Advertisement

Month: April 2026

ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಲೈಟ್ಸ್…ಕ್ಯಾಮರಾ…ಆ್ಯಕ್ಷನ್ ಎಂದು ನಿರ್ದೇಶಕರು ಹೇಳಿದಾಗ ನಿರ್ಮಲಾಳ ಎದೆ ಧಸಕ್ಕೆಂದಿತು. ಮೆಲ್ಲಮೆಲ್ಲನೆ ಹೆಜ್ಜೆಯಿಡುತ್ತಾ ಬಂದ ಕೃಷ್ಣ ಕೈಯ್ಯನ್ನು ಚಾಚಿ ಬೆಣ್ಣೆ ಗಡಿಗೆ ತೆಗೆದುಕೊಂಡವನು ಪುಟುಪುಟು ಓಡಿದ. ಹೆಜ್ಜೆಯಿಡುತ್ತಾ ಬಂದದ್ದು… ಕೈಚಾಚಿದ್ದು… ಓಡಿದ್ದು… ಇದು ನಿರ್ಮಲಾಳ ಮನಸ್ಸಿನಲ್ಲಿ ಗಿರಕಿ ಹೊಡೆಯತೊಡಗಿತ್ತು. ಅವಳು ಈಗ ಬಾಗಿಲ ಮರೆಯಿಂದ ಬೆಣ್ಣೆ ಗಡಿಗೆಯಿದ್ದ ಕಂಬದಾಚೆಗೆ ಹೋಗಬೇಕಿತ್ತು. ಆದರೆ ಅವಳು ಚಲನೆಯಿಲ್ಲದೆ ನಿಂತಿದ್ದಳು.
ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಲೈಟ್ಸ್… ಕ್ಯಾಮರಾ… ಆ್ಯಕ್ಷನ್” ನಿಮ್ಮ ಓದಿಗೆ

Read More

ಅಣಬೆ ಅಡುಗೆ, ಅಪರಾಧದ ಕತೆ: ಡಾ. ವಿನತೆ ಶರ್ಮಾ ಅಂಕಣ

ನ್ಯಾಯಾಲಯವು ಈ ಕೇಸ್ ಗೆಂದು ಈ ವರ್ಷ ಲಾಟ್ರೋಬ್ ವ್ಯಾಲಿ ಪ್ರದೇಶದ ಸುಮಾರು ಹದಿನೈದು ಸಾವಿರ ಜನರನ್ನು ಸಂಪರ್ಕಿಸಿ ಜ್ಯೂರಿಗಳಾಗುತ್ತೀರಾ ಎಂದು ಕೇಳಿತ್ತು. ಜ್ಯೂರಿಗಳಾಗುವುದಕ್ಕೆ ಒಪ್ಪಿಕೊಂಡರೆ ಅವರು ಸುಮಾರು ನಾಲ್ಕು ತಿಂಗಳ ಕಾಲ ಕೌಂಟಿ ಮತ್ತು ರಾಜ್ಯದ ಸುಪ್ರೀಂ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಸಮಯವನ್ನು ಕೊಡಬೇಕಿತ್ತು. ಅದಲ್ಲದೆ, ಕೇಸ್ ನಡೆಯುವುದನ್ನು ನಿಯಮಿತವಾಗಿ ಗಮನವಿಟ್ಟು ನೋಡಿ, ತಮ್ಮ ತಂಡದಲ್ಲಿ ಚರ್ಚಿಸಿ ವಾರದಿಂದ ವಾರಕ್ಕೆ ಮುನ್ನಡೆಯುವುದಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ವಸ್ತುಗಳ ಸರ್ವಾಧಿಕಾರದಿಂದ ಮುಕ್ತಿ ಪಡೆಯವುದು ಹೇಗೆ?: ಎಲ್.ಜಿ.ಮೀರಾ ಅಂಕಣ

ವಸ್ತುಗಳನ್ನು ವ್ಯವಸ್ಥಿತವಾಗಿ ಇರಿಸಿಕೊಳ್ಳುವ ವಿಷಯದ ಬಂದಾಗ, ಕೊನೆಗೂ ನಾವು ಮನುಷ್ಯರು ಅಭ್ಯಾಸಗಳ ದಾಸರು ಅನ್ನಿಸುತ್ತದೆ. ಚಿಕ್ಕದೋ ದೊಡ್ಡದೋ, ಮುಖ್ಯವೋ, ಅಮುಖ್ಯವೋ ಯಾವುದೇ ವಸ್ತುವನ್ನಾದರೂ ಯಾವಾಗಲೂ ಒಂದೇ ಜಾಗದಲ್ಲಿ ಇಡಲು ಕಲಿತೆವು ಅಂದರೆ ಅಲ್ಲೇ ಇಡುತ್ತೇವೆ, ಅಭ್ಯಾಸ ಆಗಿಬಿಟ್ಟಿತೆಂದರೆ, ಎಷ್ಟೋ ಸಲ ಅನ್ಯಮನಸ್ಕರಾಗಿಯೂ ವಸ್ತುಗಳನ್ನು ಸರಿಯಾದ ಜಾಗದಲ್ಲೇ ಇಟ್ಟುಬಿಡುತ್ತೇವೆ! ಹೀಗಾಗಿ ತುಂಬ ಮುಖ್ಯವಾದ ಸಲಕರಣೆಗಳನ್ನಾದರೂ ಒಂದೇ ಜಾಗದಲ್ಲಿ ಯಾವಾಗಲೂ ಇಡುವ ಅಭ್ಯಾಸವನ್ನು ಮಾಡಿಕೊಂಡೆವೆಂದರೆ ನಮಗೆ ನಾವೇ ದೊಡ್ಡ ಸಹಾಯ ಮಡಿಕೊಂಡೆವು ಎಂದರ್ಥ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಉಲ್ಟಾಪಲ್ಟಾ ಆದ ನನ್ನ ಪ್ಲಾನು! : ಎಚ್. ಗೋಪಾಲಕೃಷ್ಣ ಸರಣಿ

ಅವರು ಎಲೆಕ್ಟ್ರಿಕ್ ಕಾಂಟ್ರಾಕ್ಟ್ ಮಾಡ್ತಾ ಇದ್ದರು, ಪಾರ್ಟ್ ಟೈಮ್ ಆಗಿ. ನೀನೂ ಇದನ್ನೇ ಮಾಡು, ದುಡ್ಡು ಚೆನ್ನಾಗಿ ಸಿಗುತ್ತೆ, ಹೇಗಿದ್ದರೂ ನಿಮ್ಮದು ಹೊಸಾ ಏರಿಯ, ಬೇಕಾದಷ್ಟು ಜನ ಮನೆ ಕಟ್ಟುತ್ತಾರೆ, ನೀನೇ ಕಾಂಟ್ರಾಕ್ಟ್ ಮಾಡಬಹುದು ಅಂತ ಹುರಿದುಂಬಿಸಿ ಏಣಿ ಹತ್ತಿಸಿದ್ದ. ಪಾರ್ಟ್ ಟೈಮ್ ಕೆಲಸ, ಅದೂ ಚೆನ್ನಾಗಿ ದುಡ್ಡು ಮಾಡಬಹುದು ಅನ್ನುವ ಹಾಗಿದ್ದರೆ ಒಂದು ಕೈ ನೋಡೇ ಬಿಡೋಣ ಅನ್ನುವ ಉತ್ಸಾಹ ತುಂಬಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕಾಳುಮೆಣಸಿನ ರಾಣಿ ಚೆನ್ನಭೈರಾದೇವಿಯ ಅಕಳಂಕ ಚರಿತ್ರೆ: ಸುಭದ್ರಾ ಹೆಗಡೆ ಬರಹ

ಕಾದಂಬರಿಯನ್ನು ಓದುತ್ತಾ ಹೋದಂತೆ ಶೌರ್ಯ, ಸಾಹಸಕ್ಕೆ ಹೆಸರಾಗಿ ನಿಂತ ವೀರವನಿತೆ ಜೀವ ತಳೆದು ನಮ್ಮೆದುರು ನಿಲ್ಲುವಂತೆ ರಾಣಿಯ ಪಾತ್ರವನ್ನು ಅಷ್ಟು ಸೂಕ್ಷ್ಮವಾಗಿ ಹೆಣೆಯಲಾಗಿದೆ. ಜೈನ ಧರ್ಮದವಳಾದ ರಾಣಿ ಸಾಳುವ ವಂಶದ ಕೊನೆಯ ಕುಡಿ, ಸರ್ವಧರ್ಮ ಸಮನ್ವಯವನ್ನು ಸಾರಿದವಳು. ಇಲ್ಲಿ ಬರುವ ಪ್ರತಿಯೊಂದು ಪಾತ್ರವೂ, ಗುರುಗಳಾದ ಭಟ್ಟಾಕಳಂಕರು, ಪ್ರಧಾನಿಯಾದ ಸಭಾಹಿತರು, ಶಬಲೆ, ಜಿನದತ್ತ, ಸತ್ಯಾಶ್ರಯ ಇವರೆಲ್ಲರೂ ಕಳೆದುಹೋದ ಸಮೃದ್ಧವಾದ ಸಾಮ್ರಾಜ್ಯವೊಂದರ ಸಾಕ್ಷಿಯಾಗಿ ನಿಲ್ಲುತ್ತಾರೆ. ರಾಣಿಗೆ ಬೆಂಗಾವಲಾಗಿ ನಿಂತು ನಾಡ ಪ್ರೇಮವನ್ನು ತೋರಿಸುತ್ತಾರೆ.
ಗಜಾನನ ಶರ್ಮಾ ಬರೆದಿರುವ ಐತಿಹಾಸಿಕ ಕಾದಂಬರಿ ‘ಚೆನ್ನಭೈರಾದೇವಿʼ ಕುರಿತು ಸುಭದ್ರಾ ಹೆಗಡೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ