Month: May 2024
ಸೂಕ್ಷ್ಮ ವಿಚಾರಗಳನು ಸರಳವಾಗಿ ದಾಟಿಸುವ ಬರಹಗಾರ…
Posted by ಮನು ಗುರುಸ್ವಾಮಿ | Jan 3, 2023 | ದಿನದ ಅಗ್ರ ಬರಹ |
ವಿದ್ಯೆ ಕಡಿಮೆಯಾದರೂ ನಡತೆ ಶುದ್ಧವಾಗಿರಬೇಕು ಎಂಬ ಮಾತಿದೆ. ಜೀವನದಲ್ಲಿ ನಿಜವಾದ ಬಡತನ ಯಾವುದೆಂದರೆ, ಅದು ತನ್ನ ನಡತೆಯನ್ನ ಶುದ್ಧವಾಗಿಟ್ಟುಕೊಳ್ಳದೇ ಇರುವುದು. ಇಲ್ಲಿ ನಡತೆಯೆಂದರೆ ವ್ಯಕ್ತಿಯ ಚಾರಿತ್ರ್ಯ, ವ್ಯಕ್ತಿತ್ವ; ಆ ವ್ಯಕ್ತಿ ಸಮಾಜದಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಾಗಿರುವ ರೀತಿ. ಆ ನಡತೆಯೊಂದು ಸರಿಯಾಗಿದ್ದರೆ ಎಲ್ಲವೂ ಸರಿಯಾಗಿರಬಲ್ಲದೆನ್ನುವ ಕವಿ ಇರುವುದರಲ್ಲೇ ತೃಪ್ತಿಯನ್ನು ಹೊಂದಿ, ಜೀವನದಲ್ಲಿ ಎಷ್ಟೇ ಕಷ್ಟವಿದ್ದರೂ ನಗುಮುಖದಿಂದ ಬದುಕುವ ರೀತಿಯನ್ನು ರೂಢಿಸಿಕೊಳ್ಳಬೇಕು ಎಂದಿದ್ದಾರೆ.
ಜಿ.ಪಿ. ರಾಜರತ್ನಂ ಬರಹಗಳ ಕುರಿತು ಮನು ಗುರುಸ್ವಾಮಿ ಬರಹ
ಹಳ್ಳಿಯ ಅಂತರಾತ್ಮದ ಆರ್ದ್ರ ಕಥನ
Posted by ಕೆಂಡಸಂಪಿಗೆ | Jan 3, 2023 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಇಡೀ ಕಥೆಗಳ ಅಂತರಾಳದಲ್ಲಿ ವಿಷಾದದ ದನಿಯೊಂದು ಲಘು ಹಾಸ್ಯದ ಲೇಪನದೊಂದಿಗೆ ಅನಾವರಣಗೊಂಡಿದೆ. ಯಾವುದೇ ʻಇಸಂʼನಿಂದ ಮುಕ್ತಗೊಂಡಂತೆ ಕಾಣುವ ಇಲ್ಲಿನ ಲೋಕದಲ್ಲಿ ಮನಕುಲದ ಒಳಿತು ಹಾಗೂ ಜೀವಪರ ತುಡಿತವೇ ಮೇಲುಗೈಯ್ಯಾಗಿದೆ. ಈ ಸಂಕಲನದ ಬಹು ಮುಖ್ಯ ಸಂಗತಿ ಅಂದರೆ, ಇದುಅಪ್ಪಟ ಪ್ರಾದೇಶಿಕ ಸೊಗಡಿನಿಂದ ಲಕಲಕಿಸುತ್ತದೆ. ಅಂತೆಯೇ ಯಾವುದೇ ಮಡಿವಂತಿಕೆಯ ಸೋಗಿಲ್ಲದೆ ಪ್ರಾಮಾಣಿಕವಾಗಿ ಅನಿಸಿದ್ದನ್ನು ನೇರವಾಗಿ ಹೇಳುತ್ತದೆ.
ಮಂಜಯ್ಯ ದೇವರಮನಿ ಕಥಾ ಸಂಕಲನ “ದೇವರ ಹೊಲ”ಕ್ಕೆ ಎಸ್. ಗಂಗಾಧರಯ್ಯ ಬರೆದ ಮುನ್ನುಡಿ
ಮೆಳ್ಳಿಗೇರಿ ಸರ್ ಸಲುವಾಗಿ ಶಾಲೆಯನ್ನೇ ಬದಲಾಯಿಸಿದ್ದೆ!
Posted by ರಂಜಾನ್ ದರ್ಗಾ | Jan 2, 2023 | ಸರಣಿ |
ವಿದ್ಯಾರ್ಥಿಗಳನ್ನು ನಾಲ್ಕು ಗುಂಪಾಗಿ ವಿಂಗಡಿಸಿ ಪ್ರತಿ ಗುಂಪಿಗೆ ಒಬ್ಬೊಬ್ಬ ಗಣಿತ ಪರಿಣತ ವಿದ್ಯಾರ್ಥಿಯನ್ನು ನಾಯಕನನ್ನಾಗಿ ಮಾಡಿದ್ದರು. ನನಗೆ ಒಂದು ಗುಂಪಿನ ಜಬಾಬ್ದಾರಿ ಕೊಟ್ಟಿದ್ದರು. ದೊಡ್ಡದಾಗಿರುವ ಮನೆಯ ಸಹಪಾಠಿಗಳ ಕೋಣೆಯೊಂದರಲ್ಲಿ ರಾತ್ರಿ ಕುಳಿತು ಗಣಿತ ಬಿಡಿಸುತ್ತಿದ್ದೆವು. ಅಲ್ಲೇ ಮಲಗಿ ಬೆಳಿಗ್ಗೆ ಮನೆಗೆ ಹೋಗುತ್ತಿದ್ದೆವು. ಹೀಗೆ ಸಹಪಾಠಿಗಳ ಮನೆಗೆ ಹೋಗಿ ಪಾಠ ಹೇಳುವುದನ್ನು ಮೊದಲಿನಿಂದಲೂ ಮಾಡುತ್ತಿದ್ದೆ. ಶ್ರೀಮಂತ ಹುಡುಗರ ತಾಯಂದಿರು ಬಡ ಹುಡುಗನ ತಾಯಿಯ ಮನೆಗೆ ಬಂದು “ಇವತ್ತು ನಿಮ್ಮ ಮಗನನ್ನು ನಮ್ಮ ಮನೆಗೆ ಕಳಿಸಿರಿ” ಎಂದು ಕೇಳುವುದು ನನಗೆ ಖುಷಿ ಕೊಡುತ್ತಿತ್ತು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ
ಮೌಲ್ಯ ಸ್ವಾಮಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jan 2, 2023 | ದಿನದ ಕವಿತೆ |
“ತಿಳಿ ಗುಲಾಬಿ ಚಿಟ್ಟೆಗಳ ತಿನ್ನಿಸಿ ನೀಲಿ ನೀಲಿ ಕತ್ತರಿಗಳ ನುಂಗಿಸುತ್ತಲೇ
ಪ್ರೇಮದ ಅಡಕತ್ತರಿಗೆ ನನ್ನ ಎಳೆರೆಕ್ಕೆಗಳ ಸತ್ಯ ಕುಡಿಸಿ ಮಣ್ಣು ಮಾಡಿಬಿಟ್ಟ
ಎಡ ಪಾರ್ಶ್ವದ ಮೂಲೆಯೊಂದರಲ್ಲಿ ಕಾಡ ನಡುವಿನ ಬಿಸಿನೀರ ಬುಗ್ಗೆಯಂತೆ
ಸಾವಿರ ವರ್ಷಗಳಷ್ಟು ಹಳೆಯ ಕತ್ತಲು ಉಕ್ಕುತ್ತಿದೆ
ಒಳಗೊಳಗೆ
ಬುಗ್ಗೆಯಂತೆ”-
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಓದುಗರ ಮೆಚ್ಚು
ನಮ್ಮ ಫೇಸ್ ಬುಕ್
ನಮ್ಮ ಟ್ವಿಟ್ಟರ್
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ
ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…
Read More