Advertisement

Month: May 2024

ಜಂಕ್ಷನ್ ಪಾಯಿಂಟಿನ ಕಥೆಗಾರನಿಗೆ ಕೆಂಡಸಂಪಿಗೆಯ ಅಭಿನಂದನೆಗಳು

ಕನ್ನಡದ ತರುಣ ಕತೆಗಾರ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ತಮ್ಮನ್ನು ಕಲಾಭ್ಯಾಸಿ ಎಂದೇ ಗುರುತಿಸಿಕೊಳ್ಳಲು ಇಷ್ಟಪಡುತ್ತಾರೆ. ಅವರ ಮೊದಲ ಕಥಾಸಂಕಲನ ‘ನೀಲಕುರಿಂಜಿ’ ಕೇಂದ್ರ ಸಾಹಿತ್ಯ ಅಕಾಡೆಮಿಯ 2022ರ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಗಳು ಪ್ರಕಟವಾದಾಗ ಎದುರಾಗುವ ಸಂಭ್ರಮಗಳು, ಜೊತೆಗೇ ಬರುವ ಟೀಕೆಗಳು ಇತ್ಯಾದಿ  ಸಾಹಿತ್ಯ ಕೃತಿಗಳು ಎದುರಿಸಬೇಕಾದ ʻಮಂಥನʼ ಎಂದು ಹೇಳುತ್ತ ಈ ಕ್ಷಣವನ್ನು ಸ್ವೀಕರಿಸಿದ್ದೇನೆ ಎನ್ನುತ್ತಾರೆ ದಾದಾಪೀರ್ . ಕೆಂಡಸಂಪಿಗೆಯಲ್ಲಿ ‘ಜಂಕ್ಷನ್ ಪಾಯಿಂಟ್’ ಅಂಕಣ ಬರೆಯುತ್ತಿರುವ ದಾದಾಪೀರ್ ಪ್ರಶಸ್ತಿ ಪಡೆದ ಸಂಭ್ರಮವನ್ನು ಸಂಕೋಚದಿಂದಲೇ ಇಲ್ಲಿ ಹಂಚಿಕೊಂಡಿದ್ದಾರೆ.

Read More

ನಾಗಶ್ರೀ ಅಜಯ್‌ ಹೊಸ ಅಂಕಣ ಲೋಕ ಏಕಾಂತ ಆರಂಭ

ಮನೆ, ನೆಂಟರಿಷ್ಟರು, ಎಫ್ ಬಿ ಯಲ್ಲಿ ಸಾವಿರಾರು ಸ್ನೇಹಿತರು, ಸಹೋದ್ಯೋಗಿಗಳು ಹೀಗೆ ಪರಿಚಿತರ ಸಂಖ್ಯೆ ಹೆಚ್ಚಿರಬಹುದು. ಆದರೆ ನಮ್ಮ ಅಂತರಂಗದ ಪಿಸುಮಾತಿಗೆ ಕಿವಿಯಾಗುವವರು, ದುರ್ಬಲ ಘಳಿಗೆಯಲ್ಲಿ ಹೆಗಲಾಗುವವರು, ನೀನೇನೇ ಆಡಿದರೂ, ಮೌನವಾಗುಳಿದರೂ ಅರ್ಥಮಾಡಿಕೊಳ್ಳಬಲ್ಲೆ ಎನ್ನುವವರು ಎಷ್ಟು ಜನರಿಗಿದ್ದಾರೆ ಹೇಳಿ? ಅವರಿವರ ಮಾತು ಬಿಡಿ. ಮೊಬೈಲ್ ಬಂದ ಮೇಲಂತೂ ನಮಗೆ ನಾವು ದೊರಕುವುದೂ ಅಪರೂಪವೇ.ಯಾವುದೋ ಪುಟವೊಂದರಲ್ಲಿ ಮುಳುಗಿ ಹೋಗಿರುತ್ತೇವೆ. -ಹೀಗೆ ಬದುಕಿನ ಮಾಮೂಲಿ ಕ್ಷಣಗಳ ನಡುವೆ ನುಸುಳಿಕೊಂಡಿರುವ ಸೂಕ್ಷ್ಮಗಳನ್ನು ಗುರುತಿಸಿ ಬರೆದಿದ್ದಾರೆ ಎಸ್.‌ ನಾಗಶ್ರೀ ಅಜಯ್.‌

Read More

ಮಾಲಾ ಮ ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

“ಕುಡಿಕೆ ಹಿಡಿದು ಎತ್ತರಿಸಿ
ಬಾಯಿಯ ಉಸಿರು ನೂಕಿ
ಗುಳ್ಳೆ ಒಂದೊಂದಾಗಿ ತೂರಿ
ಲೋಕ ಗುಳ್ಳೆಗಳ ಹಬ್ಬ”- ಮಾಲಾ ಮ ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

Read More

ಹೊಗಳಿಕೆಯ ಹಿಂದಿದೆ ನಿರೀಕ್ಷೆಯೆಂಬ ಒತ್ತಡ

ಹೆಣ್ಣುಮಕ್ಕಳಿಗೆ ಅವರ ದೇಹ ವರವೂ ಹೌದು ಶಾಪವೂ ಹೌದು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೆಣ್ಣುಮಕ್ಕಳಿಗೆ ಹಿಂದೆಂದಿಗಿಂತಲೂ ಹೆಚ್ಚು ಸವಾಲುಗಳಿವೆ. ಅದರಲ್ಲೂ ಹೊರಗೆ ದುಡಿಯುವ ಹೆಣ್ಣುಮಕ್ಕಳಿಗೆ ದಿನದಲ್ಲಿ ಒಂದು ತಾಸು ಸಮಾಧಾನದಿಂದ ಕೂರಲು ನಿಲ್ಲಲೂ ಸಮಯ ಸಿಗುವುದಿಲ್ಲ. ಹಿಂದೆಲ್ಲ ನಟಿಯರು, ಮಾಡೆಲಿಂಗ್‌ ಕ್ಷೇತ್ರದಲ್ಲಿರುವವರು ಮಾತ್ರವೇ ಹೆಚ್ಚಾಗಿ ತಮ್ಮ ದೇಹ ಸೌಂದರ್ಯವನ್ನು ಕಾಪಿಟ್ಟುಕೊಳ್ಳುವಲ್ಲಿ ಕೆಲಸ ಮಾಡುತ್ತಿದ್ದರು. ಈಗ ಹಾಗಿಲ್ಲ. ಫೇಸ್‌ಬುಕ್ಕು, ಇನ್ಸ್ಟಾಗ್ರಾಂಗಳ ರಂಗುರಂಗಿನ ಜಗತ್ತು ಎಲ್ಲರ ಮೇಲೂ ಪರೋಕ್ಷ ಒತ್ತಡ ಸೃಷ್ಟಿಸುತ್ತಿದೆ.   ಅದರ ಆಕರ್ಷಣೆಯಿಂದ ಸೌಂದರ್ಯ ಪ್ರಜ್ಞೆ ಎಲ್ಲರಲ್ಲೂ, ಎಲ್ಲಾ ಕ್ಷೇತ್ರಗಳಲ್ಲೂ ಜಾಗೃತವಾಗಿದೆ ಎನ್ನುತ್ತಾರೆ ರೂಪಶ್ರೀ ಕಲ್ಲಿಗನೂರ್‌

Read More

ಇಸ್ಮಾಯಿಲ್ ಬರೆಯುವ ತಳಕಲ್ ಡೈರಿಯ ಮೊದಲ ಪುಟ

ಮಂಗಳೇಶಪ್ಪನವರ ಶ್ರೀಮತಿಯವರಾಗಿದ್ದ ದೇವಮ್ಮ ನಿಜಕ್ಕೂ ದೇವತೆಯಂತವರು. ತಮಗಿದ್ದ ನಾಲ್ಕು ಜನ ಮಕ್ಕಳ ಹಾಗೆ ನಾವು ನಾಲ್ಕು ಜನರನ್ನೂ ತಮ್ಮ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಂತೆಯೇ ಎರಡು ವರ್ಷ ಜತನ ಮಾಡಿದವರು. ಅವರ ತಾಯಿಗರಳು ನಮ್ಮೆಡೆಗೆ ಸದಾ ಮಿಡಿಯುತ್ತಿತ್ತು. ಡಿ.ಇಡಿ ಓದಿದ ಆ ಎರಡೂ ವರ್ಷ ನಮ್ಮ ಊರು, ನಮ್ಮ ತಂದೆ ತಾಯಿ ಯಾರೂ ಅಂದರೆ ಯಾರೂ ನೆನಪಾಗದಂತೆ ನಮ್ಮ ಮೇಲೆ ಪ್ರೀತಿ ತೋರಿಸಿದ್ದೇಕೆಂದು ಈವರೆಗೂ ತಿಳಿದಿಲ್ಲ. ಯಾಕೆಂದರೆ ಆ ಊರಿನಲ್ಲಿ ಇವರ ಕುಟುಂಬವೆಂದರೆ ಒಂದು ಘನತೆ ಮತ್ತು ಗಾಂಭಿರ್ಯವಿತ್ತು. ನಮಗೆ ತಮ್ಮ ಎದೆಯಲ್ಲಿ ವಿಶೇಷ ಜಾಗ ಕೊಟ್ಟಿದ್ದು ನಮ್ಮ ಅದೃಷ್ಟವೆಂದೆ ಹೇಳಬೇಕು. ಮನುಷ್ಯ ಪ್ರೀತಿಯ ಸುಂದರ ಕ್ಷಣಗಳನ್ನು ಸೆರೆಹಿಡಿದು ಬರೆಯುವ ಇಸ್ಮಾಯಿಲ್‌ ತಳಕಲ್‌ ಅವರ ಹೊಸ ಅಂಕಣ ತಳಕಲ್ ಡೈರಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ