Advertisement

Month: May 2024

ನನಗೆ ಜಗತ್ತನ್ನು ಪರಿಚಯಿಸಿದ ಮಿಲೇನಿಯಂ ಸರಣಿ

ಆ ಸಮಯದಲ್ಲಿ ನನ್ನ ತರ್ಕ ಬಹಳ ಸರಳವಾಗಿತ್ತು. ಯಾರ್ಯಾರು ಮಕ್ಕಳ ಕಥೆ ಬರೆಯುತ್ತಾರೋ, ನನಗೆ ಅರ್ಥವಾಗುವಂತಹ ಪರಿಸರ, ವಿಜ್ಞಾನ ಇತ್ಯಾದಿ ವಿಷಯಗಳ ಬಗ್ಗೆ ಸರಳವಾಗಿ ಬರೆಯುತ್ತಾರೋ ಅವರೆಲ್ಲಾ ಚಿಕ್ಕ ಲೇಖಕರು. ಯಾರ ಬರಹಗಳು ಅರ್ಥವಾಗುವುದಿಲ್ಲವೋ, ಒಂದು ಪ್ಯಾರಾಕ್ಕಿಂತಲೂ ಜಾಸ್ತಿ ಓದಿಸಿಕೊಂಡು ಹೋಗುವುದಿಲ್ಲವೋ ಅವರೆಲ್ಲಾ ದೊಡ್ಡ ಲೇಖಕರು ಅನ್ನೋ ನಂಬಿಕೆಯಲ್ಲಿದ್ದೆ. ಆದರೆ ತೇಜಸ್ವಿಯವರ ಬರಹಗಳು ಈ ನಂಬಿಕೆಯನ್ನು ಸಡಿಲಗೊಳಿಸಿದವು.

Read More

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

“ಕೊಲ್ಲುವುದು ಉಳಿದಿದೆ ಅಷ್ಟೆ
ಮುತುವರ್ಜಿಯಲಿ..,
ನಾವೀಗ
ಯುದ್ಧವನು ತೀಡಿ ತೀಡಿ
ಮತ್ತಷ್ಟು ಹೊಳಪುಗೊಳಿಸಿದ್ದೆವೆ
ಚರಿತ್ರೆ ನಾಚುವಂತ ಹತಾರಗಳ
ರಾಶಿ ಸುರಿದಿದೆ”- ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

Read More

ತುಡುಗುತನಕ್ಕಂಟಿದ ನಂಬಿಕೆಯ ಲೋಕ

ಈ ಕತೆ ಸಿಕ್ಕಿದ್ದು ಬಾಲೆಹೊಸೂರಿನಲ್ಲಿ. ಇದರ ವಿವರಗಳನ್ನು ನೋಡಲಾಗಿ ಈ ಊರಿನಲ್ಲಿಯೇ ‘ದ್ಯಾಮವ್ವ’ ಪೂಜೆಗೊಳ್ಳುತ್ತಾಳೆ. ಹೀಗಾಗಿ ಇಲ್ಲಿನ ತುಡುಗು ಮಂದಿಯೇ ಈ ಕಥೆಯ ನಾಯಕರಿರಬಹುದು. ಇದು ಸೃಷ್ಟಿ ಕತೆಯಲ್ಲ ಆದರೆ ಈಗಾಗಲೇ ಇರುವ ಸಮುದಾಯದ ಪ್ರವೃತ್ತಿಯನ್ನು ಬೆಂಬಲಿಸಿ ಪಾರುಮಾಡುವ ಕತೆಯಾಗಿದೆ. ಅಂತೆಯೇ ಸಮುದಾಯ ದೈವಗಳ ಜತೆ ಹೊಂದಿದ್ದ ಅವಿನಾಬಾವ ಸಂಬಂಧವನ್ನು ಕೂಡ ಸೂಚಿಸುತ್ತದೆ. ಅಂತೆಯೇ ದ್ಯಾಮವ್ವ ತಮ್ಮನ್ನು ಪೊರೆಯುತ್ತಾಳೆ…

Read More

ದಿಟ್ಟ ಮಹಿಳೆಯರ ಹೋರಾಟದ ಪ್ರತಿಮೆ

ಮಹಿಳೆಯರ ಜೀವನದಲ್ಲಿ ಎರಡು ವಿಷಯಗಳು ಸತ್ಯ. ಅದೆಂದರೆ, ಹರಿವ ನದಿಯಂತೆ ಬದುಕುವುದು ಹಾಗೂ ಪುರುಷನಿಗಿಂತ ಹೆಚ್ಚು ಧೈರ್ಯವಾಗಿ ಬದುಕನ್ನು ಎದುರಿಸುವುದು. ಹುಟ್ಟಿದ ಮನೆಯನ್ನೇ ಬಿಟ್ಟು ಬರುವ ಮಹಿಳೆಯರಿಗೆ ಮತ್ತೊಂದು ಊರನ್ನು ಬಿಡುವುದು, ಬೇರೊಂದು ಊರಿನಲ್ಲಿ ನೆಲೆ ನಿಲ್ಲುವುದು ಹೆಚ್ಚು ಕಷ್ಟವಾಗುವುದಿಲ್ಲವೇನೋ. ಹೀಗಾಗಿಯೇ ಅವರು ಅಕ್ಷರಶಃ ಹರಿವ ನದಿಯಾಗುತ್ತಾರೆ. ‘ಹರಿವ ನದಿ’ ಕೃತಿಯು ಮೇಲ್ನೋಟಕ್ಕೆ ಮೀನಾಕ್ಷಿ ಭಟ್ಟರ ಕಥನ ಎನಿಸಿದರೂ, ಇದು ದಿಟ್ಟ ಮಹಿಳೆಯರ ಹೋರಾಟದ ಪ್ರತಿಮೆಯಂತೆ ನಿಲ್ಲುತ್ತದೆ. ತಾವು ಓದಿದ ಕೃತಿಯ ಕುರಿತು ಸುಮನಾ ಲಕ್ಷ್ಮೀಶ್ ಬರೆದ ಬರಹ  ಇಲ್ಲಿದೆ. 

Read More

ನಡಿಗೆಯ ದಾರಿ ಕರುಣಿಸಿದ ದುಪ್ಪಟ್ಟು ಖುಷಿ

ಕಾಲಚಕ್ರದ ಉರುಳುವಿಕೆಯಡಿ ಸಿಲುಕಿ ಇಂದು ವಾತಾವರಣದಲ್ಲಿ ಬದಲಾವಣೆಗಳಾಗಿವೆ. ಮುಂಜಾನೆಯ ನೀರವತೆಗೆ ಭಂಗ ತರುವ ವಾಹನಗಳ ಓಡಾಟ ಆರಂಭವಾಗಿರುತ್ತದೆ. ವಿಶಾಲ ಭತ್ತದ ಗದ್ದೆಗಳೆಲ್ಲ ಸೈಟುಗಳಾಗಿ ಪರಿವರ್ತಿತವಾಗಿ ಇಂದು ಅಲ್ಲಿ ಕಟ್ಟಡಗಳು ಮೇಲೆದ್ದಿವೆ. ಸೇತುವೆ ಮೇಲಿನ ಮುದ್ದು ಪಾರಿವಾಳಗಳು ಗುಬ್ಬಚ್ಚಿಗಳು ಎಲ್ಲಿ ಹೋದವೋ. ರಸ್ತೆ ಅಗಲೀಕರಣಕ್ಕಾಗಿ ಇಕ್ಕೆಲದ ಮರಗಳ ಬಲಿಯಾಗಿದೆ. ಇಷ್ಟಾದರೂ ಇಲ್ಲಿ ಅರಸುವ ಕಣ್ಣುಗಳಿಗೆ ಬರವಿಲ್ಲದಂತೆ ಪ್ರಕೃತಿ ತನ್ನ ಸೊಬಗನ್ನು ಕಣ್ತುಂಬಿ ಮನವನ್ನು ಸಂತೈಸುವಷ್ಟು ಉದಾರಿ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ