Advertisement

Month: May 2024

ಏನು ಬರೆಯುವುದು?: ಎಂ.ವಿ. ಶಶಿಭೂಷಣ ರಾಜು ಬರಹ

ತಮ್ಮ ಖಯಾಲಿಗೋ, ಸಾಮಾಜಿಕ ಜವಾಬ್ದಾರಿಯಿಂದಲೋ, ಸಮಾಜಕ್ಕೆ ತನ್ನದೊಂದು ಅಳಿಲ ಸೇವೆ ಎಂದೋ ಪ್ರಖ್ಯಾತಗೊಳ್ಳಲೋ ಬರೆಯುವರಿಗೆ ಸ್ವಲ್ಪ ಭಯ ಇದ್ದೇ ಇರುತ್ತದೆ. ಏಕೆಂದರೆ ಸಹಾಯ ಮಾಡಿಸಿಕೊಂಡವರೇ ಎದುರು ತಿರುಗುವುದು, ಹಿಂದೆ ಕೆಟ್ಟದಾಗಿ ಆಡಿಕೊಳ್ಳುವುದು, ಕಷ್ಟಕೊಡುವುದು ಹೀಗೆ ಅನೇಕ ರೀತಿಯಲ್ಲಿ ನೋವು ಕೊಡುವುದರಿಂದ, ನನಗ್ಯಾಕೆ ಇಲ್ಲದ ಉಸಾಬರಿ ಎಂದುಕೊಳ್ಳುವವರು ಸಂಖ್ಯೆ ಹೆಚ್ಚಾಗುತ್ತಿದೆ.
ಎಂ.ವಿ. ಶಶಿಭೂಷಣ ರಾಜು ಬರಹ ನಿಮ್ಮ ಓದಿಗೆ

Read More

ಲೋಕದೃಷ್ಟಿಯೂ ಲೋಕಾ ರೂಢಿಗಳು: ಲಿಂಗರಾಜ ಸೊಟ್ಟಪ್ಪನವರ್‌ ಅಂಕಣ

ಸಿಕ್ಕೊಂಡು ಸೀರಿ ಉಟ್ಕಂಡಿಯವೂ ಹುಷಾರು..: ಮನೆಯ ಹಿರಿಯ ಹೆಂಗಸರು ಹಿರಿಯರಿಗೆ ಹೇಳಿ ಕಳಿಸುವ ಅತಿ ಎಚ್ಚರಿಕೆಯ ಮಾತು ಇದು. ಹಲವು ನೆರಿಗೆಗಳನ್ನು ಸೀರೆಗೆ ಆಧ್ಯಾರೋಪಿಸಿದಂತಹ ಕಟು ಎಚ್ಚರ ಇಲ್ಲಿ ಸಂಕೇತದಂತೆ ಇದೆ. ಎಡವದಿರುವ ಜಾರದಿರುವ ಎಚ್ಚರ ಹೆಜ್ಜೆ ಹೆಜ್ಜೆಗೂ ಗಂಟೆ ಹೊಡೆಯುತ್ತಿರುತ್ತದೆ. ಜನಪದ ಧಾರೆಯಲ್ಲಿ ಇಂಥದೊಂದು ಸ್ತ್ರೀ ಕೇಂದ್ರಿತ ಎಚ್ಚರದ ಮಾತುಗಳು ಉದ್ದಕ್ಕೂ ಸಿಗುತ್ತವೆ.
ಲಿಂಗರಾಜ ಸೊಟ್ಟಪ್ಪನವರ್‌ ಬರೆಯುವ “ಉತ್ತರದ ಕತೆಗಳು” ಅಂಕಣದ ಎರಡನೆಯ ಬರಹ

Read More

ಕಡಲಿನಗಲದ ಕಣ್ಣುಗಳೊಳಗಿನ ಸುನಾಮಿ…: ಆಶಾ ಜಗದೀಶ್ ಅಂಕಣ

ನಾವು ಅದೆಷ್ಟು ತೀವ್ರವಾಗಿ ಅತ್ತಿದ್ದೇವೆ, ಒಬ್ಬರನ್ನೊಬ್ಬರು ಹಂಬಲಿಸಿದ್ದೇವೆ, ಬಿಟ್ಟು ಬದುಕಲು ಸಾಧ್ಯವೇ ಇಲ್ಲ ಎನಿಸುವಷ್ಟು ಹಚ್ಚಿಕೊಂಡಿದ್ದೇವೆ. ಜೊತೆಯಲ್ಲಿರುವಂತೆ ಭ್ರಮಿಸಿದ್ದೇವೆ. ಭ್ರಮೆಯಿಂದ ತಿಳಿದೆದ್ದು ವಿಹ್ವಲಗೊಂಡಿದ್ದೇವೆ. ಅದೊಂದು ದಿನ ನಡುರಾತ್ರಿ, ಒಂದು ಕನಸು ಅರಳತೊಡಗಿತ್ತು; ನೈಜವೆನಿಸುವಷ್ಟೇ ಸಹಜವಾಗಿ. ನಾವಿಬ್ಬರೂ ಎರೆಡು ಪುಟ್ಟ ಗಿಳಿಗಳಂತೆ ಒಟ್ಟೊಟ್ಟಾಗಿ ಒತ್ತಿಕೊಂಡು ಕೂತು, ನಿಂತು, ಮಲಗಿ ಆಟವಾಡುತ್ತಿದ್ದೆವು. ಮುದ ಮತ್ತು ಮುಗ್ಧ… ಯಾರ ಸಂಚೋ ತಿಳಿಯದು. ಕನಸು ಒಡೆಯಿತು. ಕಣ್ಣು ತೆರೆದಾಗ ನೀನಿಲ್ಲ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಹೊಸ ಬರಹ

Read More

ಕಾಲದೊಂದಿಗೆ ಇಲ್ಲಿ ಕೆಲವೊಂದು ಬದಲಾಗುತ್ತವೆ!!: ಬಸವನಗೌಡ ಹೆಬ್ಬಳಗೆರೆ ಸರಣಿ

ಆಗ ಊರಲ್ಲಿ ಯಾವುದೇ ಮನೆಯ ಮದುವೆಯಾದ್ರೂ ನಮಗೆ ಊರ ಹಬ್ಬದ ವಾತಾವರಣದಂತೆ ಅನಿಸುತ್ತಿತ್ತು. ಮದುವೆ ಮನೆ ಊಟದ ಖುಷಿ ಒಂದೆಡೆಯಾದರೆ ಅಲ್ಲಿ ಮೈಕಿನಲ್ಲಿ ಹಾಕಿರುತ್ತಿದ್ದ ಚಲನಚಿತ್ರ ಗೀತೆಗಳನ್ನು ಕೇಳುವುದೂ ಖುಷಿ ಕೊಡುತ್ತಿತ್ತು. ಮೊದಲಿಗೆ ‘ಮೂಷಿಕ ವಾಹನ ಮೋದಕ ಹಸ್ತ’ ಹಾಡಿನಿಂದ ಮದುವೆಯ ಮನೆಯ ಹಾಡುಗಳು ಶುರುವಾಗುತ್ತಿದ್ದವು. ಆಗ ಊರಲ್ಲಿ ಮದುವೆಯಾದರೆ ಆ ಮದುವೆಯಲ್ಲಿ ಊಟ ಬಡಿಸೋಕೆ ಅಂತಾ ದುಡ್ಡು ಕೊಟ್ಟು ಜನರನ್ನು ಕರೆಸುತ್ತಿರಲಿಲ್ಲ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಸಮತೆಯ ಸಂತ, ಕಾಮ್ರೇಡ್ ವಿ.ಎನ್. ಪಾಟೀಲ: ರಂಜಾನ್‌ ದರ್ಗಾ ಸರಣಿ

ಪ್ರಾಮಾಣಿಕ ರಾಜಕಾರಣಿಗಳು ತಮ್ಮ ಇಳಿವಯಸ್ಸಿನಲ್ಲಿ ಎಷ್ಟೊಂದು ಕಷ್ಟಪಡುವರು ಎಂಬುದರ ಬಗ್ಗೆ ಅರಿವಿದ್ದ ನನಗೆ ಅಂದು ಬಹಳ ಹೊತ್ತಿನವರೆಗೆ ನಿದ್ರೆ ಬರಲಿಲ್ಲ. ಪ್ರಾಮಾಣಿಕ ರಾಜಕಾರಣಿಗಳಿಗೆ ಇಂಥ ಗತಿ ಬರದೆ ಬೇರೆ ದಾರಿಯಿಲ್ಲ ಎನಿಸಿತು. ಎಷ್ಟೋ ಮರಿಪುಢಾರಿಗಳು ವಿಧಾನ ಸೌಧ, ಮಂತ್ರಿಗಳ ಮನೆ ಮತ್ತು ಶಾಸಕರ ಭವನದ ಮುಂದೆ ಕಾರಲ್ಲಿ ಸುತ್ತಾಡುವುದನ್ನು ನೋಡಿದ ನನಗೆ, ನನ್ನ ನಾಯಕನೊಬ್ಬ ಈ ರೀತಿ ಯಾವ ಸೌಲಭ್ಯಗಳೂ ಇಲ್ಲದೆ ಬದುಕುವುದನ್ನು ನೋಡಿ ಅತೀವ ಖೇದವೆನಿಸಿತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 69ನೇ ಕಂತು ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ