Advertisement

Month: April 2026

ಉತ್ತರ ಆಫ್ರಿಕಾದ ಇಸ್ಲಾಮಿಕ್ ರಾಷ್ಟ್ರ ಅಲ್ಜೀರಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಅಲ್ಜೀರಿಯಾದ ಜನರು ಫುಟ್‌ಬಾಲ್, ವಾಲಿಬಾಲ್ ಕ್ರೀಡೆಗಳ ಬಗ್ಗೆ ಹೆಚ್ಚು ಒಲವನ್ನು ಇಟ್ಟುಕೊಂಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ವರ್ಷಗಳಲ್ಲಿ ಒಲಿಂಪಿಕ್ ಕ್ರೀಡಾಕೂಟಗಳಲ್ಲಿ ಇಲ್ಲಿಯ ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಬಾಕ್ಸಿಂಗ್‌ನಲ್ಲಿ ಸಾಧನೆ ಮೆರೆದಿದ್ದಾರೆ. ಸಾವಿರದೈನೂರು ಮೀಟರ್‌ಗಳ ಓಟದ ಸ್ಪರ್ಧೆಯಲ್ಲಿ ಅಲ್ಜೀರಿಯಾದ ಅಥ್ಲೀಟ್‌ಗಳ ಸಾಧನೆ ಮೆಚ್ಚುವಂಥದ್ದಾಗಿದೆ. ಹಲವು ಸಲ ಗೆಲುವಿನ ಮಾಲೆಯನ್ನು ಕೊರಳಿಗೇರಿಸಿಕೊಂಡಿದ್ದಾರೆ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಕಾರವಾರದ ಆ ದಿನಗಳು: ರಂಜಾನ್ ದರ್ಗಾ ಸರಣಿ

‘ನಮ್ಮ ಕಷ್ಟ ಸುಖದಲ್ಲಿ ಇವರು. ಇವರ ಕಷ್ಟ ಸುಖದಲ್ಲಿ ನಾವು. ನಮ್ಮ ನಡುವೆ ಧರ್ಮಗಳು ಅಡ್ಡ ಬರುವುದಿಲ್ಲ. ಧರ್ಮಗಳ ಗೋಜಿಗೆ ನಾವು ಹೋಗುವುದಿಲ್ಲ. ಅವುಗಳ ಪಾಡಿಗೆ ಅವು ಇರುತ್ತವೆ. ನಮ್ಮ ಪಾಡಿಗೆ ನಾವು ಇರುತ್ತೇವೆ. ಕೆಲಸ ಮಾಡುವವರಿಗೆ ಎಲ್ಲ ಧರ್ಮಗಳು ಒಂದೇ. ಕೆಲಸವಿಲ್ಲದವರಿಗೆ ಮತ್ತು ಕೆಲಸವಿಲ್ಲದೆ ಬದುಕಬೇಕೆನ್ನುವವರಿಗೆ ಧರ್ಮಗಳು ಬೇರೆ ಬೇರೆಯಾಗಿ ಕಾಣುತ್ತವೆ. ಆ ಅವರು ಉಗ್ರರೂಪ ತಾಳಿ ಅನ್ಯ ಧರ್ಮೀಯರನ್ನು ಕೊಲ್ಲುತ್ತಾರೆ ಇಲ್ಲವೆ ಅವರಿಂದ ಕೊಲೆಗೀಡಾಗುತ್ತಾರೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 100ನೇ ಕಂತು ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

ನೀರು ಕುಡಿಯದಿದ್ದರೂ, ಆ ಅನಿರೀಕ್ಷಿತ ಘಟನೆಗೆ ಹೆದರಿ ನಾನು ಪ್ರಜ್ಞೆ ಕಳೆದುಕೊಂಡಿದ್ದೆ. ಯಾರಾದರೂ ನೋಡಿಬಿಡುತ್ತಾರೆಂದು ಹೆದರಿದ ಆತ ತನ್ನ ತೋಳಲ್ಲಿ ನನ್ನನ್ನು ಎತ್ತಿಕೊಂಡು ಮರದ ಮೇಲಿನ ಆತನ ಅಟ್ಟಳಿಗೆಯ ಒಳಗೆ ಮಲಗಿಸಿದ. ತನ್ನ ಟವೆಲ್‌ನಿಂದ ನನಗೆ ಗಾಳಿ ಬೀಸಿ, ಮುಖಕ್ಕೆ ನೀರೆರಚಿದಾಗ ನಿಧಾನಕ್ಕೆ ಕಣ್ಣು ಬಿಟ್ಟೆ. ನಾನಿರುವ ಜಾಗವನ್ನು ನೋಡಿ ಒಮ್ಮೆಲೆ ಬೆಚ್ಚಿದೆ. ಎದ್ದೇಳಲು ಪ್ರಯತ್ನಿಸುತ್ತಿದ್ದಂತೆಯೇ ಹತ್ತಿರ ಬಂದ ಆತ ಕೈಮುಗಿದು “ತಪ್ಪಾಯಿತು, ಇನ್ನೊಮ್ಮೆಯೂ ಹೀಗೆ ಮಾಡಲ್ಲ ಕ್ಷಮಿಸಿಬಿಡಿ” ಎಂದು ಮುಜುಗರದಿಂದ ಹೇಳಿ ಹೊರ ನಡೆದ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

Read More

ಮಿಂಚಿಹೋದ ಕಾಲ….: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸೆಲ್ವಿ ಗಣಿ ಕಾರ್ಮಿಕ ಮಣಿಯನ್ನು ಮದುವೆ ಮಾಡಿಕೊಂಡಿದ್ದು. ಮಣಿ ತಂದೆ ಸೆಲ್ವಮ್ ಅಪಘಾತದಲ್ಲಿ ಸತ್ತುಹೋಗಿದ್ದು. ಅವಳ ತಂದೆ ಅಯ್ಯಪ್ಪನಿಗೆ ಸಿಲಿಕೋಸಿಸ್ ಬಂದು ಸತ್ತುಹೋಗಿದ್ದು. ಮಣಿ ಮತ್ತು ಸೆಲ್ವಿಯ ಮಧ್ಯೆ ತೊಂದರೆಗಳು; ಹೀಗೆ ಸಾಲು ಸಾಲಾಗಿ ಅವಳನ್ನು ಕಾಡತೊಡಗಿದವು. ಇಪ್ಪತ್ತು ವರ್ಷಗಳ ಹಿಂದೆ ಸೆಲ್ವಿ ತಾನು ಬಸರಿಯಾದಾಗ ಅಪ್ಪ ಅಮ್ಮನಿಗೆ ಹೇಳಿ ಬಸರಿ ತೆಗೆಸಿ ಡಿಗ್ರಿ ಮುಗಿಸಿ ಒಂದು ಕೆಲಸಕ್ಕೆ ಸೇರಿಕೊಂಡು ಬೇರೆ ಯಾರನ್ನಾದರೂ ಮದುವೆ ಮಾಡಿಕೊಂಡಿದ್ದರೆ? ತನ್ನ ಬದುಕು ಈ ರೀತಿ ಇರುತ್ತಿರಲಿಲ್ಲ!
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ನಿದ್ದೆ ಮತ್ತು ಚಲನೆ; ಪಯಣ ಹೇಳುವ ಕಥೆ: ರಾಮ್‌ ಪ್ರಕಾಶ್‌ ರೈ ಕೆ. ಸರಣಿ

ದೈವ ದರುಶನದ ನಂತರ ಜೇಮ್ಸ್ ತನ್ನ ಪತ್ನಿಯ ಕಾಲಿಗೆ ಮುಲಾಮು ಹಚ್ಚಿ ನೇವೇರಿಸುವ ದೃಶ್ಯ ಬರುತ್ತದೆ. ಅದನ್ನು ಸ್ನಾನ ಮುಗಿಸಿ ಬರುವ ಮಗ ನೋಡುತ್ತಾ ನಿಲ್ಲುತ್ತಾನೆ. ಗಂಡಸರ ತುಕ್ಕು ಹಿಡಿದ ಈಗೋಗಳಿಗೆ ಈ ದೃಶ್ಯ ಚಾಟಿ ಏಟಿನಂತೆ ಕಾಣುತ್ತದೆ. ಮುಂದೆ, ಜೇಮ್ಸ್ ಕಾಣೆಯಾಗಿ ಸುಂದರಂ ಆಗಿ ಬದಲಾದಾಗ, ಬಸ್ಸಿನಲ್ಲಿದ್ದ ಒಂದು ಪರಿವಾರ ಎರ್ನಾಕುಳಮ್ ನತ್ತ ಸಾಗುವ ಗಾಡಿಯ ಹತ್ತಿ ಹೋಗಿ ಬಿಡುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ