ಸುಂದರ ಕಾಡಿನ ರೋಚಕ ಕಥೆಗಳು-೭: ರೂಪಾ ರವೀಂದ್ರ ಜೋಶಿ ಸರಣಿ
ಆ ಎಮ್ಮೆಗಳೇನಾದರೂ ಅದನ್ನು ಓಡಿಸಿರದಿದ್ದರೆ ಆಯಿಯ ಗತಿ ಏನಾಗುತ್ತಿತ್ತೋ ಏನೋ. ನೆನೆಸಿಕೊಂಡರೆ, ಈಗಲೂ ಮೈ ಅದುರುತ್ತದೆ. ಆಯಿ ಯಾವಾಗಲೂ ಎಮ್ಮೆ, ದನಗಳನ್ನು ಅಷ್ಟು ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಳು. “ಆಯಿಗೆ ನಮಗಿಂತಲೂ ಎಮ್ಮೆಯ ಮೇಲೆ ಹೆಚ್ಚು ಪ್ರೀತಿ” ಎಂದು ನಾವು ಯಾವಾಗಲೂ ತಮಾಷೆ ಮಾಡಿದರೆ, ಆಯಿ “ಹೌದು, ಅವು ಮೂಕ ಪ್ರಾಣಿಗಳು. ನಿಮ್ಮಂತೆ ಬಾಯಿ ಬಿಟ್ಟು ಬೇಕಾದ್ದನ್ನು ಕೇಳಲಿಕ್ಕೆ ಆಗೋದಿಲ್ಲ. ನಾವೇ ತಿಳಿದು ಕೊಟ್ಟರೆ ತಿಂತಾವೆ ಪಾಪ” ಎನ್ನುತ್ತಿದ್ದಳು. ಹೀಗೆ ಮಕ್ಕಳಿಗಿಂತಲೂ ಹೆಚ್ಚು ಪ್ರೀತಿಯಿಂದ ಎಮ್ಮೆಗಳನ್ನು ಸಾಕಿದ್ದಕ್ಕೂ ಸಾರ್ಥಕವಾಯ್ತು ಎನ್ನುವಂತೇ ಅವತ್ತು ಅವು ಆಯಿಯ ಪ್ರಾಣ ಕಾಪಾಡಿದ್ದವು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹದಿನಾರನೆಯ ಕಂತು
