Advertisement

Month: May 2024

ನಾನಿನ್ನು ಹೋಗಿಬರಲೇ.. ‌

ಸುಚಿತಾ ದಿಙ್ಮೂಢಳಾದಳು. ತನಗೆ ಹೀಗೆ ವರ್ತಿಸುವುದು ಸಾಧ್ಯವಿತ್ತೇ? ತನ್ನೊಳಗೆ ಹೊತ್ತಿ ಉರಿದ ವಿಷಯವನ್ನು ತನ್ನ ಮಗಳು ನಿರಾಕರಿಸುತ್ತಿರುವುದು ತಮಗೆ ಸಹಿಸುವುದು ಸಾಧ್ಯವಿತ್ತೇ? ಅದರ ಬಗೆಗೆ ಇಷ್ಟೊಂದು ನಿರ್ವಿಕಾರವಾಗಿರುವದು ಸಾಧ್ಯವಿತ್ತೇ? ಇದು ದಾದಾನ ನಿರ್ವಿಕಾರವೇ ಅಥವಾ ಇದೇ ಜೀವನದ ಬಗೆಗಿರುವ ಸಮತೋಲವೇ? ಅಮ್ಮನ ಸಾವಿನ ಬಳಿಕ ಅವರು ಬಂದು ತಲುಪಿದರು, ಆಗವಳು ಭೇಟಿಯಾದಾಗ ಅವರೇನೂ ವ್ಯಕ್ತ ಮಾಡಿರಲಿಲ್ಲ. ಅವಳು ಮಲಗಿದ್ದಾಗ ಮಾತ್ರ ಹೊದಿಕೆಯನ್ನು ಸರಿಪಡಿಸಿದರು. ಹಣೆಯ ಮೇಲಿನ ತಲೆಗೂದಲನ್ನು ಸರಿಪಡಿಸಿ, ಎಲ್ಲರ ಎದುರಿಗೆ ಕೂದಲಲ್ಲಿ ಬೆರಳಾಡಿಸಿದರು…
ಚಂದ್ರಕಾಂತ ಪೋಕಳೆ ಅನುವಾದಿಸಿದ ಆಶಾ ಬಗೆಯವರ ಮರಾಠಿ ಕಾದಂಬರಿ “ಸೇತು” ಇಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಮನದೊಳಗೆ ಅಚ್ಚಾಗಿದೆ ಸ್ಲೊವೇನಿಯಾ ಫೋಟೊಫ್ರೇಮ್

ಜಸ್ನಾ ಸರೋವರದ ಪ್ರವಾಸಿಗರಿಗೆ ಒಂದು ಅನಿರೀಕ್ಷಿತ ಉಡುಗೊರೆ ಕಾದಿರುತ್ತದೆ. ಅದು ಇಲ್ಲಿನ ಪ್ರಮುಖ ಆಕರ್ಷಣೆ – ಫೋಟೋ ಫ್ರೇಮ್! ಇಲ್ಲಿ ಬರುವ ಪ್ರವಾಸಿಗಳಿಗೆ ಫೋಟೊಗೋಸ್ಕರವಾಗಿ ಮರದಲ್ಲಿ ಮಾಡಿದ ಒಂದು ಸುಂದರವಾದ ಫೋಟೋ ಫ್ರೇಮ್ ಇದೆ. ಅದರ ಕೊನೆಯಲ್ಲಿ ಸ್ಲೋವೇನಿಯಾದ ಅಜ್ಜ ಪ್ರತಿಯೊಬ್ಬರ ಜೊತೆಗೂ ನೆನಪಾಗಿ ಅವರವರ ಮನೆಗಳಿಗೆ ತೆರಳುತ್ತಾನೆ. ನಾವೆಲ್ಲರೂ ಕೂತು ತೆಗೆಸಿಕೊಂಡಿರುವ ಫೋಟೋ ನೋಡಿದರೆ ನಿಮಗೊಂದು ಕ್ಷಣಕ್ಕೆ ಅಚ್ಚರಿಯಾಗುವುದು ಖಚಿತ. ಆ ಅಜ್ಜ ನಮ್ಮಲ್ಲಿಯ ಯಾರೋ ಒಬ್ಬರು ಎಂಬಂತೆ ಕಾಣುವಷ್ಟು ಚೆನ್ನಾಗಿ ಮೂಡಿ ಬಂದಿರುವ ಕೆತ್ತನೆಯ ಕಲಾವಿದನಿಗೆ ಹಾಗೂ ಈ ಕಲ್ಪನೆಯನ್ನು ಸಾಕಾರಗೊಳಿಸಿದ ಇಲ್ಲಿಯ ಪ್ರವಾಸೋದ್ಯಮ ಇಲಾಖೆಗೆ ನನ್ನ ಧನ್ಯವಾದಗಳು.

Read More

ಅವನಿಗೆ ಒಂದು ಹಿಡಿ ಮಣ್ಣನ್ನೂ ಕೊಡಲಿಲ್ಲ.

ಆ ಮನೆಯ ಅಂಗಳದಲ್ಲಿ ಎಷ್ಟೊಂದು ದೊರೆಯಂತೆ ಮೆರೆದಿದ್ದವನು… ಎಷ್ಟು ಬಡಿದಾಡಿ ರಕ್ತ ಹರಿಸಿದ್ದವನು. ಈಗ ಅದೇ ಅಂಗಳವ ಹಾದು ಹೋಗುವ ಹಾದಿ ಹೋಕರತ್ತ ಕ್ಷೀಣ ದನಿ ಹೊರಡಿಸಿ ಕೈ ಒಡ್ಡಿ ತಿನ್ನಲು ಏನಾದರೂ ಕೊಡಿ ಎಂದು ಬೇಡುತ್ತಿದ್ದ. ಕೊಡುವವರು ಕೊಡುತ್ತಿದ್ದರು. ಅವನ ಮೂರನೇ ಹೆಂಡತಿ ಮೈಸೂರು ಸೇರಿದ್ದವಳು ತನ್ನ ಮಗಳ ಸಮೇತ ನಾಪತ್ತೆ ಆದವಳು ಮತ್ತೆ ಎಲ್ಲೂ ಕಂಡಿರಲಿಲ್ಲ. ಶಾಂತಿ ಮಾತ್ರ ಬಚಾವಾಗಿ ಗಂಡನ ಮನೆಯಲ್ಲಿ ಅನುಕೂಲವಾಗಿ ಇದ್ದಳು.
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 39ನೇ ಕಂತು

Read More

ದಿವಾನಿಯಾದ ಮಸ್ತಾನಿಯ ಕತೆ

ಹೌದಲ್ಲ. ಇವಳು ಎಲ್ಲಿಂದ ಬಂದಳು ಎಲ್ಲಿಗೆ ಹೋದಳು? ಸಂಜಯ್ ಲೀಲಾ ಬನ್ಸಾಲಿಯ ವೈಭವಪರದೆಯಲ್ಲಿ ದೀಪಿಕಾಳ ಮೂಲಕ ಅನಾವರಣಗೊಂಡವಳು.. ಕೊಟ್ಟಿಗೆಯಂತಾಗಿದ್ದ ಮನದ ನಡುವಿನಲ್ಲಿ ನೊರೆ ಹಾಲ್ಗರೆದುಕೊಟ್ಟ, ಬಾಜಿರಾಯನ ‘ಮಸ್ತಾನಿ’ಯನ್ನು ಹುಡುಕಿ ನಾನು ಹೊರಟೆ. ಹಾಡುತ್ತಿದ್ದೆ ನಾನೂ “ಕಹತೆ ಹೆ ಯೇ ದಿವಾನಿ ಮಸ್ತಾನೀ ಹೋಗಯೀ…” ಅವಳು ಇರಲೇ ಇಲ್ಲ, ಅವಳು ಮುಸ್ಲಿಂ ಆಗಿರಲಿಲ್ಲ, ಅವಳು ಬಾಜಿರಾಯನಿಗಿಂತ ಮೊದಲೇ ಸತ್ತಳು, ಆತ್ಮಹತ್ಯೆ ಮಾಡಿಕೊಂಡಳು ವಗೈರೆ ವಗೈರೆ ಎಂದು ಮಾಧ್ಯಮಗಳು ಟಿಆರ್‌ಪಿ ಸಂಕಷ್ಟದಲ್ಲಿ ಹೊರಳಿ ಧುಮ್ಮಿಕ್ಕುತ್ತಿರುವಾಗ ನಾನು ಹಾಡುತ್ತಿದ್ದೆ “ಜ಼್ಅಖಮ್ ಐಸ ತೂನೇ ಲಗಾಯಾ… ಮರ್ಹಮ್ ಐಸ ತೂನೇ ಲಗಾಯಾ… ಮೇ ದಿವಾನಿ ಹೋಗಯೀ… ಹಾಂ ದಿವಾನೀ ಹೋಗಯೀ” ಅಂಜಲಿ ರಾಮಣ್ಣ ಬರೆಯುವ `ಕಂಡಷ್ಟೂ ಪ್ರಪಂಚ’ ಅಂಕಣದಲ್ಲಿ ಹೊಸ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ