Advertisement

Month: April 2026

ಮೌನ ಮಾತಾಡಿದಾಗ ಹೊತ್ತಾಗಿತ್ತು: “ದಡ ಸೇರದ ದೋಣಿ” ಸರಣಿಯಲ್ಲಿ ನಾರಾಯಣ ಯಾಜಿ ಬರಹ

ಇದ್ದಕ್ಕಿದ್ದಂತೆ ರಾಮಕೃಷ್ಣ ನನ್ನನ್ನು ಹುಡುಕಿಕೊಂಡು ಬಂದ, ಅಳುತ್ತಿದ್ದ, ಏನಾಯ್ತು ಎಂದರೆ “ಸುಮಾಳ ಮದುವೆ ಫಿಕ್ಸ್ ಆಯಿತು.. ಹುಡುಗ ದೆಹಲಿಯಲ್ಲಿದ್ದಾನೆ. ಸಿಕ್ಕಾಪಟ್ಟೆ ದೊಡ್ಡ ಉದ್ಯೋಗವಂತೆ” ಎಂದವನೇ “ನನ್ನನ್ನು ಕ್ಷಮಿಸು, ನಿನಗೂ ಅನ್ಯಾಯ ಮಾಡಿದೆ. ನಿನಗೆ ಅಶ್ವಿನಿಯ ಮೇಲೆ ಮನಸ್ಸಾದರೆ ಸುಮಾ ನನ್ನನ್ನು ಒಲಿಯಬಹುದು ಅಂದುಕೊಂಡೆ” ಎಂದವನೇ ಅಪ್ಪಿ ಅಳತೊಡಗಿದ. ನಾನು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಮದುವೆಗೆ ಆಮಂತ್ರಣವೂ ಬರಲಿಲ್ಲ. ಮುಕೇಶ್‌ ನೆನಪಾದ. ಹಾಡಬೇಕೆಂದರೆ ಕೇಳುವವರು ಯಾರು ಎಂದೆನಿಸಿತು.
“ದಡ ಸೇರದ ದೋಣಿ” ಸರಣಿಯಲ್ಲಿ ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

ಮಲೆನಾಡ ಸಂಪತ್ತು, ಗೋ ಸಂಪತ್ತು: ರೂಪಾ ರವೀಂದ್ರ ಜೋಶಿ ಸರಣಿ

ನಮಗೆಲ್ಲ ಮನುಷ್ಯರಿಗಿಂತ ಕೊಟ್ಟಿಗೆಯಲ್ಲಿರುತ್ತಿದ್ದ ದನ ಕರುಗಳ ಜೊತೆಗೇ ಹೆಚ್ಚು ಸ್ನೇಹ. ನಮ್ಮ ಕೊಟ್ಟಿಗೆಯಲ್ಲಿ ಸುಮಾರು ಹತ್ತು ಹದಿನೈದು ದನಗಳಿದ್ದವು. ಅವೆಲ್ಲವಕ್ಕೂ ಒಂದೊಂದು ಹೆಸರು. ಆಯಿ ಕೊಟ್ಟಿಗೆಯ ಹೊರಗೆ ನಿಂತು, ಅವುಗಳಲ್ಲಿ ಯಾವುದಾದರೂ ಒಂದರ ಹೆಸರು ಹಿಡಿದು ಕರೆದರೆ ಸಾಕು. ಅವು ತಕ್ಷಣ “ಅಂಬಾ” ಎಂದು ದನಿಯೆತ್ತಿ ಓಗುಡುತ್ತಿದ್ದವು. ನಮ್ಮಲ್ಲಿ ಆಕಳು ಕರು ಹಾಕಿತೆಂದರೆ, ನಮಗೆ ಎಲ್ಲಿಲ್ಲದ ಸಂಭ್ರಮ. ಮೊದಲು ಅದಕ್ಕೊಂದು ಚಂದವಾದ ಹೆಸರಿಡುವುದು. ಅದು ಬೆಳಗ್ಗೆ ಹೊಟ್ಟೆ ತುಂಬ ಹಾಲು ಕುಡಿದು ಇಡೀ ಕೊಟ್ಟಿಗೆ ತುಂಬ ಮರಿ ಜಿಂಕೆಯಂತೇ ಜಿಗಿಯುತ್ತ ಓಡುವುದನ್ನು ನೋಡುವುದೇ ಒಂದು ಸಂಭ್ರಮ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ನಾಲ್ಕನೆಯ ಕಂತು

Read More

ಅಮ್ಮನ ದ್ಯಾವ್ರು: ಸುಮಾ ಸತೀಶ್ ಸರಣಿ

ಅವು ಈಗಿನ್ ಕಾಲುದ್ ಗುಲಾಬಿ ಅಲ್ಲ್ ಕಣೇಳಿ. ರೋಜಾ ಬಣ್ದವು. ತೆಳ್ಳುಗಿರಾ ರೆಕ್ಕೆಗ್ಳು. ಬಲ್ ನಾಜೂಕು. ಗಟ್ಟಿಯಾಗಿ ಒತ್ತಿದ್ರೆ ಬಾಡೋಗೋಂತವು. ಚಿಕ್ಕದಾದ್ರೆ ಐದು ಪೈಸಾ. ದೊಡ್ಡವು ಹತ್ತು ಪೈಸಾ. ಸ್ಯಾನೇ ದೊಡ್ಡವು ನಾಕಾಣೆ. ಮನ್ಯಾಗೆ ಇರಾ ಚಿಲ್ರೆ ಹುಡುಕೀ ಹುಡುಕೀ ಅಮ್ಮ‌ ರಾತ್ರೀನೇ ರೆಡಿ ಇಕ್ಕಿರ್ತಿತ್ತು. ಮದ್ಲೇ ಗೊತ್ತಿರ್ತಿತ್ತಲ್ಲ. ಆದ್ರೂ ಸತ ಗುಲಾಬಿ ಸ್ಯಾನೆ ಇದ್ರೆ ಆಸೆ. ಅವುನ್ ತಾವ ಕೊಸರಾಡೋದು. ಇನ್ನೊಂದು ಹಾಕು, ಇದು ಚಿಕ್ದು, ಇದು ರೆಕ್ಕೆ ಕಿತ್ತೋಗದೆ, ಬಾಡೋಗದೆ, ಸಿಕ್ಕಾಪಟ್ಟೆ ಕಾಸು ಯೋಳ್ತೀಯಾ. ನಾಳಿಂದ ಬ್ಯಾಡಾಕ್ಕೆ ಬ್ಯಾಡ ಇಂಗೆ ನಮ್ಮಮ್ಮುನ್ ಕೂಗಾಟ. ಅವ್ನೂ ಕಮ್ಮಿ ಇರ್ತಿರ್ಲಿಲ್ಲ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ ಬರಹ ನಿಮ್ಮ ಓದಿಗೆ

Read More

ಅತಿ ವಿನಯಂ ಧೂರ್ತ ಲಕ್ಷಣಂ!!: ಬಸವನಗೌಡ ಹೆಬ್ಬಳಗೆರೆ ಸರಣಿ

ನೇರವಾದಿಯಾಗಿದ್ದರಿಂದ ನನಗೆ ಟಿಸಿಹೆಚ್ ನಲ್ಲಿ ನಮ್ಮಂತಹ ಕೆಲವರನ್ನು ಹತ್ತಿಕ್ಕುವ ಪ್ರಯತ್ನವು ನಡೆಯುತ್ತಿತ್ತೇ ವಿನಃ ಯಾರೂ ನಮಗೆ ಸಪೋರ್ಟ್ ಮಾಡಲಿಲ್ಲ. ಈ ರೀತಿಯ ಸ್ಥಿತಿ ಇದ್ದುದರಿಂದ ನಾವು ಯಾವುದೇ ಅಸೈನ್ ಮೆಂಟ್ ಅನ್ನು ಕಾಲಕಾಲಕ್ಕೆ ಬರೆದು ಕೊಡುತ್ತಿದ್ದೆವು. ಇನ್ನು ಪ್ರಾಕ್ಟೀಸ್ ಟೀಚಿಂಗ್‌ನಲ್ಲಿ ಒಂದು ಸಣ್ಣ ತಪ್ಪಿಗೂ ಅವಕಾಶ ಮಾಡಿಕೊಡ್ತಾ ಇರಲಿಲ್ಲ. ಆಗ ನಾವು ಪ್ರಾಕ್ಟಿಕಲ್ ಕ್ಲಾಸ್ ಕೊಡಬೇಕಾಗಿತ್ತು. ಅದಕ್ಕೆ ಒಂದು ಅವಧಿಯ ಪಾಠಕ್ಕೆ 50 ಅಂಕಗಳು ಇದ್ದವು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆರಡನೆಯ ಕಂತು ನಿಮ್ಮ ಓದಿಗೆ

Read More

“ಗೇದುಣ್ಣುವವರೇ ಬದುಕದ ಕಾಲದಲ್ಲಿ ಹುಟ್ಟುವ ಕತೆಗಳಾದರೂ ಉಳಿಯುತ್ತವೆ”: ಹೃದಯ ಶಿವ ಕಥಾಸಂಕಲನಕ್ಕೆ ಸ್ವಾಮಿ ಪೊನ್ನಾಚಿ ಬರಹ

ಹೃದಯಶಿವ ಅವರ ಕಥೆಗಳನ್ನು ಓದುವ ಕುತೂಹಲದ ಮಜವೇ ಬೇರೆ. ಕನಕಪುರದ ಕೆಬ್ಬರೆ ಗ್ರಾಮದಲ್ಲಿ ಶುರುವಾದ ಕಥೆ ಬೆಂಗಳೂರಿನ ಸಿನಿಮಾರಂಗದಲ್ಲಿ ಬಂದು ನಿಲ್ಲುತ್ತದೆ. ವೈಯಕ್ತಿಕ ದನಿಯ ಆಚೆಗೆ ಕತೆಗಳು ವಿಸ್ತಾರಗೊಳ್ಳುತ್ತಾ ಸಮಷ್ಟಿಯೆಡೆಗೆ ಹೋಗುತ್ತವೆ. ಬದುಕಿನ ಪರಸ್ಪರ ವೈರುಧ್ಯಗಳೇ ಹೆಚ್ಚು ಕಥೆಗಳಲ್ಲಿ ಕಾಣಿಸಿಕೊಳ್ಳುತ್ತದೆ. ಕಥೆ ಓದುವಾಗ ಶುರುವಾಗುವ ನೆಗೆಟಿವ್ ಕಾಂಪ್ಲೆಕ್ಸ್ ಕೊನೆಯಲ್ಲಿ ಪಾಸಿಟಿವ್ ಆಗಿರುತ್ತದೆ. ಭರವಸೆ, ಆಶಾಭಾವ ಕಥೆಗಳಲ್ಲಿ ವ್ಯಕ್ತವಾಗುತ್ತವೆ.
ಹೃದಯ ಶಿವ ಹೊಸ ಕಥಾಸಂಕಲನ “ಸೂಪರ್ ಗಾಡ್ ಸಣ್ಣಯ್ಯ” ಕೃತಿಗೆ ಸ್ವಾಮಿ ಪೊನ್ನಾಚಿ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ