Advertisement

Month: April 2026

ಆರಕ್ಕೇರದ ಮೂರಕ್ಕಿಳಿಯದ ಬಡವರ ಬದುಕು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪಕ್ಕದಲ್ಲಿದ್ದ ಮಣಿ, “ಸರ್ ಅವರೆಲ್ಲರ ಹೆಸರುಗಳು ಏನೇನು ಅಂತ ಗೊತ್ತ ಸರ್?” ಎಂದ. ಲೋಗನಾಥನ್, “ಗೊತ್ತಿಲ್ಲ” ಎಂದ. ಮಣಿ “ಕರ್ಣನ್, ಧರ್ಮರಾಯನ್, ಭೀಮನ್, ಅರ್ಜುನನ್, ನಖುಲನ್ ಮತ್ತು ಸಹದೇವನ್” ಎನ್ನುತ್ತಿದ್ದಂತೆ, ಲೋಗನಾಥನ್ “ಇನ್ನೂ ಮೂವರ ಹೆಸರು?” ಕೇಳಿದರು. ಗೋವಿಂದ, “ಮೊದಲ ಇಬ್ಬರು ಸತ್ತೋದರಂತೆ ಸರ್. ಐದು ಜನ ಗಂಡು ಮಕ್ಕಳಾದ ಮೇಲೆ ನಾನು ಹುಟ್ಟಿ, ನನಗೆ ಗೋವಿಂದಾ ಅಂತ ಹೆಸರು ಇಟ್ಟ ಮೇಲೆ ನಮ್ಮಮ್ಮನಿಗೆ ಮಕ್ಕಳಾಗುವುದು ನಿಂತೋಯಿತಂತೆ” ಎಂದ ಗೋವಿಂದನೆ ಬಿದ್ದೂಬಿದ್ದು ನಕ್ಕ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಮಕ್ಕಳನ್ನು ಬೆಳೆಸುವ `ಕಲೆ’- ಎಂದಾದರೂ ಸಿದ್ಧಿಸೀತೇ?: ಎಲ್.ಜಿ.ಮೀರಾ ಅಂಕಣ

ಬೆಳಿಗ್ಗೆ ಏಳುವ ಸಮಯದಿಂದ ಹಿಡಿದು ರಾತ್ರಿ ಮಲಗುವ ಸಮಯದ ತನಕ ಪ್ರತಿಯೊಂದೂ ಅಂದರೆ ಇಂಚಿಂಚು ಜೀವನವೂ ನಿರ್ಬಂಧಮಯವಾದ ಜೀವನಶೈಲಿ ಇರುವ ಸನ್ನಿವೇಶ ಇದು. ಮಕ್ಕಳನ್ನು ಅದರಲ್ಲೂ ವಿಜ್ಞಾನ ಶಿಕ್ಷಣ ಆರಿಸಿಕೊಂಡವರಿಗೆ ಜಂಗಮವಾಣಿಯನ್ನು ಮುಟ್ಟಲೂ ಬಿಡದ, ಯಾವುದೇ ಸಾಂಸ್ಕೃತಿಕ ಚಟುವಟಿಕೆಗಳಿಗೆ ತೊಡಗಿಸದ ಮನೆಗಳಿವೆ, ವಿದ್ಯಾರ್ಥಿನಿಲಯಗಳಿವೆ! ಈ ವ್ಯವಸ್ಥೆಗೆ ಕೆಲವು ಮಕ್ಕಳು ಹೇಗೋ ಹೊಂದಿಕೊಂಡರೆ ಇನ್ನು ಕೆಲವರು ಆ `ಸೆರೆಮನೆ’ಯಿಂದ ಓಡಿ ಹೋಗಿಬಿಡುವುದು, ಅಥವಾ ದಿಕ್ಕು ಕಾಣದೆ ಆತ್ಮಹತ್ಯೆ ಮಾಡಿಕೊಳ್ಳುವುದು ಇಂತಹ ಅತಿರೇಕದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೇಳನೆಯ ಬರಹ

Read More

ಬೇವಿನ್‌ ಮರ್ದಲ್ಲಿ ಬಾಗ್ಲು ಮಾಡಸ್ತಾರ!: ಎಚ್. ಗೋಪಾಲಕೃಷ್ಣ ಸರಣಿ

ಒಂದೇ ಒಂದು ಭಂಡ ಧೈರ್ಯ ಇತ್ತು ನೋಡಿ. ಅದು ಈಗ ಮುನ್ನೆಲೆಗೆ ಜಿಗಿಯಿತು. ಕೂಡಲೇ ನನ್ನ ಆರನೇ ಸೆನ್ಸ್ ಜಾಗೃತ ಆಯಿತು. ನನ್ನ ಅರಿವಿಗೆ ಬಂದಿದ್ದ ಬೇವಿಗೆ ಸಂಬಂಧಪಟ್ಟ ಲೇಖನಗಳು, ಅವುಗಳ ಬಗ್ಗೆ ಇದ್ದ ನಂಬಿಕೆಗಳು, ನಮ್ಮ ಪೂರ್ವಜರು ಬೇವನ್ನು ಉಪಯೋಗಿಸುತ್ತಿದ್ದ ರೀತಿ ರಿವಾಜು ಎಲ್ಲವೂ ತಲೆಯಲ್ಲಿ ಒಂದರ ಹಿಂದೆ ಒಂದು ಬಂದು ಕ್ಯೂ ನಿಂತವು. ಮಲ್ಲಯ್ಯನ ಕಡೆ ನೋಡಿದೆ. ಅವನ ಮುಖದಲ್ಲಿ ಒಂದು ರೀತಿಯ ವಿಚಿತ್ರ ಕಳೆ ಕಾಣಿಸಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೆಂಟನೆಯ ಕಂತು

Read More

ಮಲೆಯ ಮಕ್ಕಳ ಬೇಸಿಗೆ ರಜಾ – ಮಜಾ: ಭವ್ಯ ಟಿ.ಎಸ್. ಸರಣಿ

ಅಜ್ಜಿ ಮನೆಯ ಹತ್ತಿರ ಒಂದು ಹಳ್ಳ ಇತ್ತು. ಅಲ್ಲಿಗೆ ಅಜ್ಜಿ ಬಟ್ಟೆಗಳನ್ನು ತೊಳೆಯಲು ತೆಗೆದುಕೊಂಡು ಹೋದರೆ ನಾವು ಹಿಂದೆ ಹೊರಟುಬಿಡುತ್ತಿದ್ದೆವು. ಅಜ್ಜಿಯೊಂದಿಗೆ ಬಟ್ಟೆ ತೊಳೆಯುವುದು ಕೂಡ ನಮಗೆ ಒಂದು ಆಟವಾಗಿತ್ತು. ಜೊತೆಗೆ ನೀರಾಟವಾಡಲು ಒಳ್ಳೆಯ ಅವಕಾಶ. ಒಬ್ಬರಿಗೊಬ್ಬರು ನೀರೆರೆಚುತ್ತಾ ಸಂಭ್ರಮಿಸುತ್ತಿದ್ದೆವು. ಅಜ್ಜಿ, ನೀರ್ ಕಂಡ್ರೆ ಸಾಕು ಈ ಹುಡ್ಗುರನ್ನ ಹಿಡಿಯೋರೇ ಇಲ್ಲ… ಅಂತ ಬೈದು ನಮ್ಮನ್ನೆಲ್ಲಾ ಕೂಗಿ ಕರೆದು ಮನೆಗೆ ಕರೆತರುತ್ತಿದ್ದಳು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಬದುಕಿನ ಪಯಣದಲ್ಲಿ ತಂಗುದಾಣಗಳೂ ಇರಲಿ: ಎಸ್. ನಾಗಶ್ರೀ ಅಜಯ್ ಅಂಕಣ

ನಮಗೇನು ಬೇಕು? ಒಂದು ಒಳ್ಳೆಯ ಬಿಡುವು, ನಮ್ಮದೆನ್ನುವ ಸ್ವಲ್ಪ ಸಮಯ, ಜೀವನಕ್ಕೊಂದು ಗುರಿ, ಹತ್ತಿರದವರ ಮೆಚ್ಚುಗೆ ಮತ್ತು ಅಹಂಕಾರಕ್ಕಿಂತ ವಿನಮ್ರತೆಯಲ್ಲಿ ಸುಖ ಕಾಣುವ ಮನಃಸ್ಥಿತಿ. ಪ್ರತಿದಿನವೂ ಅರ್ಧಗಂಟೆಯಾದರೂ ವ್ಯಾಯಾಮ, ನಡಿಗೆ, ಯೋಗ ಇತ್ಯಾದಿಗೆ ಸಮಯ ಮೀಸಲಿಡುವುದು, ಮರೆತುಹೋದ ಹವ್ಯಾಸಗಳೊಂದಿಗೆ ಮತ್ತೆ ಸಖ್ಯ ಬೆಳೆಸುವುದು, ಹೊಸತನ್ನು ಕಲಿಯುವುದು, ಉದ್ಯೋಗ ಮತ್ತು ವೈಯಕ್ತಿಕ ಬದುಕಿನ ನಡುವೆ ಅಂತರ ಕಾಯ್ದುಕೊಳ್ಳುವುದು ಹಾಗೂ ನಮ್ಮ ಇಂದಿನ ಬದುಕು ಹಲವರ ಕನಸೆಂಬುದನ್ನು ಮನಗಾಣುವುದು ಸಹಾಯ ಮಾಡಬಹುದು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ