Advertisement

Month: April 2026

ಸುಂದರ ಕಾಡಿನ ರೋ‌ಚಕ ಕಥೆಗಳು-೭: ರೂಪಾ ರವೀಂದ್ರ ಜೋಶಿ ಸರಣಿ

ಆ ಎಮ್ಮೆಗಳೇನಾದರೂ ಅದನ್ನು ಓಡಿಸಿರದಿದ್ದರೆ ಆಯಿಯ ಗತಿ ಏನಾಗುತ್ತಿತ್ತೋ ಏನೋ. ನೆನೆಸಿಕೊಂಡರೆ, ಈಗಲೂ ಮೈ ಅದುರುತ್ತದೆ. ಆಯಿ ಯಾವಾಗಲೂ ಎಮ್ಮೆ, ದನಗಳನ್ನು ಅಷ್ಟು ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಳು. “ಆಯಿಗೆ ನಮಗಿಂತಲೂ ಎಮ್ಮೆಯ ಮೇಲೆ ಹೆಚ್ಚು ಪ್ರೀತಿ” ಎಂದು ನಾವು ಯಾವಾಗಲೂ ತಮಾಷೆ ಮಾಡಿದರೆ, ಆಯಿ “ಹೌದು, ಅವು ಮೂಕ ಪ್ರಾಣಿಗಳು. ನಿಮ್ಮಂತೆ ಬಾಯಿ ಬಿಟ್ಟು ಬೇಕಾದ್ದನ್ನು ಕೇಳಲಿಕ್ಕೆ ಆಗೋದಿಲ್ಲ. ನಾವೇ ತಿಳಿದು ಕೊಟ್ಟರೆ ತಿಂತಾವೆ ಪಾಪ” ಎನ್ನುತ್ತಿದ್ದಳು. ಹೀಗೆ ಮಕ್ಕಳಿಗಿಂತಲೂ ಹೆಚ್ಚು ಪ್ರೀತಿಯಿಂದ ಎಮ್ಮೆಗಳನ್ನು ಸಾಕಿದ್ದಕ್ಕೂ ಸಾರ್ಥಕವಾಯ್ತು ಎನ್ನುವಂತೇ ಅವತ್ತು ಅವು ಆಯಿಯ ಪ್ರಾಣ ಕಾಪಾಡಿದ್ದವು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹದಿನಾರನೆಯ ಕಂತು

Read More

ಬಾಪುವಿನ ನೆರಳಲ್ಲಿ ಬೆಳಕು ಕಾಣಿಸುವ ‘ನಮ್ಮೊಳಗೊಬ್ಬ ಗಾಂಧಿ’ಯ ಸತ್ಯಾನ್ವೇಷಣೆ: ಡಾ.ರಾಜೇಂದ್ರಕುಮಾರ್ ಕೆ ಮುದ್ನಾಳ್

ಮಹಿಳೆಯರ ಬದುಕು ಸ್ವಾವಲಂಬಿಯಾಗಿರಬೇಕೆಂದು ಶಕ್ತಿದಾಯಕವಾಗಿ ಇರಬೇಕೆಂದು ಗಾಂಧಿ ಬಯಸಿದ್ದರು ಎಂಬುದನ್ನು ಮೂಕಮ್ಮ ಮತ್ತು ರಮಾ ಪಾತ್ರದ ಮೂಲಕ ನಾಟಕಕಾರರು ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ರಮಾ ವಿಧವೆಯಾಗಿದ್ದರು ಮತ್ತೊಬ್ಬನನ್ನು ಪ್ರೀತಿಸಿ ಮರು ಮದುವೆ ಮಾಡಿಕೊಳ್ಳುವ ಉತ್ಸಾಹವನ್ನು ತೋರಿಸಿದ್ದು ಕೂಡ ಗಾಂಧಿ ವಿಚಾರಧಾರೆಗಳಿಗೆ ಮನಸೋತು. ರಮಾ ಮತ್ತು ರಹಿಮರ ಪ್ರೇಮ ಭಾವೈಕ್ಯತೆಯ ಪ್ರತೀಕವಾಗಿ ಹೊರಹೊಮ್ಮಿದೆ.
‘ನಮ್ಮೊಳಗೊಬ್ಬ ಗಾಂಧಿ’ ನಾಟಕದ ಕುರಿತು ಡಾ. ರಾಜೇಂದ್ರಕುಮಾರ್‌ ಕೆ. ಮುದ್ನಾಳ್‌ ಬರಹ

Read More

ಶರೀಫ್ ಕಾಡುಮಠ ಬರೆದ ಈ ದಿನದ ಕವಿತೆ

“ನಡುರಾತ್ರಿ ಎರಡೂವರೆ ಗಂಟೆಗೆ
ಚೀಸ್ ಬರ್ಗರ್‌ಗಾಗಿ
ಮೆಕ್ ಡೊನಾಲ್ಡ್ಸ್ ನ ಕಿಟಕಿ ಬಳಿ
ಸಾಲು ನಿಂತ ಸೌದಿಗಳ ಕಾರು ಕಂಡು
ನಗು ಬಾರದಿದ್ದರೂ ನಗುತ್ತಾನೆ
ಸಿಬ್ಬಂದಿ ಸುಡಾನಿ ಹುಡುಗ

ಯುನಿಫಾರ್ಮಿನ ಕಿಸೆಯೊಳಗೆ
ಬೆರಳು ತಾಕಿಸಿ ಎಣಿಸುತ್ತಾಳೆ
ಫಿಲಿಪ್ಪೀನಿನ ಹುಡುಗಿ
ಸಿಕ್ಕ ಟಿಪ್ಸಿನ ನೋಟುಗಳನ್ನು
ಅಂದಾಜಿಸುತ್ತ ಹತ್ತು ಇಪ್ಪತ್ತೆಂದು”-ಶರೀಫ್ ಕಾಡುಮಠ ಬರೆದ ಈ ದಿನದ ಕವಿತೆ

Read More

ಸಾಲಿಯಂದ್ರ ಕಣ್ಣಾಗ ಕಾಮನಬಿಲ್ಲು…: ಸುವರ್ಣ ಚೆಳ್ಳೂರು ಸರಣಿ

ಮುಂಜೆನೆದ್ದಿದ್ದ ಹಿಂಗ ಅವ್ವ ಬುತ್ತಿ ಕಟ್ಟಿಗ್ಯಂಡು ಹೊಂಟ್ಲಂದ್ರ, ಮನಿಯೆಲ್ಲಾ ನನ್ನ ಮ್ಯಾಗ ಬಿದ್ದೈತೆನೊ ಅನ್ನಿಸ್ತಿತ್ತು. ಬಟ್ಟಿ, ಮುಸುರಿ, ಕಸ, ಅಡಿಗಿ ಎಲ್ಲಾನೂ ನನ್ನ ನೋಡಿ ನಕ್ಕಂಗಾಗ್ತಿತ್ತು. ಅದರ್ ನಡುವು ಮನಿಗೆ ಬಂದಾರೆಲ್ಲ ಅಪ್ಪನ್ನ ನೋಡಿ ‘ಮಗಳ್ ಮನಿ ಕೆಲ್ಸ ಎಲ್ಲಾ ಕಲ್ತಾಳ ಬುಡಪ, ದೊಡ್ಡಾಕ್ಯಾಗ್ಯಾಳನು?’ ಅಂತ ಕೇಳಿದಾಗೆಲ್ಲ, ಒಲ್ಯಾಗಿನ ಬೂದಿ ಅವರ ಮಾರಿಗೆ ಒಗಿಬೊಕು ಅನ್ನಿಸಿದ್ರು, ಒಳಾಗ ಅಡಗಿ ಮನಿಯೊಳಾಗ ಕಂಬಕ್ಕ ಕುಂತಗಂಡು ಚಚ್ಚೌಕ ಇದ್ದ ಕಿಡಕಿ ಮತ್ತ ಅದರ ನಡುವ ನಿಧಾನವಾಗಿ ತೂಗ್ಯಾಡಿದಂಗ ಕಾಣತಿದ್ದ ನೆಲುವು ನೋಡಿಕ್ಯಂತ ಕುಂದ್ರತಿದ್ದೆ.
ಸುವರ್ಣ ಚೆಳ್ಳೂರು ಬರೆಯುವ “ಆಕಿ” ಸರಣಿ

Read More

ಅದೇ ದಾರಿ… ಅದೇ ತಿರುವು…:  ವಿನಾಯಕ ಅರಳಸುರಳಿ ಅಂಕಣ

ರಾತ್ರಿಯಾದರೆ ಸಾಕು, ಒಂದೊಂದು ಮನೆಯೂ ಒಂದೊಂದು ಬೆಳಕಿನ ಡಬ್ಬಿ. ಒಂದೊಂದು ಕಿಟಕಿಯಲ್ಲಿ ಕತ್ತಲು, ಇನ್ನೊಂದರಲ್ಲಿ ಬೆಳಕು. ಆ ಬೆಳಕಿನ ಪರದೆಯ ಹಿಂದೆಯೇ ಕಪ್ಪು ನೆರಳಾಗಿ ಕದಲುವ ಮನುಷ್ಯರು. ವಾಹನಗಳ ಭರಾಟೆ ತಗ್ಗಿರುವ ರಾತ್ರಿ ಹತ್ತರ ನೀರವದಲ್ಲಿ ಸಮೀಪದಲ್ಲೇ ಕೇಳಿಸುವ ರೈಲಿನ ಕೇಕೆ. ಅರೆರೇ, ರೈಲಿನ ಹಳಿ ಇಷ್ಟು ಹತ್ತಿರದಲ್ಲೇ ಇದೆಯೇ? ಈ ಕ್ಷಣಕ್ಕೆ ಕೇಳಿಸಿದ ಕೇಕೆಯಲ್ಲೇ ಅದು ಹಾದು ಹೋಗಲಿರುವ ನದಿ-ಬೆಟ್ಟ-ಸುರಂಗ-ಕಾಡುಗಳ ಸುಂದರ ಪ್ರಯಾಣದ ಕಲ್ಪನೆಯಾಗಿ ಮನಸ್ಸಿನಲ್ಲೇನೋ ಖುಷಿಯ ಭಾವ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ