Advertisement

Month: May 2024

ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ ಆರಂಭ

ಮುಂದೆ ಈ ಕುದುರೆ ಗಾಡಿ ಯಾ ಜಟಕಾ ಗಾಡಿ ಪ್ರಸಂಗ ಸಾವಿರಾರು ಸಲ ರಿಪೀಟ್ ಆದವು. ಆಗ ರಾಮಚಂದ್ರಪುರದ ಬಳಿ ಬರುತ್ತಿದ್ದಂತೆ ದೊಡ್ಡ ಇಳಿಜಾರು ಶುರು ಆಗಿ ಸುಮಾರು ನೂರಾ ಐವತ್ತು ಅಡಿ ಆಳಕ್ಕೆ ರಸ್ತೆ ಸರಿದು ನಂತರ ಏರು ಗತಿಯಲ್ಲಿ ಇದು ಮುನ್ನೂರು ಗಜ ದಾಟಿ ರಾಜಾಜಿನಗರ ಎಂಟ್ರೆನ್ಸ್ ತಲುಪುತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ ಹೊಸ ಸರಣಿ “ಹಳೆ ಬೆಂಗಳೂರ ಕಥೆಗಳು” ಇನ್ನು ಹದಿನೈದು ದಿನಗಳಿಗೊಮ್ಮೆ, ಶುಕ್ರವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ.

Read More

ಎಚ್.ಎಸ್. ಅನುಪಮಾ ಕಾದಂಬರಿಯಲ್ಲಿ “ಅಕ್ಕ”

ಅಕ್ಕಮಹಾದೇವಿಯದು ಅಭಾವ ವೈರಾಗ್ಯಅಲ್ಲ. ಅವಳದು ಸ್ವಭಾವ ವೈರಾಗ್ಯ ಎಲ್ಲ ಇದ್ದು ಅದರ ಕುರಿತು ಆಕರ್ಷಣೆ ಇಲ್ಲದಿರುವುದು ಅವಳ ವ್ಯಕ್ತಿತ್ವವೇ ವಿಶಿಷ್ಟ ಚೈತನ್ಯ ಉಳ್ಳದ್ದು. ಮಠದ ಗುರು ಲಿಂಗ ಶರಣರು ಅವಳಿಗೆ ಲಿಂಗ ದೀಕ್ಷೆ ನೀಡುತ್ತಾರೆ. ದಿಗಂಬರ ಸನ್ಯಾಸಿಗಳನ್ನು ನೋಡಿ ಎಲ್ಲವನ್ನು ಕಳಚಿ ಇರುವುದರ ಕುರಿತು ಯೋಚಿಸುತ್ತಾಳೆ. ಲಿಂಗ ಶರಣರು ಕಲ್ಯಾಣಕ್ಕೆ ಹೋಗಿ ಬಂದು ಬಸವಣ್ಣನ ಮಹಾಮನೆಯ ವಿಷಯ ಹೇಳುತ್ತಾರೆ. ಕಸಪಯ್ಯ ರಾಯ ಇವನ ಗುಡಿ ಕಟ್ಟಿಸುವಾಗ ಅವನ ಸತಿಗೂ ಗುಡಿ ಕಟ್ಟಲು ಹೇಳುತ್ತಾಳೆ.
ಡಾ. ಎಚ್.ಎಸ್. ಅನುಪಮಾ ಅವರ ಹೊಸ ಕಾದಂಬರಿ “ಬೆಳಗಿನೊಳಗು” ಕುರಿತು ಡಾ. ಎಲ್.ಸಿ. ಸುಮಿತ್ರಾ ಬರಹ

Read More

ಹತ್ತನೆ ಶತಮಾನ: ಹಿಂದೂ ಸಂಸ್ಕೃತಿಯ ಮಹತ್ತರ ವಿಸ್ತಾರ

ಸಂಗಂ ಯುಗದಲ್ಲಿ ಅಶೋಕನ ಕಾಲಕ್ಕಿಂತಲೂ ಹೆಚ್ಚಿನ ಪ್ರಗತಿ ಕಲೆಯಲ್ಲುಂಟಾಯಿತು. ಪೂನಾದ ಸಮೀಪ ‘ಬಾಜʼ ಎಂಬಲ್ಲಿ ಕ್ರಿ.ಪೂ. ಇದೇ ಶತಮಾನದಲ್ಲಿ ಒಂದು ‘ವಿಹಾರ’ವನ್ನು ಕಡೆದಿರುವರು. ಈ ಕಲೆಯು ವಾಸ್ತವಿಕತೆಯಿಂದ ಕೂಡಿದೆ. ಮುಂಬಯಿಯ ಕಾರ್ಲೆ ಎಂಬಲ್ಲಿ ಕಲ್ಲಿನಿಂದಲೇ ಮಾಡಿದ ಚೈತ್ಯಾಲಯವು ಉತ್ಕೃಷ್ಟವಾಗಿದೆ. ಜುನಾರ್, ನಾಸಿಕ, ಅಜಂತ ಮುಂತಾದೆಡೆಗಳಲ್ಲಿಯೂ ಉತ್ತಮ ಚೈತ್ಯಾಲಯಗಳಿವೆ. ಕೆತ್ತನೆಯ ಕೆಲಸಗಳಿಂದ ಕೂಡಿದ ಬೃಹತ್ ಸ್ತೂಪದ ಹೆಬ್ಬಾಗಿಲು ಪ್ರಸಿದ್ಧವಾಗಿದೆ.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಕೊನೆಯ ಬರಹ ಇಲ್ಲಿದೆ.

Read More

ಉಳಿದದ್ದೀಗ ನೆನಪುಗಳಷ್ಟೇ….

ಅಡಿಗರ ರಾಮನವಮಿಯ ದಿವಸ ಪದ್ಯದ ಬಗ್ಗೆ ಅವರೊಡನೆ ಚರ್ಚಿಸುತ್ತಿದ್ದ ದಿನಗಳು ನನ್ನ ಬದುಕಿನ ಸುವರ್ಣ ಯುಗ. ಅವ್ರಿಗೆ ತಂತ್ರದ ಬಗ್ಗೆ ವಿಶೇಷ ಆಸಕ್ತಿ ಎಂದಾಗ ಒಪ್ಪಿಕೊಂಡಿದ್ದರು. ಅಡಿಗರ ಕುರಿತ ದೂರುಗಳನ್ನೂ, ಮೆಚ್ಚುಗೆಯನ್ನೂ ಮುಕ್ತವಾಗಿ ಹೇಳುತ್ತಿದ್ದರು. ನೀವೇಕೆ ನಿಮ್ಮ ಬರೆಯುವ ರೀತಿಯನ್ನು ಪದೇ ಪದೇ ಬದಲಾಯಿಸಿದಿರಿ.
ತಮ್ಮ ಗ್ರಹಿಕೆಗೆ ಸಿಕ್ಕ ಕೆ.ವಿ. ತಿರುಮಲೇಶರ ಕುರಿತು ಬರೆದಿದ್ದಾರೆ ಮಾಲಿನಿ ಗುರುಪ್ರಸನ್ನ

Read More

ಕಳೆ ಕತ್ತರಿಸುವ ಯಂತ್ರ ಎಂಬ ಅದ್ಭುತ ಸಾಧನ

ನನ್ನ ಕಾರ್‌ನಲ್ಲಿ ಹಿಂದಿನ ಸೀಟು ಖಾಲಿ ಇತ್ತು. ಹಾಗೆಯೇ ಹೋಗುತ್ತಾ ನಾಲ್ಕು ಹುಡುಗರಿಗೆ ಶಾಲೆಯವರೆಗೆ ಲಿಫ್ಟ್ ಕೊಡೋಣ ಅನಿಸಿತು. ಒಂದು ಹುಡುಗರ ಗುಂಪಿನ ಪಕ್ಕ ಗಕ್ಕಂತ ನಿಲ್ಲಿಸಿದೆ. ನಾನು ಏನೋ ಹೇಳುವಷ್ಟರಲ್ಲಿ ಒಬ್ಬ ಹುಡುಗ ಹಿಂದೆ ಓಡಲು ಶುರು ಮಾಡಿದ. ಅವನ ಜೊತೆಗೆ ಉಳಿದ ಹುಡುಗರೂ ಓಡತೊಡಗಿದರು! ಅಯ್ಯೊ ದೇವ್ರೆ ನನ್ನನ್ನ ಕಿಡ್ನ್ಯಾಪರ್‌ ಅಂದುಕೊಂಡರೋ ಏನೋ!? ಉಪಕಾರ ಮಾಡೋದು ಬೇಡವೇ ಬೇಡ ಅಂತ ನಾನು ಮುಂದೆ ಹೊರಟೆ. ನನ್ನ ಮುಖವನ್ನು ಕಾರಿನ ಕನ್ನಡಿಯಲ್ಲಿ ನೋಡಿಕೊಂಡೆ.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ