Advertisement

Month: April 2026

ಒದ್ರೆ ತಾನೇ ಬೀಳೋದೂ…!: ಎಚ್. ಗೋಪಾಲಕೃಷ್ಣ ಸರಣಿ

ಅದು ಹೇಗೋ ಮನೆ ಒಂದು ರೂಪ ತಳೆದಿತ್ತು. ಅದೂ ಹೇಗೆ ಅಂದರೆ ಕಾಸ್ಟ್ ರೆಡಕ್ಷನ್‌ಗೆ ಒಂದು ಪ್ಲಾನ್ ಹಾಕಿದ್ದೆ ಅಂತ ಹೇಳಿದ್ದೆ ಅಲ್ಲವೇ? ಅದರ ಪ್ರಕಾರ ಶೋ ಕೇಸು ಕೆಲಸ ಬೇಡ ಅಂತ ನಿಲ್ಲಿಸಿದೆ. ಆದರೆ ಮಧ್ಯೆ ಹಲಗೆ ಬರಬೇಕಲ್ಲಾ ಅಂತ ಹಲಗೆ ಫ್ಯಾಕ್ಟರಿ ಸ್ಕ್ರ್ಯಾಪ್ ವುಡ್‌ನಲ್ಲಿ ತಂದಿದ್ದೆ ತಾನೇ? ಅದು ಈ ಸ್ಲಾಬ್‌ಗೆ ಉಪಯೋಗ ಆಯ್ತಾ? ಎರಡು ರೂಮಿನಿಂದ ಎರಡು ಕಬೋರ್ಡ್ ಆಗಬೇಕಿತ್ತು. ಅದಕ್ಕೆ ಬಾಗಿಲು ಬೇಡ ಅಂತ ನಿರ್ಧರಿಸಿ ಆಗಿತ್ತು. ಇದಕ್ಕೂ ಹಲಗೆ ಸ್ಕ್ರ್ಯಾಪ್ ವುಡ್‌ನಿಂದ ಅಡ್ಜೆಸ್ಟ್ ಆಯ್ತಾ? ಬಾಗಿಲು ಯಾಕೆ ಬೇಡ ಅಂದರೆ ಅದಕ್ಕೆ ಒಂದು ತುಂಬಾ ಬಲವಾದ ಕಾರಣ ಇತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಶಾಶ್ವತ ಮತ್ತು ನಶ್ವರ – ಡಿಜಿಟಲ್ ಯುಗದಲ್ಲಿ ಬದಲಾಯಿತೇ ಇವುಗಳ ಅರ್ಥ?: ಎಲ್.ಜಿ. ಮೀರಾ ಅಂಕಣ

ಹುಟ್ಟು ಮತ್ತು ಸಾವು ಎಂಬ ಎರಡು ತುದಿಗಳ ಮಧ್ಯೆ ಕೆಲವು ದಿನ ಆಸೆ-ನಿರಾಸೆ, ಪ್ರೀತಿ-ದ್ವೇಷ, ಭಾವ-ಬುದ್ಧಿ, ಇಷ್ಟ-ಕಷ್ಟ, ಸಂಗ್ರಹ-ಅಸಂಗ್ರಹ, ಸಾಧನೆ-ಸವಾಲು… ಇವೆಲ್ಲವೂ ಸೇರಿದ ಬದುಕಿನ ಬೆಳಕು. ಈ ಬದುಕನ್ನೇ ಮಾಯೆ, ಕತ್ತಲು ಎಂದು ಹೇಳುವ ಒಂದು ಆಧ್ಯಾತ್ಮಿಕ ಚಿಂತನ ಧಾರೆಯೂ ಇದೆಯಲ್ಲವೆ? `ಅಲ್ಲಿದೆ ನಮ್ಮನೆ, ಇಲ್ಲಿ ಬಂದೆ ಸುಮ್ಮನೆ’. `ಯಾಕೆ ಬಡಿದಾಡ್ತಿ ತಮ್ಮ ಮಾಯ ಮೆಚ್ಚಿ ಸಂಸಾರ ನೆಚ್ಚಿ’, `ಒಳಿತು ಮಾಡು ಮನುಜ, ನೀನಿರೋದು ಮೂರು ದಿವಸ’ ಇಂತಹ ಅನೇಕ ಗೀತೆಗಳು, ದಾಸವಾಣಿಗಳು ಬದುಕಿನ ಕ್ಷಣಭಂಗುರತೆಯನ್ನೇ ಹೇಳುತ್ತವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತೈದನೆಯ ಬರಹ

Read More

ಹೇಳಿದ್ದರೆ ಬದುಕು ಬದಲಾಗುತ್ತಿತ್ತಾ?: “ದಡ ಸೇರದ ದೋಣಿ” ಸರಣಿಯಲ್ಲಿ ಮಮತಾ ಅರಸೀಕೆರೆ ಬರಹ

ಇದು ಕೇವಲ ನನ್ನ ಆಲೋಚನೆಯಾದರೆ ಮಾತ್ರ ಸಾಕೆ. ಆ ಬದಿಯಲ್ಲೂ ನನ್ನ ಜೊತೆಯ ಬಾಂಧವ್ಯ ಘನತೆಯದೆಂದು ಅನಿಸಬೇಕಲ್ಲ, ನಂಬಿಕೆ ಬರಬೇಕಲ್ಲ ಎಂಬ ವಿಷಯ ಮಾರ್ದನಿಸುವಾಗ ಇದೆಲ್ಲಾ ಆಗದ ವಿಷಯ, ಗೊಂದಲ, ಸಿಕ್ಕು, ವಿಪರೀತ ಚಿಂತನೆಗಳಲ್ಲಿ ಮುಳುಗಿಹೋಗಿದ್ದಿದೆ. ಒಟ್ಟಿನಲ್ಲಿ ಈ ಅಭಿಪ್ರಾಯದ ವೈಪರೀತ್ಯ ಜಾಲದ ಮಧ್ಯೆ ಸಿಲುಕಿ ಕೊನೆಗೊಮ್ಮೆ ಏನೂ ಬೇಡವೆನಿಸಿ ತೆಪ್ಪಗಾಗುವುದು ಸೂಕ್ತವೇನೊ. ಬುದ್ಧಿ ಹಾಗೂ ಸ್ವಾಭಿಮಾನದ ಮಾತನ್ನು ನೆನಪಿಸಿಕೊಳ್ಳುತ್ತಾ ಶರಣಾಗತಿಯ ಮಾತು, ವ್ಯಕ್ತಪಡಿಸುವಿಕೆ ಅಸಹಜವೆಂದುಕೊಳ್ಳುವುದೂ ಅದೇ ವೇಳೆಗೆ ಪ್ರೇಮ, ಸ್ನೇಹವೇ ಬದುಕಿನ ಆತ್ಯಂತಿಕ ಉದ್ದೇಶ, ಅದಿಲ್ಲದೆ ಬದುಕು ಬರಡಾದೀತು ಅಂತಲೂ ಅನಿಸುವುದಿದೆ.
“ದಡ ಸೇರದ ದೋಣಿ” ಸರಣಿಯಲ್ಲಿ ಬಿ.ಎ. ಮಮತಾ ಅರಸೀಕೆರೆ ಬರಹ

Read More

ಮನೆಯಂಗಳದ ನಾಕವೀ ಹೂವಿನಲೋಕ: ಭವ್ಯ ಟಿ.ಎಸ್. ಸರಣಿ

ಈ ಹೂ ಮುಡಿಯುವ ವಿಷಯದಲ್ಲಿ ಒಂದು ರೀತಿಯ ಸ್ಪರ್ಧೆಯಿದ್ದ ಕಾಲವದು. ತಾವು ಮುಡಿದು, ಗೆಳತಿಯರಿಗೂ ತರುವವರೂ ಇದ್ದರು. ಆದರೆ ನನ್ನ ಜಡೆ ಏರುತ್ತಿದ್ದ ಈ ಸೊಬಗಿನ ಡೇರೆ ಹೂಗಳ ಮೇಲೆ ಗೆಳತಿಯರ ಕಣ್ಣು. ಅವರ ಆಸೆಗೆ ಮಣಿದು ಸಂಜೆಯಾದರೂ ಬಾಡದೇ ನಗುತ್ತಿದ್ದ ಡೇರೆ ಹೂವನ್ನು ಮುಡಿಯಿಂದ ತೆಗೆದು ಕೊಟ್ಟು ಬಂದದ್ದು ಇತ್ತು. ಈ ಡೇರೆಯ ವೈಜ್ಞಾನಿಕ ಹೆಸರು ಡೇಲಿಯಾ. ಇದು ಬೇಸಿಗೆಯಲ್ಲಿ ಬೆಳೆಯಲಾರದು. ಬೇಸಿಗೆಯಲ್ಲಿ ಇದರ ಗೆಡ್ಡೆಗಳನ್ನು ಒಣ ಮಣ್ಣಿನಲ್ಲಿ ಸಂಗ್ರಸಿಟ್ಟು, ಮಳೆ ಬಿದ್ದೊಡನೆ ನೆಲಕ್ಕೆ ಅಥವಾ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿಟ್ಟು ಬೆಳೆಯುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ನಾಟಕಗಳ ನಾಟಕ: ಸುಮಾ ಸತೀಶ್ ಸರಣಿ

ನಮ್ಮಪ್ಪುಂಗೆ ನಾಟಕ ಅಂದ್ರೆ ಹುಚ್ಚು. ನಮ್ಮೂರ್ನಾಗೇನೂ ನಾಟಕದ ಕಂಪನಿ ಇರ್ಲಿಲ್ಲವಲ್ಲ. ವರ್ಸುಕ್ಕೆ ಒಂದೋ ಎಲ್ಡೋ ಆಟೇಯಾ. ಮಾಸ್ಟರ್ ಹಿರಣ್ಣಯ್ಯ ಅವುರ್ದು ಎಲ್ಲಾ ನಾಟಕದ ಕ್ಯಾಸೆಟ್ಟೂ ಇದ್ವು. ಟೇಪ್ ರೆಕಾರ್ಡರ್ ನಾಗೆ ಜಿನಾ ಅದ್ನೇ ಕೇಳೋದು. ಒಂದೊಂದು ನಾಟಕವೂ ನೂರಾರು ಸತಿ ಕೇಳಿದ್ವಿ. ಎಚ್ಚಮ ನಾಯಕ, ಕಪಿಮುಷ್ಟಿ, ಭ್ರಷ್ಟಾಚಾರ, ಲಂಚಾವತಾರ, ಫೋನಾವತಾರ, ದೇವದಾಸಿ, ನಡುಬೀದಿ ನಾರಾಯಣ…ಕೇಳೀ ಕೇಳೀ ನಮ್ಗೆ ಬಾಯಿ ಪಾಟ ಆಗೋಗ್ತಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ಊರಿನಲ್ಲಿ ನಡೆಯುತ್ತಿದ್ದ ನಾಟಕಗಳ ಕುರಿತು ಬರೆದಿದ್ದಾರೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ