Advertisement

Month: April 2026

ಶ್ರಾವಣ ಸಂಜೆಯ ಮಳೆಯಂಥ ಪ್ರೀತಿ:‌ “ದಡ ಸೇರದ ದೋಣಿ” ಸರಣಿಯಲ್ಲಿ ಮಾರುತಿ ಗೋಪಿಕುಂಟೆ ಬರಹ

ಪರೀಕ್ಷೆಯ ವಿಚಾರ ಮಾತಾಡುವಷ್ಟರಲ್ಲಿ ಅವರ ಸಂಬಂಧಿ ಪ್ರತ್ಯಕ್ಷವಾಗಿದ್ದ. ಗೇಟಿನಲ್ಲೆ ನಮ್ಮಿಬ್ಬರನ್ನು ನೋಡಿರಬೇಕು. ಈಗಾಗಲೆ ಪರಿಚಯವಿದ್ದುದರಿಂದ ನನ್ನನ್ನು ಮಾತಾಡಿಸಿದ. ಮಾತಾಡಿಸಿ ‘ನೀವೇಕೆ ಬಂದಿದ್ದೀರಿ’ ಅಂದ. ನಾನು ಅದೆ ‘ಕ್ಯಾಸ್ಟ್ ಇನ್ಕಮ್’ ನೆಪ ಹೇಳಿದೆ ನನ್ನ ಸ್ನೇಹಿತರು ಬಂದಿದ್ದಾರೆ ಅವರನ್ನು ಮಾತಾಡಿಸುವ ಸಲುವಾಗಿ ಬಂದಿದ್ದೆ’ ಅಂದೆ ಅನುಮಾನ ಪಡುವ ಯಾವ ಘಟನೆಯೂ ನಮ್ಮಿಬ್ಬರ ವಿಷಯದಲ್ಲಿ ನಡೆದಿರಲಿಲ್ಲ. ನನಗೆ ಒಳ್ಳೆಯವನೆಂಬ ಪಟ್ಟ ಊರಲ್ಲಿತ್ತು. ಹಾಗಾಗಿ ಮಾತಾಡಿಸಿದವಳು ಇವಳ ಪರೀಕ್ಷೆ ಮುಗಿದ ಮೇಲೆ ಊರಿಗೆ ಕರೆದುಕೊಂಡು ಹೋಗಲು ಬಂದಿದ್ದೇನೆ ಅಂದ. ನನಗೆ ಏನು ಹೇಳಲು ಮಾತೆ ಇರಲಿಲ್ಲ.
“ದಡ ಸೇರದ ದೋಣಿ” ಸರಣಿಯಲ್ಲಿ ಮಾರುತಿ ಗೋಪಿಕುಂಟೆ ಬರಹ

Read More

ಗೋಮಾತೆಯ ಸಾಂಗತ್ಯದಲ್ಲಿ ಕಣ್ತೆರೆಯುವ ಬೆಳಗು: ಭವ್ಯ ಟಿ.ಎಸ್. ಸರಣಿ

ಕೊಟ್ಟಿಗೆಯಲ್ಲಿ ಯಾವುದಾದರೂ ಹಸು ಕರು ಹಾಕಿದರೆ ಮನೆಯಲ್ಲಿ ಬಾಣಂತಿ ಇದ್ದಷ್ಟೇ ಮುತುವರ್ಜಿ ವಹಿಸಬೇಕು. ಹಸುವಿಗೆ ಖಾರ ಮಾಡಿ ತಿನ್ನಿಸುವುದು, ಪುಟ್ಟ ಕರು ಗಟ್ಟಿಯಾಗುವವರೆಗೂ ಮನೆಯೊಳಗೆ ಸ್ವಲ್ಪ ಬೆಚ್ಚಗಿನ ಸ್ಥಳದಲ್ಲಿ ಇರಿಸಿ ಹಾಲುಣಿಸಲಷ್ಟೇ ತಾಯಿಯ ಬಳಿ ಕರೆದೊಯ್ಯವುದು ಮಾಡುತ್ತಾರೆ. ಕರುವಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುವಷ್ಟೇ ಹಾಲು ಕುಡಿಸಬೇಕು. ಅಜೀರ್ಣವಾದರೆ ಅಪಾಯವೆಂದು ಎಚ್ಚರಿಕೆ ವಹಿಸುತ್ತಾರೆ. ಹಸು ಕರುಗಳಿಗೆ ಮೈ ತೊಳೆಸಿ ಸ್ವಚ್ಛ ಜಾಗದಲ್ಲಿ ಮಲಗಲು ಬಿಡುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ಕದರಪ್ಪನ ಗುಡೀ‌ ಮುಂದ್ಲ ಕಲ್ಲು: ಸುಮಾ ಸತೀಶ್ ಸರಣಿ

ಅವ್ನೂ ಬಂದ. ಚೆಂದಾಗಿ ಕಲ್ಲು ತೊಳುಸ್ದ‌. ಅತ್ಲಾಗೆ ತಿರುಗ್ದ, ಇತ್ಲಾಗೆ ಬಗ್ಗಿದ, ತಲೆ ಕೆರ್ಕಂಡ. ಯೋನೂ ತಿಳೀವಲ್ದು. ಅಂಗಂತ ಯೋಳೀರೆ ಜನ ಏನ್ ಅನ್ಕಂಬಾಕಿಲ್ಲಾ. ನನ್ ಮರ್ವಾದಿ ಮಣ್ಣಾಗಾಕಿಲ್ವೇ ಅಂದಿದ್ದೇ, ಬ್ಯಾರೇನೇ ಯೋಳ್ದ. ಇದು ನರಮನುಸ್ಯರ ಕೈಲಿ ಓದಾಕಾಗಾಕಿಲ್ಲ. ದೇವನಾಗರೀ ಲಿಪಿ ಅಂಬ್ತಾರೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ ನಿಮ್ಮ ಓದಿಗೆ

Read More

ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

“ಮನಸೆಂಬ ಮಾಯದ ಕನ್ನಡಿ
ಕನಸೆಂಬ ಬದುಕಿನ ಸೂರಿನಡಿ
ಇಂದು ಹೊಸತು
ಮನದ ನೋವುಗಳ ಹೊರದೂಡಿ
ಸಂತಸದ ಹೊಸ ತಂಪು ಹರಡಿ
ಮೈಯೊಳಗಿನ ಶೃಂಗಾರ
ಎದೆ ತುಳುಕಿ ಹೊರಗಿಣುಕಿರುವಾಗ
ಗೊತ್ತಿದ್ದರೆ ಹೇಳು, ಬಿಡುಗಡೆ ಬೇಡದ
ನನ್ನೀ ನೋವನುಂಡವರೆಷ್ಟು ಮಂದಿ?” -ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

Read More

ವಿರೇಶ ನಾಯಕ ಬರೆದ ಎರಡು ಕವಿತೆಗಳು

“ಇರುಳ ಹಾಸಿಗೆಯ ಮೇಲೆ
ನೆತ್ತರ ದಿಂಬ ಕೆಳಗೆ
ಸುರುಳಿ ಸುತ್ತಿ ಕರುಳ ಬಿಟ್ಟ
ಮಗುವೊಂದು ಗೋಗರೆಯುತಿದೆ
ಅವಳ ನೆತ್ತರ ಬಿಸಿ ಮಯ್ಯ ಮೇಲೆ
ಕಂದಿಲ ಬೆಳಕ ಬಿಡುವ
ಸೂರ್ಯನಿಗೊಂದು ಶಾಪವಿದೆ.” -ವಿರೇಶ ನಾಯಕ ಬರೆದ ಎರಡು ಕವಿತೆಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ