Advertisement

Month: April 2026

ಶ್ರೀನಿಧಿ ಎಚ್ ವಿ ಬರೆದ ಈ ದಿನದ ಕವಿತೆ

“ಮುಂದಾಗುವುದನು
ಇಂದೇ ಅರಿಯುವ
ತ್ರಿಕಾಲ ಜ್ಞಾನವು
ನನಗೊಲಿದಿಲ್ಲ

ಒಂದೇ ಬಣ್ಣದ
ಬಟ್ಟೆಯ ತೊಟ್ಟ
ಅವಳಿ ಮಕ್ಕಳು
ಸರಿ ತಪ್ಪುಗಳು”-ಶ್ರೀನಿಧಿ ಎಚ್ ವಿ ಬರೆದ ಈ ದಿನದ ಕವಿತೆ

Read More

ಅನುಭವಗಳನ್ನು ಮರಳಿ ಬಾಳಿಸುವ ಕಥೆಗಳು: ಎಡೆಯೂರು ಪಲ್ಲವಿ ಕಥೆಗಳಿಗೆ ವಿನಯಾ ಒಕ್ಕುಂದ ಮುನ್ನುಡಿ

ನಾಗರಿಕ ಸೌಜನ್ಯಕ್ಕಾಗಿ ಬಲು ಬೆಲೆ ತೆರಬೇಕಾದ ಆಧುನಿಕ ಬದುಕಿನ ಪಂಚಾಂಗ ಇಲ್ಲಿದೆ. ಹಾಗಿದ್ದರೆ, ಆಧುನಿಕತೆಯು ಹಳೆಯ ವರ್ಗೀಕೃತ ತಪ್ಪುಗಳನ್ನು ಮೀರಿಸಿಕೊಂಡಿದೆಯೇ? ಸಾಮಾಜಿಕ ಸಾಂಕ್ರಾಮಿಕಗಳಾಗಿದ್ದ ಜಾತಿ, ಧರ್ಮ, ವರ್ಗ, ಲಿಂಗಗಳೀಗ ಇಲ್ಲವಾಗಿವೆಯೇ? ಖಂಡಿತ ಇಲ್ಲ. ಈಗಲೂ ಈ ಎಲ್ಲ ತರತಮಗಳು ಹಾಗೆಯೇ ಮುನ್ನಡೆಯುತ್ತಿವೆ. ರೂಪಾಂತರಗೊಂಡು ವಿವರಣೆಗೆ ನಿಲುಕದಷ್ಟು ಸಂಕೀರ್ಣ ಸ್ಥಿತಿಯನ್ನು ಪಡೆದಿವೆ. ಪ್ರೀತಿಯ ರಾಜಕಾರಣದಿಂದ ಮತ್ತೆ ಬಲವರ್ಧನೆಗೊಳ್ಳುತ್ತಿವೆ. ಯಾಜಮಾನ್ಯವು ಯಾಜಮಾನ್ಯವೇ ಆಗಿ ಮುನ್ನಡೆಯುತ್ತಿದೆ.
ಎಡೆಯೂರು ಪಲ್ಲವಿ ಕಥಾ ಸಂಕಲನ “ಕುಂಡದ ಬೇರು” ಕೃತಿಗೆ ವಿನಯಾ ಒಕ್ಕುಂದ ಮುನ್ನುಡಿ

Read More

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಬರೀ ನಾಲ್ಕು ಗೋಡೆಯ ಮಧ್ಯೆ ಕಲಿಯುವುದೇ ಶಿಕ್ಷಣವಲ್ಲ…!!: ಬಸವನಗೌಡ ಹೆಬ್ಬಳಗೆರೆ ಸರಣಿ

ಒಮ್ಮೆ ಪಟ್ಟಣದ ಮಕ್ಕಳಿಗೆ ಭತ್ತ, ಕುಂಬಳಕಾಯಿ ಇಟ್ಟು ಭತ್ತ ಬೆಳೆಯುವ ಗಿಡ ತೋರಿಸಿ ಕುಂಬಳಕಾಯಿ ಬೆಳೆಯುವ ಗಿಡ ಹೇಗಿರಬಹುದು ಎಂದು ಕೇಳಿದರಂತೆ. ಆಗ ಅವರು ಚಿಕ್ಕ ಭತ್ತವನ್ನು ಬೆಳೆಯುವ ಗಿಡವೇ ಈ ರೀತಿ ಇರಬೇಕಾದರೆ ಇಷ್ಟು ದಪ್ಪನೆಯ ಕುಂಬಳಕಾಯಿಯ ಬೆಳೆಯುವ ಗಿಡದ ಕಾಂಡ ಇನ್ನೂ ದಪ್ಪದಾಗಿರಬೇಕು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಕಾವ್ಯದ ಮಳೆ ಸುರಿಸಿ ಮುಕ್ತರಾದ ವೆಂಕಟೇಶಮೂರ್ತಿಗಳು: ಸುಮಾವೀಣಾ ಸರಣಿ

ಬೆಂಗಳೂರಿನ ಸಂತಜೋಸೆಫರ ಕಾಲೇಜಿನಲ್ಲಿ ಸತತ 27 ವರ್ಷ ಒಂದೇ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಇವರು ಮಾಯವಾಗಿದ್ದ ಕನ್ನಡವನ್ನು ಕನ್ನಡ ಸಂಘ ಮಾಡುವ ಮೂಲಕ ಕನ್ನಡಮಯವಾಗಿಸಿದ್ದರು. ತಮ್ಮ ಪುಸ್ತಕಗಳಲ್ಲದೆ ತಮ್ಮ ವಿದ್ಯಾರ್ಥಿಗಳಿಂದಲೂ ಪುಸ್ತಕವನ್ನು ಹೊರತಂದವರು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹತ್ತೊಂಭತ್ತನೆಯ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ