ಬ್ಯಾಗಡಿ ಕವರಲ್ಲಿ ಮಡಸಿಟ್ಟಿದ್ದ ಸೀರೆಗಳಂತ ಕನಸು
ಕಟ್ರಗುಳ್ಳಿ ಕಲ್ಲು ಎಂದು ಯಮುನಿಯ ಬಾಯಲ್ಲಿ ನಾಮಕರಣ ಮಾಡಿಸಿಕೊಂಡಿದ್ದ ಟಾರು ರೋಡಿನ ಒತ್ತುವ ಹರಳುಗಳನ್ನು ಬರಿಗಾಲಲ್ಲಿ ತುಳಿಯುತ್ತ ಅಜ್ಜಿ ಮೊಮ್ಮಗಳಿಬ್ಬರು ಬಟ್ಟೆಯಂಗಡಿಗೆ ಕಾಲಿಟ್ಟರು. ಕಸಬರಿಗೆಯಲ್ಲಿ ಕಸವಡೆದು ಬಯಲುಸೀಮೆಯ ಮಳೆಯ ಕಂತ್ರಾಟ ಗೊತ್ತಿದ್ದ ಅಂಗಡಿಯ ಹುಡುಗ ಯಾವುದಕ್ಕೂ ಇರಲಿ ಎಂದು ಅಂಗಡಿ ಮುಂದಿನ ಬಯಲಿಗೆ ನಾಲ್ಕು ಚೊಂಬು ನೀರುಗ್ಗುವ ಶಾಸ್ತ್ರ ಮಾಡುತ್ತಿದ್ದ. ಶೇಟಿ ಲಕ್ಷ್ಮಿ ಫೋಟೋಗೆ ಊದಿನಕಡ್ಡಿ ಬೆಳಗಿ ಕೈಮುಗಿಯುವ ತರಾತುರಿಯಲ್ಲಿದ್ದವನು ಇವರನ್ನು ನೋಡಿ ಐದು ಮಿನಟ್ ಕೂತ್ಗಳ್ರಿ ಎಂದು ತನ್ನ ಪೂಜಾ ಸಿದ್ಧತೆಯನ್ನು ಮುಂದುವರೆಸಿದ. ಇವರು ಬೇರೆ ಆಯ್ಕೆಯೇ ಇಲ್ಲದಂತೆ ಕಾಯುತ್ತ ನಿಂತರು.
ದಾದಾಪೀರ್ ಜೈಮನ್ ಬರೆಯುವ “ಜಂಕ್ಷನ್ ಪಾಯಿಂಟ್” ಅಂಕಣ