Advertisement

ಪುಸ್ತಕ ಸಂಪಿಗೆ

ಒಡಲ ನಂಟಿಗೆ ಗಂಟು ಬಿದ್ದಾಗ: ರಾಮಲಿಂಗ ಮಾಡಗಿರಿ ಕೃತಿಯ ಕುರಿತು ಶಿವಕುಮಾರ ಕರನಂದಿ ಬರಹ

ಒಡಲ ನಂಟಿಗೆ ಗಂಟು ಬಿದ್ದಾಗ: ರಾಮಲಿಂಗ ಮಾಡಗಿರಿ ಕೃತಿಯ ಕುರಿತು ಶಿವಕುಮಾರ ಕರನಂದಿ ಬರಹ

ಕವಿತೆ ಅನುಕರಿಸಿದೆ, ನಕಲಿಸದೆ, ತನ್ನ ಸುತ್ತಮುತ್ತಲಿನ ಘಟನೆಗಳ ಮೇಲೆ ಕೇಂದ್ರಿಕರಿಸಿ, ತನ್ನೊಳಗಿನ ಭಾವನೆಗಳ ಮೂಲಕ ಕವಿತೆ ಕಟ್ಟಬೇಕಿದೆ. ರೂಪಕ, ಪ್ರತಿಮೆ, ಹೋಲಿಕೆಗಳೊಂದಿಗೆ ಕಾವ್ಯವನ್ನು ರಚಿಸಬೇಕಿದೆ. ಅಂದಾಗ ಮಾತ್ರ ಆ ಮನುಷ್ಯ ಚಿಂತನಾಶೀಲ ಕವಿಯಾಗಲು ಸಾಧ್ಯ. ಹೀಗೆ ಬರೆಯುತ್ತಾ ಸಾಗಿದಾಗ ನಾಳೆಯ ಚಿಂತಕನಾಗಲು ಸಾಧ್ಯ. ಈ ಒಂದು ದಿಸೆಯಲ್ಲಿ ಗೆಳೆಯ ರಾಮಲಿಂಗ ಮಾಡಗಿರಿ ತನ್ನ ಮೊದಲ ಸಂಕಲನದಿಂದ ಪ್ರವರ್ಧಮಾನಕ್ಕೆ ಕಾಲಿಡುತ್ತಿದ್ದಾರೆ. ಇವರು ಸ್ನಾತಕೋತ್ತರ ಪದವೀಧರರಾಗಿದ್ದು ಗಿಡಮರಗಳ ನಾಡಿಮಿಡಿತ ಅರಿತ ಇವರು ಕವಿತೆಯ ಸಾರವನ್ನು ಹೆಕ್ಕಲು ಬಂದಿದ್ದಾರೆ.
ರಾಮಲಿಂಗ ಮಾಡಗಿರಿ ಕವನ ಸಂಕಲನ “”ಒಡಲಿಗಂಟಿದ ನಂಟು” ಕುರಿತು ಶಿವಕುಮಾರ ಮೋಹನ ಕರನಂದಿ ಬರಹ

read more
ಇದು ವಾತ್ಸಲ್ಯದ ಒಸಗೆ: ಡಾ. ರಾಜಲಕ್ಷ್ಮಿ ಕೃತಿಯ ಕುರಿತು ಸುಧಾ ಆಡುಕಳ ಬರಹ

ಇದು ವಾತ್ಸಲ್ಯದ ಒಸಗೆ: ಡಾ. ರಾಜಲಕ್ಷ್ಮಿ ಕೃತಿಯ ಕುರಿತು ಸುಧಾ ಆಡುಕಳ ಬರಹ

ಬೆರಳ ತುದಿಯಲ್ಲಿ ನೂರಾರು ಅರಿವಿನ ಹರಹುಗಳು ಹರಡಿಕೊಳ್ಳುವ ಕಾಲದಲ್ಲಿ ಇಂತಹ ಮಾಹಿತಿಗಳು ನಮಗೆ ಬೇಕೆ? ಎಂದು ಪ್ರಶ್ನಿಸಿಕೊಂಡರೆ ಎಂದಿಗಿಂತಲೂ ಇಂದು ಈ ರೀತಿಯ ಪುಸ್ತಕಗಳು ಹೆಚ್ಚು ಅವಶ್ಯಕ ಎನಿಸುವುದು. ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ ಎಲ್ಲರೂ ಸ್ವಯಂ ವೈದ್ಯರಂತೆ ವರ್ತಿಸುತ್ತಿದ್ದಾರೆ. ಅಂತರ್ಜಾಲವೆಂಬ ಆಕಾಶದಲ್ಲಿ ತುಂಬಿರುವ ಮಾಹಿತಿಗಳಲ್ಲಿ ಸತ್ಯಕ್ಕಿಂತಲೂ ಸುಳ್ಳಿನ ವೈಭವೀಕರಣವೇ ಹೆಚ್ಚು ತುಂಬಿದೆ. ಅವುಗಳ ಮೊರೆಹೋಗಿ ತಪ್ಪು ಜಾಲಗಳಲ್ಲಿ ಇಂದಿನ ಕಿಶೋರಿಯರು ಸಿಲುಕಿರುವ ಎಷ್ಟೋ ಉದಾಹರಣೆಗಳು ನಮ್ಮ ಎದುರಿಗಿವೆ. ತಿಳಿದವರು, ತಿಳಿಯದವರಿಗೆ, ತಿಳಿಯುವಂತೆ ತಿಳಿಸಿದರೆ ಮಾತ್ರ ಅದು ‘ತಿಳುವಳಿಕೆ’ ಅನಿಸಿಕೊಳ್ಳುತ್ತದೆ.
ಡಾ. ರಾಜಲಕ್ಷ್ಮಿ ಬರೆದ “ವಾತ್ಸಲ್ಯದ ಒಸಗೆ” ಕೃತಿಯ ಕುರಿತು ಸುಧಾ ಆಡುಕಳ ಬರಹ

read more
 ಕಾಯಗುಡ್ಡ ಬರೀ ಕಥೆಯಲ್ಲ; ಇದೊಂದು ಚಲನಶೀಲ ಬದುಕಿನ ಪ್ರತಿಬಿಂಬ: ನಾಗಣ್ಣ ಕಿಲಾರಿ ಕಾದಂಬರಿಗೆ ಕಪಿಲ ಪಿ. ಹುಮನಾಬಾದೆ ಮುನ್ನುಡಿ

 ಕಾಯಗುಡ್ಡ ಬರೀ ಕಥೆಯಲ್ಲ; ಇದೊಂದು ಚಲನಶೀಲ ಬದುಕಿನ ಪ್ರತಿಬಿಂಬ: ನಾಗಣ್ಣ ಕಿಲಾರಿ ಕಾದಂಬರಿಗೆ ಕಪಿಲ ಪಿ. ಹುಮನಾಬಾದೆ ಮುನ್ನುಡಿ

ಕಾಯಗುಡ್ಡ ಎಂದರೆ ಕಾಯುವ ಗುಡ್ಡ. ಕುರಿ ಮತ್ತು ಆಡು ಕಾಯುವ ಗುಡ್ಡ ಅಷ್ಟೇ ಅಲ್ಲ. ಬದುಕನ್ನು ನಳನಳಿಸುವ, ಹೊಸತನದ ಗಾಳಿ ಬೀಸುವ, ಆಕಾಶದಲ್ಲಿ ಸ್ವಚ್ಛಂದವಾಗಿ ಹಾರುವ ಹಕ್ಕಿಯಂತಹ ಎಲ್ಲ ಬಂಧಗಳಿಂದ ಬಿಡುಗಡೆಗೊಳಿಸುವ, ಸಹಜತನ ಮತ್ತು ಕೂತೂಹಲ ಹೃದಯಲ್ಲಿ ಸೃಷ್ಟಿಸುವ ಗುಡ್ಡವೆ ಕಾಯಗುಡ್ಡ. ಬಯಲಿನಂತಹ ಊರಿಂದ ಶುರುವಾಗುವ ಕಥೆ ಕುರಿ-ಆಡುಗಳೊಟ್ಟಿಗೆ ಗುಡ್ಡ ಹತ್ತಿಳಿಸಿ, ಅಲ್ಲಲ್ಲಿ ನಗಿಸಿ, ಬಾವಿಗಳ ಆಳದಿಂದ ಏನನ್ನೋ ಹೊಮ್ಮಿಸಿ, ದವಾಖಾನಿಗಳ ನೋವಿನಲ್ಲೂ ಬಿಸ್ಕತ್‌ ನೆನಪಿಸಿ, ಕತ್ತಲು ಮತ್ತು ಹಲವು ಹಾದಿಗಳ ಮಾತುಗಳು ಕೇಳಿಸಿ, ಓದುಗರಿಗೆ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿಗೆ ಕರೆದುಕೊಂಡು ಹೋಗುತ್ತದೆ ಕಾಯಗುಡ್ಡ.
ನಾಗಣ್ಣ ಕಿಲಾರಿ ಕಾದಂಬರಿ “ಕಾಯಗುಡ್ಡ” ಕೃತಿಗೆ ಕಪಿಲ ಪಿ. ಹುಮನಾಬಾದೆ ಬರೆದ ಮುನ್ನುಡಿ

read more
ಶತಮಾನ ಕಂಡ ವಿಸ್ಮಯ; ಅನ್ನಪೂರ್ಣಾ ದೇವಿ: ದೇವಿಕಾ ನಾಗೇಶ್‌ ಬರಹ

ಶತಮಾನ ಕಂಡ ವಿಸ್ಮಯ; ಅನ್ನಪೂರ್ಣಾ ದೇವಿ: ದೇವಿಕಾ ನಾಗೇಶ್‌ ಬರಹ

“ಯಾವುದೇ ಜ್ಞಾನಾರ್ಥಿ ನಿನ್ನನ್ನು ಹುಡುಕಿ ಬಂದರೆ ನೀನು ಎರಡನೆಯ ಯೋಚನೆ ಮಾಡದೆ ನಿನ್ನಲ್ಲಿರುವ ಜ್ಞಾನವನ್ನು ಹಂಚಬೇಕು. ತನ್ನ ಕುಟುಂಬದ ಸದಸ್ಯರಲ್ಲದವರಿಗೆ ಸಂಗೀತ ಹೇಳಿಕೊಡಲು ಹಿಂಜರಿಯುವ ಉಸ್ತಾದರನ್ನು ನಾನು ನನ್ನ ಬದುಕಿನಲ್ಲಿ ಕಂಡಿದ್ದೇನೆ. ಬೇರೆ ಬೇರೆ ಗುರುಗಳಿಂದ ಕಲಿಯುವಾಗ ನಾನು ಅನುಭವಿಸಿದ ತೊಂದರೆ, ನೋವು ಮತ್ತು ಕಷ್ಟ ನಿನ್ನಿಂದ ಊಹಿಸಲು ಸಾಧ್ಯವಿಲ್ಲ. ಎಲ್ಲ ಕಷ್ಟಗಳ ನಡುವೆಯೂ ನನ್ನ ಭಿಕ್ಷಾ ಪಾತ್ರೆಯಲ್ಲಿ ಏನನ್ನು ಸಂಗ್ರಹಿಸಲು ಸಾಧ್ಯವಾಯಿತು ಅದನ್ನು ನಾನು ಧಾರಾಳವಾಗಿ ಹಂಚಿದ್ದೇನೆ.”
ಅಪೂರ್ವ ಸಂಗೀತಗಾರ್ತಿ ಅನ್ನಪೂರ್ಣಾ ದೇವಿಯವರ ಕುರಿತು ಅತುಲ್‌ ಮರ್ಚಂಟ್‌ ಜಟಾಯು ಬರೆದ “ಅನ್ನಪೂರ್ಣಾ ದೇವಿ” ಕೃತಿಯನ್ನು ಎನ್‌. ಸಂಧ್ಯಾರಾಣಿ ಕನ್ನಡಕ್ಕೆ ತಂದಿದ್ದು, ಈ ಕೃತಿಯ ಕುರಿತ ದೇವಿಕಾ ನಾಗೇಶ್‌ ಬರಹ ಇಲ್ಲಿದೆ.

read more
ಭಿನ್ನ ನೋಟದ ಪ್ರವಾಸ ಕಥನ: ಡಾ. ಪ್ರೇಮಲತ ಕೃತಿಗೆ ಎಸ್‌. ದಿವಾಕರ್‌ ಬರೆದ ಮುನ್ನುಡಿ

ಭಿನ್ನ ನೋಟದ ಪ್ರವಾಸ ಕಥನ: ಡಾ. ಪ್ರೇಮಲತ ಕೃತಿಗೆ ಎಸ್‌. ದಿವಾಕರ್‌ ಬರೆದ ಮುನ್ನುಡಿ

ನಮ್ಮ ಲೇಖಕರಲ್ಲಿ ವಿ.ಕೃ. ಗೋಕಾಕರು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಓದಿ ಫಸ್ಟ್ ರ್ಯಾಂಕ್ ಗಳಿಸಿದರಷ್ಟೆ. ಯು.ಆರ್. ಅನಂತಮೂರ್ತಿಯವರೂ ಕವಿ ರಾಮಚಂದ್ರ ಶರ್ಮರೂ ಕೆಲವು ವರ್ಷ ಇಂಗ್ಲೆಂಡಿನಲ್ಲಿ ವಿದ್ಯಾಭ್ಯಾಸ ಮಾಡಿದ್ದುಂಟು. ತರುಣ ಲೇಖಕರಲ್ಲಿ ಮುಖ್ಯವಾಗಿ ವಿವೇಕ ಶಾನಭಾಗರು ಉದ್ಯೋಗನಿಮಿತ್ತ ನಾಲ್ಕಾರು ವರ್ಷ ಲಂಡನ್ನಿನಲ್ಲಿದ್ದರು. ಇವರು ಯಾರೂ ಅಪ್ಪಿತಪ್ಪಿ ಕೂಡ ಯುನೈಟೆಡ್ ಕಿಂಗ್ಡಮ್ಮನ್ನು ಭಾರತದೊಡನೆ ತುಲನೆ ಮಾಡಲಿಲ್ಲವೆನ್ನುವುದು ಗಮನಾರ್ಹ. ಆದರೂ ಹಾಗೆ ತುಲನೆ ಮಾಡಿ ಬರೆಯುವುದರಿಂದ ಕೆಲವರು ಓದುಗರಾದರೂ ನಮ್ಮ ದೇಶದ ಹೀನಾಯ ಸ್ಥಿತಿಯ ಬಗ್ಗೆ ಸೂಕ್ಷ್ಮವಾಗಿ ಯೋಚಿಸಬಹುದು. ಅವರಲ್ಲಿ ಇದಕ್ಕೇನು ಪರಿಹಾರವಿದ್ದೀತು ಎಂಬೊಂದು ಜಿಜ್ಞಾಸೆಯೇ ಉಂಟಾಗಬಹುದು. ಒಟ್ಟಿನಲ್ಲಿ ಅದೊಂದು ಒಳ್ಳೆಯ ಆಶಯವೇ.
ಡಾ. ಪ್ರೇಮಲತ ಬಿ. ಬರೆದ “ವಿದೇಶ ಪ್ರಯಾಣ… ಕೈತುಂಬ ಕಾಂಚಾಣ” ಕೃತಿಗೆ ಎಸ್‌. ದಿವಾಕರ್‌ ಬರೆದ ಮುನ್ನುಡಿ

read more
ಜೀವಂತಿಕೆ ಒಸರುವ ಕವಿತೆಗಳು: ಸ್ಮಿತಾ ಅಮೃತರಾಜ್ ಬರಹ

ಜೀವಂತಿಕೆ ಒಸರುವ ಕವಿತೆಗಳು: ಸ್ಮಿತಾ ಅಮೃತರಾಜ್ ಬರಹ

ನಾವು ಬದುಕುವ ರೀತಿ ನೀತಿ‌ ನಮ್ಮ ಪ್ರತಿಷ್ಟೆ ಪರಾಕಾಷ್ಟೆಗಳು ಅದೆಷ್ಟಿದ್ದರೂ ನಾವೆಲ್ಲರೂ ಮನುಷ್ಯರು. ಆಳದಲ್ಲಿ ನಾವೆಲ್ಲರೂ ಅನುಭವಿಸುವ ಭಾವಗಳು ಒಂದೇ. ನಾನಾ ಸ್ತರಗಳಲ್ಲಿ‌ ಪ್ರಕಟಗೊಳ್ಳುವ ನಮ್ಮ ನೋವು ನಲಿವು ಗೆಲುವು ಸೋಲು ಅಪಮಾನ ಎಲ್ಲವೂ ಇಲ್ಲಿ ಕವಿತೆಯಾಗಿ ನಿಸೂರಾಗುತ್ತವೆ. ನಾಗರೇಖಾ ತನ್ನದೇ ರೀತಿಯಲ್ಲಿ ಕವಿತೆ ಕಟ್ಟುವ ಕೌಶಲ್ಯವನ್ನು‌‌ ಸಿದ್ಧಿಸಿಕೊಂಡಿದ್ದಾರೆ. ತಾನು ಬದುಕಿದ, ತಾನು ಕಾಣುವ ಸುತ್ತ ಮುತ್ತಲಿನ ಸಹಜ ಸಂಗತಿಗಳನ್ನು ಕವಿತೆಯ ಮೂಲಕ‌ ತರುತ್ತಾ ಅದನ್ನು ಮತ್ಯಾವುದೋ‌ ಸಂದರ್ಭಕ್ಕೆ, ಸಂಗತಿಗಳಿಗೆ ಕೊಂಡಿ ಕೂಡಿಸುತ್ತಾರೆ. ಒಂದು ವಸ್ತುವನ್ನು ತೆರೆದಿಡುತ್ತಾ ಮತ್ಯಾವುದೋ ಹೊಳಹನ್ನು ಕಾಣಿಸುವುದು ನಾಗರೇಖರ ಕವಿತೆ ವೈಶಿಷ್ಟ್ಯತೆ.
ನಾಗರೇಖಾ ಗಾಂವಕರ ಕವನ ಸಂಕಲನ “ಪಾದಕ್ಕೊಂದು ಕಣ್ಣು” ಕುರಿತು ಸ್ಮಿತಾ ಅಮೃತರಾಜ್‌ ಬರಹ

read more
“ಬಿಗಿ ಹಿಡಿದ ಮುಷ್ಟಿಯಲಿ ನವಿರು ಪ್ರೇಮದ ಘಮಲು”: ಎಂ. ತರುಣ್‌ ಕೃತಿಗೆ ಮೋದೂರು ತೇಜ ಮುನ್ನುಡಿ

“ಬಿಗಿ ಹಿಡಿದ ಮುಷ್ಟಿಯಲಿ ನವಿರು ಪ್ರೇಮದ ಘಮಲು”: ಎಂ. ತರುಣ್‌ ಕೃತಿಗೆ ಮೋದೂರು ತೇಜ ಮುನ್ನುಡಿ

ನಿಜವಾದ ಕವಿಗೆ ಒಳಗಣ್ಣು ತೆರೆದಿದ್ದಾಗ ಮಾತ್ರ ತನ್ನ ಸುತ್ತಲಿನ ವಸ್ತುಗಳಾಗಲಿ, ವ್ಯಕ್ತಿಗಳಾಗಲಿ ವಿಶೇಷವಾಗಿ ಕಾಣಿಸುತ್ತಾರೆ. ಅಂತಹ ಕಾಣುವ ಕಾಣ್ಕೆ ಈ ಯುವ ಕವಿ ದಕ್ಕಿಸಿಕೊಂಡಿದ್ದಾರೆ. ಆದರೆ ಅವಸರದ ಬೆನ್ನೇರಿ ಕುಳಿತಿರುವ ನಮಗೆ ಯಾವುದನ್ನೂ ಸಾವಧಾನವಾಗಿ ನೋಡುವ, ಕಾಣುವ ತಾಳ್ಮೆ, ತುಡಿತ ಇಲ್ಲದಂತಾಗಿದೆ. ಮೊಬೈಲ್‌ ಎಂಬ ಮಾಯಾಲೋಕ ಅಂಗೈಗೆ ಬಂದ ಮೇಲೆ ಎಲ್ಲವನ್ನೂ ಮೈಮರೆಯುವಂತೆ ಮಾಡುತ್ತಿರುವಾಗ, ಅದರಲ್ಲೂ ತಾನು ಬರೆದಿದ್ದೆಲ್ಲವೂ ಪ್ರಕಟಿಸಲು ಸಾಮಾಜಿಕ ಜಾಲತಾಣಗಳ ವೇದಿಕೆಗಳಿರುವಾಗ ಕಾಯುವ ಗುಣ ಯಾರಿಗೂ ಇಲ್ಲಂತಾಗಿದೆ. ಹಾಗಂತ ಎಲ್ಲರೂ ಸಂತೆಗೆ ಮೂರು ಮೊಳ ಕಂಬಳಿ ನೇಯುವಂತೆ ಕಾವ್ಯ ರಚನೆಯಲ್ಲಿ ತೊಡಗಿದ್ದಾರೆಂದು ಹೇಳಿದರೆ ತಪ್ಪಾಗುತ್ತದೆ.
ಎಂ. ತರುಣ್‌ ಕವನ ಸಂಕಲನ “ಬಿಗಿ ಹಿಡಿದ ಮುಷ್ಟಿಯಲಿ”ಕ್ಕೆ ಮೋದೂರು ತೇಜ ಬರೆದ ಮುನ್ನುಡಿ

read more
ನೀರ ಮೇಲಣ ಗುಳ್ಳೆ-ಡಾಟರ್ ಆಫ್ ಪರ್ಷಿಯ: ದೇವಿಕಾ ನಾಗೇಶ್ ಬರಹ

ನೀರ ಮೇಲಣ ಗುಳ್ಳೆ-ಡಾಟರ್ ಆಫ್ ಪರ್ಷಿಯ: ದೇವಿಕಾ ನಾಗೇಶ್ ಬರಹ

ಈಕೆ ತನ್ನ ನೆಲದ ಸ್ಥಿತಿವಂತರು ಇಲ್ಲದವರ ಜೀವನ ಮಟ್ಟ ಸುಧಾರಣೆಗೆ ಕೈಜೋಡಿಸಿದರೆ ಸಾಮಾಜಿಕ, ರಾಜಕೀಯ, ಆಡಳಿತಾತ್ಮಕ ಬದಲಾವಣೆಗಳನ್ನು ತರಲು ಸಾಧ್ಯವಿದೆ… ಎನ್ನುವ ನಂಬಿಕೆ ಇದ್ದವರಾಗಿದ್ದಳು. ಈ ಹಿನ್ನೆಲೆಯಲ್ಲಿ ಅದ್ಭುತ ಯೋಜನೆಗಳನ್ನು ಹಾಕಿಕೊಂಡಿದ್ದಳು.. ಆಗ ಸ್ಪಂದಿಸಿದ ಹಲವರು ಈ ಸಾಧ್ಯತೆಯ ಪರಿಧಿಗಳನ್ನು ವಿಸ್ತರಿಸಿಕೊಂಡು ಆ ದೆಸೆಯಲ್ಲಿ ಸಕ್ರಿಯವಾದರು… ಇವಳ ಯೋಜನೆಗೆ ಕೈಜೋಡಿಸಿದರು.
ಸಟ್ಟರೆಹ್ ಫಾರ್ಮನ್ ಫರ್ಮ ಆತ್ಮಕಥೆ “ಡಾಟರ್ ಆಫ್ ಪರ್ಷಿಯಾ” ಕುರಿತು ದೇವಿಕಾ ನಾಗೇಶ್‌ ಬರಹ

read more
ಕರ್ಮನಿಷ್ಟೆಯಲ್ಲಿ ಜಯಕಂಡವನ ಕಥನ: ನಾರಾಯಣ ಯಾಜಿ ಬರಹ

ಕರ್ಮನಿಷ್ಟೆಯಲ್ಲಿ ಜಯಕಂಡವನ ಕಥನ: ನಾರಾಯಣ ಯಾಜಿ ಬರಹ

ಮೊದಲು ಪ್ರಥಮ ಪುರುಷದಲ್ಲಿ ಪ್ರಾರಂಭಮಾಡಿದ ಹೆಗಡೆಯವರು ಇದ್ದಕ್ಕಿದ್ದಂತೆ ಅದನ್ನು ತೃತೀಯ ಪುರುಷದಲ್ಲಿ ಬರೆಯಲು ಪ್ರಾರಂಭಿಸುವುದು ಕುತೂಹಲಕಾರಿ. ಶೀರ್ಷಿಕೆಯಲ್ಲಿ ಹೇಳಿರುವಂತೆ ಇದು ಜಯರಾಮ ಹೆಗಡೆಯ ಜೀವನಕಥನ ಎನ್ನುವಾಗ ತನ್ನನ್ನು ತಾನು ಹೊರಗಡೆ ನಿಂತು ‘ಜಯರಾಮ’ ಎನ್ನುವ ಮೂಲಕ ಕಥನವನ್ನು ಹೇಳುವಾಗ ಮನಸ್ಸಿನ ಅನೇಕ ವಿಷಯಗಳನ್ನು ತೆರೆದಿಡಬಹುದು ಎನ್ನುವುದು ಅವರ ಅನಿಸಿಕೆಯಾಗಿರಬಹುದು. ಅದೂ ಅಲ್ಲದೇ ಲೇಖನನ್ನೂ ಸಹ ವಿಮರ್ಶೆಗೊಳಿಸಲು ಈ ರೀತಿಯ ಬರಹದಿಂದ ಸಾಧ್ಯ.
ಜಯರಾಮ ಹೆಗಡೆ ಜೀವನ ಕಥನ ‘ಬೀದಿಯ ಬದುಕು’ ಕೃತಿಯ ಕುರಿತು ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ