Advertisement

Month: April 2026

ಮುಕ್ತ ಹಾಜರಿ: ಮುಕುಂದ ಜೋಷಿ: ಜಯಂತ ಕಾಯ್ಕಿಣಿ ಕೃತಿಯ ಬರಹ

ಅವರ ಆ ಪುಸ್ತಕಕ್ಕೆ ಅವರ ಹಕ್ಕೊತ್ತಾಯದ ಮೇಲೆ ನಾನು ಬ್ಲರ್ಬ್ ಬರೆದಿದ್ದೆ. ಈ ಬಗ್ಗೆ ನಮ್ಮ ನಡುವೆ ಒಂದು ಜೋಕ್ ಇತ್ತು. ಏನೆಂದರೆ ಆ ಪುಸ್ತಕ ಮುದ್ರಣ ಶುರುವಾಗುವ ಹಂತದಲ್ಲಿದೆ ಎಂದು ತಿಳಿದು ಅಜಿತ್ ಪಂಜಾಬ್‌ನಲ್ಲಿ ಸೇರಿ ನಾವು ಬೀರೋಚಿತವಾಗಿ ಸಿಲೆಬ್ರೇಟ್ ಮಾಡುವಾಗ, ಅವರು ಚೂರು ತೊದಲುತ್ತ, “ಈ ಪುಸ್ತಕ ಯಾವಾಗರೆ ಬರ್ಲಿ, ಅದಕ್ಕೆ ಬಲ್ಬ್ ಮಾತ್ರ ನೀವೇ ಬರೀಬೇಕ್ರಿ’’ – ಎಂದರು. ಅಂದಿನಿಂದ ಬ್ಲರ್ಬ್ ಪದಕ್ಕೆ ಪರ್ಯಾಯವೆಂಬಂತೆ ನಾವು ಬಲ್ಬ್ ಎಂದೇ ಬಳಸುತ್ತಿದ್ದೆವು. ಎಷ್ಟು ಕ್ಯಾಂಡಲಿಂದು ಇತ್ಯಾದಿ ವಿವರಗಳೊಂದಿಗೆ. ಯಾವುದಾದರೂ ಹೊಸ ಪುಸ್ತಕದ ಹಿನ್ನುಡಿಯಲ್ಲಿ ಹುರುಳಿಲ್ಲದಿದ್ದರೆ, ‘‘ಝೀರೋ ಕ್ಯಾಂಡಲ್ ಬಲ್ಬ್ರೀ” ಅಂತಿದ್ರು.
ಜಯಂತ ಕಾಯ್ಕಿಣಿ ಕೃತಿ “ತಾರಿ ದಂಡೆ”ಯ ಮತ್ತೊಂದು ಬರಹ ನಿಮ್ಮ ಓದಿಗೆ

Read More

ತಮ್ಮ ಬೆಂಗಳೂರಿಗೆ ಬಂದ..: ವಿನಾಯಕ ಅರಳಸುರಳಿ ಲಲಿತ ಪ್ರಬಂಧ

ಕೊಂಚ ಸ್ಥಿತಿವಂತರಾಗಿದ್ದ ಪಕ್ಕದ ಮನೆಯ ಅಣ್ಣನ ಮಗನ ಬರ್ತಡೇ ಪಾರ್ಟಿಯಲ್ಲಿ ತಿನ್ನಲು ಸಿಕ್ಕ ಚಿಕ್ಕ ಕೇಕ್‌ನ ತುಣುಕನ್ನೇ ಸ್ವರ್ಗ ಲೋಕದ ತಿನಿಸೆಂಬಂತೆ ಅದೊಂದು ದಿನ ತಿಂದಿದ್ದೆವು. ಇನ್ನೊಂದು ಪೀಸ್ ಬೇಕು ಎಂಬ ಆಸೆಯನ್ನು ಬಾಯಲ್ಲೇ ಇಟ್ಟುಕೊಂಡು ಕೈ ತೊಳೆದಿದ್ದೆವು. ಯಾರೋ ತುಂಡೊಂದನ್ನು ಬೇಡವೆಂದು ತಟ್ಟೆಯಲ್ಲೇ ಬಿಟ್ಟಾಗ ಅದು ನಮಗೆ ಸಿಗುವುದೇನೋ ಎಂದು ಆಸೆಯಿಂದ ಕಾದಿದ್ದೆವು. ಇಂತಿಪ್ಪ ಅಪೂರ್ಣ ಬಯಕೆಗಳ ಬಾಲ್ಯವನ್ನೇ ಕಳೆದ ತಮ್ಮನಿಗೆ ಈಗಲೂ ಈ ಪಟ್ಟಣದ ವಿಶೇಷ ತಿಂಡಿಗಳ ಬಗ್ಗೆ ಆಸೆಯಿದ್ದರೆ ಅದರಲ್ಲಿ ಯಾವ ತಪ್ಪಾಗಲೀ, ಅತಿಯಾಸೆಯಾಗಲೀ ನನಗೆ ಕಾಣಲಿಲ್ಲ.
ವಿನಾಯಕ ಅರಳಸುರಳಿ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

‘ಮಾವಿನ ತುಮಕಿʼ: ಮಾಮಾ ಶಾಂತಾ: ಜಯಂತ ಕಾಯ್ಕಿಣಿ ಕೃತಿಯ ಬರಹ

ಯಾವುದೇ ಬಸ್ಸು ಹಿಡಿಯಲು ಸರಿಯಾದ ಸಮಯಕ್ಕೆ ಅಥವಾ ಚೂರು ಮುಂಚಿತವಾಗಿ ಆಕೆ ಹೋಗಿದ್ದೇ ಇಲ್ಲ. ಬಸ್ಸು ಹೊರಡುವ ಟೈಮಿಗೆ ಆಕೆ ಮಹಾರಾಣಿಯಂತೆ ನಿಧಾನಕ್ಕೆ ಮನೆಯಿಂದ ಹೊರಡುತ್ತಿದ್ದಳು. ಮತ್ತು ಮನೆಯಲ್ಲಿದ್ದ ನನ್ನನ್ನೋ ರಾಜೇಂದ್ರನನ್ನೋ ರಮಾನಂದನನ್ನೋ “ಹೋಗು ಬಸ್ ನಿಲ್ಲಿಸು” ಎಂದು ಬಸ್ ಸ್ಟ್ಯಾಂಡಿಗೆ ಅಟ್ಟುತ್ತಿದ್ದಳು. ನಾವ್ಯಾರೂ ಇರದಿದ್ದರೆ ಹಾದಿಯಲ್ಲಿ ಸಿಗುವ ಯಾವುದಾದರೂ ಸೈಕಲ್ ಸವಾರರನ್ನು ಓಡಿಸುತ್ತಿದ್ದಳು. ಸಣ್ಣ ಊರಿನ ಬಸ್‌ಸ್ಟ್ಯಾಂಡ್ ಕಂಟ್ರೋಲರ್ ಎಲ್ಲರಿಗೂ ಪರಿಚಿತರಾಗಿದ್ದರಿಂದ ಒಮ್ಮೊಮ್ಮೆ ನಿಲ್ಲಿಸುತ್ತಿದ್ದರು. ಕೆಲವೊಮ್ಮೆ ಬಸ್ಸು ಹೋಗಿಬಿಟ್ಟಿರುತ್ತಿದ್ದವು. ಆಗ ಎಲ್ಲರೂ ಬೈಸಿಕೊಳ್ಳುತ್ತಿದ್ದೆವು.
ಜಯಂತ ಕಾಯ್ಕಿಣಿ ಕೃತಿ “ತಾರಿ ದಂಡೆ”ಯ ಬರಹ ನಿಮ್ಮ ಓದಿಗೆ

Read More

ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಸ್ವಾತಂತ್ರ್ಯ ದಿನ”

ಮತ್ತೆ ದೃಷ್ಟಿ ಜನರಿಂದ ದೂರ ಹೋಯಿತು. ಇಬ್ಬನಿಯ ಅವಕುಂಠನವನ್ನು ಕಳೆದುಕೊಂಡು ಹೂಗಳು ಮುಗ್ಧತೆಯನ್ನು ಕಳೆದುಕೊಂಡು ಕಠಿಣರಾದ ನಿರಸನಿಗಳಂತೆ ರಾವು ಬಡಿಯುವ ಬಣ್ಣಗಳನ್ನು ತೋರುತ್ತಿದ್ದವು. ಬಾವುಟ ಬಿಸಿಲಿನ ತೀಕ್ಷ್ಣತೆಗೆ ಸೋತು ಮಲಗಿತ್ತು. ಆಕಾಶದ ಒಂದು ಭಾಗದಲ್ಲಿ ಬೂದು ಬಣ್ಣದ ಮೋಡಗಳು ಇಕ್ಕಟ್ಟಾಗಿ ಮಲಗಿದ್ದವು. ಸ್ಲಮ್ ಪ್ರದೇಶ, ಇಂದೊಂದೇ ದಿನ ಆಕಾಶದಲ್ಲಿ ಈ ಮೋಡಗಳಿಗೆ ಜಾಗ, ಮತ್ತೆ ನಾಳಿನಿಂದ ಆಕಾಶದ ತುಂಬ ಕಾರ್ಖಾನೆ ಹೊಗೆಯ ಮೋಡಗಳು, ನಾಳಿನಿಂದ ಆಕಾಶ ತಿಪ್ಪೆ…
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್‌ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಈ ಸಂಕಲನದ “ಸ್ವಾತಂತ್ರ್ಯ ದಿನ” ಕತೆ ನಿಮ್ಮ ಓದಿಗೆ

Read More

ಉಪವಾಸ ವ್ರತದ ಅನುಭವಗಳು: ದರ್ಶನ್‌ ಜಯಣ್ಣ ಸರಣಿ

ನನ್ನ ಹೆಂಡತಿಯನ್ನು ತೋರಿಸಿ “ಆಕೆ ಕ್ಯಾರಿಯಿಂಗ್” ಅಂದೆ. ಆಕೆಯ ಮುಖ ಪೆಚ್ಚಾಯಿತು! ಅವಳ ಸೂಪರ್ವೈಸರ್‌ಗೆ ಫೋನಾಯಿಸಿ ಕೇಳಿದಳು. ಒಂದಷ್ಟು ಮಾತೂ ಕಥೆಯಾದಮೇಲೆ ಕೊಟ್ಟಳು. ನಾನು ಧನ್ಯವಾದ ಹೇಳಿ ಅದನ್ನು ಪಡೆದು ಕ್ಯಾಪ್ ತೆಗೆಯುವಾಗ “ಸರ್ ಮ್ಯಾಡಂ ಪ್ಲೀಸ್ ಅದನ್ನು ಇಲ್ಲಿ ಕುಡಿಯಬೇಡಿ” ಅಂದಳು. ನಾನು “ಇದು ಕ್ಯಾಂಟೀನ್, ಇಲ್ಲಿ ಬೇಡ ಎಂದರೆ ಹೊರಗೆ ಸಾಧ್ಯವೇ ಇಲ್ಲ” ಎಂದು ನನ್ನ ಅಸಹಾಯಕತೆ ತೋರಿದೆ. ಅದಕ್ಕವಳು ನನ್ನ ಹೆಂಡತಿಯನ್ನು ಕುರಿತು “ಮ್ಯಾಡಂ ನೀವು ಅದನ್ನು ನಿಮ್ಮ ವ್ಯಾನಿಟಿ ಬಾಗ್‌ನಲ್ಲಿ ಇಟ್ಟುಕೊಂಡು, ಟಾಯ್ಲೆಟ್‌ನ ಒಳಗೆ ಹೋಗಿ ಕುಡಿದು ಬನ್ನಿ ಪ್ಲೀಸ್!” ಅಂದಳು.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಆರನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ