Advertisement

Month: April 2026

ಟು ಡು ಲಿಸ್ಟ್‌ ಹಾಗೂ ರದ್ದಿ ಹಾಳೆಯ ಕತೆಗಳು….: ಎಚ್‌. ಗೋಪಾಲಕೃಷ್ಣ ಸರಣಿ

ನನ್ನ ಅನುಭವಗಳನ್ನು ಕೊಂಚ, ಕೊಂಚ ಏನೂ ತುಂಬಾ ಹೆಚ್ಚಾಗಿಯೇ ಉತ್ಪ್ರೇಕ್ಷಿಸಿ ಬುರುಡೆ ಅಂದರೆ ಸಖತ್ ಬುರುಡೆ ಬಿಡುತ್ತಿದ್ದೆ. ಈ ಬುರುಡೆಯಲ್ಲಿ ಬಹಳ ಮುಖ್ಯವಾಗಿ ಬ್ಯಾಂಕ್ ಡೈರೆಕ್ಟರ್ ಜತೆ ಇಂಟರ್ವ್ಯೂ ಮಾಡಿಸಿಕೊಂಡು ಸಾಲವನ್ನು ಮೂವತ್ತು ಸಾವಿರದಿಂದ ಮೂವತ್ತ ಮೂರು ಸಾವಿರ ಹೆಚ್ಚಿಸಿದ್ದು, ಬೇವಿನ ಮರದ ಹಳೇ ಬಾಗಿಲು ಕೊಂಡು ಟೋಪಿ ಬಿದ್ದದ್ದು, ಕುಬೇರಪ್ಪ ಹಳದಿ ಇಂಗಿನ ಬ್ಯಾಗ್‌ನಲ್ಲಿ ಕೇಜಿ ಅಷ್ಟು ಚಿನ್ನ ತುಂಬಿಕೊಂಡು ಯಶವಂತ ಪುರಕ್ಕೆ ನಡೆದುಕೊಂಡು ಹೋಗಿ ಚಿನ್ನ ಮಾರಿದ್ದೂ, ನನ್ನ ಹತ್ತಿರ ಊಹೂಂ ನನ್ನ ಹತ್ತಿರ ಅಲ್ಲ, ನನ್ನಾಕೆ ಹತ್ತಿರ ಮುಕ್ಕಾಲು ಗ್ರಾಮ್‌ನ ತಾಳಿ ಇರೋದು…. ಇವೆಲ್ಲಾ ಸೇರಿರುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಹೊಸ ಸಹಸ್ರಮಾನದವರಿಂದ ಹಿರಿಯರು ಕಲಿಯಬೇಕಾದ ಪಾಠಗಳು: ಎಲ್.ಜಿ.ಮೀರಾ ಅಂಕಣ

ಒಂದಂತೂ ನಿಜ. ಅಂತರ್ಜಾಲದಿಂದಾಗಿ ಇಡಿ ಪ್ರಪಂಚವೇ ಇವತ್ತು ಒಂದು ಹಳ್ಳಿಯಾಗಿದೆ. ಯಾವುದನ್ನು ಹಿಂದಿನ ಬಾಗಿಲಿನ ವಸಾಹತೀಕರಣ ಎಂದು ಕರೆಯಲಾಗುವುದೋ ಅಂತಹ ಜಾಗತೀಕರಣದಿಂದಾಗಿ ಪ್ರಪಂಚ ಮಟ್ಟದಲ್ಲಿ ತಮ್ಮ ವ್ಯವಹಾರಗಳನ್ನು, ಉದ್ಯಮಗಳನ್ನು ಸ್ಥಾಪಿಸುವ ದೈತ್ಯ ಬಹುರಾಷ್ಟ್ರೀಯ ಕಂಪೆನಿಗಳು ಚಿಕ್ಕಪುಟ್ಟ ದೇಶಗಳಲ್ಲೂ ತಮ್ಮ ಅಸ್ತಿತ್ವವನ್ನು ಸಾರಿ ಹೇಳುತ್ತಿವೆ. ಇವು ನಮ್ಮ ರಸ್ತೆಗಳ ನೋಟಗಳನ್ನು ಮಾತ್ರವಲ್ಲ, ಬದುಕು, ಹಣಕಾಸು ಮತ್ತು ಸಂಬಂಧಗಳನ್ನು ನಾವು ನೋಡುವ ರೀತಿಯನ್ನು ಸಹ ಬದಲಿಸಿವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಪ್ರಕೃತಿಯೇ ದೈವವೆನ್ನುವ ದೈಯ್ಯದ ಹರಕೆ: ಭವ್ಯ ಟಿ.ಎಸ್. ಸರಣಿ

ರಮಣೀಯವಾದ ಹಚ್ಚಹಸಿರಿನ ಮಲೆನಾಡಿನ ಒಂಟಿ ಮನೆಗಳ ಅಕ್ಕಪಕ್ಕದ ದರುಗು ಗುಡಿಸುವ ಹಡ್ಡೆಗಳ ಬನದೊಳಗೆ ಇರುವ ಮರದ ಬುಡಗಳೇ ಈ ದೈಯ್ಯಗಳ ಆವಾಸಸ್ಥಾನ. ಪ್ರಕೃತಿ, ಮರ-ಗಿಡಗಳಲ್ಲಿ ದೈವತ್ವವನ್ನು ಕಾಣುವ ಮಲೆಯ ಜನರ ಭಕ್ತಿ, ಶ್ರದ್ಧೆಗಳಿಗೆ ಈ ದೈಯ್ಯಗಳು ಪಾತ್ರವಾಗಿವೆ. ದೈಯ್ಯದ ಮರಗಳೆಂಬ ಭಯ, ಭಕ್ತಿಯಿಂದ ಈ ಮರಗಳನ್ನು ಯಾರೂ ಕಡಿಯುವುದಿಲ್ಲ. ಇದರಿಂದ ಪ್ರಕೃತಿಯ ಸಂರಕ್ಷಣೆಯೂ ಆಗುತ್ತಿದೆ. ಊರು ತೊರೆದು ಬೇರೆ ಬೇರೆ ಊರಿಗೆ ಹೋಗಿ ನೆಲೆಸಿರುವ ಜನರು ಪುನಃ ಊರಿಗೆ ಬರುವುದು, ಬಂಧು ಬಾಂಧವರೊಡನೆ ಬೆರೆಯಲು ಇದೊಂದು ಸುದಿನ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿಯಲ್ಲಿ ದೇವರ ಹರಕೆ ಸಲ್ಲಿಸುವುದರ ಕುರಿತ ಬರಹ ನಿಮ್ಮ ಓದಿಗೆ

Read More

“ಹಳದಿ ಕೊಡೆ”: ಡಾ. ಖಂಡಿಗೆ ಮಹಾಲಿಂಗ ಭಟ್ ಅನುವಾದಿಸಿದ ರಸ್ಕಿನ್‌ ಬಾಂಡ್‌ ಬರಹ

ಅವನು ಸಾಮಾನ್ಯವಾಗಿ ನನ್ನನ್ನು ನನ್ನ ಆಫೀಸ್‌ನಲ್ಲಿ ಕಾಣುತ್ತಿದ್ದನು. ಇಲ್ಲವಾದರೆ ಕಿರಿದಾದ ಹೂವಿನ ತೋಟದಲ್ಲಿ ಸ್ನ್ಯಾಪ್ ಡ್ರ್ಯಾಗನ್ ಮತ್ತು ಪೆಟೋನಿಯಾಗಳನ್ನು ಬೆಳೆಸಲೆತ್ನಿಸುವಾಗ ಕಾಣುವನು. ಬಿಸಿಲಿನ ದಿನಗಳಲ್ಲಿ ಬಾಯಾರಿಕೆ ಆರಿಸಲು ನೀರನ್ನು ಕುಡಿದು ಬಾಯಾರಿಕೆ ನಿವಾರಿಸಿಕೊಂಡ ಮೇಲೆ ಅವನು ತಗ್ಗಿದ ತೋಟದ ಗೋಡೆಯ ಮೇಲೆ ಐದರಿಂದ ಹತ್ತುನಿಮಿಷ ಕುಳಿತು ಪೇಟೆಯಲ್ಲಿನ ಹೊಸಹೊಸ ಸುದ್ದಿಗಳನ್ನೆಲ್ಲ ನನಗೆ ತಿಳಿಸುತ್ತಿದ್ದನು.
ರಸ್ಕಿನ್‌ ಬಾಂಡ್‌ ಬರೆದ “ಯೆಲ್ಲೋ ಅಂಬ್ರೆಲ್ಲಾ” ಬರಹವನ್ನು ಡಾ. ಖಂಡಿಗೆ ಮಹಾಲಿಂಗ ಭಟ್ ಕನ್ನಡಕ್ಕೆ ಅನುವಾದಿಸಿದ್ದು, ನಿಮ್ಮ ಓದಿಗೆ ಇಲ್ಲಿದೆ

Read More

ಬಾವೋಬಾಬ್ ಗುಲಾಬ್ ಸೆನೆಗಲ್: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಇಪ್ಪತ್ತನೇ ಶತಮಾನದ ಕೊನೆಯಲ್ಲಿ ಬರ ಬಂದದ್ದರಿಂದಾಗಿ ಕೃಷಿ ಉತ್ಪಾದನೆ ಕುಂಠಿತಗೊಂಡಿತ್ತು. ಮಾಲಿ ಪ್ರದೇಶದ ಮನಾಂತಲಿ ಅಣೆಕಟ್ಟಿನ ನೀರನ್ನು ಬಳಸಿಕೊಂಡ ಕಾರಣ ಈ ಸಮಸ್ಯೆ ಸ್ವಲ್ಪಮಟ್ಟಿಗೆ ನಿವಾರಣೆಯಾಯಿತು. ಸೆನೆಗಲ್‌ನ ಹವಾಮಾನ ಜಾನುವಾರುಗಳ ಸಾಕಣೆಗೆ ಪೂರಕವಾಗಿದೆ. ಸವನ್ನಾ ವಿಧದ ಸಸ್ಯವರ್ಗ ಇರುವುದರಿಂದಾಗಿ ಜಾನುವಾರುಗಳ ಆಹಾರಕ್ಕೆ ಯಾವುದೇ ತೊಂದರೆಯಿಲ್ಲ. ದನ, ಮೇಕೆ, ಕುರಿ, ಕುದುರೆ, ಒಂಟೆ, ಕತ್ತೆ, ಹಂದಿ ಮೊದಲಾದ ಪ್ರಾಣಿಗಳನ್ನು ಸಾಕುತ್ತಾರೆ ಸೆನೆಗಲ್ ಜನರು.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಸೆನೆಗಲ್ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ