Advertisement

Month: April 2026

ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ

ಈಗ ಮಾತಿಗೆ ಬರಗಾಲ ಬಂದಂತೆ ಪ್ರತಿ ಸಂತೆಯ ವಾತಾವರಣಗಳು ನಿರ್ಮಾಣವಾಗುತ್ತಿದ್ದವು. ಇದೇಕೆಂದು ಅವನಿಗೆ ಈ ಕ್ಷಣಕ್ಕೂ ಅರ್ಥವಾಗಿರಲಿಲ್ಲ. ಜನರೇಕೇ ತನ್ನನ್ನೂ ಆಗುಂತುಕನಂತೆ ಕಂಡು ತನ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವರೆಂದು ಆಗಾಗ ಯೋಚಿಸುತ್ತಿದ್ದನಾದರು ಅದಕ್ಕೆ ಪೂರಕವೆನಿಸುವ ಉತ್ತರಗಳು ಸಿಗುತ್ತಿರಲಿಲ್ಲ. ಸಂತೆ ಮುಗಿಸಿ ಬರುವಾಗ ಕಾಸೀಂ ಇವತ್ತು ವ್ಯಾಪಾರ ಅಂಥದ್ದು ಏನಿಲ್ಲವಾದರು, ತನಗೆ ಅಪಾರ ಮೀನು ತಿನ್ನುವ ಬಯಕೆಯಾಗಿದೆ. ತನ್ನ ಪೈಜಾಮಾದ ಕಳ್ಳ ಜೇಬಿನೊಳಗೆ ಮುದುರಿ ಮಡಿಸಿಟ್ಟಿದ್ದ ನೂರರ ಒಂದು ನೋಟು ತಗೆದು ಸಂಜೆಯಷ್ಟೇ ಹಿಡಿದು ರಸ್ತೆ ಬದಿಯಲ್ಲಿ ನಿಂತು ಮಾರುತ್ತಿದ್ದ ಜಿಲೇಬಿ ಮೀನುಗಳ ಜತೆ ಬಂದಿದ್ದ. ಈ ಮಾತುಕತೆಯಲ್ಲಿ ಇಬ್ಬರಿಗೂ ಅದರ ಕಡೆ ಗಮನವಿರಲಿಲ್ಲ.
ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ “ಕಾರ್ಮೋಡ” ನಿಮ್ಮ ಓದಿಗೆ

Read More

ಹೀಗೊಂದು ಆಸ್ಟ್ರೇಲಿಯಾದ ಋತು-ಗಾನ: ಡಾ. ವಿನತೆ ಶರ್ಮ ಅಂಕಣ

ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗುವ ವಸಂತಋತುವಿನ ಮೊದಲ ಭಾಗದಲ್ಲಿ ಅದೇನೊ ಒಂದು ರೀತಿಯ ಕಾಯುವಿಕೆಯಿದೆ. ಮಳೆಗಾಗಿ ಕಾಯುತ್ತಿರುವುದು ಭೂಮಿ, ಪ್ರಾಣಿಪಕ್ಷಿಗಳು ಮತ್ತು ನಾವು ಮನುಷ್ಯರು. ನಮ್ಮ ಕಾಯುವಿಕೆ ಪ್ರಕೃತಿಮಾತೆಗೆ ನಿಧಾನವಾಗಿ ಅರ್ಥವಾಯಿತೇನೊ ಅನ್ನುವಂತೆ ಭಾಸವಾಗುವುದು ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಬೀಸುವ ಬಿರುಗಾಳಿಯಿಂದ. ಇದು ಬರಲಿರುವ ಬೇಸಿಗೆಯ ಮಳೆಗಾಲದ ಚಿಹ್ನೆ. ಡಿಸೆಂಬರ್, ಜನವರಿ ತಿಂಗಳುಗಳಲ್ಲಿ ಮಳೆಗಾಲ. ಇದು ಒಮ್ಮೊಮ್ಮೆ ಫೆಬ್ರವರಿಗೂ ವಿಸ್ತರಿಸಿ ಅಲ್ಲಲ್ಲಿ ಪ್ರವಾಹಗಳು ಹರಿಯುತ್ತವೆ. ಮಾರ್ಚ್ ತಿಂಗಳಿಂದ ಮೇ ವರೆಗೆ ಶರತ್ಕಾಲ. ನಂತರ ಚಳಿಗಾಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಆಪತ್ಬಾಂಧವನಿಂದ ಕರಗಿದ ಕಾರ್ಮೋಡ: ಎಚ್. ಗೋಪಾಲಕೃಷ್ಣ ಸರಣಿ

ಹೆಂಡತಿ ನೂರು ಕ್ಯಾಂಡಲ್ ಕೆಂಪು ಬಲ್ಬಿನ ಹಾಗೆ ಕಂಡಳು. ಅವಳನ್ನು ಒಳಗೆ ಕರೆದು ಸಮಾಧಾನ ಪಡಿಸಿ ಓನರಿಣಿಯನ್ನು ಮನೆಗೆ ಸಾಗಹಾಕುವ ಪ್ಲಾನ್ ತಲೆಯಲ್ಲಿ ಮೊಳಕೆ ಹೊಡೆಯುತ್ತಿತ್ತು. ಎಂಟ್ರಿ ಹೇಗಾಯಿತು ಅಂದರೆ ರಾತ್ರಿ ಒಂಬತ್ತರ ಕತ್ತಲು, ಹತ್ತಿರದ ಕೆರೆಯಿಂದ ಕಪ್ಪೆಗಳ ವಟಗುಟ್ಟುವಿಕೆ, ಜೀರುಂಡೆ ಧ್ವನಿ ಮತ್ತು ಮನೆಯಿಂದ ಮೂರುನಾಲ್ಕು ಕಿಮೀ ದೂರದ ರೈಲು ಹಳಿ ಮೇಲೆ ರೈಲು ಹೋಗುತ್ತಿರುವ, ಎಂಜಿನು ವಿಶಲ್ ಹಾಕುವ ಶಬ್ದ. ನರಿ ಕೂಗು ಕೇಳುತ್ತೆ ಅಂತ ನನಗಿಂತ ಮೊದಲು ಬಂದವರು ಹೇಳುತ್ತಿದ್ದರು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಹಿರಿಯರಿಗೂ ಇಂದಿನ ಪೀಳಿಗೆಗೂ ಇರುವ ಅಂತರವನ್ನು ದಾಟುವುದು ಹೇಗೆ?: ಎಲ್.ಜಿ.ಮೀರಾ ಅಂಕಣ

ಹಿರಿಯುರ `ರಾತ್ರಿ ಎಷ್ಟು ಹೊತ್ತಾದರೂ ಮಲಗದ, ಬೆಳಿಗ್ಗೆ ಎಷ್ಟು ಹೊತ್ತಾದರೂ ಏಳದ’ ತಮ್ಮ ಸಂತಾನಗಳ ಮನಸ್ಸಿನ ಹಾಗೂ ಬದುಕಿನ ಮರ್ಮವೇನು ಎಂಬುದನ್ನು ಅರಿಯಲು ಮೊದಲು ತಾವೇ ಒಂದು ಹೆಜ್ಜೆ ಮುಂದೆ ಇಡಬೇಕಿದೆ. ಜಗತ್ತೇ ಒಂದು ಹಳ್ಳಿಯಾದ ಅಂತರ್ಜಾಲದ ಯುಗದಲ್ಲಿ, ಹಳ್ಳಿಯೇ ತಮ್ಮ ಜಗತ್ತಾಗಿದ್ದ ಪೀಳಿಗೆಗೆ ಮತ್ತು ಅವರ ಮಕ್ಕಳಿಗೆ ಈ ಹೆಜ್ಜೆಯು ಒಂದು ಸವಾಲು. ಆದರೆ, ವಿಧಿ ಇಲ್ಲ. ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳು ತಮ್ಮಿಂದ ಮಾನಸಿಕವಾಗಿ ಹಾಗೂ ಭಾವನಾತ್ಮಕವಾಗಿ ದೂರ ಆಗಬಾರದು ಎಂದರೆ ಅವರ ಬದುಕಿನ ಲಯಗಳನ್ನು ಅರಿಯಲು ಹಿರಿಯ ಪೀಳಿಗೆಯವರು ಪ್ರಯತ್ನ ಮಾಡಲೇಬೇಕು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಭೂಮಿ ಬಯಕೆ ತೀರಿಸುವ ಭೂಮಿ ಹುಣ್ಣಿಮೆ ಹಬ್ಬ: ಭವ್ಯ ಟಿ.ಎಸ್. ಸರಣಿ

ಆಶ್ವಯುಜ ಮಾಸದಲ್ಲಿ ಬರುವ ಭೂಮಿ ಹುಣ್ಣಿಮೆಯ ಕುರಿತು ಹೇಳುತ್ತಿದ್ದೇನೆ. ಮಲೆನಾಡಿಗರ ಭಾಷೆಯಲ್ಲಿ ಇದು ಭೂಮಣಿ ಹಬ್ಬ. ಭೂಮಿಹುಣ್ಣಿಮೆ ಎಂದ ಕೂಡಲೇ ನನ್ನ ಮನ ನಿಲ್ಲದೆ ತೀರ್ಥಹಳ್ಳಿಯ ಸಮೀಪದ ನನ್ನ ಅಜ್ಜಿ ಮನೆಯೆಡೆಗೆ ಓಡುತ್ತದೆ. ನಮ್ಮ ಅಜ್ಜಿ ಈ ಹಬ್ಬವನ್ನು ತುಂಬಾ ‌ಶ್ರದ್ಧೆಯಿಂದ ಆಚರಿಸುತ್ತಿದ್ದರು. ಹಬ್ಬದ ಮುನ್ನಾ ದಿನ ಗದ್ದೆಯ ಅಂಚಿನ ಒಂದು ಭಾಗವನ್ನು ಶುಚಿಗೊಳಿಸಿ, ಸಗಣಿ ಸಾರಿಸಿ, ಬಾಳೆಕಂಬ, ತೋರಣಗಳಿಂದ ಅಲಂಕರಿಸಿ ಬರುತ್ತಾರೆ. ಅಂದು ಮನೆಯ ಮಕ್ಕಳು ಒಂದು ಬುಟ್ಟಿ ಹಿಡಿದು ಸುತ್ತಮುತ್ತ ತಿರುಗಿ ಬಗೆಬಗೆಯ ಸೊಪ್ಪುಗಳನ್ನು ಆಯ್ದು ತರಬೇಕು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ