Advertisement

Month: April 2026

ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ

ಅಡಿಗೆಮನೆಯಲ್ಲಿ ಇದ್ದ ಕಾಶಿಬಾಯಿ ಒಮ್ಮೆ ಸೂಕ್ಷ್ಮವಾಗಿ ಲಂಕ್ಯಾನನ್ನು ದಿಟ್ಟಿಸಿದಳು. ಆ ನೋಟಕ್ಕೆ ವಶೀಕರಣಗೊಂಡವನಂತೆ ಎದ್ದವನೇ ಮಗ ಹಾಗೂ ಮಗಳನ್ನು ಎಳೆದೆಳೆದು ಸಿಕ್ಕಸಿಕ್ಕಲ್ಲಿ ಮೈಮೇಲೆ ದೆವ್ವ ಬಂದವನಂತೆ ಬಡಿಯತೊಡಗಿದ. ಆ ಇಬ್ಬರೂ ಮಕ್ಕಳು ಬೆನ್ನನ್ನು ಸವರಿಕೊಳ್ಳುತ್ತ ತನ್ನ ತಂದೆ ಯಾಕೆ ಹೊಡೆಯುತ್ತಿದ್ದಾನೆ ಅನ್ನುವ ಅರಿವಿಲ್ಲದೆ ಅಳುತ್ತ ದಿಕ್ಕಿಗೊಂದು ಓಡತೊಡಗಿದರೆ ಹಿಂದೆ ಹಿಂದೆ ಹೋಗಿ ಮನಸ್ಸೋ ಇಚ್ಛೆ ಬೈಯುತ್ತ ಹೊಡೆಯತೊಡಗಿದ. ತಮ್ಮ ಅಜ್ಜಿಯಾಗಲಿ ಇಲ್ಲ ತಮ್ಮ ತಾಯಿಯಾಗಲಿ ಆ ಮಕ್ಕಳ ಸಹಾಯಕ್ಕೆ ಬರದೆ ಸುಮ್ಮನೆ ತಮ್ಮ ಪಾಡಿಗೆ ತಾವಿದ್ದದು, ತಂದೆಯ ಕೈಯಲ್ಲಿ ಅನಾಮತ್ತಾಗಿ ಸಿಕ್ಕಿ ಹೊಡೆಸಿಕೊಂಡಿದ್ದು ನೆನೆಸಿಕೊಂಡು ದುಃಖಿಸುತ್ತ ಮತ್ತಷ್ಟೂ ಅಳತೊಡಗಿದವು.
ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

“ಸಾಗಿದ ನೋವ ಬಂಡೆಗಳ ಕಥೆಯ
ಕಿವಿಗಳು ಕೇಳುವುದಿಲ್ಲ
ಕಣ್ಣುಗಳು ನೋಡುವುದಿಲ್ಲ
ಹೃದಯದ ಅಪ್ಪುಗೆಯಂತೂ ಇಲ್ಲವೇ ಇಲ್ಲ
ಕೊನೆಗೆ ಸಂತೈಸುವ
ಎರಡು ಕೈಗಳೂ ತಲೆ ಮೇಲಿಲ್ಲ”- ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

Read More

ದೇವರಂಥಾ ಗೆಳೆಯ… ನನ್ನ ಗಣೇಶ: ಆಶಾ ಜಗದೀಶ್ ಬರಹ

ನನ್ನ ಬಾಲ್ಯದ ಪುಟಗಳ ಮೇಲೆ ಅಚ್ಚೊತ್ತಿರುವ ಗಣೇಶನ ನೆನಪುಗಳು, ಬೆಳೆಯುತ್ತಾ ಬೆಳೆಯುತ್ತಾ ದೊಡ್ಡವರು ಎನಿಸಿಕೊಳ್ಳುವ ಹೊತ್ತಿಗೆ, ತೀವ್ರತೆಯನ್ನು ಕಳೆದುಕೊಳ್ಳತೊಡಗಿದ್ದವು. ಹಾಸ್ಟೆಲ್‌ನಲ್ಲಿ ಮನೆಯಲ್ಲಿ ಮಾಡುವಂತೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಗೆಳತಿಯರ ಮುಂದೆ ನಗೆಪಾಟಲಿಗೆ ಈಡಾಗುವ ಭಯವಿತ್ತು. ಆದರೆ ಗಣೇಶ ಆ ಹೊತ್ತಿಗೆಲ್ಲಾ ಗೆಳೆಯನಂತಾಗಿ ಹೋಗಿದ್ದ. ಎಂಥದ್ದೇ ಸಮಸ್ಯೆ ಎದುರಾದರೂ, ‘ವಿಘ್ನೇಶ್ವರ ಕಾಪಾಡು ತಂದೆ’ ಎಂದುಕೊಂಡರೆ ಸಾಕು ಅವ ಕಾಪಾಡೇ ಕಾಪಾಡ್ತಾನೆ ಎನ್ನುವುದೊಂದು ಬಲವಾದ ನಂಬಿಕೆಯಾಗಿ ಮನಸಿನಲ್ಲಿ ಆಳವಾಗಿ ಬೇರೂರಿತ್ತು. ಈಗಲೂ ಹಾಗೇ, ಸಮಸ್ಯೆ ಎಂದರೆ ಸಾಕು ಮೊದಲು ನಾಲಿಗೆ ನೆನೆಸಿಕೊಳ್ಳುವುದು ಅವನನ್ನೇ.
ತಮ್ಮ ಪಾಲಿಗೆ ಗೆಳೆಯನಂತೆ ಆಗಿರುವ ಗಣೇಶನ ಕುರಿತು ಆಶಾ ಜಗದೀಶ್‌ ಬರಹ ನಿಮ್ಮ ಓದಿಗೆ

Read More

ಗೌರಮ್ಮನ ಜತ್ಯಾಗೇ ಬರಾ ಗಣಪ್ಪ: ಸುಮಾ ಸತೀಶ್ ಸರಣಿ

ನಮ್ಮೂರಿನ್ ಗೌರೀಗೆ ಪೂಜೆ ಮಾಡ್ತಿದ್ದಿದ್ದು ವಸಿ ಜನ್ವೇಯಾ. ಆದ್ರೆ ಗಣೇಶುನ್ನ ಬಿಡಾಕೇಂತ್ಲೇ ಊರಿನ್ ಜನ್ವೆಲ್ಲಾ ಮೇಲ್ ಬಿದ್ದು ಕಾದ್ಕಂಡು ಕುಂತಿರ್ತಿದ್ವಿ. ಐದನೇ ದಿನ ಸಂಜೀ ಹೊತ್ನಾಗೆ, ಗೌರಮ್ಮುಂಗೆ ಮಡ್ಲು ತುಂಬಿ, ಮಗುನ್ನ ಮುಂದಿಟ್ಗಂಡು, ಅವ್ವನ್ನ ಹಿಂದ್ ಕುಂಡ್ರಿಸಿ ಮೆರೋಣಿಗೆ ಹೊಂಡುತಿತ್ತು. ರಾಮ ದ್ಯಾವ್ರ ಗುಡೀಗ್ಳಿಂದ ನಮ್ಮನೆ ಆಸಿ, ಕೆರೆ ಏರಿ ಕಡೆ ಊರ ಗಂಡಸರು, ಹೆಂಗಸರು, ಚಳ್ಳೆ ಪಿಳ್ಳೆಗ್ಳು ಜೈಕಾರ ಹಾಕ್ಕಂಡು ಗಣಪತಿ ಬಾಪ್ಪ ಮೋರ್ಯಾ ಅಂತ ಕಿರುಚ್ಕಂಡು ಅವುರ್ ಹಿಂದಿಂದ್ಲೇ ಸಾಗುಸ್ಕಂಡು ಹೋಗ್ತಿದ್ವಿ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಗಣೇಶ ಚತುರ್ಥಿಯ ಆಚರಣೆಯ ಕುರಿತು ಹೇಳುತ್ತಲೇ ಈ ಸರಣಿ ಇಲ್ಲಿಗೆ ಮುಕ್ತಾಯವಾಗುತ್ತದೆ

Read More

ಮಲೆನಾಡಿನ ಹಬ್ಬಗಳ ಸಂಭ್ರಮ: ರೂಪಾ ರವೀಂದ್ರ ಜೋಶಿ ಸರಣಿ

ಅಂಥ ಬಡತನದಲ್ಲೂ, ಅಪ್ಪಯ್ಯ ಉಮೇದಿಯಿಂದ, ಅದಕ್ಕೆ ಬೇಕಾಗುವ ವಿವಿಧ ಬಣ್ಣದ ಹಾಳೆ, ಝರಿ ಎಲ್ಲವನ್ನೂ ಕೊಂಡು ತರುತ್ತಿದ್ದರು. ಆಗೆಲ್ಲ ಈಗಿನಂತೆ ವಿದ್ಯುತ್ ಸೌಲಭ್ಯ ನಮ್ಮಲ್ಲಿ ಇರಲಿಲ್ಲ. ಆದರೂ ಅದೊಂದು ಬಗೆಯ ಬಣ್ಣದ ಹಾಳೆಗಳನ್ನು ಕಲಾತ್ಮಕವಾಗಿ ಕತ್ತರಿಸಿ ಅಂಟಿಸಿ, ಕೇವಲ ಎಣ್ಣೆಯ ದೀಪದಲ್ಲೂ ಆ ಮಂಟಪ ಝಗಮಗಿಸುವಂತೆ ಮಾಡುತ್ತಿದ್ದರು. ಕೈಲಿ ಹಿಡಿದರೆ, ಸಣ, ಸಣ ಎಂದು ಸದ್ದಾಗುವಂತಿದ್ದ ಆ ಬಣ್ಣದ ಕಾಗದವನ್ನು “ಸಂತ್ರ ತಗಡು” ಅಂತ ಕರೆಯುತ್ತಿದ್ದರು. ಅದನ್ನು ಕಲಾತ್ಮಕವಾಗಿ ಕತ್ತರಿಸಿ, ಗುಬ್ಬಿ ಮಾಡಿ, ಮಂಟಪದ ಕಂಬಕ್ಕೆ, ಅಕ್ಕ ಪಕ್ಕದ ಪಟ್ಟಿಗಳಿಗೆ ಅಂಟಿಸಿ, ಅದಕ್ಕೆ ಝರಿಯ ಪುಡಿಯನ್ನು ಅಂಟಿಸಿ, ನಮ್ಮಣ್ಣ ಅದ್ಭುತವಾದ ಝಗಮಗ ಮಂಟಪ ಮಾಡುತ್ತಿದ್ದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ