಿಹಾಸವೇ ಆಗಿದೆ. ಯಾವುದೇ ರಾಜಕೀಯ ವ್ಯವಸ್ಥೆಯಾದರೂ ಶೋಷಿತವರ್ಗದ ನೋವು ನಲಿವುಗಳನ್ನು ಅರ್ಥ ಮಾಡಿಕೊಳ್ಳದೇ ಹೋದಾಗ, ಆ ಜನರು ಅನುಭವಿಸುವ ಕಷ್ಟಕಾರ್ಪಣ್ಯಗಳನ್ನು ಹೇಳತೀರದು. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆದಂಥ ಇಂಥ ಅನೇಕ ಕಥೆಗಳು ಕರ್ನಾಟಕದ ಮಣ್ಣಿನಲ್ಲೂ ದಾಖಲಾಗಿರುತ್ತವೆ. 
ತಮಿಳಿನ ವೈರಮುತ್ತು ಬರೆದಿರುವ “ಕಳ್ಳಿಕಾಟ್ಟು ಇತಿಹಾಸಂ” ಕಾದಂಬರಿಯನ್ನು ಡಾ. ಮಲರ್‌ವಿಳಿ ‘ಕಳ್ಳಿಗಾಡಿನ ಇತಿಹಾಸ’ ಎಂಬ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದು, ಈ ಕೃತಿಯ ಕುರಿತು ಕೆ. ಪ್ರಭಾಕರನ್ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ