Advertisement

Month: April 2024

ಇನ್ಸ್ಬ್ರುಕ್ ಎಂಬ ಮಾಯಾಲೋಕ

ನಾರ್ಡ್ ಕೆಟ್ಟೆಯಲ್ಲಿ ಪ್ರವಾಸಿಗರಿಗೋಸ್ಕರ “ಇಗ್ಲೂ” ಕೂಡ ಮಾಡಿ ಇಡಲಾಗಿತ್ತು. ಗಟ್ಟಿಯಾದ ಹಿಮದ ಇಟ್ಟಿಗೆಗಳಿಂದ ಕಟ್ಟಿದ ಪುಟ್ಟ ಮನೆಯೇ ಇಗ್ಲೂ. ತಾಪಮಾನ ಹೆಚ್ಚಿದ ಹಾಗೆ ಕರಗಿ ಹೋಗುವ ಈ ಮನೆ, ಬೇಸಿಗೆಯಲ್ಲಿ ಮಾಯವಾಗಿಬಿಡುತ್ತದೆ. ಮತ್ತೆ ಚಳಿಗಾಲದಲ್ಲಿ ಹೊಸದಾಳಿ ಹಿಮ ಬಿದ್ದು, ಗಟ್ಟಿಯಾದಮೇಲೆ ಪುನಃ ಕಟ್ಟಿಕೊಳ್ಳಬೇಕು. ಅಲ್ಲಿಗೆ ಹಿಂದಿನವರ ಕಾಲದಲ್ಲಿ ಪ್ರತಿವರ್ಷ ಹೊಸ ಮನೆ ಕಟ್ಟಿ, ಗೃಹಪ್ರವೇಶ ನಡೆಯುತ್ತಿತ್ತು ಅನ್ನಿಸುತ್ತದೆ!
“ದೂರದ ಹಸಿರು” ಸರಣಿಯಲ್ಲಿ ಇನ್ಸ್ಬ್ರುಕ್ ನಗರದಲ್ಲಿ ಓಡಾಡಿದ ಅನುಭವಗಳ ಬರೆದಿದ್ದಾರೆ ಗುರುದತ್ ಅಮೃತಾಪುರ

Read More

ಕನಸು ಸಾಕಿಕೊಂಡವರ ಕಣ್ಣ ದೀಪದೆದುರು…

ಕನ್ನಡದ ಪ್ರಮುಖ ಬರಹಗಾರ ಪಿ.ಲಂಕೇಶ್ ಹೇಳುವಂತೆ ಒಬ್ಬ ಬರಹಗಾರನ ಭಾಷೆಯೇ ಆತನ ಅಸಲಿ ಮತ್ತು ಖೊಟ್ಟಿತನವನ್ನು ಬಯಲು ಮಾಡುವ ಸಾಧನ. ಬರಹದಲ್ಲಿ ಹೆಚ್ಚು ಹೊತ್ತು ಅದನ್ನು ಅವಿತಿಟ್ಟು ಆಟ ಆಡಲಾಗದು. ಇಲ್ಲಿ ಗೆದ್ದ ಮಾತಿವೆ, ಸೋತ ಮಾತಿವೆ. `ಕವಿಯ ಜೀವನಾನುಭವ ಮತ್ತೆ ಮತ್ತೆ ಕಸಿಗೊಂಡಾಗ ಆತನ ಕಾವ್ಯದಲ್ಲಿ ಹೊಸಕಳೆ ಕಾಣಬಹುದು. ಆ ಕಸುವು ಹೊಂದಿರುವ ಮಂಡಲಗಿರಿ ಪ್ರಸನ್ನ ಅವರ ಮುಂದಿನ ಬರಹಗಳು ಮತ್ತಷ್ಟು ಹೊಸತನದೊಂದಿಗೆ ಓದುಗ ವಲಯಕ್ಕೆ ತಲುಪಲಿ.
ಮಂಡಲಗಿರಿ ಪ್ರಸನ್ನ ಅವರ “ನಿದಿರೆ ಇರದ ಇರುಳು” ಗಜಲ್‌ ಸಂಕಲನಕ್ಕೆ ಡಾ. ರಮೇಶ ಅರೋಲಿ ಬರೆದ ಮುನ್ನುಡಿ

Read More

ಸಮೃದ್ಧ ಜೀವನಾನುಭವವೇ ಸಾಹಿತ್ಯದ ಜೀವ: ನಾ. ಮೊಗಸಾಲೆ

ತಲೆಮಾರು ಎನ್ನುವುದು ಮುಂದುವರಿಯುತ್ತಾ ಹೋದ ಹಾಗೆ ಕೌಶಲ್ಯ ಎನ್ನುವುದು ಹಿಂದಿಗಿಂತ ಹೆಚ್ಚು ಶಕ್ತ ಅಥವಾ ಹೆಚ್ಚೋ ಎಂಬಂತೆ ಮುಂದುವರಿಯುವುದು ನಮ್ಮ ಅನುಭವ ಅಥವಾ ಪ್ರಕೃತಿ ನಿಯಮ. ಪ್ರತಿಭೆ, ಕೌಶಲ್ಯ, ಮತ್ತು ಚಿಂತನೆಗಳಲ್ಲಿ ನಾವು ನಮ್ಮ ಹಿರಿಯರಿಗಿಂತ ಮುಂದುವರಿದಿದ್ದೇವೆ ಎನ್ನುವುದನ್ನು ನಾನೂ ನೀವೂ ಒಪ್ಪಿಕೊಳ್ಳುವುದಾದರೆ ನಮ್ಮ ಮುಂದಿನ ಪೀಳಿಗೆಯೂ ಖಂಡಿತ ನಮಗಿಂತ ಮುಂದಿರುತ್ತದೆ ಎನ್ನುವುದನ್ನು ಒಪ್ಪಬೇಕು.
ಡಾ. ನಾ. ಮೊಗಸಾಲೆಯವರೊಟ್ಟಿಗೆ ನಡೆಸಿದ ಮಾತುಕತೆಯನ್ನು ಹಂಚಿಕೊಂಡಿದ್ದಾರೆ ಡಾ. ಸುಭಾಷ್ ಪಟ್ಟಾಜೆ

Read More

ಕೆ. ಎಸ್.ನ ಅವರ ಕವಿತೆಗಳಲ್ಲಿ ಮಣ್ಣಿನ ಹಾಡು

‘ನಿನ್ನ ಕಾಣದೆಯೆ ಬೆಳೆದೆ, ನಾ ಕಂಡಿಹೆ ತಾಯ ಸಂಪ್ರೀತಿಯನು ಚೆಲುವನು’ ಎನ್ನುವ ನಿರೂಪಕನಿಗೆ ತಂದೆ ಇಲ್ಲಿ ಅದೃಶ್ಯ ವ್ಯಕ್ತಿ ಅಥವಾ ಯಾವಾಗಲಾದರೊಮ್ಮೆ ಕಂಡರೂ, ಮಗ ‘ಕೈಬೀಸಿ ಕರೆದರೂ ರಾಜಾಧಿರಾಜನೆನ್ನುವ ಸೊಕ್ಕಿನಿಂದ’ ಮಗನ ಮೈಮುಟ್ಟದೆಯೇ ನಡೆವನು. ಆದರೆ ತಾಯಿಯಾದರೋ ‘ಮರುಭೂಮಿಯಲಿ ಮುಗಿಲ ತೊಟ್ಟಿಲ ಕಟ್ಟಿ, ಹಿಮ ಬೆಂಕಿ ಬಿರುಗಾಳಿ’ ಯ ವಿಕೋಪದ ನಡುವೆಯೂ ಹರುಷದಿಂದ ಅಮೃತವನ್ನೇ ಸೋಸಿ ಪೊರೆದವಳು.
ಇಂದು ಕವಿ ಕೆ.ಎಸ್. ನರಸಿಂಹಸ್ವಾಮಿಯವರ ಕವಿತೆಗಳ ಕುರಿತು ಗಿರಿಜಾ ಶಾಸ್ತ್ರಿ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ