Advertisement
ನಾಗರಾಜ ವಸ್ತಾರೆ ಬರೆದ ದಿನದ ಕವಿತೆ

ನಾಗರಾಜ ವಸ್ತಾರೆ ಬರೆದ ದಿನದ ಕವಿತೆ

ಕನ್ನಡದ ತರತರದ ಕವಿತೆಗಳನ್ನು ಪ್ರತಿನಿತ್ಯ ನಿಮ್ಮ ಕಣ್ಣೆದುರಿಗೆ ತರುವುದು ನಮ್ಮ ಆಶಯ. ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರಲಿದೆ. ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ. ಕೆಂಡಸಂಪಿಗೆಯ ದಿನದ ಕವಿತೆ ವಿಭಾಗದಲ್ಲಿ ನೀವು ಈ ಕವಿತೆಗಳನ್ನು ಓದಬಹುದು. ಕವಿಗಳು, ಅನುವಾದಕರು ತಮ್ಮ ಕವಿತೆಯನ್ನು ಇ-ಮೇಲ್ ಮೂಲಕ  ks.kendasampige@gmail.com ಈ ವಿಳಾಸಕ್ಕೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಹಾಗೂ ಸಣ್ಣ ಪರಿಚಯವೂ ಇರಲಿ. ಇಂದು ನಿಮ್ಮ ಓದಿಗಾಗಿ ನಾಗರಾಜ ವಸ್ತಾರೆ ಬರೆದ ದಿನದ ಕವಿತೆ.

ಮೊನ್ನೆ ರನ್ ವೇಯಲ್ಲೆಡವಿಬಿದ್ದ
ವಿಮಾನದಲ್ಲಿದ್ದೆ

ಸೀಳೋ ಸಿಡಿತವೋ ತಿಳಿಯಲಿಲ್ಲ
ಪತನವೆಂಬುದು ಮರ್ತ್ಯದ ಮಾತು
ಹವನವೆಂದರೆ ಸೂಕ್ತ

ನಿಮ್ಮ ಲೆಕ್ಕ ಹೇಳುವುದಾದರೆ
ಎಣಿಕೆಗೂ ಎಡೆಯಿರಲಿಲ್ಲ
ಎವೆಯಿಡದ ಅನಿಮಿಷ
ಅದು

ತನ್ನನ್ನು ತಾನೇ
ನುಂಗುವ ವಾಂಛೆ ಬೆಂಕಿ
ಇನ್ನು ಒಳಗಿನ ಕಿಡಿ ದಳ್ಳುರಿ
ಆಗಿದ್ದೇನು ಮಹಾ

ಅಗ್ನಿಯೆಂದೂ ಅತಿಶಯವಲ್ಲ

ಅದು ಸುಖದ ಮೇರು
ಅಥವಾ
ದುಃಖದ ಮುಕ್ತಾಯ

ಪಾರಾಗಲಿಲ್ಲವೆಂದು
ಹೀಗೆ ರೋದಿಸುವುದೆಷ್ಟು
ಸರಿ.

 

(ರೇಖಾಚಿತ್ರ: ರೂಪಶ್ರೀ ಕಲ್ಲಿಗನೂರು)

About The Author

ನಾಗರಾಜ ವಸ್ತಾರೆ

ಕವಿ, ಆರ್ಕಿಟೆಕ್ಟ್ ಮತ್ತು ಕಥೆಗಾರ. ೨೦೦೨ರಲ್ಲಿ ದೇಶದ ಹತ್ತು ಪ್ರತಿಭಾನ್ವಿತ ಯುವ ವಿನ್ಯಾಸಕಾರರಾಗಿ ಆಯ್ಕೆಗೊಂಡವರಲ್ಲಿ ಇವರೂ ಒಬ್ಬರು.

Leave a comment

Your email address will not be published. Required fields are marked *


ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ