ನನ್ನ ತಾಯಿಬೇರೇ ನನ್ನ ಕಥೆ
ಕಣ್ಣೀರ ಕಣ್ಣರೆಪ್ಪೆಗಳು ತಡೆಯದಾದವು. ತುಳುಕಿದವು. ಹೇಳಿದೆ. ‘ನಾನಲ್ಲ ಕಥೆ ಬರೆದದ್ದು. ಕಥೆಯ ನನ್ನ ತಾಯಿ ಹೇಳಿ ಬರೆಸಿದಳು. ನನ್ನ ತಾಯಿ ಈಗ ನನ್ನ ನೆತ್ತರಲ್ಲಿ ಮಾತ್ರ ಬದುಕಿ ಉಳಿದಿದ್ದಾಳೆ. ಅವಳ ಆತ್ಮ ನನ್ನ ಎದೆಗೂಡ ದೇಗುಲದಲ್ಲಿ ನನ್ನ ಚೈತನ್ಯವಾಗಿದೆ… ಅವಳ ಮೌನ ನನ್ನ ಭಾಷೆಯಾಗಿದೆ. ಅವಳ ಕಿಚ್ಚು ನನ್ನ ಬರೆಹದ ಬೆಳಕಾಗಿದೆ… ನಾನು ನೆಪದ ಕಥೆಗಾರ ಅಷ್ಟೇ… ಅವಳೇ ನನ್ನ ಬರೆಹದ ಬೇರು ಕಾಂಡ ರೆಂಬೆ ಕೊಂಬೆ ಚಿಗುರು ಎಲ್ಲ… ಎಲ್ಲ ಅವಳೇ… ನನ್ನದೇನಿದ್ದರೂ ಅವಳ ಕಥೆಯ ನೆರಳು ಅಷ್ಟೇ’ ಎಂದೆ.
ಮೊಗಳ್ಳಿ ಗಣೇಶ್ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 34ನೇ ಕಂತು